Homeಮುಖಪುಟಕೇರಳದ IAS ಅಧಿಕಾರಿ ಶ್ರೀರಾಮ್ ವಿರುದ್ಧದ ಶಾಂತಿಯುತ ಪ್ರತಿಭಟನೆಗಳಿಗೆ ಕೋಮು ಬಣ್ಣ ಹಚ್ಚಿದ ಬಲಪಂಥೀಯರು

ಕೇರಳದ IAS ಅಧಿಕಾರಿ ಶ್ರೀರಾಮ್ ವಿರುದ್ಧದ ಶಾಂತಿಯುತ ಪ್ರತಿಭಟನೆಗಳಿಗೆ ಕೋಮು ಬಣ್ಣ ಹಚ್ಚಿದ ಬಲಪಂಥೀಯರು

- Advertisement -
- Advertisement -

ಪತ್ರಕರ್ತ ಪಿ.ಕೆ.ಬಶೀರ್ ಸಾವಿನ ಪ್ರಕರಣದ ಆರೋಪಿ ಶ್ರೀರಾಮ್ ವೆಂಕಟರಾಮನ್ ಅವರನ್ನು ಆಲಪ್ಪುಳ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿರುವುದನ್ನು ವಿರೋಧಿಸಿ, ಇತ್ತೀಚೆಕಗೆ ಕೇರಳದ ಕೆಲವು ಮುಸ್ಲಿಂ ಧಾರ್ಮಿಕ ಸಂಘಟನೆಗಳು ರಾಜ್ಯದಾದ್ಯಂತ ಶಾಂತಿಯುತ ಪ್ರತಿಭಟನೆ ನಡೆಸಿದ್ದವು. ಆದರೆ ಬಿಜೆಪಿ ಬೆಂಬಲಿತ ಹಾಗೂ ಇತರ ಹಿಂದೂ ಮತ್ತು ಕ್ರಿಶ್ಚಿಯನ್ ಬಲಪಂಥೀಯ ಸಾಮಾಜಿಕ ಮಾಧ್ಯಮಗಳ ಹ್ಯಾಂಡಲ್‌ಗಳು ಈ ಪ್ರತಿಭಟನೆಗೆ ಕೋಮು ಬಣ್ಣವನ್ನು ನೀಡಿ ಅಪಪ್ರಚಾರ ಮಾಡುತ್ತಿವೆ.

ಜುಲೈ 30 ರಂದು ನಡೆದ ಈ ಪ್ರತಿಭಟನೆಯು ರಾಜಕೀಯೇತರ ಸಂಘಟನೆಯಾದ ‘ಕೇರಳ ಮುಸ್ಲಿಂ ಜಮಾತ್‌’ ಆಶ್ರಯದಲ್ಲಿ ನಡೆದಿತ್ತು. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಡಳಿತ ಕಚೇರಿಗಳಿಗೆ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಲಾಗಿತ್ತು. ಈ ಪ್ರತಿಭಟನೆಯಲ್ಲಿ ‘ಕೇರಳ ಮುಸ್ಲಿಂ ಜಮಾತ್‌’‌ನ ಅಂಗ ಸಂಘಟನೆಗಳಾದ ಸುನ್ನಿ ಯುವಜನ ಸಂಘ (SYS) ಮತ್ತು ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (SSF) ನಂತಹ ಸುನ್ನಿ ಮುಸ್ಲಿಂ ಸಂಘಟನೆಗಳು ಭಾಗವಹಿಸಿದ್ದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಸಾಮಾಜಿಕ ಮಾಧ್ಯಮಗಳ ಬಲಪಂಥೀಯ ಹ್ಯಾಂಡಲ್‌ಗಳು ಈ ಪ್ರತಿಭಟನೆಗೆ ಕೋಮು ಆಯಾಮವನ್ನು ನೀಡಿ ಅಪಪ್ರಚಾರ ನಡೆಸುತ್ತಿದೆ. ಈ ಹ್ಯಾಂಡಲ್‌ಗಳು, “ಹೊಸದಾಗಿ ನೇಮಕಗೊಂಡ ಬ್ರಾಹ್ಮಣ ಐಎಎಸ್‌ ಜಿಲ್ಲಾಧಿಕಾರಿಯನ್ನು ವಿರೋಧಿಸಿ ಕೇರಳದ ಮಲಪ್ಪುರಂನಲ್ಲಿ ಮುಸ್ಲಿಮರು ಮೆರವಣಿಗೆ ಮಾಡಿದ್ದಾರೆ. MSM ಇದನ್ನು ಕುತಂತ್ರದಿಂದ ತಪ್ಪಿಸಿದ್ದು, ಕರ್ನಾಟಕದಲ್ಲಿ ABVP ಯನ್ನು ಎತ್ತಿ ತೋರಿಸಿತು. ಅವರ ಘೋಷಣೆಗಳನ್ನು ಆಲಿಸಿ” ಎಂದು ಹಿಂದೂ ಮಕ್ಕಳ್ ಕಚ್ಚಿಯ ಅರ್ಜುನ್ ಸಂಪತ್ ಟ್ವೀಟ್ ಮಾಡಿದ್ದಾರೆ.

ಅರ್ಜುನ್ ಸಂಪತ್‌ ಅವರ ಟ್ವೀಟ್‌ನಂತೆಯೆ ಸತ್ಯವನ್ನು ತಿರುಚಿ ಹಲವಾರು ಟ್ವೀಟ್‌ಗಳನ್ನು ಟ್ವಿಟರ್‌ನಲ್ಲಿ ಮಾಡಲಾಗಿವೆ. ಆದರೆ ವಾಸ್ತವದಲ್ಲಿ ಪತ್ರಕರ್ತ ಕೆ.ಎಂ.ಬಶೀರ್‌ ಸಾವಿನ ಪ್ರಕರಣದ ಆರೋಪಿ ಶ್ರೀರಾಮ್‌ ಅವರನ್ನು ಜಿಲ್ಲಾಧಿಕಾರಿಯನ್ನಾಗಿ ನೇಮಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗಿತ್ತು.

ಇದನ್ನೂ ಓದಿ: ಮುಸ್ಲಿಂ ಪ್ರಧಾನ ಕಥೆ ಹೊಂದಿದೆ ಎಂದು ನಾಟಕಕ್ಕೆ ಅಡ್ಡಿಪಡಿಸಿದ RSS-ಬಜರಂಗದಳದ ದುಷ್ಕರ್ಮಿಗಳು

ಪತ್ರಕರ್ತ ಬಶೀರ್ ಅವರು ಅಖಿಲ ಭಾರತ ಸುನ್ನಿ ಜಮಿಯ್ಯತುಲ್ ಉಲಮಾ ಒಡೆತನದ ಸಿರಾಜ್ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು. ಆಗಸ್ಟ್ 4 ರಂದು ರಾತ್ರಿ ಬಶೀರ್ ಅವರು ತನ್ನ ಬೈಕ್ ಅನ್ನು ರಸ್ತೆಯಲ್ಲಿ ನಿಲ್ಲಿಸಿದ್ದಾಗ ಶ್ರೀರಾಮ್ ಅವರ ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದರು.

“ಅಪಘಾತದ ವೇಳೆ ಶ್ರೀರಾಮ್ ಅವರು ಕುಡಿದು ವಾಹನ ಚಲಾಯಿಸುತ್ತಿದ್ದರು. ಅಪಘಾತದ ನಂತರ ಅವರು ಸ್ಥಳದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು ಮತ್ತು ಗಂಟೆಗಳ ಕಾಲ ರಕ್ತ ಪರೀಕ್ಷೆಯನ್ನು ನೀಡಲು ಒಪ್ಪಲಿಲ್ಲ” ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕಾಗಿ ಕೇರಳದ ಸುನ್ನಿ ಸಂಘಟನೆಗಳು ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಿಸಿದ್ದರ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ಬದಲಾಗಿ ಅವರು ಬ್ರಾಹ್ಮಣ ಎಂಬ ಕಾರಣಕ್ಕೆ ಪ್ರತಿಭಟನೆ ನಡೆದಿರಲಿಲ್ಲ.

ಬಲಪಂಥೀಯ ನಾಯಕ ಅರ್ಜುನ್ ಸಂಪತ್ ಹಂಚಿಕೊಂಡಿರುವ ವಿಡಿಯೋದಲ್ಲಿ ‘‘ಕಲೆಕ್ಟರ್ ನೇಮಕದ ಆದೇಶವನ್ನು ಹಿಂಪಡೆಯಿರಿ. ಸರಕಾರವೇ, ಕೊಲೆಗಡುಕನಾದ ಕುಡುಕನಿಗೆ ಅಧಿಕಾರವನ್ನು ಒಪ್ಪಿಸಲು ನಿಮಗೆ ನಾಚಿಕೆಯಾಗುವುದಿಲ್ಲವೇ?” ಎಂಬ ಘೋಷಣೆಗಳನ್ನು ಕೂಗಲಾಗಿತ್ತು.

ಇದನ್ನೂ ಓದಿ: ಮುಸ್ಲಿಂ ಮಹಿಳೆಯರನ್ನು ರೇಪ್‌ ಮಾಡಲು ಕರೆ ನೀಡಿದ್ದ ‘ಬಜರಂಗಮುನಿ’ಯನ್ನು ‘ಗೌರವಾನ್ವಿತ’ ಎಂದ ಸರ್ಕಾರ!

ಜಿಲ್ಲಾಧಿಕಾರಿಯನ್ನು ನೇಮಕಾತಿ ಆದೇಶ ಬಂದಾಗಿನಿಂದ ಕೇರಳ ಮುಸ್ಲಿಂ ಜಮಾತ್ ಮಾತ್ರವಲ್ಲದೆ ರಾಜ್ಯದ ಪತ್ರಕರ್ತರು ಸೇರಿದಂತೆ ಹಲವು ಸಂಘಟನೆಗಳು ಸರ್ಕಾರದ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವು. ಆದರೆ ರಾಜಕಿಯೇತರ ಮುಸ್ಲಿಂ ಸಂಘಟನೆಗಳು ಇದನ್ನು ವಿರೋಧಿಸಿ ಬೃಹತ್‌ ಪ್ರತಿಭಟನೆ ನಡೆಸಿದ ನಂತರ ಬಲಪಂಥೀಯರು ಪ್ರತಿಭಟನೆಗೆ ಕೋಮು ಬಣ್ಣ ಹಚ್ಚಿದ್ದಾರೆ.

ಜುಲೈ 26 ರಂದು ಐಎಎಸ್ ಅಧಿಕಾರಿ ಅಧಿಕಾರ ಸ್ವೀಕರಿಸಲು ಕಲೆಕ್ಟರೇಟ್ ತಲುಪಿದಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ್ದರು. ಪ್ರತಿಭಟನಾಕಾರರನ್ನು ಪೊಲೀಸರು ಬಲವಂತವಾಗಿ ಹೊರಹಾಕಿದರು. ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಅಲಪ್ಪುಳದ ಮಾಜಿ ಸಂಸದ ಕೆ.ಸಿ. ವೇಣುಗೋಪಾಲ್ ಅವರು, ಜಿಲ್ಲಾಧಿಕಾರಿಯನ್ನು ‘ಕಳಂಕಿತ ಅಧಿಕಾರಿ’ ಎಂದು ಕರೆದಿದ್ದಾರೆ.

ಹರಿಪಾದ್ ಶಾಸಕ, ಕಾಂಗ್ರೆಸ್ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಕೂಡ ನೇಮಕಾತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿಯ ನೇಮಕಾತಿಯನ್ನು ವಿರೋಧಿಸಿ ಆಲಪ್ಪುಳದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಕೂಡ ನೇಮಕಾತಿಯನ್ನು ವಿರೋಧಿಸಿದೆ. ಸಾರ್ವಜನಿಕರೊಂದಿಗೆ ನಿರಂತರವಾಗಿ ಸಂವಹನ ನಡೆಸಬೇಕಾದ ಹುದ್ದೆಯಲ್ಲಿ ಕೊಲೆ ಆರೋಪಿ ಶ್ರೀರಾಮ್ ಅವರನ್ನು ಏಕೆ ನೇಮಿಸಲಾಗಿದೆ ಎಂದು ಎರಡೂ ಪಕ್ಷಗಳು ಸರ್ಕಾರವನ್ನು ಪ್ರಶ್ನಿಸಿದ್ದರು.

ಇದನ್ನೂ ಓದಿ: ಹಿಂದೂ-ಮುಸ್ಲಿಂ ಕ್ರಿಶ್ಚಿಯನ್ ಯಾರೇ ಆಗಿರಲಿ, ಯಾವ ತಂದೆ ತಾಯಿಗೂ ನಮಗೆ ಬಂದ ಕಷ್ಟ ಬಾರದಿರಲಿ – ಫಾಝಿಲ್ ತಂದೆಯ ಮನದಾಳದ ಮಾತು

ಜುಲೈ 27 ರಂದು ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ (ಕೆಯುಡಬ್ಲ್ಯೂಜೆ) ಕಲೆಕ್ಟರೇಟ್ ಹೊರಗೆ ಅಲಪ್ಪುಳದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿತು. ಕೇರಳದ ವಿವಿಧ ಜಿಲ್ಲೆಗಳಲ್ಲಿ ಇದೇ ರೀತಿಯ ಪ್ರತಿಭಟನೆಗಳನ್ನು ಪತ್ರಕರ್ತರು ನಡೆಸಿದ್ದರು.

ಆದಾಗ್ಯೂ ಕೆಲವು ಗುಂಪುಗಳು ಪ್ರತಿಭಟನೆಗಳಿಗೆ ಕೋಮು ಬಣ್ಣ ನೀಡಿದ್ದಾರೆ. ಕ್ರಿಶ್ಚಿಯನ್ ಮೂಲಭೂತವಾದಿ ಸಂಘಟನೆಯಾದ ಡೆಮಾಕ್ರಟಿಕ್ ಕ್ರಿಶ್ಚಿಯನ್ ಫೆಡರೇಶನ್ ಕೇರಳ, ಪ್ರತಿಭಟನೆಯನ್ನು ಫೇಸ್‌ಬುಕ್‌ನಲ್ಲಿ ಟೀಕಿಸುತ್ತಾ,“ಸಾವಿಗೀಡಾದವರಿಗಿಂತ ಜಿಲ್ಲಾಧಿಕಾರಿಗೆ ಹೆಚ್ಚು ಸಹಾನುಭೂತಿ ವ್ಯಕ್ತಪಡಿಸುತ್ತೇವೆ. ಅದಕ್ಕೆ ಕಾರಣ ಅವರ ಧಾರ್ಮಿಕ ಉಗ್ರವಾದ. ಪತ್ರಕರ್ತರೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿರುವುದು ಇದೇ ಮೊದಲಲ್ಲ. ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿರುವುದು ಇದೇ ಮೊದಲಲ್ಲ. ನಾಗರಿಕ ಸೇವಾ ಅಧಿಕಾರಿಯೊಬ್ಬರು ವಿಚಾರಣೆ ಎದುರಿಸುತ್ತಿರುವುದು ಇದೇ ಮೊದಲಲ್ಲ”

“ಹಾಗಾದರೆ ಈ ಪ್ರತಿಭಟನೆಗಳು ಏಕೆ ನಡೆಯುತ್ತಿವೆ? ಏಕೆಂದರೆ ಇದು ಕೇವಲ ಪ್ರತಿಭಟನೆಯಲ್ಲ. ಇದು ವೆಂಕಟರಾಮನ್‌ಗೆ ಮಾತ್ರವಲ್ಲ, ಅಧಿಕಾರಶಾಹಿ ಮತ್ತು ಸರ್ಕಾರಕ್ಕೆ ಬೆದರಿಕೆಯಾಗಿದೆ. ಒಬ್ಬ ಮುಸಲ್ಮಾನನನ್ನು ಕೊಂದ ಮಾತ್ರಕ್ಕೆ ಅವರು ಬೀದಿಪಾಲಾಗಿದ್ದಾರೆ. ಸತ್ತವರು ರಾಮನ್, ಕೃಷ್ಣನ್ ಅಥವಾ ವರ್ಗೀಸ್ ಆಗಿದ್ದರೆ ಮತ್ತು ಕಾರು ಓಡಿಸಿದವರು ಸಲಾಂ ಅಥವಾ ರಹೀಮ್ ಆಗಿದ್ದರೆ, ಬೀದಿಗಳು ಖಾಲಿಯಾಗಿ ಇರುತ್ತಿದ್ದವು” ಎಂದು ಅದು ಹೇಳಿದೆ.

ಇದನ್ನೂ ಓದಿ: ಮುಖ್ಯಮಂತ್ರಿಯ ಇಬ್ಬಗೆ ನೀತಿ; ಕಾನೂನುಬಾಹಿರ ಶಾಂತಿಸಭೆಗೆ ವಿರೋಧ: ಮುಸ್ಲಿಂ ಸೆಂಟ್ರಲ್ ಕಮಿಟಿ

ಮತ್ತೊಂದು ಕ್ರಿಶ್ಚಿಯನ್ ಮೂಲಭೂತವಾದಿ ಗುಂಪು CASA ತಮ್ಮ ಎಫ್‌ಬಿ ಪೋಸ್ಟ್‌ನಲ್ಲಿ, “ಅವರ ಮುಂದಿರುವ ಸಮಸ್ಯೆ ಶ್ರೀರಾಮ್ ವೆಂಕಟರಾಮನ್ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಯಾರನ್ನಾದರೂ ಕೊಂದದ್ದಲ್ಲ. ಸತ್ತವರು ತಮ್ಮ ಸಮುದಾಯದ ಸದಸ್ಯರಾಗಿದ್ದಾರೆ ಎಂಬ ಕಾರಣ ಮಾತ್ರ” ಎಂದು ಹೇಳಿತ್ತು.

ಇದೇ ರೀತಿಯ ಸಂದೇಶಗಳು ಅನೇಕ ವಾಟ್ಸಾಪ್ ಗುಂಪುಗಳಲ್ಲಿ ಕಾಣಿಸಿಕೊಂಡಿವೆ. “ಮೃತ ವ್ಯಕ್ತಿ ಮುಸ್ಲಿಂ ಆಗಿರುವುದರಿಂದ ಭಯೋತ್ಪಾದಕ ಗುಂಪುಗಳ ಸಹಾನುಭೂತಿ. ಶ್ರೀರಾಮ್ ಒಬ್ಬ ಬ್ರಾಹ್ಮಣ, ಹಿಂದೂ ವ್ಯಕ್ತಿ. ಹಾಗಾಗಿ ಇಲ್ಲಿ ಪ್ರತಿಭಟನೆ ಧರ್ಮದ ವಿರುದ್ಧವಾಗಿದೆ. ಅವರು ತಮ್ಮ ಶಕ್ತಿ ತೋರಿಸಿ ಬೆದರಿಕೆ ಹಾಕುತ್ತಿದ್ದಾರೆ, ಇದು ಸಾಮಾಜಿಕ ಕಾರಣಕ್ಕಾಗಿ ನಡೆದ ಪ್ರತಿಭಟನೆಯಲ್ಲ” ಎಂದು ಪ್ರತಿಪಾದಿಸಿದ್ದವು.

ಪ್ರತಿಭಟನೆಗಳು ಹೆಚ್ಚಾಗುತ್ತಿದ್ದಂತೆ, ಕೇರಳ ಸರ್ಕಾರವು ಆಗಸ್ಟ್ 1 ರಂದು ಶ್ರೀರಾಮ್ ಅವರನ್ನು ವರ್ಗಾವಣೆ ಮಾಡಿದೆ. ಅವರನ್ನು ಕೇರಳ ರಾಜ್ಯ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್‌ನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...