Homeಮುಖಪುಟಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆ: ಮಸೀದಿ ವೀಕ್ಷಣೆ ಪ್ರವಾಸ ರದ್ದು ಮಾಡಿದ ಶಿಶುವಿಹಾರ

ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆ: ಮಸೀದಿ ವೀಕ್ಷಣೆ ಪ್ರವಾಸ ರದ್ದು ಮಾಡಿದ ಶಿಶುವಿಹಾರ

- Advertisement -
- Advertisement -

ಗುಜರಾತಿನ ವಡೋದರದ ಖಾಸಗಿ ಶಾಲೆಯು ಶಿಶುವಿಹಾರದ ಮಕ್ಕಳಿಗೆ ನಗರದ ಮಸೀದಿಗೆ ಪ್ರವಾಸವನ್ನು ಯೋಜಿಸಿತ್ತು. ಆದರೆ ಬಿಜೆಪಿ ಬೆಂಬಲಿತ ಭಜರಂಗದಳದ ದುಷ್ಕರ್ಮಿಗಳ ಪ್ರತಿಭಟನೆಯ ಕಾರಣಕ್ಕೆ ಈ ಪ್ರವಾಸವನ್ನು ಮಂಗಳವಾರ ರದ್ದುಗೊಳಿಸಲಾಗಿದೆ. ಮಸೀದಿ ಪ್ರವಾಸದ ಬಗ್ಗೆ ಪೋಷಕರು “ದೂರು ನೀಡಿದ್ದಾರೆ” ಎಂದು ಪ್ರತಿಪಾದಿಸಿರುವ ಬಜರಂಗದಳದ ದುಷ್ಕರ್ಮಿಗಳು ಶಾಲೆಗೆ ತೆರಳಿ ಮಕ್ಕಳನ್ನು ಮಸೀದಿಗೆ ಕರೆದೊಯ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಶಾಲಾ ಆಡಳಿತ ಮಂಡಳಿಗೆ ಬೆದರಿಕೆ ಹಾಕಿದ್ದಾರೆ.

ವಡೋದರದ ಕಲಾಲಿಯಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್, ಈ ಹಿಂದೆ ನಗರದ ದೇವಸ್ಥಾನಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿತ್ತು. ಈ ವಾರ ಮೌಲ್ಯ ಶಿಕ್ಷಣಕ್ಕಾಗಿ ಕ್ಷೇತ್ರ ಭೇಟಿಯ ಭಾಗವಾಗಿ ಶಿಶುವಿಹಾರದ ಮಕ್ಕಳನ್ನು ಮಸೀದಿಗೆ ಕರೆದೊಯ್ಯಲು ಯೋಜಿಸಿತ್ತು. ಆದರೆ, ಮಂಗಳವಾರ ಬಜರಂಗದಳದ ದುಷ್ಕರ್ಮಿಗಳು ಶಾಲಾ ಆವರಣಕ್ಕೆ ತೆರಳಿ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಇದರ ನಂತರ ಅವರು ಶಾಲೆಯ ಪ್ರಾಂಶುಪಾಲರನ್ನು ಭೇಟಿ ಮಾಡಿ, ಮಸೀದಿಗೆ ಕ್ಷೇತ್ರ ಪ್ರವಾಸವನ್ನು ರದ್ದುಗೊಳಿಸದಿದ್ದರೆ ಆಂದೋಲನ ನಡೆಸುವುದಾಗಿ ‘ಎಚ್ಚರಿಕೆ’ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಡೋದರಾದ ಬಜರಂಗದಳದ ಅಧ್ಯಕ್ಷ ಕೇತನ್ ತ್ರಿವೇದಿ, “ಮಸೀದಿಗೆ ಕ್ಷೇತ್ರ ಪ್ರವಾಸವನ್ನು ರದ್ದುಗೊಳಿಸಬೇಕು ಎಂದು ನಾವು ಶಾಲೆಯ ಪ್ರಾಂಶುಪಾಲರಿಗೆ ಹೇಳಿದ್ದೇವೆ…ಶಿಕ್ಷಣದೊಂದಿಗೆ ಧರ್ಮವನ್ನು ಬೆರೆಸುವ ಅಗತ್ಯವಿಲ್ಲ. ಅವರು ಚಿಕ್ಕ ಮಕ್ಕಳನ್ನು ಮಸೀದಿಗಳಿಗೆ ಕರೆದೊಯ್ಯುವ ಬದಲು ಪೂಜಾ ಸ್ಥಳಗಳನ್ನು ತೋರಿಸಲು ವರ್ಚುವಲ್ ತಂತ್ರಜ್ಞಾನವನ್ನು ಬಳಸಬಹುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಸೀದಿ-ಮಂದಿರ ವಿವಾದಗಳಲ್ಲಿ ನ್ಯಾಯಾಲಯಗಳು ಸಂವಿಧಾನಬದ್ಧವಾಗಿ ನಡೆದುಕೊಳ್ಳುತ್ತಿವೆಯೇ?

“ಧರ್ಮದ ಹೆಸರಿನಲ್ಲಿ ತನ್ನ ಶಾಲೆಗೆ ಕೆಟ್ಟ ಹೆಸರು ಬರಬಾರದು. ಇದನ್ನು ಪರಿಗಣಿಸುವ ಬಗ್ಗೆ ನಾವು ಪ್ರಾಂಶುಪಾಲರಿಗೆ ಬಿಟ್ಟಿದ್ದೇವೆ… ಈ ಬಗ್ಗೆ ಪೋಷಕರು ನಮಗೆ ದೂರಿಕೊಂಡಿದ್ದು, ಹೀಗಾಗಿ ನಾವು ಇಲ್ಲಿಗೆ ಬಂದಿದ್ದೇವೆ. ಅವರು ಮಕ್ಕಳನ್ನು ಮಸೀದಿಗೆ ಕರೆದೊಯ್ಯಬೇಕಾಗಿದ್ದ ಗೊತ್ತುಪಡಿಸಿದ ದಿನದಂದು ನಾವು ಮತ್ತೆ ಶಾಲೆಗೆ ಬರಲಿದ್ದು, ಒಂದು ವೇಳೆ ನಮ್ಮ ಎಚ್ಚರಿಕೆ ಪಾಲಿಸದಿದ್ದರೆ, ನಾವು ಆಂದೋಲನ ಪ್ರಾರಂಭಿಸುತ್ತೇವೆ” ಎಂದು ಹೇಳಿದ್ದಾರೆ.

ಶಾಲೆಯು ಕಳೆದ ವಾರ ಪೋಷಕರಿಗೆ ಒಪ್ಪಿಗೆ ಪತ್ರವನ್ನು ನೀಡಿ, ತಮ್ಮ ಮಗುವನ್ನು ನಗರದ ಮಸೀದಿಗೆ ಭೇಟಿ ನೀಡಲು ಸ್ವಯಂಪ್ರೇರಿತ ಅನುಮತಿಯನ್ನು ಕೋರಿತ್ತು. ಫೀಲ್ಡ್ ಟ್ರಿಪ್‌ಗೆ ತಮ್ಮ ಮಕ್ಕಳನ್ನು ಕಳುಹಿಸಲು ಬಯಸುವ ಎಲ್ಲಾ ಪೋಷಕರು ಒಪ್ಪಿಗೆಯಲ್ಲಿ ಫಾರ್ಮ್ ಅನ್ನು ಹಿಂತಿರುಗಿಸಿದ್ದಾರೆ ಎಂದು ಶಾಲೆ ತಿಳಿಸಿದೆ.

ಮಕ್ಕಳನ್ನು ಪ್ರವಾಸಕ್ಕೆ ಕಳುಹಿಸಬೇಕೆ ಅಥವಾ ಬೇಡವೆ ಎಂಬುದು ಪೋಷಕರ ಆಯ್ಕೆಯಾಗಿರುವುದರಿಂದ ಯಾವುದೇ ಪೋಷಕರಿಂದ ಯಾವುದೇ ದೂರು ಅಥವಾ ಆಕ್ಷೇಪಣೆ ಬಂದಿಲ್ಲ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ. ಶೈಕ್ಷಣಿಕ ವರ್ಷದಲ್ಲಿ ಮಕ್ಕಳಿಗಾಗಿ ಯೋಜಿಸಲಾದ ಕ್ಷೇತ್ರ ಭೇಟಿಗಳ ಪಟ್ಟಿಯನ್ನು ಶಾಲೆಯು ಎಲ್ಲಾ ಪೋಷಕರಿಗೆ ಮುಂಚಿತವಾಗಿ ಹಸ್ತಾಂತರಿಸಿದೆ. ಈ ಧಾರ್ಮಿಕ ಪೂಜಾ ಸ್ಥಳಗಳ ಭೇಟಿಯಲ್ಲಿ ಚರ್ಚ್‌ಗೆ ಭೇಟಿ ನೀಡುವುದು ಕೂಡಾ ಒಳಗೊಂಡಿದೆ. ಇತರ ಕ್ಷೇತ್ರ ಪ್ರವಾಸಗಳ ಅಂಗವಾಗಿ ಬ್ಯಾಂಕ್, ಬೇಕರಿ ಮತ್ತು ಕಿರಾಣಿ ಅಂಗಡಿಗೆ ಭೇಟಿ ನೀಡುತ್ತವೆ ಎಂದು ಶಾಲೆ ಹೇಳಿದೆ.

ಇದನ್ನೂ ಓದಿ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ; ಇತಿಹಾಸ ಏನು ಹೇಳುತ್ತದೆ?

“ನಮ್ಮ ಗುಂಪುಗಳಲ್ಲಿ ನಮಗೆ ತಿಳಿದಿರುವ ಬಹುತೇಕ ಎಲ್ಲಾ ಪೋಷಕರು ಒಪ್ಪಿಗೆಯ ನಮೂನೆಗಳಿಗೆ ಸ್ವಇಚ್ಛೆಯಿಂದ ಸಹಿ ಮಾಡಿದ್ದಾರೆ. ನಾವೆಲ್ಲರೂ ನಮ್ಮ ಮಕ್ಕಳು ಜಗತ್ತನ್ನು ಅನ್ವೇಷಿಸಲು ಮತ್ತು ಕಲಿಯಲು ಎದುರು ನೋಡುತ್ತಿದ್ದೇವೆ. ಪೂಜಾಸ್ಥಳದ ಭೇಟಿ ನೀಡುವ ಶಾಲೆಯ ಯೋಜನೆಯ ಬಗ್ಗೆ ಯಾವುದೇ ತಪ್ಪು ಇಲ್ಲ” ಎಂದು ಶಿಶುವಿಹಾರದ ವಿದ್ಯಾರ್ಥಿಯ ಪೋಷಕರೊಬ್ಬರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಈ ಹಿಂದೆ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಮಕ್ಕಳು ಸಂತೋಷಪಟ್ಟರು. ಅದೇ ರೀತಿ ಈ ಪ್ರವಾಸದಲ್ಲಿ ಅವರು ಇನ್ನೊಂದು ಪೂಜಾ ಸ್ಥಳದ ಬಗ್ಗೆ ತಿಳಿದುಕೊಳ್ಳಬಹುದು. ಇದು ತುಂಬಾ ನಿರಾಶಾದಾಯಕವಾಗಿದ್ದು, ಕೆಲವು ಫ್ರಿಂಜ್ ಗುಂಪುಗಳು ಪೋಷಕರು ಮತ್ತು ಶಾಲೆಯ ನಡುವೆ ಮಾತ್ರ ಇರಬೇಕಾದ ವಿಷಯಗಳ ಬಗ್ಗೆ ಪ್ರತಿಭಟಿಸುತ್ತಿವೆ” ಎಂದು ಅವರು ಹೇಳಿದ್ದಾರೆ.

ಶಿಶುವಿಹಾರದ ವಿದ್ಯಾರ್ಥಿಯ ಮತ್ತೊಬ್ಬ ಪೋಷಕರೊಬ್ಬರು, “ನನ್ನ ಮಗಳು ಈ ಪ್ರವಾಸಕ್ಕಾಗಿ ತುಂಬಾ ಉತ್ಸುಕಳಾಗಿದ್ದಳು. ನಾವು ಮಸೀದಿಯ ಬಗ್ಗೆ ಅವಳಿಗೆ ಹೇಳುತ್ತಿದ್ದೆವು. ಇದು ಕೇವಲ ಕ್ಷೇತ್ರ ಪ್ರವಾಸವಾಗಿದೆ ಮತ್ತು ಪೋಷಕರಾಗಿ ಅದನ್ನು ನಾವು ಬೆಂಬಲಿಸಿದ್ದೇವೆ. ಮಕ್ಕಳಿಗೆ ಸಾಮರಸ್ಯ ಮತ್ತು ಏಕತೆಯ ಮೌಲ್ಯಗಳನ್ನು ಕಲಿಸಲು ಶಾಲೆ ಪ್ರಯತ್ನಿಸುತ್ತಿದೆ. ಯಾವುದೇ ಚಟುವಟಿಕೆ ಅಥವಾ ಕ್ಷೇತ್ರ ಪ್ರವಾಸಕ್ಕೆ ಮಕ್ಕಳನ್ನು ಕಳುಹಿಸುವಂತೆ ಪೋಷಕರ ಮೇಲೆ ಯಾವುದೇ ಒತ್ತಡ ಇರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬುಲ್ಡೋಜರ್‌‌, ಹಿಜಾಬ್‌, ಬಾಬ್ರಿ ಮಸೀದಿ ಪ್ರಕರಣ: ಲಂಡನ್‌ನಲ್ಲಿ ಜಸ್ಟೀಸ್ ಚಂದ್ರಚೂಡ್‌ ಹೇಳಿದ್ದೇನು?

ಈ ಬಗ್ಗೆ ಶಾಲೆಯ ಪ್ರಿನ್ಸಿಪಾಲ್ ಎ.ಕೆ.ಸಿನ್ಹಾ ಅವರು ಮಾತನಾಡಿ, “ಪ್ರತಿಭಟನಾ ಗುಂಪಿನ ಕಾರ್ಯಕರ್ತರನ್ನು ಭೇಟಿಯಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆಯು ಶಾಲೆಯ ಪ್ರಮುಖ ಆದ್ಯತೆಯಾಗಿದೆ. ಈಗಿನಿಂದಲೆ ಆಗಸ್ಟ್ ತಿಂಗಳಲ್ಲಿ ಶಾಲೆಯು ಆಯೋಜಿಸಿದ ಎಲ್ಲಾ ಕ್ಷೇತ್ರ ಪ್ರವಾಸಗಳನ್ನು ರದ್ದುಗೊಳಿಸಲಾಗಿದೆ” ಎಂದು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...