Homeಸಿನಿಮಾಕ್ರೀಡೆಭಾರತಕ್ಕೆ ಮೂರನೇ ಚಿನ್ನ: 313ಕೆಜಿ ಭಾರ ಎತ್ತಿ ಕಾಮನ್‌ವೆಲ್ತ್ ದಾಖಲೆ ಬರೆದ ಅಚಿಂತ್ ಶಿಯುಲಿ

ಭಾರತಕ್ಕೆ ಮೂರನೇ ಚಿನ್ನ: 313ಕೆಜಿ ಭಾರ ಎತ್ತಿ ಕಾಮನ್‌ವೆಲ್ತ್ ದಾಖಲೆ ಬರೆದ ಅಚಿಂತ್ ಶಿಯುಲಿ

- Advertisement -
- Advertisement -

ಕಾಮನ್‌ವೆಲ್ತ್‌ ಕ್ರೀಡಾಕೂಟದ ಮೂರನೇ ದಿನ ಭಾರತಕ್ಕೆ ಮೂರನೇ ಚಿನ್ನದ ಪದಕ ಲಭಿಸಿದೆ. ವೇಟ್ ಲಿಫ್ಟರ್ ಅಚಿಂತ್ ಶಿಯುಲಿ 73ಕೆಜಿ ವಿಭಾಗದಲ್ಲಿ 313 ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಪದಕ ಜಯಿಸಿದ್ದು ಅಲ್ಲದೆ ಕಾಮನ್‌ವೆಲ್ತ್‌ನಲ್ಲಿ ದಾಖಲೆ ಬರೆದಿದ್ದಾರೆ.

20 ವರ್ಷದ ಅಚಿಂತ್ ಶಿಯುಲಿ ಸ್ನಾಚ್‌ ಸ್ಪರ್ಧೆಯಲ್ಲಿ 140 ಮತ್ತು 143ಕೆಜಿ ಭಾರ ಎತ್ತಿ ದಾಖಲೆ ನಿರ್ಮಿಸಿದರು. ನಂತರ ಕ್ಲೀನ್ ಅಂಡ್ ಜರ್ಕ್ ಸ್ಪರ್ಧೆಯಲ್ಲಿ 166 ಮತ್ತು 170 ಕೆಜಿ ಭಾರ ಎತ್ತಿ ಚಿನ್ನದ ಪದಕ ತಮ್ಮದಾಗಿಸಿಕೊಂಡರು.

ಕೋಲ್ಕತ್ತಾದವರಾದ ಶಿಯುಲಿ 143 ಮತ್ತು 170 ಕೆಜಿ (ಒಟ್ಟು 313ಕೆಜಿ) ಭಾರ ಎತ್ತುವ ಮೂಲಕ ದಾಖಲೆ ಮಾಡಿದ್ದಲ್ಲದೆ ತಮ್ಮ ಮೊದಲ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿಯೇ ಚಿನ್ನ ಗೆದ್ದರು.

ಮಲೇಷ್ಯಾದ ಎರ್ರಿ ಹಿದಾಯತ್ ಮುಹಮ್ಮದ್ 303 ಕೆಜಿ (138 ಕೆಜಿ 165 ಕೆಜಿ) ಭಾರ ಎತ್ತಿ ಬೆಳ್ಳಿ ಪದಕ ಗಳಿಸಿದರೆ, ಕೆನಡಾದ ಶಾದ್ ಡಾರ್ಸಿಗ್ನಿ ಒಟ್ಟು 298 ಕೆಜಿ (135 ಕೆಜಿ 163 ಕೆಜಿ) ಎತ್ತುವ ಮೂಲಕ ಮೂರನೇ ಸ್ಥಾನ ಪಡೆದರು.

ಭಾರತಕ್ಕೆ ವೇಟ್ ಲಿಫ್ಟಿಂಗ್‌ನಲ್ಲಿ 6 ಪದಕ

ಮೂರು ಚಿನ್ನ, ಎರಡು ಬೆಳ್ಳಿ ಮತ್ತು ಒಂದು ಕಂಚು ಸೇರಿ ಇದುವರೆಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಒಟ್ಟು 6 ಪದಕ ಗೆದ್ದಿದೆ. ವಿಶೇ‍ಷವೆಂದರೆ ಆ ಎಲ್ಲಾ ಪದಕಗಳು ವೇಟ್ ಲಿಫ್ಟಿಂಗ್ ವಿಭಾಗದಲ್ಲಿಯೇ ದೊರಕಿವೆ. ವಿವರ ಕೆಳಗಿನಂತಿದೆ.

ಸಂಕೇತ್ ಸರ್ಗರ್: ಬೆಳ್ಳಿ

ಮೀರಾಬಾಯಿ ಚಾನು: ಚಿನ್ನ

ಬಿಂದ್ಯಾರಾಣಿ ದೇವಿ: ಬೆಳ್ಳಿ

ಜೆರೆಮಿ ಲಾಲ್ರಿನ್ನುಂಗಾ: ಚಿನ್ನ

ಗುರುರಾಜ ಪೂಜಾರಿ: ಕಂಚು

ಅಚಿಂತ್ ಶಿಯುಲಿ: ಚಿನ್ನ

ಈ ಬಾರಿಯ ಒಟ್ಟಾರೆ ಪದಕ ಗಳಿಸಿದ ದೇಶಗಳ ಪಟ್ಟಿಯಲ್ಲಿಯೂ ಭಾರತ 6ನೇ ಸ್ಥಾನದಲ್ಲಿದೆ.

ಇದನ್ನೂ ಓದಿ: $1=₹80 ಕಾರಣವೇನು ಮತ್ತು ಪರಿಣಾಮವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....