Homeಮುಖಪುಟಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ತೇಜಸ್ವಿನಿ ಅನಂತಕುಮಾರ್ ಅಪಸ್ವರ: ಪಾಠ ಮಾಡಿದ ನೆಟ್ಟಿಗರು

ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ತೇಜಸ್ವಿನಿ ಅನಂತಕುಮಾರ್ ಅಪಸ್ವರ: ಪಾಠ ಮಾಡಿದ ನೆಟ್ಟಿಗರು

- Advertisement -
- Advertisement -

ಅಪೌಷ್ಠಿಕತೆಯನ್ನು ಹೋಗಲಾಡಿಸುವ ಸಲುವಾಗಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡಬೇಕೆಂಬ ತಜ್ಞರ ಶಿಫಾರಸ್ಸನ್ನು ಕರ್ನಾಟಕ ಸರ್ಕಾರ ಒಪ್ಪಿಕೊಂಡಿದೆ. ಆದರೆ ಇದಕ್ಕೆ ಅಲ್ಲೊಂದು ಇಲ್ಲೊಂದು ಅಪಸ್ವರಗಳು ಕೇಳಿಬರುತ್ತಲೆ ಇವೆ. ಈ ಹಿಂದೆ ಕೆಲ ಮಠಾಧೀಶರು ಮೊಟ್ಟೆ ನೀಡಬಾರದು ಎಂದು ಹೇಳಿ ಟೀಕೆಗೆ ಗುರಿಯಾಗಿದ್ದರು. ಈಗ ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್‌ರವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಸಹ ಮೊಟ್ಟೆ ನೀಡುವ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ ಕಾರಣ ಮೊಟ್ಟ ಏಕೆ ಬೇಕೆಂದು ನೆಟ್ಟಿಗರು ಅವರಿಗೆ ಪಾಠ ಮಾಡಿದ್ದಾರೆ.

ಸಮಾನತೆಯ ಬಗ್ಗೆ ಮಾತನಾಡುತ್ತಲೇ ನೀವು ಏಕೆ ಸಸ್ಯಾಹಾರಿಗಳ ಪರ ವಹಿಸಿದ್ದೀರಿ? ಮಕ್ಕಳು ಅವರಿಷ್ಟ ಬಂದಿದ್ದನ್ನು ತಿನ್ನುತ್ತಾರೆ, ನಿಮ್ಮ ಹೇರಿಕೆ ಏಕೆ ಎಂದು ಹಲವು ಪ್ರಶ್ನಿಸಿದ್ದಾರೆ.

“ನಮ್ಮ ಕರ್ನಾಟಕ ಸರ್ಕಾರ ಮಧ್ಯಾಹ್ನದ ಊಟದಲ್ಲಿ ಮೊಟ್ಟೆ ನೀಡಲು ಏಕೆ ನಿರ್ಧರಿಸಿದೆ? ಅದೊಂದೆ ಪೋಷಣೆಯ ಏಕೈಕ ಮೂಲವಲ್ಲ. ಸಸ್ಯಾಹಾರಿಗಳಾಗಿರುವ ಅನೇಕ ವಿದ್ಯಾರ್ಥಿಗಳನ್ನು ಇದು ಹೊರಗಿಡುತ್ತದೆ.
ಪ್ರತಿಯೊಬ್ಬ ವಿದ್ಯಾರ್ಥಿಗೂ ಸಮಾನ ಅವಕಾಶ ಸಿಗುವಂತೆ ನಮ್ಮ ನೀತಿಗಳನ್ನು ರೂಪಿಸಬೇಕು” ಎಂದು ತೇಜಸ್ವಿನಿ ಅನಂತಕುಮಾರ್ ಟ್ವೀಟ್ ಮಾಡಿದ್ದರು.

ಅದಕ್ಕೆ ಪ್ರತಿಯಾಗಿ ನೂರಾರು ಜನರು ಮೊಟ್ಟೆ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ನೀವು ಸಸ್ಯಹಾರಿಯಾಗಿದ್ದಾರೆ ಅದು ನಿಮ್ಮಿಷ್ಟ. ಆದರೆ ಅದನ್ನು ದಯವಿಟ್ಟು ಇತರರ ಮೇಲೆ ಹೇರಬೇಡಿ. ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದರಿಂದ ತಪ್ಪೇನು? ನಿಮ್ಮ ಬ್ರಾಹ್ಮಣ್ಯವನ್ನು ಶಾಲೆಗಳಿಗೆ ತರಬೇಡಿ” ಎಂದು ಲಿಖಿತ್ ಕುಮಾರ್ ಎಂಬುವವರು ಪ್ರತಿಕ್ರಿಯಿಸಿದ್ದಾರೆ.

ಮೊಟ್ಟೆ/ಬಾಳೆಹಣ್ಣು/ಕಡ್ಲೆಮಿಠಾಯಿ ಈ ಮೂರು ಆಯ್ಕೆಗಳಿವೆ. ಮಕ್ಕಳು ತಮಗೆ ಬೇಕಾದುದ್ದನ್ನು ತಿನ್ನುತ್ತಾರೆ. ಇಂತದ್ದೆ ತಿನ್ನಿ ಎಂದು ಹೇಳಲು ನಾವ್ಯಾರು ಎಂದು ಗಣೇಶ್ ಭಟ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ತೇಜಸ್ವಿನಿಯವರ ಪ್ರಕಾರ ಬಹುಸಂಖ್ಯಾತ ಮಾಂಸಾಹಾರಿಗಳು ಅಲ್ಪಸಂಖ್ಯಾತ ಸಸ್ಯಾಹಾರಿಗಳಿಗಾಗಿ ತಮ್ಮ ಆಹಾರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕು?!! ವಾಹ್, ಇದೇ ನೋಡಿ ಬ್ರಾಹ್ಮಣ್ಯ ಅಂದರೆ!. ಇದರ ಬದಲಿಗೆ ಯಾಕೆ ಸಸ್ಯಾಹಾರಿಗಳೂ ಮೊಟ್ಟೆ ತಿನ್ನಬಾರದು.? ಆರೋಗ್ಯಕ್ಕೆ ಒಳ್ಳೆಯದು. ಆಗ ಸಮಾನತೆ ಕೂಡಾ ಉಂಟಾಗುತ್ತದೆ ಅಲ್ವಾ?!! ಎಂದು ಶ್ರೀನಿವಾಸ ಕಾರ್ಕಳರವರು ತಿರುಗೇಟು ನೀಡಿದ್ದಾರೆ.

ದಯವಿಟ್ಟು ಮೊಟ್ಟೆಯಷ್ಟು ಅಗ್ಗದ, ಪೌಷ್ಟಿಕ ಮತ್ತು ರುಚಿಕರವಾದ ಪರ್ಯಾಯವನ್ನು ಸೂಚಿಸಿ. ಕೆಲವು ದುರ್ಬಲವಾದ ಬ್ರಾಹ್ಮಣ ಇಂದ್ರಿಯಗಳನ್ನು ರಕ್ಷಿಸಲು ನಮ್ಮ ನೀತಿಗಳನ್ನು ಹೇರಬಾರದು. ಮೊಟ್ಟೆ ತಿನ್ನದವರಿಗೆ ಚಿಕ್ಕಿ ಇದೆ. ಮೊಟ್ಟೆ ತಿನ್ನುವವರು ಮೊಟ್ಟೆ ತಿಂದರೆ ಏಕೆ ಸಮಸ್ಯೆ? ಎಂದು ಟ್ವಿಟರ್ ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.

“ಸರ್ಕಾರಿ ಶಾಲೆಲಿ ಬ್ರಾಹ್ಮಣ, ಲಿಂಗಾಯತ ಹೀಗೆ ಸಸ್ಯಹಾರಿ ಸಮುದಾಯದ ಮಕ್ಕಳು ಹೆಚ್ಚು ಓದ್ತಾಯಿಲ್ಲ. OBC/SC/ST ಮಕ್ಕಳು ಅಧಿಕವಾಗಿದ್ದರೆ. ಮೊಟ್ಟೆನು ಕೊಡ್ತಾನೆ, ಮಾಂಸನು ಕೊಡ್ತಾರೆ. ದುಬಾರಿ ಪೀಸ್ ಕಟ್ಟುವ ಶಾಲೆಲಿ ಮಕ್ಳನ್ನ ಓದಿಸುತ್ತಾ ಇರುವ ನೀವುಗಳು ಸರ್ಕಾರಿ ಶಾಲೆಲಿ ನಿಮ್ಮ ಪದ್ಧತಿಯನ್ನ ಹೇರಿಕೆ ಮಾಡೋಕೆ ಬರಬೇಡಿ. ತಮಿಳುನಾಡಿನಲ್ಲಿ ವಾರಕ್ಕೆ 5 ದಿನ ಮೊಟ್ಟೆ. ತೆಲಂಗಾಣ, ಆಂಧ್ರದಲ್ಲಿ ಮೊಟ್ಟೆ ಕೊಡ್ತಾರೆ. ಬರೀ ಧಾನ್ಯಗಳಿಂದ ಸಂಪೂರ್ಣ ಪೌಷ್ಟಿಕಾಂಶ ಬರಲ್ಲ. ಮೀನು, ಮೊಟ್ಟೆ, ಮಾಂಸ, ಹಾಲು ಅಗತ್ಯ. ಕಲ್ಯಾಣ ಕರ್ನಾಟಕ ಭಾಗದ 14 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಮೊಟ್ಟೆ ಕೊಟ್ಟಿದ್ದರಿಂದ ಅವರು ನ್ಯೂನಪೋಷಣೆಯ ಕೊರತೆ ಇಳಿಮುಖವಾಗಿದೆ. ಮೊದಲು ನ್ಯೂನಪೋಷಣೆಯ ತೀವ್ರ ಕೊರತೆ ಇತ್ತು” ಎಂದು ಟ್ವಿಟರ್ ಬಳಕೆದಾರರೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

79% ಕನ್ನಡಿಗರು ಮಾಂಸಾಹಾರ ಸೇವಿಸುತ್ತಾರೆ. ಮೊಟ್ಟೆ ತಿನ್ನುವ ಜನಸಂಖ್ಯೆಯು ಕನಿಷ್ಠ 90% ಆಗಿರುತ್ತದೆ ಎಂದು ನನಗೆ ಖಾತ್ರಿಯಿದೆ. ಹಾಗಾದರೆ 10% ಜನರಿಗೆ ಪರ್ಯಾಯವನ್ನು ಒದಗಿಸಿದಾಗ 90% ಜನರು ಏನು ತಿನ್ನುತ್ತಾರೆ ಎಂಬುದನ್ನು ಏಕೆ ನಿರ್ಧರಿಸಬೇಕು. ನಿಮ್ಮ ಸಮಸ್ಯೆ ಏನು ಮೇಡಂ, ನೀವು ವಿವರಿಸುವಿರಾ? ಎಂದು ಕೆಲವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ 75: ಹಳೇ ರಾಜಕಾರಣದ ಕಡೇ ವರಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಂದೋ ಮೊಟ್ಟೆ ತಿನ್ನುತ್ತಿರುವ ನಿಮಗೆ ಹೀಗೆ ಎಲ್ಲರೂ ಮೊಟ್ಟೆ ತಿಂದರೆ ಅದರ ಬೆಲೆ ಜಾಸ್ತಿ ಆಗಬಹುದೆಂಬ ಭಯ,ಅಥವಾ ನಿಮ್ಮ ವಕ್ರ ಬುದ್ದಿಯನ್ನು ಇದು ತೋರಿಸುತ್ತದೆ,ಇಲ್ಲವೇ ದೇವರ ಮೇಲೆ ಆಣೆ ಮಾಡಿ ಸತ್ಯ ಹೇಳಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...