Homeಮುಖಪುಟಗುಜರಾತ್‌: LSD ಸೋಂಕಿನಿಂದ 1240ಕ್ಕೂ ಅಧಿಕ ಹಸುಗಳ ಸಾವು

ಗುಜರಾತ್‌: LSD ಸೋಂಕಿನಿಂದ 1240ಕ್ಕೂ ಅಧಿಕ ಹಸುಗಳ ಸಾವು

- Advertisement -
- Advertisement -

Lumpy skin disease ಎಂದು ಕರೆಯುವ ರೋಗ ತಗಲಿ 1240ಕ್ಕೂ ಅಧಿಕ ಹಸುಗಳು ಸಾವನಪ್ಪಿರುವ ಘಟನೆ ಗುಜರಾತ್‌ನಲ್ಲಿ ವರದಿಯಾಗಿದೆ. ಈ ರೋಗದ ಸೋಂಕು ರಾಜ್ಯದ 17 ಜಿಲ್ಲೆಗಳಲ್ಲಿ ವ್ಯಾಪಿಸಿದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಜ್ಯ ಕೃಷಿ ಮತ್ತು ಪಶುಸಂಗೋಪನೆ ಇಲಾಕೆಯ ಸಚಿವ ರಾಘವ್‌ಜಿ ಪಟೇಲ್ ಮಾತನಾಡಿ, “ಈ ವೈರಲ್ ಕಾಯಿಲೆಗೆ ತುತ್ತಾಗಿ ಶನಿವಾರದವರೆಗೆ 1240 ಹಸುಗಳು ಸಾವನಪ್ಪಿವೆ. ರಾಜ್ಯದ 33 ಜಿಲ್ಲೆಗಳಲ್ಲಿ 17 ಜಿಲ್ಲೆಗಳಿಗೆ, ಅದರಲ್ಲಿಯೂ ಸೌರಾಷ್ಟ್ರ ಪ್ರಾಂತ್ಯದಲ್ಲಿ ಈ ವೈರಸ್ ಹರಡಿದೆ. ಆದರೂ 5.74 ಲಕ್ಷ ಪ್ರಾಣಿಗಳಿಗೆ ಕಾಯಿಲೆಯ ವಿರುದ್ಧ ಲಸಿಕೆ ಹಾಕಲಾಗಿದೆ” ಎಂದಿದ್ದಾರೆ.

ಈ ವೈರಸ್ ದಾಳಿಯಿಂದ ಹಸುಗಳನ್ನು ಉಳಿಸುವುದಕ್ಕಾಗಿ ಹಲವು ಜಿಲ್ಲಾಡಳಿತಗಳು ತುರ್ತುಕ್ರಮಕ್ಕೆ ಮುಂದಾಗಿವೆ. ಹಸುಗಳ ಜಾತ್ರೆಗಳನ್ನು ರದ್ದುಪಡಿಸಿದ್ದು, ಆಗಸ್ಟ್ 21ರವರೆಗೆ ಹಸುಗಳ ಸಾಗಾಣೆಯನ್ನು ನಿಷೇಧಿಸಲಾಗಿದೆ.

ಸಾವನಪ್ಪಿದ ಹಸುಗಳ ರಾಶಿ ಎಲ್ಲೆಂದರಲ್ಲಿ ಕೊಳೆಯುತ್ತಿದ್ದು ಅವುಗಳ ಫೋಟೊ ಮತ್ತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಹಸುಗಳ ಸಾವಿನ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಆಡಳಿತರೂಢ ಬಿಜೆಪಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದೆ. “ಹಸುಗಳ ಸಾವಿನ ಸಂಖ್ಯೆಯನ್ನು ಮುಚ್ಚಿಡಲಾಗುತ್ತಿದೆ ಮತ್ತು ಕಡಿಮೆ ತೋರಿಸಲಾಗುತ್ತಿದೆ. ಈ ರೋಗಕ್ಕೆ ಹಸುಗಳನ್ನು ಕಳೆದುಕೊಂಡ ರೈತರಿಗೆ ಯಾವುದೇ ಪರಿಹಾರ ನೀಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಸರ್ಕಾರವು ಆಯಾ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸಿ ಕಾಯಿಲೆಯಿಂದ ಹಸುಗಳನ್ನು ರಕ್ಷಿಸುವಂತೆ ಆದೇಶಿಸಿದೆ. ಸಮಿತಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರು, ಪಶುವೈದ್ಯರು ಮತ್ತು ಇನ್ನಿತರ ಅಧಿಕಾರಿಗಳ ಸೇರಿದ್ದಾರೆ ಎನ್ನಲಾಗಿದೆ.

ರಾಜ್ಯದ 1746 ಹಳ್ಳಿಗಳಲ್ಲಿ ಒಟ್ಟು 50,328 ಹಸುಗಳಿಗೆ ಈ ಸೋಂಕು ತಗುಲಿದೆ. ಪ್ರತಿ 10 ಹಳ್ಳಿಗೆ ಒಂದು ಮೊಬೈಲ್ ವಾಹನದ ಪಶು ಆಸ್ಪತ್ರೆ ತೆರೆಯಲಾಗಿದೆ. ರಾಜ್ಯದ ಪಶು ಸಂಗೋಪನಾ ಕಾಲೇಜುಗಳ ವಿದ್ಯಾರ್ಥಿಗಳನ್ನು ಸಹ ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಏನಿದು Lumpy skin disease?

ಸೊಳ್ಳೆಗಳು, ನೊಣಗಳು, ಕೀಟಗಳು ಇತ್ಯಾದಿಗಳಿಂದ ಅಥವಾ ನೇರ ಸಂಪರ್ಕ, ಕಲುಷಿತ ಆಹಾರ ಮತ್ತು ನೀರಿನಿಂದ ಹರಡುವ ವೈರಲ್ ಸೋಂಕು ಲಂಪಿ ಚರ್ಮದ ಕಾಯಿಲೆಯಾಗಿದೆ. ಇದರ ಮುಖ್ಯ ಲಕ್ಷಣಗಳೆಂದರೆ ಪ್ರಾಣಿಗಳಲ್ಲಿ ಸಾಮಾನ್ಯ ಜ್ವರ, ಕಣ್ಣು ಮತ್ತು ಮೂಗಿನಿಂದ ಸ್ರವಿಸುವಿಕೆ, ಅತಿಯಾದ ಜೊಲ್ಲು ಸುರಿಸುವುದು, ದೇಹದಲ್ಲಿ ಗಂಟುಗಳಂತಹ ಮೃದುವಾದ ಗುಳ್ಳೆಗಳು, ಕಡಿಮೆ ಹಾಲು ಉತ್ಪಾದನೆ ಕಂಡುಬರುತ್ತದೆ. ಆ ಪ್ರಾಣಿಗಳು ಆಹಾರ ತಿನ್ನಲು ತೊಂದರೆಯಾಗುತ್ತದೆ. ಇದು ಕೆಲವೊಮ್ಮೆ ಪ್ರಾಣಿಗಳ ಸಾವಿಗೆ ಕಾರಣವಾಗಬಹುದು.

ಇದನ್ನೂ ಓದಿ: ಮಧ್ಯಪ್ರದೇಶ: ಬೈಕ್‌ನಲ್ಲಿ 80 ಕಿ.ಮೀ ದೂರ ತಾಯಿಯ ಶವ ಸಾಗಿಸಿದ ಅಮಾನವೀಯ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...