Homeಕರ್ನಾಟಕಸಿದ್ದರಾಮಯ್ಯ ಅಮೃತ ಮಹೋತ್ಸವ: ದುರುದ್ದೇಶಪೂರಿತ ಪೋಸ್ಟ್‌ ಹಾಕಿದ ಬಿಜೆಪಿ

ಸಿದ್ದರಾಮಯ್ಯ ಅಮೃತ ಮಹೋತ್ಸವ: ದುರುದ್ದೇಶಪೂರಿತ ಪೋಸ್ಟ್‌ ಹಾಕಿದ ಬಿಜೆಪಿ

ಬಿಜೆಪಿಯ ಅತಿರೇಕಕ್ಕೆ ಪ್ರಜ್ಞಾವಂತರು ವಿರೋಧ ವ್ಯಕ್ತಪಡಿಸಿದ್ದಾರೆ. (ವಿವರಗಳಿಗೆ ಮುಂದೆ ಓದಿರಿ...)

- Advertisement -
- Advertisement -

ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು 75ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ದಾವಣಗೆರೆಯಲ್ಲಿ ‘ಸಿದ್ದರಾಮಯ್ಯ ಅಮೃತ ಮಹೋತ್ಸವ’ವನ್ನು ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಆಯೋಜಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಆಡಳಿತ ಪಕ್ಷವೊಂದು ನಿರ್ಲಿಪ್ತವಾಗಿಯಾದರೂ ಇದ್ದು ತನ್ನ ಘನತೆಯನ್ನು ಉಳಿಸಿಕೊಳ್ಳಬಹುದಿತ್ತೇನೋ. ಆದರೆ ವಿನಾಕಾರಣ ಸಿದ್ದರಾಮಯ್ಯನವರ ಮೇಲೆ ಕೋಮುದ್ವೇಷ ಹರಡುವ ದುಷ್ಕೃತ್ಯಕ್ಕೆ ಬಿಜೆಪಿ ಕೈಹಾಕಿದಂತೆ ಕಾಣುತ್ತಿದೆ.

ಸಿದ್ದರಾಮಯ್ಯನವರನ್ನು ಹಿಂದೂ ವಿರೋಧಿ ಎಂದು ಬಿಂಬಿಸುವ ಪ್ರೊಪಗಾಂಡವನ್ನು ಸಂಘಪರಿವಾರ ಮೊದಲಿನಿಂದಲೂ ಮಾಡುತ್ತಾ ಬಂದಿದೆ. ಈ ಅಮೃತ ಮಹೋತ್ಸವದ ಸಂದರ್ಭದಲ್ಲಿಯಾದರೂ ಈ ಪ್ರೊಪಗಾಂಡವನ್ನು ಬಿಜೆಪಿ ನಿಲ್ಲಿಸಿ ತನ್ನ ಗೌರವವನ್ನು ಉಳಿಸಿಕೊಳ್ಳುತ್ತದೆ, ಜನ ಮಾನಸದಲ್ಲಿ ನೆಲೆಸಿರುವ ರಾಜಕಾರಣಿಯೊಬ್ಬರಿಗೆ ಕನಿಷ್ಠ ಗೌರವವನ್ನು ಸಲ್ಲಿಸುತ್ತದೆ ಎಂದು ನಿರೀಕ್ಷಿಸಿದ್ದ ಸಿದ್ದರಾಮಯ್ಯನವರ ಅಭಿಮಾನಿಗಳಿಗೆ ಬೇಸರ ತಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಿದ್ದರಾಮಯ್ಯನವರ ಜನ್ಮದಿನ ಆಚರಣೆ ಕುರಿತು ಕರ್ನಾಟಕ ಬಿಜೆಪಿ ಘಟಕವು ತನ್ನ ಸಾಮಾಜಿಕ ಮಾಧ್ಯಮದಲ್ಲಿ ಹೀಗೆ ಬರೆದುಕೊಂಡಿದೆ: “ಹಿಂದೂ ಆರಾಧಕರಾದ ರಾಮ, ಕೃಷ್ಣನನ್ನು ದೇವರಲ್ಲ ಎನ್ನುವ ಸಿದ್ದರಾಮಯ್ಯ ಮಸೀದಿಯನ್ನು ಪ್ರೀತಿಸಿ, ಅಯೋಧ್ಯೆಯ ರಾಮ ಮಂದಿರವನ್ನು ವಿರೋಧಿಸುತ್ತಾರೆ. ಬಾಬರ್‌, ಘೋರಿ, ಘಜಿನಿಗಳಂತೆ ಆಡಳಿತ ನಡೆಸಿ ಕೋಮು ಗಲಭೆ, ಜನಗಳ ಮಧ್ಯ ದ್ವೇಷ ಹೊತ್ತಿಸಿ, ಕಿಚ್ಚು ಹಚ್ಚಿ ಮೂರು ವರ್ಷದಲ್ಲಿ 23 ಕೊಲೆ ಮಾಡಿದ್ದು ಇದೇ ಸಿದ್ದರಾಮಯ್ಯ ಸರ್ಕಾರ. ಮುಖ್ಯಮಂತ್ರಿಯಾಗಿದ್ದಾಗ ಹಿಂದೂಗಳ ಪಾಲಿನ ರಾವಣನಾಗಿ, ಅಧಿಕಾರ ಕಳೆದುಕೊಂಡಾಗ ರಾಮನಂತೆ ನಟಿಸುವ ಸಿದ್ದರಾಮಯ್ಯ ಅವರ ಕಪಟ ಬುದ್ದಿ ಹಿಂದೂ ಸಮಾಜ ಎಂದೋ ತಿಳಿದುಕೊಂಡಿದೆ. ಸಿದ್ದರಾಮಯ್ಯ ಅಮೃತ ಮಹೋತ್ಸವ ಹಿಂದೂ ವಿರೋಧಿಗಳ ಹಬ್ಬವಷ್ಟೇ ಅಲ್ಲ, ಹಿಂದೂ ವಿರೋಧಿಗಳ ಉರೂಸ್‌ ಕೂಡಾ ಹೌದು.”

-ಇದು ಬಿಜೆಪಿ ಕಾರಿಕೊಂಡಿರುವ ರೀತಿ. ರಾಜ್ಯದ ಮೂಲೆ ಮೂಲೆಯಿಂದ ಮಳೆಯನ್ನೂ ಲೆಕ್ಕಿಸದೆ ಸಾಗರೋಪಾದಿಯಲ್ಲಿ ಜನರು ಜಾತಿ, ಮತವೆನ್ನದೆ ಸಿದ್ದರಾಮಯ್ಯನವರ ಅಮೃತ ಮಹೋತ್ಸವಕ್ಕೆ ತೆರಳಿದ್ದಾರೆ. ಸಿದ್ದರಾಮಯ್ಯನವರ ಜನಪ್ರಿಯತೆ ಬಿಜೆಪಿಗೆ ತಿಳಿಯದ ಸಂಗತಿಯೇನಲ್ಲ. ಆದರೂ ‘ಹಿಂದೂ ವಿರೋಧಿ’ ಎಂಬ ಪ್ರೊಪಗಾಂಡವನ್ನು ಬಿಜೆಪಿ ಯಾಕೆ ಮೊದಲಿನಿಂದಲೂ ಮಾಡುತ್ತಿದೆ? ಎಂಬ ಪ್ರಶ್ನೆಯನ್ನು ಈ ಸಂದರ್ಭದಲ್ಲಿ ಗಂಭೀರವಾಗಿ ಕೇಳಿಕೊಳ್ಳಬೇಕಾಗಿದೆ.

ಬಿಜೆಪಿ ಅತಿರೇಕದ ಈ ಧೋರಣೆಯ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್‌, “ಸಿದ್ದರಾಮಯ್ಯನವರ ಜನಪ್ರಿಯತೆ ಹಾಗೂ ಕಾಂಗ್ರೆಸ್ ಪಕ್ಷದ ಜನಪ್ರಿಯತೆಯನ್ನು ಸಹಿಸಿಕೊಳ್ಳಲಾಗದೆ ಬಿಜೆಪಿಯವರು ಇಂತಹ ಅಸಹ್ಯವಾದ ಕೃತ್ಯಕ್ಕೆ ಕೈ ಹಾಕಿದ್ದಾರೆ. ಜನರನ್ನು ದಿಕ್ಕು ತಪ್ಪಿಸುವುದೇ ಇವರ ಪ್ರಮುಖವಾದ ಉದ್ದೇಶ” ಎಂದು ತಿಳಿಸಿದರು.

“ಸಿದ್ದರಾಮಯ್ಯನವರು ಯಾವತ್ತೂ ತಮ್ಮ ಜನ್ಮದಿನವನ್ನು ಆಚರಿಸಿಕೊಂಡವರಲ್ಲ. ಅವರ 75ನೇ ವರ್ಷದ ಹುಟ್ಟುಹಬ್ಬವನ್ನು ಜನಸಾಮಾನ್ಯರು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಆಯೋಜಿಸಿದ್ದಾರೆ. ಸಿದ್ದರಾಮಯ್ಯನವರು ತಮ್ಮ ಅಧಿಕಾರವಧಿಯಲ್ಲಿ ಸಾಮಾನ್ಯ ಜನತೆಗೆ, ಕಡುಬಡವರಿಗೆ, ದೀನ ದಲಿತರಿಗೆ, ಹಿಂದುಳಿದ ವರ್ಗಗಳಿಗೆ ಕೊಟ್ಟಂತಹ ಕೊಡುಗೆಗಳೆಲ್ಲವೂ ಅಜರಾಮರ. ಅವರು ನೀಡಿದ ಕೊಡುಗೆಯ ಒಂದು ಪರ್ಸೆಂಟಾದರೂ ನೀಡುವ ಯೋಗ್ಯತೆ ಬಿಜೆಪಿಯವರಿಗಿಲ್ಲ. ಸಿದ್ದರಾಮಯ್ಯನವರ ಕೆಲಸಗಳನ್ನು ನೆನೆಯುವ ಸುವರ್ಣಾವಕಾಶ ನಾಡಿನ ಜನತೆಗೆ ಬಂದಿದೆ. ಅದನ್ನು ಈ ಕಾರ್ಯಕ್ರಮದ ಮೂಲಕ ಮಾಡುತ್ತಿದ್ದೇವೆವಷ್ಟೇ” ಎಂದು ಹೇಳಿದರು.

“ದಾವಣಗೆರೆಗೆ ಬಂದಿರುವ ಜನಸ್ತೋಮವನ್ನು ನೋಡಿ ತಡೆದುಕೊಳ್ಳಲಾಗದ ಪರಿಸ್ಥಿತಿ ಬಿಜೆಪಿಯವರಿಗೆ ಉದ್ಭವವಾಗಿದೆ. ಮುಂದಿನ ದಿನಗಳಲ್ಲಿ ಐವತ್ತು ಸೀಟ್‌ ಕೂಡ ಬರಲ್ಲ ಎಂಬುದು ಬಿಜೆಪಿಗೆ ಖಚಿತವಾಗಿದ್ದು, ತಮ್ಮ ಕೈ, ಕಾಲು, ಕಣ್ಣು ಮೂಗನ್ನು ಇಸುಕಿಕೊಳ್ಳುತ್ತಿದ್ದಾರೆ. ದಾವಣಗೆರೆಗೆ ಬಂದು ನೋಡಿದರೆ ಹತ್ತಾರು ಕಿಮೀ ದೂರದವರೆಗೂ ಜನರಿದ್ದಾರೆ. ಲಕ್ಷಾಂತರ ಜನ ಮಳೆಯ ನಡುವೆಯೂ ಬರುತ್ತಿದ್ದಾರೆ. ಯಾವುದೇ ಜಾತಿ, ಜನಾಂಗವೆನ್ನದೆ ಆಗಮಿಸುತ್ತಿದ್ದಾರೆ. ಜನಸಾಮಾನ್ಯರ ಕಾರ್ಯಕ್ರಮವನ್ನು ಕಂಡು ಬಿಜೆಪಿಯವರಿಗೆ ಹೊಟ್ಟೆಉರಿ ಏಕೆಂದು ತಿಳಿಯುತ್ತಿಲ್ಲ. ಸಾಮಾಜಿಕ ಮಾಧ್ಯಮದಲ್ಲಿ ಬಹಳ ತೃತೀಯ ದರ್ಜೆಯ ಪದಗಳನ್ನು ಬಳಸಿ ಮಾಡುವ ಪೋಸ್ಟ್‌ಗಳು ಒಂದು ರಾಷ್ಟ್ರೀಯ ಪಕ್ಷಕ್ಕೆ ಕ್ಷೋಭೆ ತರುವುದಿಲ್ಲ” ಎಂದು ಕುಟುಕಿದರು.

ಬರಹಗಾರ ನಾಗೇಗೌಡ ಕೀಲಾರ ಅವರು ಪ್ರತಿಕ್ರಿಯೆ ನೀಡಿ, “ಜನ್ಮದಿನವನ್ನು ಆಚರಿಸಿದರೆ ಅದು ಹೇಗೆ ಹಿಂದೂ ವಿರೋಧಿಯಾಗುತ್ತದೆ? ಬ್ರಾಹ್ಮಣರನ್ನು ಕರೆಸಿ ಯಜ್ಞ, ಯಾಗಾದಿಗಳನ್ನು ಮಾಡಿ ಆರ್ಶೀವಾದ ಪಡೆಯದೆ, ಚಾತುರ್‌ವರ್ಣ ಅನುಸರಿಸದೆ ಸಿದ್ದರಾಮಯ್ಯನವರು ಜನ್ಮದಿನ ಆಚರಿಸುತ್ತಿರುವುದಕ್ಕೆ ಹಿಂದೂ ವಿರೋಧಿಯಾಗಿರಬಹುದು” ಎಂದು ವ್ಯಂಗ್ಯವಾಡಿದರು.

“ಇದು ಬಿಜೆಪಿಯವರ ಹಳೆಯ ಚಾಳಿ. ಒಬಿಸಿ, ದಲಿತರಲ್ಲಿ ಯಾರಾದರೂ ಬೆಳೆದರೆ ಅವರನ್ನು ತುಳಿಯುವುದೇ ಬ್ರಾಹ್ಮಣ್ಯದ ಉದ್ದೇಶ. ಕಾನ್ಶಿರಾಮ್‌, ಮಾಯಾವತಿ, ಲಾಲು ಪ್ರಸಾದ್ ಯಾದವ್‌, ಸಿದ್ದರಾಮಯ್ಯ- ಹೀಗೆ ಯಾರೆಲ್ಲ ಹಿಂದುಳಿದ ಜಾತಿ, ದಲಿತ ಸಮುದಾಯದಿಂದ ನಾಯಕರಾಗಿ ಹೊಮ್ಮುತ್ತಾರೋ ಅವರ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸಲು ಸಂಘಪರಿವಾರ ಯತ್ನಿಸುತ್ತದೆ. ಈ ರಾಜಕಾರಣಿಗಳು ಭ್ರಷ್ಟರು, ಬುದ್ಧಿ ಇಲ್ಲದವರು ಎಂದು ವ್ಯಕ್ತಿತ್ವ ಹರಣ ಮಾಡಿ ಈ ಸಮುದಾಯಗಳ ನಾಯಕರು ಬೆಳೆಯದಂತೆ ತಡೆಯುತ್ತಾರೆ. ಚಲವಾದಿ ನಾರಾಯಣಸ್ವಾಮಿ ಥರದ ದಲಿತ ನಾಯಕರು, ಹಿಂದುಳಿದ ನಾಯಕರು ಇವರಿಗೆ ಬೇಕೇ ಹೊರತು ಸಿದ್ದರಾಮಯ್ಯನವರ ಥರದ ನಾಯಕರಲ್ಲ” ಎಂದು ವಿಶ್ಲೇಷಿಸಿದರು.

ಇದನ್ನೂ ಓದಿರಿ: ಇದು ಹಿಂದೂ ದೇವರಲ್ಲ, ಬೌದ್ಧ ವಿಗ್ರಹ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ್‌ ಕುಗ್ವೆ ಪ್ರತಿಕ್ರಿಯೆ ನೀಡಿ, “ಸಿದ್ದರಾಮಯ್ಯನವರನ್ನು ಕಂಡು ಬಿಜೆಪಿಯವರು ಎಷ್ಟು ಹೆದರಿದ್ದಾರೆ ಎಂಬುದನ್ನು ಈ ಅಪಪ್ರಚಾರ ಸೂಚಿಸುತ್ತದೆ. ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯನವರಿಗೆ ಜನ ಗೌರವಿಸುವುದು, ಅಭಿಮಾನದಿಂದ ನೋಡುವುದು, ಅವರ ಹುಟ್ಟು ಹಬ್ಬವನ್ನು ಸಂಭ್ರಮಿಸುವುದು ಇವರ ಎದೆ ನಡುಗುವುದಕ್ಕೆ ಕಾರಣವಾಗಿದೆ” ಎಂದು ಅಭಿಪ್ರಾಯಪಟ್ಟರು.

“ಆರ್‌ಎಸ್‌ಎಸ್ ಬುಡಕ್ಕೆ ಸಿದ್ದರಾಮಯ್ಯ ಕೈ ಹಾಕಿದ್ದಾರೆ. ಅನೇಕ ವಿಚಾರಗಳನ್ನು ಮುಂದಿಡುತ್ತಿದ್ದಾರೆ. ಆರ್‌ಎಸ್‌ಎಸ್‌ನ ಜನಾಂಗೀಯತೆ, ಹಿಂದೂ ಹೆಸರಲ್ಲಿ ಜಾರಿಯಾಗುತ್ತಿರುವ ನವ ಆರ್ಯ ಸಿದ್ಧಾಂತ- ಮೊದಲಾದವುಗಳ ಕುರಿತು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ. ಹೀಗಾಗಿ ಆರ್‌ಎಸ್‌ಎಸ್ ವಿಚಲಿತವಾಗಿದೆ. ಭಯಭೀತರಾಗಿ ಈ ರೀತಿಯ ಪ್ರೊಪಗಾಂಡ ಮಾಡುತ್ತಿದೆ” ಎಂದು ಎಚ್ಚರಿಸಿದರು.

“ಸಿದ್ದರಾಮಯ್ಯನವರು ತಮ್ಮ ಗ್ರಾಮದಲ್ಲಿ ಸಿದ್ದರಾಮೇಶ್ವರ ದೇವಾಲಯ ಕಟ್ಟಿಸಿದ್ದಾರೆ. ಇದು ಹಿಂದೂ ದೇವರಲ್ಲವೇ? ಮೊನ್ನೆಯಷ್ಟೇ ಮಲೆಮಹದೇಶ್ವರ ದೇವಾಸ್ಥಾನಕ್ಕೆ ಹೋಗಿ ಬಂದಿದ್ದಾರೆ. ಇನ್ನು ಏನು ಬೇಕು? ಆರ್‌ಎಸ್‌ಎಸ್‌ ಹೇಳುವ ಹಿಂದುತ್ವಕ್ಕೆ ಹೊರತಾಗಿ ಸಾಮಾನ್ಯ ಹಿಂದುಗಳ ಜೊತೆ ಸಿದ್ದರಾಮಯ್ಯ ಗುರುತಿಸಿಕೊಂಡಿದ್ದಾರೆ. ಹಿಂದೂಗಳಿಂದ ಸಿದ್ದರಾಮಯ್ಯನವರನ್ನು ಬೇರೆ ಮಾಡುವ ಹತಾಶ ಪ್ರಯತ್ನವನ್ನು ಆರ್‌ಎಸ್‌ಎಸ್ ಮಾಡುತ್ತಿದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...