Homeಕರ್ನಾಟಕಭಗತ್‌ಸಿಂಗ್ ಬದುಕು ಮಹಾಭಾರತದ ಅಭಿಮನ್ಯುವನ್ನು ನೆನಪಿಸುತ್ತದೆ: ದು.ಸರಸ್ವತಿ

ಭಗತ್‌ಸಿಂಗ್ ಬದುಕು ಮಹಾಭಾರತದ ಅಭಿಮನ್ಯುವನ್ನು ನೆನಪಿಸುತ್ತದೆ: ದು.ಸರಸ್ವತಿ

ಬೆಂಗಳೂರಿನ ಪೌರಕಾರ್ಮಿಕರ ಸಂಘದ ವತಿಯಿಂದ ಚಾಲನೆ ನೀಡಲಾಗಿರುವ ಸ್ವಾತಂತ್ರ್ಯ- 75 ಕಾರ್ಯಕ್ರಮವನ್ನು ಇಂದು ರಾಮಮೂರ್ತಿನಗರದಲ್ಲಿ ಆಯೋಜಿಸಲಾಗಿತ್ತು.

- Advertisement -
- Advertisement -

ಬೆಂಗಳೂರಿನ ಪೌರಕಾರ್ಮಿಕರ ಸಂಘದ ವತಿಯಿಂದ ಚಾಲನೆ ನೀಡಲಾಗಿರುವ ಸ್ವಾತಂತ್ರ್ಯ- 75 ಕಾರ್ಯಕ್ರಮವನ್ನು ಇಂದು ರಾಮಮೂರ್ತಿನಗರದಲ್ಲಿ ಆಯೋಜಿಸಲಾಗಿತ್ತು.

ಈ ವಿಶಿಷ್ಟ ಕಾರ್ಯಕ್ರಮ ಸ್ವಾತಂತ್ರ್ಯ ದಿನಾಚರಣೆಯವರೆಗೆ ನಡೆಯಲಿದ್ದು, ಪೌರಕಾರ್ಮಿಕರ ಹಕ್ಕುಗಳ ಹೋರಾಟಗಾರರು, ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ. ವಿವಿಧ ವಾರ್ಡ್‌ಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.

ಸೋಮವಾರ ನಡೆದ ಸರಳ ಸಮಾರಂಭದಲ್ಲಿ ಮಾತನಾಡಿದ ಹೋರಾಟಗಾರ್ತಿ ದು.ಸರಸ್ವತಿ, “ಆರ್ಥಿಕವಾಗಿ ಸಬಲರಾಗಬೇಕು, ಘನತೆಯಿಂದ ಬದುಕುವ ದಿನ ಬರಬೇಕೆಂದು ಇಂದಿಗೂ ಹೋರಾಟ ಮಾಡುತ್ತಿದ್ದೇವೆ. ಈ ಹೋರಾಟವು ಸ್ವಾತಂತ್ರ್ಯ ಚಳವಳಿಯ ಮುಂದುವರಿದ ಭಾಗವೇ ಆಗಿದೆ” ಎಂದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇಶ ಎಂದರೆ ದೇಶದ ಒಳಗೆ ಇರುವ ಜನರೆಂದು ಅರ್ಥ. ಈ ಜನರೆಲ್ಲರೂ ನೆಮ್ಮದಿಯಾಗಿ ಮನುಷ್ಯರ ರೀತಿ ಬದುಕಲು ಸಾಧ್ಯವಾದಾಗ ಮಾತ್ರ ಎಲ್ಲರಿಗೂ ಸ್ವಾತಂತ್ರ್ಯ ದೊರಕಿದೆ ಎಂದರ್ಥ. ನಾವು ರಾಜಕೀಯ ಸ್ವಾತಂತ್ರ್ಯವನ್ನು ಈಗ ಪಡೆದುಕೊಂಡಿದ್ದೇವೆ ಎಂದು ತಿಳಿಸಿದರು.

ದೇಶ ವಿಭಜನೆಯ ಸಂದರ್ಭವನ್ನು ನೆನೆದ ಅವರು, “ಪಾಕಿಸ್ತಾನದ ವ್ಯಾಪ್ತಿಗೆ ಸೇರಲ್ಪಟ್ಟ ಸ್ವಚ್ಛತಾ ಕರ್ಮಿಗಳನ್ನು ಇಲ್ಲಿಗೆ ಕರೆಸಿಕೊಳ್ಳಲು ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಪ್ರಧಾನಿಗೆ ಪತ್ರವನ್ನು ಬರೆದಿದ್ದರು. ಆದರೆ ಪಾಕಿಸ್ತಾನದವರು ಸ್ವಚ್ಛತಾಕರ್ಮಿಗಳನ್ನು ಇಲ್ಲಿಗೆ ಕಳುಹಿಸಲು ಸಿದ್ಧವಿರಲಿಲ್ಲ. ಆ ಜನರ ಮೇಲಿನ ಪ್ರೀತಿಯ ಕಾರಣಕ್ಕಾಗಿ ಅಲ್ಲ. ಕಸ ಬಾಚುವ, ಕಕ್ಕಸ್ಸು ತೊಳೆಯುವ ಕೆಲಸವನ್ನು ಮಾಡಲು ಯಾರೂ ಸಿದ್ಧರಿರಲಿಲ್ಲ. ಹೀಗಾಗಿ ಕಳುಹಿಸಲು ಒಪ್ಪಲಿಲ್ಲ. ಆದರೆ ಸ್ವಚ್ಛತಾಕರ್ಮಿಗಳು ಭಾರತಕ್ಕೆ ವಾಪಸ್‌ ಹೋಗಲು ಬಯಸಿದ್ದರಿಂದ ಅವರನ್ನು ಕರೆಸಿಕೊಳ್ಳಲೇಬೇಕೆಂದು ಬಾಬಾ ಸಾಹೇಬರು ಪ್ರಧಾನಿಯವರ ಮೇಲೆ ಒತ್ತಡ ಹಾಕಿದರು” ಎಂದು ವಿವರಿಸಿದರು.

ಕ್ರಾಂತಿಕಾರಿ ಹೋರಾಟಗಾರ ಭಗತ್‌ಸಿಂಗ್‌ ಮತ್ತು ಮಹಾಭಾರತದ ಅಭಿಮನ್ಯುವಿನ ಸ್ಥಿತಿಯನ್ನು ಹೋಲಿಕೆ ಮಾಡಿದ ಅವರು, “ಮಹಾಭಾರತದಲ್ಲಿ ಚಕ್ರವ್ಯೂಹ ಭೇದಿಸಿ ಹೊರಬರಲಾಗದ ಸ್ಥಿತಿಯಲ್ಲಿ ಅಭಿಮನ್ಯು ಸಂಕಟಪಟ್ಟ. ಎಲ್ಲ ಹಿರಿಯರು ನೋಡುತ್ತಾ ಸುಮ್ಮನಿದ್ದರು. ಪ್ರಯತ್ನಪಟ್ಟಿದ್ದರೆ ಅಭಿಮನ್ಯುವನ್ನು ಕಾಪಾಡಬಹುದಿತ್ತು. ಭಗತ್‌ಸಿಂಗ್ ಕಥೆಯೂ ಹೀಗೆ ಆಯಿತು. ಭಗತ್‌ಸಿಂಗ್ ಜೀವನದ ಕುರಿತು ಪ್ರತಿಸಲ ಓದುವಾಗಲೂ ಹೊಟ್ಟೆಯಲ್ಲಿ ಕಲಸಿದಂತಾಗುತ್ತದೆ. ಚಿಕ್ಕ ವಯಸ್ಸಲ್ಲಿ ತೀವ್ರ ಹೋರಾಟ ನಡೆಸಿದ. ಶಿಕ್ಷೆಗೊಳಪಟ್ಟ. ದೊಡ್ಡ ದೊಡ್ಡ ನಾಯಕರಿದ್ದರು. ಆ ಮಗುವನ್ನು ಬಿಡಿಸಲು ಅವರೇಕೆ ಪ್ರಯತ್ನ ಮಾಡಲಿಲ್ಲ ಎಂಬ ಪ್ರಶ್ನೆ ನನ್ನನ್ನು ಕಾಡುತ್ತದೆ” ಎಂದು ವಿವಾದಿಸಿದರು.

ಬ್ರಿಟಿಷರ ವಿರುದ್ಧ ಮಹಿಳೆಯರು ಹೋರಾಡಿದ್ದನ್ನು ಮೆಲುಕು ಹಾಕಿದ ಅವರು, “ಒಮ್ಮೆ ಪೊಲೀಸರು ದಿಢೀರನೆ ದಾಳಿ ಮಾಡಿದ್ದರು. ತಕ್ಷಣ ಅಲ್ಲಿದ್ದ ಕರಪತ್ರಗಳನ್ನು ತಮ್ಮ ಕೆಳಗೆ ಹಾಕಿ ಮಹಿಳೆಯೊಬ್ಬರು ಕುಳಿತುಕೊಳ್ಳುತ್ತಾಳೆ. ಎದ್ದೇಳುವಂತೆ ಪೊಲೀಸರು ಸೂಚಿಸಿದಾಗ ಆ ಮಹಿಳೆ- ನಾನು ಮುಟ್ಟಾಗಿದ್ದೇನೆ. ನಾನು ಏಳಲ್ಲ- ಎಂದು ತಿರುಗೇಟು ನೀಡುತ್ತಾಳೆ. ಪೊಲೀಸರು ಮರುಮಾತನಾಡದೆ ವಾಪಸ್‌ ಹೋಗುತ್ತಾರೆ. ಹೀಗೆ ಸ್ವಾತಂತ್ರ್ಯ ಹೋರಾಟದಲ್ಲಿ ಅಜ್ಞಾತ ಮಹಿಳೆಯರು ಬಹುದೊಡ್ಡ ಪಾತ್ರವಹಿಸಿದ್ದಾರೆ” ಎಂದರು.

ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸ್ವಾತಂತ್ರ್ಯ ಹೋರಾಟ ನಡೆಸಿದವರ ಸ್ಮರಣೆಗಾಗಿ ಹದಿನೈದು ದಿನಗಳ ಕಾಲ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಮೊನ್ನೆ ನೀವು ಮಾಡಿದ ಹೋರಾಟ ಅವಿಸ್ಮರಣೀಯ. ಪಟ್ಟು ಬದಲಿಸಿದೆ ಕೂತಿದ್ದೀರಲ್ಲ, ಅದನ್ನು ಎಂದಿಗೂ ಮರೆಯಲಾಗದು ಎಂದು ಹೊಗಳಿದರು.

ವಕೀಲರು ಹಾಗೂ ಕಾರ್ಮಿಕ ಮುಖಂಡರಾದ ಕ್ಲಿಫ್ಟನ್‌ ರಸಾರಿಯೋ ಮಾತನಾಡಿ, “ಪೌರಕಾರ್ಮಿಕರೂ ಸ್ವಾತಂತ್ರಕ್ಕಾಗಿ ಹೋರಾಡಿದ್ದಾರೆ. ದುಡಿಯುವ ವರ್ಗದ ಹೋರಾಟದಿಂದ ಸ್ವಾತಂತ್ರ್ಯ ಬಂತು ಎಂಬುದನ್ನು ನಾವು ಮರೆಯಬಾರದು” ಎಂದು ತಿಳಿಸಿದರು.

ಸ್ವಾತಂತ್ರ್ಯ ಹೋರಾಟ ಕೇವಲ ಬ್ರಿಟಿಷರನ್ನು ಓಡಿಸುವುದಕ್ಕಾಗಿ ಅಲ್ಲ. ಎರಡು ತೆರನಾದ ಶತ್ರುಗಳನ್ನು ಸೋಲಿಸಬೇಕು ಎಂದಿದ್ದರು ಅಂಬೇಡ್ಕರ್‌. ಆ ಎರಡು ಶತ್ರುಗಳೆಂದರೆ ಬಂಡವಾಳಶಾಹಿಗಳು ಮತ್ತು ಬ್ರಾಹ್ಮಣ್ಯ ಎಂದು ಎಚ್ಚರಿಸಿದ್ದರು. ಆ ಮಾತು ಇಂದಿಗೂ ನಿಜವಾಗಿದೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ಪೌರಕಾರ್ಮಿಕರ ಕಾಯಮಾತಿಗೆ ತೊಡಕಾಗಿರುವ ಬೆಂಗಳೂರಿನ ಕಸದ ಮಾಫಿಯಾ ಮತ್ತು ಕಾಂಟ್ರಾಕ್ಟರ್‌ಗಳು

ಸ್ವಾತಂತ್ರ್ಯವೆಂಬುದು ಕೂಲಿಕಾರ್ಮಿಕರ ಕೈಲಿ, ರೈತರ ಕೈಲಿ, ಆದಿವಾಸಿಗಳ ಕೈಲಿ ಇರಬೇಕು ಎಂದಿದ್ದರು ಭಗತ್‌ಸಿಂಗ್‌. ಬಾಬಾ ಸಾಹೇಬ್‌ ಮತ್ತು ಭಗತ್‌ಸಿಂಗ್ ಅವರನ್ನು ನಾವು ಮರೆಯಲು ಸಾಧ್ಯವಿಲ್ಲ. ಬ್ರಿಟಿಷರು ಹೋದ ಮೇಲೆ ಈ ದೇಶ ಹೇಗಿರಬೇಕು ಎಂದು ಈ ಇರು ಕನಸು ಕಂಡಿದ್ದರು ಎಂದು ವಿವರಿಸಿದರು.

ರೈತ ಹೋರಾಟಗಾರ್ತಿ ಎನ್.ಗಾಯತ್ರಿ ಮಾತನಾಡಿ, “ಸ್ವಾತಂತ್ರ್ಯ ಹೋರಾಟ ಎಂದ ತಕ್ಷಣ ತ್ಯಾಗ ಬಲಿದಾನ ನೆನಪಾಗುತ್ತದೆ. ತ್ಯಾಗ, ಬಲಿದಾನ ಎಂದಾಗ ನೆನಪಿಗೆ ಬರುವುದೇ ಪೌರಕಾರ್ಮಿಕರು. ಕಸಕ್ಕೆ ಮೋಕ್ಷವನ್ನು ಕೊಡುತ್ತಿರುವ ನಿಮ್ಮ ತ್ಯಾಗ, ಬಲಿದಾನ ಸ್ವಾತಂತ್ರ್ಯ ಪ್ರತೀಕ” ಎಂದು ಬಣ್ಣಿಸಿದರು.

ಗರ್ಮೆಂಟ್ ನೌಕರರ ಸಂಘ ಮುಖಂಡರಾದ ಪ್ರತಿಭಾ, ಗಮನ ಮಹಿಳಾ ಸಂಘದ ಮಧು ಭೂಷಣ, ಚಿಂತಕ ಹುಲಿಕುಂಟೆ ಮೂರ್ತಿ, ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಅಶ್ವಿನಿ ಸೇರಿದಂತೆ ಪೌರಕಾರ್ಮಿಕರ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...