Homeಮುಖಪುಟಭಾರತದ ಅತಿದೊಡ್ಡ ಬ್ಯಾಂಕ್ ವಂಚನೆ ಪ್ರಕರಣ: ಇಬ್ಬರು ಬಿಲ್ಡರ್‌ಗಳ 415 ಕೋಟಿ ರೂ. ಮೌಲ್ಯದ ಆಸ್ತಿ...

ಭಾರತದ ಅತಿದೊಡ್ಡ ಬ್ಯಾಂಕ್ ವಂಚನೆ ಪ್ರಕರಣ: ಇಬ್ಬರು ಬಿಲ್ಡರ್‌ಗಳ 415 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ

- Advertisement -
- Advertisement -

ಅಕ್ರಮ ಹಣ ವರ್ಗಾವಣೆ ಮತ್ತು ವಂಚನೆ ಆರೋಪದಡಿ ಮಹಾರಾಷ್ಟ್ರ ಮೂಲದ ಬಿಲ್ಡರ್‌‌ ಅವಿನಾಶ್ ಭೋಸಲೆ ಅವರ ಆಸ್ತಿಯಿಂದ ಅಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ವಶಪಡಿಸಿಕೊಂಡಿದೆ. ಇದಾಗಿ ಕೆಲವೇ ದಿನಗಳ ನಂತರ, ಜಾರಿ ನಿರ್ದೇಶನಾಲಯ ಬುಧವಾರ ಭಾರತದ ಅತಿದೊಡ್ಡ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಅವಿನಾಶ್ ಭೋಸಲೆ ಮತ್ತು ಮತ್ತೊಬ್ಬ ಬಿಲ್ಡರ್‌‌ ಸಂಜಯ್ ಛಾಬ್ರಿಯಾ ಅವರಿಂದ 415 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ 17 ಬ್ಯಾಂಕ್‌ಗಳ ಒಕ್ಕೂಟಕ್ಕೆ 34,000 ಕೋಟಿ ರೂ.ಗೂ ಹೆಚ್ಚು ನಷ್ಟ ಉಂಟು ಮಾಡಿದ ಯೆಸ್ ಬ್ಯಾಂಕ್-ಡಿಎಚ್‌ಎಫ್‌ಎಲ್ (ದಿವಾನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್) ಪ್ರಕರಣದಲ್ಲಿ ರೇಡಿಯಸ್ ಡೆವಲಪರ್ಸ್‌ನ ಸಂಜಯ್ ಛಾಬ್ರಿಯಾ ಮತ್ತು ಎಬಿಐಎಲ್ ಇನ್‌ಫ್ರಾಸ್ಟ್ರಕ್ಚರ್‌ನ ಅವಿನಾಶ್ ಭೋಸಲೆ ಅವರನ್ನು ಈ ಹಿಂದೆ ಬಂಧಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇಂದ್ರೀಯ ತನಿಖಾ ದಳ (ಸಿಬಿಐ) ಅಧಿಕಾರಿಗಳು ಕಳೆದ ವಾರ ಪುಣೆಯ ಅವಿನಾಶ್ ಭೋಸಲೆ ಆಸ್ತಿಯಲ್ಲಿ ಹೆಲಿಕಾಪ್ಟರ್ ಅನ್ನು ಪತ್ತೆ ಮಾಡಿದ್ದರು.

ಇಂದು ಸಂಜಯ್ ಛಾಬ್ರಿಯಾ ಅವರ ಮುಂಬೈನ ಸಾಂತಾಕ್ರೂಜ್‌ನಲ್ಲಿರುವ 116.5 ಕೋಟಿ ರೂ. ಮೌಲ್ಯದ ಜಮೀನು, ಬೆಂಗಳೂರಿನಲ್ಲಿರುವ 115 ಕೋಟಿ ರೂ. ಮೌಲ್ಯದ ಲ್ಯಾಂಡ್‌ ಪಾರ್ಸೆಲ್‌ನಲ್ಲಿರುವ ಕಂಪನಿಯ 25% ಈಕ್ವಿಟಿ ಷೇರುಗಳು, 3 ಕೋಟಿ ರೂ. ಮೌಲ್ಯದ ಸಾಂತಾಕ್ರೂಜ್‌ನಲ್ಲಿರುವ ಮತ್ತೊಂದು ಫ್ಲಾಟ್, ದೆಹಲಿ ವಿಮಾನ ನಿಲ್ದಾಣದಲ್ಲಿ ಛಾಬ್ರಿಯಾ ಅವರಿಗೆ ಸೇರಿದ 13.67 ಕೋಟಿ ರೂ. ಮೌಲ್ಯದ ಹೋಟೆಲ್‌‌ನ ಲಾಭ ಮತ್ತು 3.10 ಕೋಟಿ ರೂ. ಮೌಲ್ಯದ ಸಂಜಯ್ ಛಾಬ್ರಿಯಾ ಅವರ ಮೂರು ಅತ್ಯಾಧುನಿಕ ಐಷಾರಾಮಿ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ಪೆಗಾಸಸ್ ಹಗರಣ: ಕೇಜ್ರಿವಾಲ್ ಸಹಾಯಕ, ಜಾರಿ ನಿರ್ದೇಶನಾಲಯದ ಅಧಿಕಾರಿ ಮೇಲೂ ಗೂಢಚರ್ಯೆ

ಇದಲ್ಲದೆ, ಅವಿನಾಶ್ ಭೋಸಲೆ ಅವರ 102.8 ಕೋಟಿ ರೂ. ಮೌಲ್ಯದ ಮುಂಬೈನ ಡ್ಯೂಪ್ಲೆಕ್ಸ್ ಫ್ಲಾಟ್ ರೂಪದ ಆಸ್ತಿ, ಪುಣೆಯ 14.65 ಕೋಟಿ ರೂ. ಮೌಲ್ಯದ ಜಮೀನು, ಪುಣೆಯಲ್ಲೆ ಇರುವ 29.24 ಕೋಟಿ ರೂ. ಮೌಲ್ಯದ ಮತ್ತೊಂದು ಜಮೀನು, 15.52 ಕೋಟಿ ರೂ. ಮೌಲ್ಯದ ನಾಗ್ಪುರದ ಜಮೀನು ಮತ್ತು ನಾಗ್ಪುರದಲ್ಲೆ ಇರುವ 1.45 ಕೋಟಿ ರೂ. ಮೌಲ್ಯದ ಮತ್ತೊಂದು ಜಮೀನನ್ನು ಕೂಡಾ ಈ ಜಪ್ತಿಯಲ್ಲಿ ಲಗತ್ತಿಸಲಾಗಿದೆ ಎಂದು ಇಡಿ ಹೇಳಿಕೊಂಡಿದೆ.

ಇಬ್ಬರು ಆರೋಪಿಗಳ ವಿರುದ್ಧ 2002ರ ಪ್ರಿವೆನ್ಶನ್ ಆಫ್ ಮನಿ ಲಾಂಡರಿಂಗ್ ಆಕ್ಟ್ (PMLA) ನಿಬಂಧನೆಗಳ ಅಡಿಯಲ್ಲಿ ಜಾರಿ ನಿರ್ದೇಶನಾಲಯ ಎರಡು ತಾತ್ಕಾಲಿಕ ಜಪ್ತಿ ಆದೇಶಗಳನ್ನು ಹೊರಡಿಸಿದೆ. ಈ ಇತ್ತೀಚಿನ ಜಪ್ತಿಯಿಂದ ಒಟ್ಟು ಜಪ್ತಿಯಾದ ಆಸ್ತಿಯ ಮೌಲ್ಯ 1,827 ಕೋಟಿ ರೂ.ಗೆ ಏರಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಜಾರಿ ನಿರ್ದೇಶನಾಲಯ ಜೂನ್‌ನಲ್ಲಿ ಸಂಜಯ್ ಛಾಬ್ರಿಯಾ ಮತ್ತು ಅವಿನಾಶ್ ಭೋಸಲೆ ಅವರನ್ನು ಬಂಧಿಸಿತ್ತು. ಪ್ರಸ್ತುತ ಇಬ್ಬರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...