Homeಕರ್ನಾಟಕಸಿದ್ದರಾಮಯ್ಯ ಅಮೃತ ಮಹೋತ್ಸವ: ದುರುದ್ದೇಶಪೂರಿತ ಪೋಸ್ಟ್‌ ಹಾಕಿದ ಬಿಜೆಪಿ

ಸಿದ್ದರಾಮಯ್ಯ ಅಮೃತ ಮಹೋತ್ಸವ: ದುರುದ್ದೇಶಪೂರಿತ ಪೋಸ್ಟ್‌ ಹಾಕಿದ ಬಿಜೆಪಿ

ಬಿಜೆಪಿಯ ಅತಿರೇಕಕ್ಕೆ ಪ್ರಜ್ಞಾವಂತರು ವಿರೋಧ ವ್ಯಕ್ತಪಡಿಸಿದ್ದಾರೆ. (ವಿವರಗಳಿಗೆ ಮುಂದೆ ಓದಿರಿ...)

- Advertisement -
- Advertisement -

ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು 75ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ದಾವಣಗೆರೆಯಲ್ಲಿ ‘ಸಿದ್ದರಾಮಯ್ಯ ಅಮೃತ ಮಹೋತ್ಸವ’ವನ್ನು ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಆಯೋಜಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಆಡಳಿತ ಪಕ್ಷವೊಂದು ನಿರ್ಲಿಪ್ತವಾಗಿಯಾದರೂ ಇದ್ದು ತನ್ನ ಘನತೆಯನ್ನು ಉಳಿಸಿಕೊಳ್ಳಬಹುದಿತ್ತೇನೋ. ಆದರೆ ವಿನಾಕಾರಣ ಸಿದ್ದರಾಮಯ್ಯನವರ ಮೇಲೆ ಕೋಮುದ್ವೇಷ ಹರಡುವ ದುಷ್ಕೃತ್ಯಕ್ಕೆ ಬಿಜೆಪಿ ಕೈಹಾಕಿದಂತೆ ಕಾಣುತ್ತಿದೆ.

ಸಿದ್ದರಾಮಯ್ಯನವರನ್ನು ಹಿಂದೂ ವಿರೋಧಿ ಎಂದು ಬಿಂಬಿಸುವ ಪ್ರೊಪಗಾಂಡವನ್ನು ಸಂಘಪರಿವಾರ ಮೊದಲಿನಿಂದಲೂ ಮಾಡುತ್ತಾ ಬಂದಿದೆ. ಈ ಅಮೃತ ಮಹೋತ್ಸವದ ಸಂದರ್ಭದಲ್ಲಿಯಾದರೂ ಈ ಪ್ರೊಪಗಾಂಡವನ್ನು ಬಿಜೆಪಿ ನಿಲ್ಲಿಸಿ ತನ್ನ ಗೌರವವನ್ನು ಉಳಿಸಿಕೊಳ್ಳುತ್ತದೆ, ಜನ ಮಾನಸದಲ್ಲಿ ನೆಲೆಸಿರುವ ರಾಜಕಾರಣಿಯೊಬ್ಬರಿಗೆ ಕನಿಷ್ಠ ಗೌರವವನ್ನು ಸಲ್ಲಿಸುತ್ತದೆ ಎಂದು ನಿರೀಕ್ಷಿಸಿದ್ದ ಸಿದ್ದರಾಮಯ್ಯನವರ ಅಭಿಮಾನಿಗಳಿಗೆ ಬೇಸರ ತಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಿದ್ದರಾಮಯ್ಯನವರ ಜನ್ಮದಿನ ಆಚರಣೆ ಕುರಿತು ಕರ್ನಾಟಕ ಬಿಜೆಪಿ ಘಟಕವು ತನ್ನ ಸಾಮಾಜಿಕ ಮಾಧ್ಯಮದಲ್ಲಿ ಹೀಗೆ ಬರೆದುಕೊಂಡಿದೆ: “ಹಿಂದೂ ಆರಾಧಕರಾದ ರಾಮ, ಕೃಷ್ಣನನ್ನು ದೇವರಲ್ಲ ಎನ್ನುವ ಸಿದ್ದರಾಮಯ್ಯ ಮಸೀದಿಯನ್ನು ಪ್ರೀತಿಸಿ, ಅಯೋಧ್ಯೆಯ ರಾಮ ಮಂದಿರವನ್ನು ವಿರೋಧಿಸುತ್ತಾರೆ. ಬಾಬರ್‌, ಘೋರಿ, ಘಜಿನಿಗಳಂತೆ ಆಡಳಿತ ನಡೆಸಿ ಕೋಮು ಗಲಭೆ, ಜನಗಳ ಮಧ್ಯ ದ್ವೇಷ ಹೊತ್ತಿಸಿ, ಕಿಚ್ಚು ಹಚ್ಚಿ ಮೂರು ವರ್ಷದಲ್ಲಿ 23 ಕೊಲೆ ಮಾಡಿದ್ದು ಇದೇ ಸಿದ್ದರಾಮಯ್ಯ ಸರ್ಕಾರ. ಮುಖ್ಯಮಂತ್ರಿಯಾಗಿದ್ದಾಗ ಹಿಂದೂಗಳ ಪಾಲಿನ ರಾವಣನಾಗಿ, ಅಧಿಕಾರ ಕಳೆದುಕೊಂಡಾಗ ರಾಮನಂತೆ ನಟಿಸುವ ಸಿದ್ದರಾಮಯ್ಯ ಅವರ ಕಪಟ ಬುದ್ದಿ ಹಿಂದೂ ಸಮಾಜ ಎಂದೋ ತಿಳಿದುಕೊಂಡಿದೆ. ಸಿದ್ದರಾಮಯ್ಯ ಅಮೃತ ಮಹೋತ್ಸವ ಹಿಂದೂ ವಿರೋಧಿಗಳ ಹಬ್ಬವಷ್ಟೇ ಅಲ್ಲ, ಹಿಂದೂ ವಿರೋಧಿಗಳ ಉರೂಸ್‌ ಕೂಡಾ ಹೌದು.”

-ಇದು ಬಿಜೆಪಿ ಕಾರಿಕೊಂಡಿರುವ ರೀತಿ. ರಾಜ್ಯದ ಮೂಲೆ ಮೂಲೆಯಿಂದ ಮಳೆಯನ್ನೂ ಲೆಕ್ಕಿಸದೆ ಸಾಗರೋಪಾದಿಯಲ್ಲಿ ಜನರು ಜಾತಿ, ಮತವೆನ್ನದೆ ಸಿದ್ದರಾಮಯ್ಯನವರ ಅಮೃತ ಮಹೋತ್ಸವಕ್ಕೆ ತೆರಳಿದ್ದಾರೆ. ಸಿದ್ದರಾಮಯ್ಯನವರ ಜನಪ್ರಿಯತೆ ಬಿಜೆಪಿಗೆ ತಿಳಿಯದ ಸಂಗತಿಯೇನಲ್ಲ. ಆದರೂ ‘ಹಿಂದೂ ವಿರೋಧಿ’ ಎಂಬ ಪ್ರೊಪಗಾಂಡವನ್ನು ಬಿಜೆಪಿ ಯಾಕೆ ಮೊದಲಿನಿಂದಲೂ ಮಾಡುತ್ತಿದೆ? ಎಂಬ ಪ್ರಶ್ನೆಯನ್ನು ಈ ಸಂದರ್ಭದಲ್ಲಿ ಗಂಭೀರವಾಗಿ ಕೇಳಿಕೊಳ್ಳಬೇಕಾಗಿದೆ.

ಬಿಜೆಪಿ ಅತಿರೇಕದ ಈ ಧೋರಣೆಯ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್‌, “ಸಿದ್ದರಾಮಯ್ಯನವರ ಜನಪ್ರಿಯತೆ ಹಾಗೂ ಕಾಂಗ್ರೆಸ್ ಪಕ್ಷದ ಜನಪ್ರಿಯತೆಯನ್ನು ಸಹಿಸಿಕೊಳ್ಳಲಾಗದೆ ಬಿಜೆಪಿಯವರು ಇಂತಹ ಅಸಹ್ಯವಾದ ಕೃತ್ಯಕ್ಕೆ ಕೈ ಹಾಕಿದ್ದಾರೆ. ಜನರನ್ನು ದಿಕ್ಕು ತಪ್ಪಿಸುವುದೇ ಇವರ ಪ್ರಮುಖವಾದ ಉದ್ದೇಶ” ಎಂದು ತಿಳಿಸಿದರು.

“ಸಿದ್ದರಾಮಯ್ಯನವರು ಯಾವತ್ತೂ ತಮ್ಮ ಜನ್ಮದಿನವನ್ನು ಆಚರಿಸಿಕೊಂಡವರಲ್ಲ. ಅವರ 75ನೇ ವರ್ಷದ ಹುಟ್ಟುಹಬ್ಬವನ್ನು ಜನಸಾಮಾನ್ಯರು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಆಯೋಜಿಸಿದ್ದಾರೆ. ಸಿದ್ದರಾಮಯ್ಯನವರು ತಮ್ಮ ಅಧಿಕಾರವಧಿಯಲ್ಲಿ ಸಾಮಾನ್ಯ ಜನತೆಗೆ, ಕಡುಬಡವರಿಗೆ, ದೀನ ದಲಿತರಿಗೆ, ಹಿಂದುಳಿದ ವರ್ಗಗಳಿಗೆ ಕೊಟ್ಟಂತಹ ಕೊಡುಗೆಗಳೆಲ್ಲವೂ ಅಜರಾಮರ. ಅವರು ನೀಡಿದ ಕೊಡುಗೆಯ ಒಂದು ಪರ್ಸೆಂಟಾದರೂ ನೀಡುವ ಯೋಗ್ಯತೆ ಬಿಜೆಪಿಯವರಿಗಿಲ್ಲ. ಸಿದ್ದರಾಮಯ್ಯನವರ ಕೆಲಸಗಳನ್ನು ನೆನೆಯುವ ಸುವರ್ಣಾವಕಾಶ ನಾಡಿನ ಜನತೆಗೆ ಬಂದಿದೆ. ಅದನ್ನು ಈ ಕಾರ್ಯಕ್ರಮದ ಮೂಲಕ ಮಾಡುತ್ತಿದ್ದೇವೆವಷ್ಟೇ” ಎಂದು ಹೇಳಿದರು.

“ದಾವಣಗೆರೆಗೆ ಬಂದಿರುವ ಜನಸ್ತೋಮವನ್ನು ನೋಡಿ ತಡೆದುಕೊಳ್ಳಲಾಗದ ಪರಿಸ್ಥಿತಿ ಬಿಜೆಪಿಯವರಿಗೆ ಉದ್ಭವವಾಗಿದೆ. ಮುಂದಿನ ದಿನಗಳಲ್ಲಿ ಐವತ್ತು ಸೀಟ್‌ ಕೂಡ ಬರಲ್ಲ ಎಂಬುದು ಬಿಜೆಪಿಗೆ ಖಚಿತವಾಗಿದ್ದು, ತಮ್ಮ ಕೈ, ಕಾಲು, ಕಣ್ಣು ಮೂಗನ್ನು ಇಸುಕಿಕೊಳ್ಳುತ್ತಿದ್ದಾರೆ. ದಾವಣಗೆರೆಗೆ ಬಂದು ನೋಡಿದರೆ ಹತ್ತಾರು ಕಿಮೀ ದೂರದವರೆಗೂ ಜನರಿದ್ದಾರೆ. ಲಕ್ಷಾಂತರ ಜನ ಮಳೆಯ ನಡುವೆಯೂ ಬರುತ್ತಿದ್ದಾರೆ. ಯಾವುದೇ ಜಾತಿ, ಜನಾಂಗವೆನ್ನದೆ ಆಗಮಿಸುತ್ತಿದ್ದಾರೆ. ಜನಸಾಮಾನ್ಯರ ಕಾರ್ಯಕ್ರಮವನ್ನು ಕಂಡು ಬಿಜೆಪಿಯವರಿಗೆ ಹೊಟ್ಟೆಉರಿ ಏಕೆಂದು ತಿಳಿಯುತ್ತಿಲ್ಲ. ಸಾಮಾಜಿಕ ಮಾಧ್ಯಮದಲ್ಲಿ ಬಹಳ ತೃತೀಯ ದರ್ಜೆಯ ಪದಗಳನ್ನು ಬಳಸಿ ಮಾಡುವ ಪೋಸ್ಟ್‌ಗಳು ಒಂದು ರಾಷ್ಟ್ರೀಯ ಪಕ್ಷಕ್ಕೆ ಕ್ಷೋಭೆ ತರುವುದಿಲ್ಲ” ಎಂದು ಕುಟುಕಿದರು.

ಬರಹಗಾರ ನಾಗೇಗೌಡ ಕೀಲಾರ ಅವರು ಪ್ರತಿಕ್ರಿಯೆ ನೀಡಿ, “ಜನ್ಮದಿನವನ್ನು ಆಚರಿಸಿದರೆ ಅದು ಹೇಗೆ ಹಿಂದೂ ವಿರೋಧಿಯಾಗುತ್ತದೆ? ಬ್ರಾಹ್ಮಣರನ್ನು ಕರೆಸಿ ಯಜ್ಞ, ಯಾಗಾದಿಗಳನ್ನು ಮಾಡಿ ಆರ್ಶೀವಾದ ಪಡೆಯದೆ, ಚಾತುರ್‌ವರ್ಣ ಅನುಸರಿಸದೆ ಸಿದ್ದರಾಮಯ್ಯನವರು ಜನ್ಮದಿನ ಆಚರಿಸುತ್ತಿರುವುದಕ್ಕೆ ಹಿಂದೂ ವಿರೋಧಿಯಾಗಿರಬಹುದು” ಎಂದು ವ್ಯಂಗ್ಯವಾಡಿದರು.

“ಇದು ಬಿಜೆಪಿಯವರ ಹಳೆಯ ಚಾಳಿ. ಒಬಿಸಿ, ದಲಿತರಲ್ಲಿ ಯಾರಾದರೂ ಬೆಳೆದರೆ ಅವರನ್ನು ತುಳಿಯುವುದೇ ಬ್ರಾಹ್ಮಣ್ಯದ ಉದ್ದೇಶ. ಕಾನ್ಶಿರಾಮ್‌, ಮಾಯಾವತಿ, ಲಾಲು ಪ್ರಸಾದ್ ಯಾದವ್‌, ಸಿದ್ದರಾಮಯ್ಯ- ಹೀಗೆ ಯಾರೆಲ್ಲ ಹಿಂದುಳಿದ ಜಾತಿ, ದಲಿತ ಸಮುದಾಯದಿಂದ ನಾಯಕರಾಗಿ ಹೊಮ್ಮುತ್ತಾರೋ ಅವರ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸಲು ಸಂಘಪರಿವಾರ ಯತ್ನಿಸುತ್ತದೆ. ಈ ರಾಜಕಾರಣಿಗಳು ಭ್ರಷ್ಟರು, ಬುದ್ಧಿ ಇಲ್ಲದವರು ಎಂದು ವ್ಯಕ್ತಿತ್ವ ಹರಣ ಮಾಡಿ ಈ ಸಮುದಾಯಗಳ ನಾಯಕರು ಬೆಳೆಯದಂತೆ ತಡೆಯುತ್ತಾರೆ. ಚಲವಾದಿ ನಾರಾಯಣಸ್ವಾಮಿ ಥರದ ದಲಿತ ನಾಯಕರು, ಹಿಂದುಳಿದ ನಾಯಕರು ಇವರಿಗೆ ಬೇಕೇ ಹೊರತು ಸಿದ್ದರಾಮಯ್ಯನವರ ಥರದ ನಾಯಕರಲ್ಲ” ಎಂದು ವಿಶ್ಲೇಷಿಸಿದರು.

ಇದನ್ನೂ ಓದಿರಿ: ಇದು ಹಿಂದೂ ದೇವರಲ್ಲ, ಬೌದ್ಧ ವಿಗ್ರಹ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ್‌ ಕುಗ್ವೆ ಪ್ರತಿಕ್ರಿಯೆ ನೀಡಿ, “ಸಿದ್ದರಾಮಯ್ಯನವರನ್ನು ಕಂಡು ಬಿಜೆಪಿಯವರು ಎಷ್ಟು ಹೆದರಿದ್ದಾರೆ ಎಂಬುದನ್ನು ಈ ಅಪಪ್ರಚಾರ ಸೂಚಿಸುತ್ತದೆ. ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯನವರಿಗೆ ಜನ ಗೌರವಿಸುವುದು, ಅಭಿಮಾನದಿಂದ ನೋಡುವುದು, ಅವರ ಹುಟ್ಟು ಹಬ್ಬವನ್ನು ಸಂಭ್ರಮಿಸುವುದು ಇವರ ಎದೆ ನಡುಗುವುದಕ್ಕೆ ಕಾರಣವಾಗಿದೆ” ಎಂದು ಅಭಿಪ್ರಾಯಪಟ್ಟರು.

“ಆರ್‌ಎಸ್‌ಎಸ್ ಬುಡಕ್ಕೆ ಸಿದ್ದರಾಮಯ್ಯ ಕೈ ಹಾಕಿದ್ದಾರೆ. ಅನೇಕ ವಿಚಾರಗಳನ್ನು ಮುಂದಿಡುತ್ತಿದ್ದಾರೆ. ಆರ್‌ಎಸ್‌ಎಸ್‌ನ ಜನಾಂಗೀಯತೆ, ಹಿಂದೂ ಹೆಸರಲ್ಲಿ ಜಾರಿಯಾಗುತ್ತಿರುವ ನವ ಆರ್ಯ ಸಿದ್ಧಾಂತ- ಮೊದಲಾದವುಗಳ ಕುರಿತು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ. ಹೀಗಾಗಿ ಆರ್‌ಎಸ್‌ಎಸ್ ವಿಚಲಿತವಾಗಿದೆ. ಭಯಭೀತರಾಗಿ ಈ ರೀತಿಯ ಪ್ರೊಪಗಾಂಡ ಮಾಡುತ್ತಿದೆ” ಎಂದು ಎಚ್ಚರಿಸಿದರು.

“ಸಿದ್ದರಾಮಯ್ಯನವರು ತಮ್ಮ ಗ್ರಾಮದಲ್ಲಿ ಸಿದ್ದರಾಮೇಶ್ವರ ದೇವಾಲಯ ಕಟ್ಟಿಸಿದ್ದಾರೆ. ಇದು ಹಿಂದೂ ದೇವರಲ್ಲವೇ? ಮೊನ್ನೆಯಷ್ಟೇ ಮಲೆಮಹದೇಶ್ವರ ದೇವಾಸ್ಥಾನಕ್ಕೆ ಹೋಗಿ ಬಂದಿದ್ದಾರೆ. ಇನ್ನು ಏನು ಬೇಕು? ಆರ್‌ಎಸ್‌ಎಸ್‌ ಹೇಳುವ ಹಿಂದುತ್ವಕ್ಕೆ ಹೊರತಾಗಿ ಸಾಮಾನ್ಯ ಹಿಂದುಗಳ ಜೊತೆ ಸಿದ್ದರಾಮಯ್ಯ ಗುರುತಿಸಿಕೊಂಡಿದ್ದಾರೆ. ಹಿಂದೂಗಳಿಂದ ಸಿದ್ದರಾಮಯ್ಯನವರನ್ನು ಬೇರೆ ಮಾಡುವ ಹತಾಶ ಪ್ರಯತ್ನವನ್ನು ಆರ್‌ಎಸ್‌ಎಸ್ ಮಾಡುತ್ತಿದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...