Homeಮುಖಪುಟ2ಜಿ ಸ್ಪೆಕ್ಟ್ರಮ್ ಹಗರಣ ನಡೆದೇ ಇಲ್ಲ ಎಂಬುದನ್ನು ನಿರೂಪಿಸಿದ 5ಜಿ ಹರಾಜು ಪ್ರಕ್ರಿಯೆ!

2ಜಿ ಸ್ಪೆಕ್ಟ್ರಮ್ ಹಗರಣ ನಡೆದೇ ಇಲ್ಲ ಎಂಬುದನ್ನು ನಿರೂಪಿಸಿದ 5ಜಿ ಹರಾಜು ಪ್ರಕ್ರಿಯೆ!

ವಿನೋದ್ ರಾಯ್ ಅವರ ಪ್ರತೀಕಾರದ ಕಲ್ಪನೆಯಿಂದ ಮಾರುಹೋಗಿದ್ದ ನಾವೆಲ್ಲರೂ ಆಗ ಎ.ರಾಜಾರವರಿಗೆ ನೋವುಂಟು ಮಾಡಿದ್ದು, ಅವರ ಬಳಿ ಕ್ಷಮೆಯಾಚಿಸಬೇಕಾಗಿದೆ.

- Advertisement -
- Advertisement -

ಭಾರೀ ಕುತೂಹಲ ಮೂಡಿಸಿದ್ದ 5ಜಿ ತರಂಗಾಂತರ ಹರಾಜು ಪ್ರಕ್ರಿಯೆಗೆ ತೆರೆಬಿದ್ದಿದೆ. ಒಟ್ಟು 1.5 ಲಕ್ಷ ಕೋಟಿ ರೂ ಗರಿಷ್ಟ ಬಿಡ್‌ಗೆ ಹರಾಜು ಮಾಡಲಾಗಿದೆ ಎಂದು ದೂರ ಸಂಪರ್ಕ ಸಚಿವ ಅಶ್ವಿನಿ ವೈಭವ್ ತಿಳಿಸಿದ್ದಾರೆ. ಈ ಬೆನ್ನಲ್ಲೆ 2007 ರಲ್ಲಿ ನಡೆದಿದ್ದ 2ಜಿ ತರಂಗಾಂತರ ಹರಾಜು ಪ್ರಕ್ರಿಯೆಯ ಚರ್ಚೆ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. 5ಜಿ ಹರಾಜು ಕೇವಲ 1.5 ಲಕ್ಷ ಕೋಟಿ ರೂಗಳಿಗೆ ಆಗಿರುವಾಗ 15 ವರ್ಷಗಳ ಹಿಂದೆ ನಡೆದ 2ಜಿ ತರಂಗಾಂತರ ಹರಾಜು ಹಗರಣದಿಂದ ದೇಶಕ್ಕೆ 1.76 ಲಕ್ಷ ಕೋಟಿ ರೂ ನಷ್ಟವಾಯಿತು ಎಂದು ನಂಬಿ ನಾವು ಮೋಸ ಹೋದೆವು ಮತ್ತು ಅನ್ಯಾಯವಾಗಿ ಕೆಲವರನ್ನು ದೂರಿದೆವು ಎಂದು ಹಲವರು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆರಂಭಿಸಿದ್ದಾರೆ.

ವಿನೋದ್ ರಾಯ್ ಅವರ ಪ್ರತೀಕಾರದ ಕಲ್ಪನೆಯಿಂದ ಮಾರುಹೋಗಿದ್ದ ನಾವೆಲ್ಲರೂ ಆಗ ಎ.ರಾಜಾರವರು ಸೇರಿದಂತೆ ಹಲವರಿಗೆ ನೋವುಂಟು ಮಾಡಿದ್ದು, ಅವರ ಬಳಿ ಕ್ಷಮೆಯಾಚಿಸಬೇಕಾಗಿದೆ. 5G ಹರಾಜು ಕೇವಲ 1.5 ಲಕ್ಷ ಕೋಟಿ ರೂ ಪಡೆಯುತ್ತದೆ ಎಂದರೆ 15 ವರ್ಷಗಳ ಹಿಂದಿನ 2G ಹರಾಜು 1.76 ಲಕ್ಷ ಕೋಟಿ ರೂ ನಷ್ಟ ಹೆಗಾಯಿತು? ಎಂದು ಸಾಮಾಜಿಕ ಕಾರ್ಯಕರ್ತೆ ಮೀನಾ ಕಂದಸ್ವಾಮಿ ಟ್ವೀಟ್ ಮಾಡಿದ್ದಾರೆ.

2007ರಲ್ಲಿ ಯುಪಿಎ ಸರ್ಕಾರದಲ್ಲಿ ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದರು. ಎ.ರಾಜಾ ದೂರ ಸಂಪರ್ಕ ಸಚಿವರಾಗಿದ್ದರು. ಆ ಸಂದರ್ಭದಲ್ಲಿ 2ಜಿ ತರಂಗಾಂತರಗಳ ಹರಾಜು ಪ್ರಕ್ರಿಯೆ ನಡೆದಿತ್ತು. ಆ ನಂತರ 2011ರಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ, ಕಿಕ್‌ಬ್ಯಾಕ್ ಪಡೆದು ಕಡಿಮೆ ಮೊತ್ತಕ್ಕೆ ಹರಾಜು ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಸಿಎಜಿ ವಿನೋದ್ ರಾಯ್‌ರವರು ಇದರಿಂದ ದೇಶಕ್ಕೆ 1.76 ಲಕ್ಷ ಕೋಟಿ ರೂ ನಷ್ಟವಾಗಿದೆ ಎಂದು ವಾದಿಸಿದ್ದರು. ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಈ ಹಗರಣವನ್ನು ಹೊರತಂದಿದ್ದು ನಾನು ಎಂದು ಎಲ್ಲೆಡೆ ಹೇಳಿಕೊಂಡಿದ್ದರು. ಮಾಧ್ಯಮಗಳು ಅದನ್ನು ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಿದ್ದವು. ಇದು ಯುಪಿಎ ಸರ್ಕಾರಕ್ಕೆ ಭಾರೀ ಮುಜುಗರ ತಂದಿತ್ತು. ಎ.ರಾಜಾ ಮತ್ತು ಡಿಎಂಕೆ ಸಂಸದೆ ಕನಿಮೋಳಿಯವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಸಿಬಿಐ ಮತ್ತು ಸಿಎಜಿ ತನಿಖೆ ನಡೆಸಿತ್ತು. ಆದರೆ ದೆಹಲಿಯ ವಿಶೇಷ ನ್ಯಾಯಾಲಯ 2ಜಿ ಸ್ಪೆಕ್ಟ್ರಮ್ ಹಗರಣ ನಡೆದಿಲ್ಲ, ಇದೊಂದು ಕಟ್ಟುಕಥೆ ಇಂದು 2017ರಲ್ಲಿ ತೀರ್ಪಿತ್ತಿತ್ತು. ವಿನೋದ್ ರಾಯ್ ಕ್ಷಮೆ ಕೇಳಿದ್ದರು. ಅಷ್ಟರಲ್ಲಿ ಯುಪಿಎ ಸರ್ಕಾರವನ್ನು ಇಳಿಸಿ ಎನ್‌ಡಿಎ ಅಧಿಕಾರಕ್ಕೇರಿತ್ತು.

ಈಗ 5ಜಿ ಸ್ಪೆಕ್ಟ್ರಮ್ ಹರಾಜು ಪ್ರಕ್ರಿಯೆಯು 2ಜಿ ಸ್ಕಾಮ್ ನಡೆದಿರಲಿಲ್ಲ ಎಂಬುದನ್ನು ಮತ್ತೊಮ್ಮೆ ನಿರೂಪಿಸಿದೆ. ಆದರೆ ಆಗ ದೇಶವೇ ಮುಳುಗಿಹೋಯಿತು ಎಂದು ಕೂಗಾಡಿದ ಬಿಜೆಪಿ ಅಧಿಕಾರದಲ್ಲಿದ್ದರೂ ಮೌನ ವಹಿಸಿದೆ. ಆಗ ಅಬ್ಬರಿಸಿ ಬೊಬ್ಬಿರಿದವರೂ ಎನ್‌ಡಿಎ ಸರ್ಕಾರದ ಆರ್ಥಿಕ ಅಧಃಪತನವನ್ನು ಪ್ರಶ್ನಿಸುತ್ತಿಲ್ಲವೇಕೆ? ಇವರ ವಿರೋಧ ಸೆಲಕ್ಟಿವ್ ಆಗಿರುವುದೇಕೆ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: ಯುಪಿ: ನಾಲ್ಕು ಧರ್ಮಗಳ ಪ್ರಾರ್ಥನೆ ಮಾಡಿಸುತ್ತಿದ್ದ ಶಾಲೆಯ ಮ್ಯಾನೇಜರ್‌ ಮೇಲೆ ಎಫ್‌ಐಆರ್‌; ಮತಾಂತರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಗೋದಿ ಪತ್ರಿಕೆ ಯಾವಾಗಲು ಸುಳ್ಳು ಹೇಳೋದು,ಜನರನ್ನು ದಾರಿ ತಪ್ಪಿಸೋದೆ ಅನಿಸುತ್ತೇ ಹಗರಣದ ಸೂತ್ರದಾರ ಎ ರಾಜ ಎಲ್ಲೋ ಈ ಪತ್ರಿಕೆಗೆ ಎಂಜಲು ಹಾಕಿರಬೇಕು

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...