Homeಮುಖಪುಟಗುಜರಾತ್‌: LSD ಸೋಂಕಿನಿಂದ 1240ಕ್ಕೂ ಅಧಿಕ ಹಸುಗಳ ಸಾವು

ಗುಜರಾತ್‌: LSD ಸೋಂಕಿನಿಂದ 1240ಕ್ಕೂ ಅಧಿಕ ಹಸುಗಳ ಸಾವು

- Advertisement -
- Advertisement -

Lumpy skin disease ಎಂದು ಕರೆಯುವ ರೋಗ ತಗಲಿ 1240ಕ್ಕೂ ಅಧಿಕ ಹಸುಗಳು ಸಾವನಪ್ಪಿರುವ ಘಟನೆ ಗುಜರಾತ್‌ನಲ್ಲಿ ವರದಿಯಾಗಿದೆ. ಈ ರೋಗದ ಸೋಂಕು ರಾಜ್ಯದ 17 ಜಿಲ್ಲೆಗಳಲ್ಲಿ ವ್ಯಾಪಿಸಿದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಜ್ಯ ಕೃಷಿ ಮತ್ತು ಪಶುಸಂಗೋಪನೆ ಇಲಾಕೆಯ ಸಚಿವ ರಾಘವ್‌ಜಿ ಪಟೇಲ್ ಮಾತನಾಡಿ, “ಈ ವೈರಲ್ ಕಾಯಿಲೆಗೆ ತುತ್ತಾಗಿ ಶನಿವಾರದವರೆಗೆ 1240 ಹಸುಗಳು ಸಾವನಪ್ಪಿವೆ. ರಾಜ್ಯದ 33 ಜಿಲ್ಲೆಗಳಲ್ಲಿ 17 ಜಿಲ್ಲೆಗಳಿಗೆ, ಅದರಲ್ಲಿಯೂ ಸೌರಾಷ್ಟ್ರ ಪ್ರಾಂತ್ಯದಲ್ಲಿ ಈ ವೈರಸ್ ಹರಡಿದೆ. ಆದರೂ 5.74 ಲಕ್ಷ ಪ್ರಾಣಿಗಳಿಗೆ ಕಾಯಿಲೆಯ ವಿರುದ್ಧ ಲಸಿಕೆ ಹಾಕಲಾಗಿದೆ” ಎಂದಿದ್ದಾರೆ.

ಈ ವೈರಸ್ ದಾಳಿಯಿಂದ ಹಸುಗಳನ್ನು ಉಳಿಸುವುದಕ್ಕಾಗಿ ಹಲವು ಜಿಲ್ಲಾಡಳಿತಗಳು ತುರ್ತುಕ್ರಮಕ್ಕೆ ಮುಂದಾಗಿವೆ. ಹಸುಗಳ ಜಾತ್ರೆಗಳನ್ನು ರದ್ದುಪಡಿಸಿದ್ದು, ಆಗಸ್ಟ್ 21ರವರೆಗೆ ಹಸುಗಳ ಸಾಗಾಣೆಯನ್ನು ನಿಷೇಧಿಸಲಾಗಿದೆ.

ಸಾವನಪ್ಪಿದ ಹಸುಗಳ ರಾಶಿ ಎಲ್ಲೆಂದರಲ್ಲಿ ಕೊಳೆಯುತ್ತಿದ್ದು ಅವುಗಳ ಫೋಟೊ ಮತ್ತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಹಸುಗಳ ಸಾವಿನ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಆಡಳಿತರೂಢ ಬಿಜೆಪಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದೆ. “ಹಸುಗಳ ಸಾವಿನ ಸಂಖ್ಯೆಯನ್ನು ಮುಚ್ಚಿಡಲಾಗುತ್ತಿದೆ ಮತ್ತು ಕಡಿಮೆ ತೋರಿಸಲಾಗುತ್ತಿದೆ. ಈ ರೋಗಕ್ಕೆ ಹಸುಗಳನ್ನು ಕಳೆದುಕೊಂಡ ರೈತರಿಗೆ ಯಾವುದೇ ಪರಿಹಾರ ನೀಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಸರ್ಕಾರವು ಆಯಾ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸಿ ಕಾಯಿಲೆಯಿಂದ ಹಸುಗಳನ್ನು ರಕ್ಷಿಸುವಂತೆ ಆದೇಶಿಸಿದೆ. ಸಮಿತಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರು, ಪಶುವೈದ್ಯರು ಮತ್ತು ಇನ್ನಿತರ ಅಧಿಕಾರಿಗಳ ಸೇರಿದ್ದಾರೆ ಎನ್ನಲಾಗಿದೆ.

ರಾಜ್ಯದ 1746 ಹಳ್ಳಿಗಳಲ್ಲಿ ಒಟ್ಟು 50,328 ಹಸುಗಳಿಗೆ ಈ ಸೋಂಕು ತಗುಲಿದೆ. ಪ್ರತಿ 10 ಹಳ್ಳಿಗೆ ಒಂದು ಮೊಬೈಲ್ ವಾಹನದ ಪಶು ಆಸ್ಪತ್ರೆ ತೆರೆಯಲಾಗಿದೆ. ರಾಜ್ಯದ ಪಶು ಸಂಗೋಪನಾ ಕಾಲೇಜುಗಳ ವಿದ್ಯಾರ್ಥಿಗಳನ್ನು ಸಹ ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಏನಿದು Lumpy skin disease?

ಸೊಳ್ಳೆಗಳು, ನೊಣಗಳು, ಕೀಟಗಳು ಇತ್ಯಾದಿಗಳಿಂದ ಅಥವಾ ನೇರ ಸಂಪರ್ಕ, ಕಲುಷಿತ ಆಹಾರ ಮತ್ತು ನೀರಿನಿಂದ ಹರಡುವ ವೈರಲ್ ಸೋಂಕು ಲಂಪಿ ಚರ್ಮದ ಕಾಯಿಲೆಯಾಗಿದೆ. ಇದರ ಮುಖ್ಯ ಲಕ್ಷಣಗಳೆಂದರೆ ಪ್ರಾಣಿಗಳಲ್ಲಿ ಸಾಮಾನ್ಯ ಜ್ವರ, ಕಣ್ಣು ಮತ್ತು ಮೂಗಿನಿಂದ ಸ್ರವಿಸುವಿಕೆ, ಅತಿಯಾದ ಜೊಲ್ಲು ಸುರಿಸುವುದು, ದೇಹದಲ್ಲಿ ಗಂಟುಗಳಂತಹ ಮೃದುವಾದ ಗುಳ್ಳೆಗಳು, ಕಡಿಮೆ ಹಾಲು ಉತ್ಪಾದನೆ ಕಂಡುಬರುತ್ತದೆ. ಆ ಪ್ರಾಣಿಗಳು ಆಹಾರ ತಿನ್ನಲು ತೊಂದರೆಯಾಗುತ್ತದೆ. ಇದು ಕೆಲವೊಮ್ಮೆ ಪ್ರಾಣಿಗಳ ಸಾವಿಗೆ ಕಾರಣವಾಗಬಹುದು.

ಇದನ್ನೂ ಓದಿ: ಮಧ್ಯಪ್ರದೇಶ: ಬೈಕ್‌ನಲ್ಲಿ 80 ಕಿ.ಮೀ ದೂರ ತಾಯಿಯ ಶವ ಸಾಗಿಸಿದ ಅಮಾನವೀಯ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...