Homeಕರ್ನಾಟಕಭಗತ್‌ಸಿಂಗ್ ಬದುಕು ಮಹಾಭಾರತದ ಅಭಿಮನ್ಯುವನ್ನು ನೆನಪಿಸುತ್ತದೆ: ದು.ಸರಸ್ವತಿ

ಭಗತ್‌ಸಿಂಗ್ ಬದುಕು ಮಹಾಭಾರತದ ಅಭಿಮನ್ಯುವನ್ನು ನೆನಪಿಸುತ್ತದೆ: ದು.ಸರಸ್ವತಿ

ಬೆಂಗಳೂರಿನ ಪೌರಕಾರ್ಮಿಕರ ಸಂಘದ ವತಿಯಿಂದ ಚಾಲನೆ ನೀಡಲಾಗಿರುವ ಸ್ವಾತಂತ್ರ್ಯ- 75 ಕಾರ್ಯಕ್ರಮವನ್ನು ಇಂದು ರಾಮಮೂರ್ತಿನಗರದಲ್ಲಿ ಆಯೋಜಿಸಲಾಗಿತ್ತು.

- Advertisement -
- Advertisement -

ಬೆಂಗಳೂರಿನ ಪೌರಕಾರ್ಮಿಕರ ಸಂಘದ ವತಿಯಿಂದ ಚಾಲನೆ ನೀಡಲಾಗಿರುವ ಸ್ವಾತಂತ್ರ್ಯ- 75 ಕಾರ್ಯಕ್ರಮವನ್ನು ಇಂದು ರಾಮಮೂರ್ತಿನಗರದಲ್ಲಿ ಆಯೋಜಿಸಲಾಗಿತ್ತು.

ಈ ವಿಶಿಷ್ಟ ಕಾರ್ಯಕ್ರಮ ಸ್ವಾತಂತ್ರ್ಯ ದಿನಾಚರಣೆಯವರೆಗೆ ನಡೆಯಲಿದ್ದು, ಪೌರಕಾರ್ಮಿಕರ ಹಕ್ಕುಗಳ ಹೋರಾಟಗಾರರು, ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ. ವಿವಿಧ ವಾರ್ಡ್‌ಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.

ಸೋಮವಾರ ನಡೆದ ಸರಳ ಸಮಾರಂಭದಲ್ಲಿ ಮಾತನಾಡಿದ ಹೋರಾಟಗಾರ್ತಿ ದು.ಸರಸ್ವತಿ, “ಆರ್ಥಿಕವಾಗಿ ಸಬಲರಾಗಬೇಕು, ಘನತೆಯಿಂದ ಬದುಕುವ ದಿನ ಬರಬೇಕೆಂದು ಇಂದಿಗೂ ಹೋರಾಟ ಮಾಡುತ್ತಿದ್ದೇವೆ. ಈ ಹೋರಾಟವು ಸ್ವಾತಂತ್ರ್ಯ ಚಳವಳಿಯ ಮುಂದುವರಿದ ಭಾಗವೇ ಆಗಿದೆ” ಎಂದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇಶ ಎಂದರೆ ದೇಶದ ಒಳಗೆ ಇರುವ ಜನರೆಂದು ಅರ್ಥ. ಈ ಜನರೆಲ್ಲರೂ ನೆಮ್ಮದಿಯಾಗಿ ಮನುಷ್ಯರ ರೀತಿ ಬದುಕಲು ಸಾಧ್ಯವಾದಾಗ ಮಾತ್ರ ಎಲ್ಲರಿಗೂ ಸ್ವಾತಂತ್ರ್ಯ ದೊರಕಿದೆ ಎಂದರ್ಥ. ನಾವು ರಾಜಕೀಯ ಸ್ವಾತಂತ್ರ್ಯವನ್ನು ಈಗ ಪಡೆದುಕೊಂಡಿದ್ದೇವೆ ಎಂದು ತಿಳಿಸಿದರು.

ದೇಶ ವಿಭಜನೆಯ ಸಂದರ್ಭವನ್ನು ನೆನೆದ ಅವರು, “ಪಾಕಿಸ್ತಾನದ ವ್ಯಾಪ್ತಿಗೆ ಸೇರಲ್ಪಟ್ಟ ಸ್ವಚ್ಛತಾ ಕರ್ಮಿಗಳನ್ನು ಇಲ್ಲಿಗೆ ಕರೆಸಿಕೊಳ್ಳಲು ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಪ್ರಧಾನಿಗೆ ಪತ್ರವನ್ನು ಬರೆದಿದ್ದರು. ಆದರೆ ಪಾಕಿಸ್ತಾನದವರು ಸ್ವಚ್ಛತಾಕರ್ಮಿಗಳನ್ನು ಇಲ್ಲಿಗೆ ಕಳುಹಿಸಲು ಸಿದ್ಧವಿರಲಿಲ್ಲ. ಆ ಜನರ ಮೇಲಿನ ಪ್ರೀತಿಯ ಕಾರಣಕ್ಕಾಗಿ ಅಲ್ಲ. ಕಸ ಬಾಚುವ, ಕಕ್ಕಸ್ಸು ತೊಳೆಯುವ ಕೆಲಸವನ್ನು ಮಾಡಲು ಯಾರೂ ಸಿದ್ಧರಿರಲಿಲ್ಲ. ಹೀಗಾಗಿ ಕಳುಹಿಸಲು ಒಪ್ಪಲಿಲ್ಲ. ಆದರೆ ಸ್ವಚ್ಛತಾಕರ್ಮಿಗಳು ಭಾರತಕ್ಕೆ ವಾಪಸ್‌ ಹೋಗಲು ಬಯಸಿದ್ದರಿಂದ ಅವರನ್ನು ಕರೆಸಿಕೊಳ್ಳಲೇಬೇಕೆಂದು ಬಾಬಾ ಸಾಹೇಬರು ಪ್ರಧಾನಿಯವರ ಮೇಲೆ ಒತ್ತಡ ಹಾಕಿದರು” ಎಂದು ವಿವರಿಸಿದರು.

ಕ್ರಾಂತಿಕಾರಿ ಹೋರಾಟಗಾರ ಭಗತ್‌ಸಿಂಗ್‌ ಮತ್ತು ಮಹಾಭಾರತದ ಅಭಿಮನ್ಯುವಿನ ಸ್ಥಿತಿಯನ್ನು ಹೋಲಿಕೆ ಮಾಡಿದ ಅವರು, “ಮಹಾಭಾರತದಲ್ಲಿ ಚಕ್ರವ್ಯೂಹ ಭೇದಿಸಿ ಹೊರಬರಲಾಗದ ಸ್ಥಿತಿಯಲ್ಲಿ ಅಭಿಮನ್ಯು ಸಂಕಟಪಟ್ಟ. ಎಲ್ಲ ಹಿರಿಯರು ನೋಡುತ್ತಾ ಸುಮ್ಮನಿದ್ದರು. ಪ್ರಯತ್ನಪಟ್ಟಿದ್ದರೆ ಅಭಿಮನ್ಯುವನ್ನು ಕಾಪಾಡಬಹುದಿತ್ತು. ಭಗತ್‌ಸಿಂಗ್ ಕಥೆಯೂ ಹೀಗೆ ಆಯಿತು. ಭಗತ್‌ಸಿಂಗ್ ಜೀವನದ ಕುರಿತು ಪ್ರತಿಸಲ ಓದುವಾಗಲೂ ಹೊಟ್ಟೆಯಲ್ಲಿ ಕಲಸಿದಂತಾಗುತ್ತದೆ. ಚಿಕ್ಕ ವಯಸ್ಸಲ್ಲಿ ತೀವ್ರ ಹೋರಾಟ ನಡೆಸಿದ. ಶಿಕ್ಷೆಗೊಳಪಟ್ಟ. ದೊಡ್ಡ ದೊಡ್ಡ ನಾಯಕರಿದ್ದರು. ಆ ಮಗುವನ್ನು ಬಿಡಿಸಲು ಅವರೇಕೆ ಪ್ರಯತ್ನ ಮಾಡಲಿಲ್ಲ ಎಂಬ ಪ್ರಶ್ನೆ ನನ್ನನ್ನು ಕಾಡುತ್ತದೆ” ಎಂದು ವಿವಾದಿಸಿದರು.

ಬ್ರಿಟಿಷರ ವಿರುದ್ಧ ಮಹಿಳೆಯರು ಹೋರಾಡಿದ್ದನ್ನು ಮೆಲುಕು ಹಾಕಿದ ಅವರು, “ಒಮ್ಮೆ ಪೊಲೀಸರು ದಿಢೀರನೆ ದಾಳಿ ಮಾಡಿದ್ದರು. ತಕ್ಷಣ ಅಲ್ಲಿದ್ದ ಕರಪತ್ರಗಳನ್ನು ತಮ್ಮ ಕೆಳಗೆ ಹಾಕಿ ಮಹಿಳೆಯೊಬ್ಬರು ಕುಳಿತುಕೊಳ್ಳುತ್ತಾಳೆ. ಎದ್ದೇಳುವಂತೆ ಪೊಲೀಸರು ಸೂಚಿಸಿದಾಗ ಆ ಮಹಿಳೆ- ನಾನು ಮುಟ್ಟಾಗಿದ್ದೇನೆ. ನಾನು ಏಳಲ್ಲ- ಎಂದು ತಿರುಗೇಟು ನೀಡುತ್ತಾಳೆ. ಪೊಲೀಸರು ಮರುಮಾತನಾಡದೆ ವಾಪಸ್‌ ಹೋಗುತ್ತಾರೆ. ಹೀಗೆ ಸ್ವಾತಂತ್ರ್ಯ ಹೋರಾಟದಲ್ಲಿ ಅಜ್ಞಾತ ಮಹಿಳೆಯರು ಬಹುದೊಡ್ಡ ಪಾತ್ರವಹಿಸಿದ್ದಾರೆ” ಎಂದರು.

ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸ್ವಾತಂತ್ರ್ಯ ಹೋರಾಟ ನಡೆಸಿದವರ ಸ್ಮರಣೆಗಾಗಿ ಹದಿನೈದು ದಿನಗಳ ಕಾಲ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಮೊನ್ನೆ ನೀವು ಮಾಡಿದ ಹೋರಾಟ ಅವಿಸ್ಮರಣೀಯ. ಪಟ್ಟು ಬದಲಿಸಿದೆ ಕೂತಿದ್ದೀರಲ್ಲ, ಅದನ್ನು ಎಂದಿಗೂ ಮರೆಯಲಾಗದು ಎಂದು ಹೊಗಳಿದರು.

ವಕೀಲರು ಹಾಗೂ ಕಾರ್ಮಿಕ ಮುಖಂಡರಾದ ಕ್ಲಿಫ್ಟನ್‌ ರಸಾರಿಯೋ ಮಾತನಾಡಿ, “ಪೌರಕಾರ್ಮಿಕರೂ ಸ್ವಾತಂತ್ರಕ್ಕಾಗಿ ಹೋರಾಡಿದ್ದಾರೆ. ದುಡಿಯುವ ವರ್ಗದ ಹೋರಾಟದಿಂದ ಸ್ವಾತಂತ್ರ್ಯ ಬಂತು ಎಂಬುದನ್ನು ನಾವು ಮರೆಯಬಾರದು” ಎಂದು ತಿಳಿಸಿದರು.

ಸ್ವಾತಂತ್ರ್ಯ ಹೋರಾಟ ಕೇವಲ ಬ್ರಿಟಿಷರನ್ನು ಓಡಿಸುವುದಕ್ಕಾಗಿ ಅಲ್ಲ. ಎರಡು ತೆರನಾದ ಶತ್ರುಗಳನ್ನು ಸೋಲಿಸಬೇಕು ಎಂದಿದ್ದರು ಅಂಬೇಡ್ಕರ್‌. ಆ ಎರಡು ಶತ್ರುಗಳೆಂದರೆ ಬಂಡವಾಳಶಾಹಿಗಳು ಮತ್ತು ಬ್ರಾಹ್ಮಣ್ಯ ಎಂದು ಎಚ್ಚರಿಸಿದ್ದರು. ಆ ಮಾತು ಇಂದಿಗೂ ನಿಜವಾಗಿದೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ಪೌರಕಾರ್ಮಿಕರ ಕಾಯಮಾತಿಗೆ ತೊಡಕಾಗಿರುವ ಬೆಂಗಳೂರಿನ ಕಸದ ಮಾಫಿಯಾ ಮತ್ತು ಕಾಂಟ್ರಾಕ್ಟರ್‌ಗಳು

ಸ್ವಾತಂತ್ರ್ಯವೆಂಬುದು ಕೂಲಿಕಾರ್ಮಿಕರ ಕೈಲಿ, ರೈತರ ಕೈಲಿ, ಆದಿವಾಸಿಗಳ ಕೈಲಿ ಇರಬೇಕು ಎಂದಿದ್ದರು ಭಗತ್‌ಸಿಂಗ್‌. ಬಾಬಾ ಸಾಹೇಬ್‌ ಮತ್ತು ಭಗತ್‌ಸಿಂಗ್ ಅವರನ್ನು ನಾವು ಮರೆಯಲು ಸಾಧ್ಯವಿಲ್ಲ. ಬ್ರಿಟಿಷರು ಹೋದ ಮೇಲೆ ಈ ದೇಶ ಹೇಗಿರಬೇಕು ಎಂದು ಈ ಇರು ಕನಸು ಕಂಡಿದ್ದರು ಎಂದು ವಿವರಿಸಿದರು.

ರೈತ ಹೋರಾಟಗಾರ್ತಿ ಎನ್.ಗಾಯತ್ರಿ ಮಾತನಾಡಿ, “ಸ್ವಾತಂತ್ರ್ಯ ಹೋರಾಟ ಎಂದ ತಕ್ಷಣ ತ್ಯಾಗ ಬಲಿದಾನ ನೆನಪಾಗುತ್ತದೆ. ತ್ಯಾಗ, ಬಲಿದಾನ ಎಂದಾಗ ನೆನಪಿಗೆ ಬರುವುದೇ ಪೌರಕಾರ್ಮಿಕರು. ಕಸಕ್ಕೆ ಮೋಕ್ಷವನ್ನು ಕೊಡುತ್ತಿರುವ ನಿಮ್ಮ ತ್ಯಾಗ, ಬಲಿದಾನ ಸ್ವಾತಂತ್ರ್ಯ ಪ್ರತೀಕ” ಎಂದು ಬಣ್ಣಿಸಿದರು.

ಗರ್ಮೆಂಟ್ ನೌಕರರ ಸಂಘ ಮುಖಂಡರಾದ ಪ್ರತಿಭಾ, ಗಮನ ಮಹಿಳಾ ಸಂಘದ ಮಧು ಭೂಷಣ, ಚಿಂತಕ ಹುಲಿಕುಂಟೆ ಮೂರ್ತಿ, ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಅಶ್ವಿನಿ ಸೇರಿದಂತೆ ಪೌರಕಾರ್ಮಿಕರ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...

ಅದಾನಿ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್‌ಗೆ ಶಿಕ್ಷೆ: ‘ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೊಡೆತ’ ಎಂದ ಪತ್ರಕರ್ತರ ಸಂಘಟನೆಗಳು

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಿಖಾ ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಮತ್ತು ಹಲವಾರು ಪತ್ರಿಕಾ ಸಂಸ್ಥೆಗಳು...

‘ನಾವು ಯಾರನ್ನೂ ನಿಂದಿಸಿಲ್ಲ’: ಚೇಂಬರ್ ‘ದುರ್ವರ್ತನೆ’ ಆರೋಪಕ್ಕೆ ಪ್ರಿಯಾಂಕಾ ಗಾಂಧಿ ಸ್ಪಷ್ಟನೆ 

ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ತಮ್ಮ ಪಕ್ಷದ ಸಂಸದರು "ಅನುಚಿತವಾಗಿ ವರ್ತಿಸಿದ್ದಾರೆ" ಎಂದು ಆರೋಪಿಸಿದಾಗ, ಅವರನ್ನು ಬೆಂಬಲಿಸಿದ್ದೇನೆ ಎಂದು ಹೇಳಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದೀಯ ವ್ಯವಹಾರಗಳ...

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...

ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ...

‘ಆಕೆಯ ಜೀವ ಮುಖ್ಯ’: ಅಮೆರಿಕದ ಪೊಲೀಸ್ ಅಧಿಕಾರಿ ವೇಗದ ಚಾಲನೆಯಿಂದ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿಯ ಕುಟುಂಬಕ್ಕೆ 260 ಕೋಟಿ ಪರಿಹಾರ

2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಚಾಲನೆ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಡಿಕ್ಕಿ ಹೊಡೆದ ಕಾರಣ ಸಾವನ್ನಪ್ಪಿದ ಭಾರತದ 23 ವರ್ಷದ ಪದವೀಧರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸಿಯಾಟಲ್ ನಗರವು...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

ಲೋಕಸಭೆ ಅಧಿವೇಶನದಲ್ಲಿ ಗುರುವಾರ (ಫೆ.12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಸೂಚನೆ ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್...

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಪುತ್ರ ಶಿವಂ ಮಿಶ್ರಾ ಬಂಧನ

2026 ಫೆಬ್ರವರಿ 8, ಭಾನುವಾರದಂದು ವಿಐಪಿ ರಸ್ತೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದ ಹೈ ಪ್ರೊಫೈಲ್ ಲ್ಯಾಂಬೋರ್ಗಿನಿ ಅಪಘಾತಕ್ಕೆ ಸಂಬಂಧಿಸಿದಂತೆ ಸ್ಥಳೀಯ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು...

ಫೆಬ್ರವರಿ 12 ರಂದು ಭಾರತ್ ಬಂದ್| ಹಲವು ರಾಜ್ಯಗಳಲ್ಲಿ ಬಂದ್ ಗೆ ಪೂರ್ಣ ಬೆಂಬಲ: ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಫೆಬ್ರವರಿ 12, ಗುರುವಾರ ಸಾರ್ವತ್ರಿಕ ಮುಷ್ಕರಕ್ಕೆ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಕರೆ ನೀಡಿದೆ. ಕರ್ನಾಟಕದಲ್ಲಿಯೂ ಕಾರ್ಮಿಕ ಸಂಘಟನೆಗಳು ಮುಷ್ಕರವನ್ನು ನಡೆಸುತ್ತಿವೆ. ಕೇಂದ್ರ ಸರ್ಕಾರದ 4...