Homeಕರ್ನಾಟಕಡಿ.ಕೆ.ಶಿವಕುಮಾರ್‌, ನನ್ನ ನಡುವೆ ಬಿರುಕಿಲ್ಲ, ಅದು ಮಾಧ್ಯಮ ಸೃಷ್ಟಿ: ಅಮೃತ ಮಹೋತ್ಸವದಲ್ಲಿ ಸಿದ್ದರಾಮಯ್ಯ ಮನದ ಮಾತು

ಡಿ.ಕೆ.ಶಿವಕುಮಾರ್‌, ನನ್ನ ನಡುವೆ ಬಿರುಕಿಲ್ಲ, ಅದು ಮಾಧ್ಯಮ ಸೃಷ್ಟಿ: ಅಮೃತ ಮಹೋತ್ಸವದಲ್ಲಿ ಸಿದ್ದರಾಮಯ್ಯ ಮನದ ಮಾತು

- Advertisement -
- Advertisement -

“ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ನನ್ನ ನಡುವೆ ಯಾವುದೇ ಬಿರುಕಿಲ್ಲ. ಅದು ಮಾಧ್ಯಮ ಹಾಗೂ ವಿರೋಧಿ ಪಕ್ಷಗಳು ಸೃಷ್ಟಿಸಿರುವ ಸುಳ್ಳು” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಆಯೋಜಿಸಿದ್ದ ಸಿದ್ದರಾಮಯ್ಯನವರ ಅಮೃತ ಮಹೋತ್ಸವ (75ನೇ ಜನ್ಮದಿನದ ಸಂಭ್ರಮ) ಸಮಾರಂಭದಲ್ಲಿ ಅವರು ಮಾತನಾಡಿದರು.

“ಅನೇಕ ಸಲ ಮಾಧ್ಯಮಗಳು, ವಿರೋಧಿ ಪಕ್ಷಗಳು ಸುಳ್ಳುಗಳನ್ನು ಸೃಷ್ಟಿ ಮಾಡಿ ತಪ್ಪು ಮಾಹಿತಿ ನೀಡುತ್ತಿವೆ. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರ ನಡುವೆ ಬಿರುಕಿದೆ ಎಂಬುದು ಭ್ರಮೆ. ನಾನು ಮತ್ತು ಶಿವಕುಮಾರ್‌ ಒಟ್ಟಾಗಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ” ಎಂಬ ಸಂದೇಶ ನೀಡಿದರು.

“ನಮ್ಮ ಮುಂದೆ ಇರುವ ಭ್ರಷ್ಟ ಕೋಮುವಾದಿ ಸರ್ಕಾರವನ್ನು ಕಿತ್ತೊಗೆಯುವುದೇ ಆಗಿದೆ. ಈ ಜನಪೀಡಕ ಸರ್ಕಾರವನ್ನು ಕಿತ್ತೊಗೆದು, ರಾಹುಲ್‌ ಗಾಂಧಿಯವರ ನಾಯಕತ್ವದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರವನ್ನು ತರುತ್ತೇವೆ. ಇದಕ್ಕೆ ನಿಮ್ಮೆಲ್ಲರ ಆರ್ಶೀವಾದ ಇರಬೇಕು” ಎಂದರು.

ತಾವು ನಡೆದು ಬಂದ ಜೀವನವನ್ನು ಮೆಲುಕು ಹಾಕಿದ ಸಿದ್ದರಾಮಯ್ಯನವರು, “ಅಂದಿನಿಂದ ಇಂದಿನವರೆಗೆ ನಿರಂತರವಾಗಿ ರಾಜ್ಯದ ಜನತೆಯ ಸಂಪರ್ಕದಲ್ಲಿದ್ದೇನೆ. ಜನರ ಸೇವೆಯನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನಶಕ್ತಿಯೇ ಬಹಳ ದೊಡ್ಡದು” ಎಂದು ತಿಳಿಸಿದರು.

“ಜನಶಕ್ತಿಯ ಆರ್ಶೀವಾದ ಇಲ್ಲವಾದರೆ ಯಾರೂ ಕೂಡ, ದೀರ್ಘಕಾಲ ರಾಜಕಾರಣ ಮಾಡಲು ಸಾಧ್ಯವಿಲ್ಲ. ಜನರ ನಿರಂತರವಾದ ಪ್ರೀತಿ, ವಿಶ್ವಾಸ ಆರ್ಶೀವಾದದಿಂದ ಶಾಸಕನಾಗಿ, ಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿತು” ಎಂದು ಬಣ್ಣಿಸಿದ್ದಾರೆ.

“ಎಲ್ಲಿಯವರೆಗೆ ದೈಹಿಕವಾಗಿ ಮಾನಸಿಕವಾಗಿ ಸದೃಢನಾಗಿರುತ್ತೇನೋ ಅಲ್ಲಿಯವರೆಗೆ ಸಕ್ರಿಯ ರಾಜಕಾರಣ ಮಾಡಿ ನಾಡಿನ ಸೇವೆಯನ್ನು ಮಾಡುತ್ತೇನೆ. ನಾನು 44 ವರ್ಷ ಕಾಲ ಸಕ್ರಿಯ ರಾಜಕಾರಣದಲ್ಲಿ ಇದ್ದೇನೆ. ಈಗ ಇರುವ ಬಿಜೆಪಿ ಸರ್ಕಾರದಷ್ಟು ಭ್ರಷ್ಟವಾದ, ಕೋಮುವಾದಿಯಾದ ಮತ್ತೊಂದು ಸರ್ಕಾರವನ್ನು ನನ್ನ ರಾಜಕೀಯ ಜೀವನದಲ್ಲಿ ನೋಡಿರಲಿಲ್ಲ” ಎಂದು ವಿಷಾದಿಸಿದರು.

ಇದನ್ನೂ ಓದಿರಿ: ಸಿದ್ದರಾಮಯ್ಯ ಅಮೃತ ಮಹೋತ್ಸವ: ದುರುದ್ದೇಶಪೂರಿತ ಪೋಸ್ಟ್‌ ಹಾಕಿದ ಬಿಜೆಪಿ

“ರಾಜ್ಯದ ಮೂಲೆ ಮೂಲೆಗಳಿಂದ ಶುಭ ಕೋರಲು ಬಂದಿದ್ದೀರಿ. ನನಗೆ ಶುಭ ಕೋರುವ ಮೂಲಕ- ಈ ಕೋಮುವಾದಿ ಬಿಜೆಪಿ ಸರ್ಕಾರವನ್ನು ಕಿತ್ತು ಹೊಗೆಯುವ, ಕಾಂಗ್ರೆಸ್ ಸರ್ಕಾರನ್ನು ಅಧಿಕಾರಕ್ಕೆ ತರುವ ಶಪಥ ಮಾಡಬೇಕು” ಎಂದು ಆಶಿಸಿದರು.

ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಯುವಕರು, ಮಹಿಳೆಯರು ಆತಂಕದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಡೀ ದೇಶದಲ್ಲಿಯೇ ಈ ಪರಿಸ್ಥಿತಿ ಇದೆ. ಮೋದಿ ಪ್ರಧಾನಿಯಾದ ಮೇಲೆ ಈ ದೇಶ, ಪ್ರಜಾಪ್ರಭುತ್ವ ಸಂಕಷ್ಟದಲ್ಲಿದೆ. ಸಂವಿಧಾನಕ್ಕೆ ರಕ್ಷಣೆ ಇಲ್ಲವಾಗಿದೆ ಎಂದು ಎಚ್ಚರಿಸಿದರು.

ಹಿಂದೂ ರಾಷ್ಟ್ರ ಮಾಡಬೇಕು, ಲೂಟಿ ಮಾಡಬೇಕು, ಸರ್ವಾಧಿಕಾರ ತರಬೇಕು, ಸಂವಿಧಾನ ಬದಲಾಯಿಸಬೇಕು ಎಂಬುದು ಬಿಜೆಪಿಯವರ ಉದ್ದೇಶ. ಕಾಂಗ್ರೆಸ್‌ ಮುಗಿಸಲು ಯಾರಿಂದರೂ ಸಾಧ್ಯವಿಲ್ಲ. ಸಂವಿಧಾನ ಬದಲಾವಣೆ ಮಾಡಲು ಈ ದೇಶದ ಜನ ಬಿಡುವುದಿಲ್ಲ. ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್‌ ಗೆದ್ದು ಅಧಿಕಾರಕ್ಕೆ ಬರಲಿದೆ. ಬಡವರ ಬಗ್ಗೆ, ದಲಿತರು, ಹಿಂದುಳಿದ ವರ್ಗದ ಬಗ್ಗೆ ಕಾಳಜಿ ಇರುವವರು ಈ ದೇಶದ ಅಧಿಕಾರದ ಚುಕ್ಕಾಣಿ ಹಿಡಿಯಬೇಕು. ರಾಹುಲ್ ಗಾಂಧಿಯವರಿಗೆ ಆ ಅರ್ಹತೆ ಇದೆ. ಮೋದಿ ನುಡಿದಂತೆ ನಡೆಯಲಿಲ್ಲ. ದೇಶದ ಆರ್ಥಿಕತೆ ನಾಶವಾಯಿತು ಎಂದು ಟೀಕಿಸಿದರು.

ಸಮಾರಂಭದಲ್ಲಿ ಸೇರಿದ್ದ ಜನಸ್ತೋಮ

ದಲಿತರು, ರೈತರು, ಅಲ್ಪಸಂಖ್ಯಾತರು, ಹಿಂದುಳಿದವರ ಬದುಕನ್ನು ಹಾಳು ಮಾಡಿದ್ದೀರಿ. ಯುವಕರಿಗೆ ಉದ್ಯೋಗ ನೀಡಲಿಲ್ಲ. ಬೆಲೆ ಏರಿಕೆ ಗಗನಕ್ಕೇರಿದೆ. ಕರ್ನಾಟಕದಲ್ಲಿರುವ ಗುತ್ತಿಗೆದಾರರ ಸಂಘದವರು ನಲವತ್ತು ಪರ್ಸೆಂಟ್ ಕಮಿಷನ್‌ ಆರೋಪ ಮಾಡಿ ಮೋದಿಗೆ ಪತ್ರ ಬರೆದಿದ್ದಾರೆ. ಆದರೆ ಉತ್ತರ ಸಿಕ್ಕಿಲ್ಲ ಎಂದರು.

ಮಾತ್ತೆತ್ತಿದರೆ ಸಬ್‌ ಕಾ ಸಾತ್ ಸಬ್‌ ಕಾ ವಿಕಾಸ್ ಎನ್ನುತ್ತಾರೆ. ಕರಾವಳಿಯಲ್ಲಿ ಮೂರು ಕೊಲೆಗಳಾಗಿವೆ. ಬಸವರಾಜ ಬೊಮ್ಮಾಯಿ ಕರಾವಳಿಗೆ ಹೋಗಿದ್ದರು. ಮಸೂದ್, ಪ್ರವೀಣ್, ಫಾಝಿಲ್ ಎನ್ನುವವರ ಕೊಲೆಯಾಗಿತ್ತು. ಬೊಮ್ಮಾಯಿಯವರೇ ನೀವು ಇಡೀ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯೋ ಅಥವಾ ಒಂದು ಧರ್ಮದ ಮುಖ್ಯಮಂತ್ರಿಯೋ? ಮಸೂದ್ ಹಾಗೂ ಫಾಝಿಲ್ ಮನೆಗೆ ಹೋಗಲಿಲ್ಲ. ಪ್ರವೀಣ್‌ಗೆ ಮಾತ್ರ ಪರಿಹಾರ ನೀಡಿದ್ದೀರಿ. ಅದು ತಪ್ಪೆಂದು ಹೇಳುತ್ತಿಲ್ಲ. ಆದರೆ ಯಾಕೆ ನೀವು ಫಾಝಿಲ್‌ ಕುಟುಂಬಕ್ಕೆ ಪರಿಹಾರ ಕೊಟ್ಟಿಲ್ಲ. ಮಸೂದ್‌ ಕುಟುಂಬಕ್ಕೆ ಕೊಡಲಿಲ್ಲ. ಸಬ್‌ಕಾ ಸಾತ್ ಸಬ್‌ ಕಾ ವಿಕಾಸ್‌ ಎನ್ನುವ ನೈತಿಕತೆ ನಿಮಗಿದೆಯಾ? ಈ ರಾಜ್ಯದ ಮುಖ್ಯಮಂತ್ರಿಯಾಗಿರಲು ನೀವು ಲಾಯಾಕ್ಕಾ? ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿ, ಎಲ್ಲ ಜನರನ್ನು ಕಾಪಾಡುವ ಜವಾಬ್ದಾರಿ ಹೊತ್ತಿರುತ್ತೀರಿ. ಆದರೆ ಅಲ್ಪಸಂಖ್ಯಾತರು ಆತಂಕದಲ್ಲಿ ಬದುಕುತ್ತಿದ್ದಾರೆ. ಭ್ರಷ್ಟಾಚಾರ ಮಿತಿಮೀರಿದೆ ಎಂದು ವಾಗ್ದಾಳಿ ನಡೆಸಿದರು.

ಸಂತೋಷ್ ಪಾಟೀಲ್ ಎನ್ನುವ ವ್ಯಕ್ತಿ ಲಂಚ ಕೊಡಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡರು. ಅದಕ್ಕಾಗಿ ನಿಮ್ಮ ಮಂತ್ರಿಯೊಬ್ಬರು ರಾಜೀನಾಮೆ ಕೊಟ್ಟರು. ಅದನ್ನು ಮುಚ್ಚಿ ಹಾಕಲು ಹೊರಟಿದ್ದೀರಿ. ಇಂದು ದ್ವೇಷದ ರಾಜಕಾರಣ ಪ್ರಾರಂಭ ಮಾಡಿದ್ದೀರಿ. ಮೋದಿಯವರೇ ಎಷ್ಟು ಕಾಲ ದ್ವೇಷದ ರಾಜಕಾರಣ ಮಾಡಲು ಸಾಧ್ಯವಾಗುತ್ತದೆ. ಜನಶಕ್ತಿಯ ಮುಂದೆ ರಾಜ್ಯ ಶಕ್ತಿ ಎಂದಿಗೂ ಅಂಕುಶವನ್ನು ಇಟ್ಟುಕೊಳ್ಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ರಾಹುಲ್ ಗಾಂಧಿಯವರಿಗೆ, ಸೋನಿಯಾ ಗಾಂಧಿಯವರಿಗೆ ಅನಗತ್ಯವಾಗಿ ವಿಚಾರಣೆ ಮಾಡಿದ್ದೀರಿ. ಯಾವ ತಪ್ಪಿಗಾಗಿ, ಸೋನಿಯಾ ಗಾಂಧಿಯವರ ವಯಸ್ಸನ್ನೂ ಲೆಕ್ಕಿಸದೆ ‌ಇ.ಡಿ. ಕಚೇರಿಗೆ ಕರೆಸಿ ಗಂಟೆಗಟ್ಟಲೆ ವಿಚಾರಣೆ ಮಾಡಿದ್ದೀರಿ. ಕಾಂಗ್ರೆಸ್‌ನಲ್ಲಿ ಕೋಟ್ಯಾಂತರ ಕಾರ್ಯಕರ್ತರಿದ್ದಾರೆ. ಎಲ್ಲರೂ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಜೊತೆಯಲ್ಲಿ ಇದ್ದಾರೆ ಎಂದು ತಿಳಿಸಿದರು.

ಹಿಟ್ಲರ್‌ನಂತೆ ಅಧಿಕಾರ ನಡೆಸುತ್ತಿದ್ದಾರೆ. ಸರ್ವಾಧಿಕಾರ ಜಾರಿಗೆ ತಂದು ಸಂವಿಧಾನವನ್ನು ನಾಶ ಮಾಡಲು ಹೊರಟಿದ್ದಾರೆ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಕೊಟ್ಟ ಸಂವಿಧಾನ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ. ದಲಿತರು, ಅಲ್ಪಸಂಖ್ಯಾತರು, ರೈತರು, ಹಿಂದುಳಿದವರು ಉಳಿಯಲು ಸಾಧ್ಯ ಎಂದು ತಿಳಿಸಿದರು.

ಇದನ್ನೂ ಓದಿರಿ: “ಬಸವರಾಜ ಬೊಮ್ಮಾಯಿ ಎಂಬ ಹೆಸರಿನ ನಾನು…” ಸ್ವೀಕರಿಸಿದ ಪ್ರಮಾಣವಚನ ಮರೆತುಹೋಯಿತೇ ಮುಖ್ಯಮಂತ್ರಿಗಳಿಗೆ?

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರೈತರ ಸಾಲ ಮನ್ನಾ ಮಾಡಲಾಯಿತು. ನರೇಂದ್ರ ಮೋದಿಯವರು ರೈತ ವಿರೋಧ ಮೂರು ಕಾಯ್ದೆಗಳನ್ನು ತಂದು ರೈತರು ಒಂದು ವರ್ಷ ಚಳವಳಿ ಮಾಡುವಂತಾಯಿತು. ವಿಧಿ ಇಲ್ಲದೆ ವಾಪಸ್‌ ಪಡೆದುಕೊಂಡಿದ್ದಾರೆ. ಆದರೆ ಕರ್ನಾಟಕದಲ್ಲಿ ಇನ್ನೂ ವಾಪಸ್ ತೆಗೆದುಕೊಂಡಿಲ್ಲ. ಎಪಿಎಂಸಿ ಹಾಳು ಮಾಡಿದ್ದಾರೆ ಎಂದು ದೂರಿದರು.

2013 ಕೊಟ್ಟ ಭರವಸೆಗಳನ್ನು ನಾವು ಈಡೇರಿಸಿದ್ದೇವೆ. ಎಸ್‌ಸಿ, ಎಸ್‌ಟಿಗಳಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗಾಗಿ ವಿಶೇಷ ಕಾನೂನುಗಳನ್ನು ಮಾಡಿದ್ದೇವೆ. ಎಲ್ಲ ಬಡವರಿಗೆ ನ್ಯಾಯ ಕೊಡುವ ಕೆಲಸವನ್ನು ಮಾಡಿದ್ದೇವೆ. ಅನ್ನಭಾಗ್ಯ, ಶೂ ಭಾಗ್ಯ, ಕ್ಷೀರ ಭಾಗ್ಯ, ಇಂದಿರಾ ಕ್ಯಾಂಟೀನ್‌, ಮನಸ್ವಿನಿ, ವಿದ್ಯಾಸಿರಿ, ಕೃಷಿ ಭಾಗ್ಯ- ಈ ಎಲ್ಲ ಕಾರ್ಯಕ್ರಮ ಮಾಡಿದ್ದೇವೆ. ನೀವೇನು ಮಾಡಿದ್ದೀರಿ ಬೊಮ್ಮಾಯಿ? ಎಂದು ಪ್ರಶ್ನಿಸಿದರು.

ಭಾಷಣದ ಕೊನೆಯಲ್ಲಿ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ಎಲ್ಲ ಅಭಿಮಾನಿಗಳನ್ನು, ಕಾರ್ಯಕರ್ತರನ್ನು, ಪಕ್ಷದ ನಾಯಕರನ್ನು ಸಿದ್ದರಾಮಯ್ಯ ಸ್ಮರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...