Homeಸಿನಿಮಾಕ್ರೀಡೆಭಾರತಕ್ಕೆ ಮೂರನೇ ಚಿನ್ನ: 313ಕೆಜಿ ಭಾರ ಎತ್ತಿ ಕಾಮನ್‌ವೆಲ್ತ್ ದಾಖಲೆ ಬರೆದ ಅಚಿಂತ್ ಶಿಯುಲಿ

ಭಾರತಕ್ಕೆ ಮೂರನೇ ಚಿನ್ನ: 313ಕೆಜಿ ಭಾರ ಎತ್ತಿ ಕಾಮನ್‌ವೆಲ್ತ್ ದಾಖಲೆ ಬರೆದ ಅಚಿಂತ್ ಶಿಯುಲಿ

- Advertisement -
- Advertisement -

ಕಾಮನ್‌ವೆಲ್ತ್‌ ಕ್ರೀಡಾಕೂಟದ ಮೂರನೇ ದಿನ ಭಾರತಕ್ಕೆ ಮೂರನೇ ಚಿನ್ನದ ಪದಕ ಲಭಿಸಿದೆ. ವೇಟ್ ಲಿಫ್ಟರ್ ಅಚಿಂತ್ ಶಿಯುಲಿ 73ಕೆಜಿ ವಿಭಾಗದಲ್ಲಿ 313 ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಪದಕ ಜಯಿಸಿದ್ದು ಅಲ್ಲದೆ ಕಾಮನ್‌ವೆಲ್ತ್‌ನಲ್ಲಿ ದಾಖಲೆ ಬರೆದಿದ್ದಾರೆ.

20 ವರ್ಷದ ಅಚಿಂತ್ ಶಿಯುಲಿ ಸ್ನಾಚ್‌ ಸ್ಪರ್ಧೆಯಲ್ಲಿ 140 ಮತ್ತು 143ಕೆಜಿ ಭಾರ ಎತ್ತಿ ದಾಖಲೆ ನಿರ್ಮಿಸಿದರು. ನಂತರ ಕ್ಲೀನ್ ಅಂಡ್ ಜರ್ಕ್ ಸ್ಪರ್ಧೆಯಲ್ಲಿ 166 ಮತ್ತು 170 ಕೆಜಿ ಭಾರ ಎತ್ತಿ ಚಿನ್ನದ ಪದಕ ತಮ್ಮದಾಗಿಸಿಕೊಂಡರು.

ಕೋಲ್ಕತ್ತಾದವರಾದ ಶಿಯುಲಿ 143 ಮತ್ತು 170 ಕೆಜಿ (ಒಟ್ಟು 313ಕೆಜಿ) ಭಾರ ಎತ್ತುವ ಮೂಲಕ ದಾಖಲೆ ಮಾಡಿದ್ದಲ್ಲದೆ ತಮ್ಮ ಮೊದಲ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿಯೇ ಚಿನ್ನ ಗೆದ್ದರು.

ಮಲೇಷ್ಯಾದ ಎರ್ರಿ ಹಿದಾಯತ್ ಮುಹಮ್ಮದ್ 303 ಕೆಜಿ (138 ಕೆಜಿ 165 ಕೆಜಿ) ಭಾರ ಎತ್ತಿ ಬೆಳ್ಳಿ ಪದಕ ಗಳಿಸಿದರೆ, ಕೆನಡಾದ ಶಾದ್ ಡಾರ್ಸಿಗ್ನಿ ಒಟ್ಟು 298 ಕೆಜಿ (135 ಕೆಜಿ 163 ಕೆಜಿ) ಎತ್ತುವ ಮೂಲಕ ಮೂರನೇ ಸ್ಥಾನ ಪಡೆದರು.

ಭಾರತಕ್ಕೆ ವೇಟ್ ಲಿಫ್ಟಿಂಗ್‌ನಲ್ಲಿ 6 ಪದಕ

ಮೂರು ಚಿನ್ನ, ಎರಡು ಬೆಳ್ಳಿ ಮತ್ತು ಒಂದು ಕಂಚು ಸೇರಿ ಇದುವರೆಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಒಟ್ಟು 6 ಪದಕ ಗೆದ್ದಿದೆ. ವಿಶೇ‍ಷವೆಂದರೆ ಆ ಎಲ್ಲಾ ಪದಕಗಳು ವೇಟ್ ಲಿಫ್ಟಿಂಗ್ ವಿಭಾಗದಲ್ಲಿಯೇ ದೊರಕಿವೆ. ವಿವರ ಕೆಳಗಿನಂತಿದೆ.

ಸಂಕೇತ್ ಸರ್ಗರ್: ಬೆಳ್ಳಿ

ಮೀರಾಬಾಯಿ ಚಾನು: ಚಿನ್ನ

ಬಿಂದ್ಯಾರಾಣಿ ದೇವಿ: ಬೆಳ್ಳಿ

ಜೆರೆಮಿ ಲಾಲ್ರಿನ್ನುಂಗಾ: ಚಿನ್ನ

ಗುರುರಾಜ ಪೂಜಾರಿ: ಕಂಚು

ಅಚಿಂತ್ ಶಿಯುಲಿ: ಚಿನ್ನ

ಈ ಬಾರಿಯ ಒಟ್ಟಾರೆ ಪದಕ ಗಳಿಸಿದ ದೇಶಗಳ ಪಟ್ಟಿಯಲ್ಲಿಯೂ ಭಾರತ 6ನೇ ಸ್ಥಾನದಲ್ಲಿದೆ.

ಇದನ್ನೂ ಓದಿ: $1=₹80 ಕಾರಣವೇನು ಮತ್ತು ಪರಿಣಾಮವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...