Homeಮುಖಪುಟಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆ: ಮಸೀದಿ ವೀಕ್ಷಣೆ ಪ್ರವಾಸ ರದ್ದು ಮಾಡಿದ ಶಿಶುವಿಹಾರ

ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆ: ಮಸೀದಿ ವೀಕ್ಷಣೆ ಪ್ರವಾಸ ರದ್ದು ಮಾಡಿದ ಶಿಶುವಿಹಾರ

- Advertisement -
- Advertisement -

ಗುಜರಾತಿನ ವಡೋದರದ ಖಾಸಗಿ ಶಾಲೆಯು ಶಿಶುವಿಹಾರದ ಮಕ್ಕಳಿಗೆ ನಗರದ ಮಸೀದಿಗೆ ಪ್ರವಾಸವನ್ನು ಯೋಜಿಸಿತ್ತು. ಆದರೆ ಬಿಜೆಪಿ ಬೆಂಬಲಿತ ಭಜರಂಗದಳದ ದುಷ್ಕರ್ಮಿಗಳ ಪ್ರತಿಭಟನೆಯ ಕಾರಣಕ್ಕೆ ಈ ಪ್ರವಾಸವನ್ನು ಮಂಗಳವಾರ ರದ್ದುಗೊಳಿಸಲಾಗಿದೆ. ಮಸೀದಿ ಪ್ರವಾಸದ ಬಗ್ಗೆ ಪೋಷಕರು “ದೂರು ನೀಡಿದ್ದಾರೆ” ಎಂದು ಪ್ರತಿಪಾದಿಸಿರುವ ಬಜರಂಗದಳದ ದುಷ್ಕರ್ಮಿಗಳು ಶಾಲೆಗೆ ತೆರಳಿ ಮಕ್ಕಳನ್ನು ಮಸೀದಿಗೆ ಕರೆದೊಯ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಶಾಲಾ ಆಡಳಿತ ಮಂಡಳಿಗೆ ಬೆದರಿಕೆ ಹಾಕಿದ್ದಾರೆ.

ವಡೋದರದ ಕಲಾಲಿಯಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್, ಈ ಹಿಂದೆ ನಗರದ ದೇವಸ್ಥಾನಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿತ್ತು. ಈ ವಾರ ಮೌಲ್ಯ ಶಿಕ್ಷಣಕ್ಕಾಗಿ ಕ್ಷೇತ್ರ ಭೇಟಿಯ ಭಾಗವಾಗಿ ಶಿಶುವಿಹಾರದ ಮಕ್ಕಳನ್ನು ಮಸೀದಿಗೆ ಕರೆದೊಯ್ಯಲು ಯೋಜಿಸಿತ್ತು. ಆದರೆ, ಮಂಗಳವಾರ ಬಜರಂಗದಳದ ದುಷ್ಕರ್ಮಿಗಳು ಶಾಲಾ ಆವರಣಕ್ಕೆ ತೆರಳಿ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಇದರ ನಂತರ ಅವರು ಶಾಲೆಯ ಪ್ರಾಂಶುಪಾಲರನ್ನು ಭೇಟಿ ಮಾಡಿ, ಮಸೀದಿಗೆ ಕ್ಷೇತ್ರ ಪ್ರವಾಸವನ್ನು ರದ್ದುಗೊಳಿಸದಿದ್ದರೆ ಆಂದೋಲನ ನಡೆಸುವುದಾಗಿ ‘ಎಚ್ಚರಿಕೆ’ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಡೋದರಾದ ಬಜರಂಗದಳದ ಅಧ್ಯಕ್ಷ ಕೇತನ್ ತ್ರಿವೇದಿ, “ಮಸೀದಿಗೆ ಕ್ಷೇತ್ರ ಪ್ರವಾಸವನ್ನು ರದ್ದುಗೊಳಿಸಬೇಕು ಎಂದು ನಾವು ಶಾಲೆಯ ಪ್ರಾಂಶುಪಾಲರಿಗೆ ಹೇಳಿದ್ದೇವೆ…ಶಿಕ್ಷಣದೊಂದಿಗೆ ಧರ್ಮವನ್ನು ಬೆರೆಸುವ ಅಗತ್ಯವಿಲ್ಲ. ಅವರು ಚಿಕ್ಕ ಮಕ್ಕಳನ್ನು ಮಸೀದಿಗಳಿಗೆ ಕರೆದೊಯ್ಯುವ ಬದಲು ಪೂಜಾ ಸ್ಥಳಗಳನ್ನು ತೋರಿಸಲು ವರ್ಚುವಲ್ ತಂತ್ರಜ್ಞಾನವನ್ನು ಬಳಸಬಹುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಸೀದಿ-ಮಂದಿರ ವಿವಾದಗಳಲ್ಲಿ ನ್ಯಾಯಾಲಯಗಳು ಸಂವಿಧಾನಬದ್ಧವಾಗಿ ನಡೆದುಕೊಳ್ಳುತ್ತಿವೆಯೇ?

“ಧರ್ಮದ ಹೆಸರಿನಲ್ಲಿ ತನ್ನ ಶಾಲೆಗೆ ಕೆಟ್ಟ ಹೆಸರು ಬರಬಾರದು. ಇದನ್ನು ಪರಿಗಣಿಸುವ ಬಗ್ಗೆ ನಾವು ಪ್ರಾಂಶುಪಾಲರಿಗೆ ಬಿಟ್ಟಿದ್ದೇವೆ… ಈ ಬಗ್ಗೆ ಪೋಷಕರು ನಮಗೆ ದೂರಿಕೊಂಡಿದ್ದು, ಹೀಗಾಗಿ ನಾವು ಇಲ್ಲಿಗೆ ಬಂದಿದ್ದೇವೆ. ಅವರು ಮಕ್ಕಳನ್ನು ಮಸೀದಿಗೆ ಕರೆದೊಯ್ಯಬೇಕಾಗಿದ್ದ ಗೊತ್ತುಪಡಿಸಿದ ದಿನದಂದು ನಾವು ಮತ್ತೆ ಶಾಲೆಗೆ ಬರಲಿದ್ದು, ಒಂದು ವೇಳೆ ನಮ್ಮ ಎಚ್ಚರಿಕೆ ಪಾಲಿಸದಿದ್ದರೆ, ನಾವು ಆಂದೋಲನ ಪ್ರಾರಂಭಿಸುತ್ತೇವೆ” ಎಂದು ಹೇಳಿದ್ದಾರೆ.

ಶಾಲೆಯು ಕಳೆದ ವಾರ ಪೋಷಕರಿಗೆ ಒಪ್ಪಿಗೆ ಪತ್ರವನ್ನು ನೀಡಿ, ತಮ್ಮ ಮಗುವನ್ನು ನಗರದ ಮಸೀದಿಗೆ ಭೇಟಿ ನೀಡಲು ಸ್ವಯಂಪ್ರೇರಿತ ಅನುಮತಿಯನ್ನು ಕೋರಿತ್ತು. ಫೀಲ್ಡ್ ಟ್ರಿಪ್‌ಗೆ ತಮ್ಮ ಮಕ್ಕಳನ್ನು ಕಳುಹಿಸಲು ಬಯಸುವ ಎಲ್ಲಾ ಪೋಷಕರು ಒಪ್ಪಿಗೆಯಲ್ಲಿ ಫಾರ್ಮ್ ಅನ್ನು ಹಿಂತಿರುಗಿಸಿದ್ದಾರೆ ಎಂದು ಶಾಲೆ ತಿಳಿಸಿದೆ.

ಮಕ್ಕಳನ್ನು ಪ್ರವಾಸಕ್ಕೆ ಕಳುಹಿಸಬೇಕೆ ಅಥವಾ ಬೇಡವೆ ಎಂಬುದು ಪೋಷಕರ ಆಯ್ಕೆಯಾಗಿರುವುದರಿಂದ ಯಾವುದೇ ಪೋಷಕರಿಂದ ಯಾವುದೇ ದೂರು ಅಥವಾ ಆಕ್ಷೇಪಣೆ ಬಂದಿಲ್ಲ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ. ಶೈಕ್ಷಣಿಕ ವರ್ಷದಲ್ಲಿ ಮಕ್ಕಳಿಗಾಗಿ ಯೋಜಿಸಲಾದ ಕ್ಷೇತ್ರ ಭೇಟಿಗಳ ಪಟ್ಟಿಯನ್ನು ಶಾಲೆಯು ಎಲ್ಲಾ ಪೋಷಕರಿಗೆ ಮುಂಚಿತವಾಗಿ ಹಸ್ತಾಂತರಿಸಿದೆ. ಈ ಧಾರ್ಮಿಕ ಪೂಜಾ ಸ್ಥಳಗಳ ಭೇಟಿಯಲ್ಲಿ ಚರ್ಚ್‌ಗೆ ಭೇಟಿ ನೀಡುವುದು ಕೂಡಾ ಒಳಗೊಂಡಿದೆ. ಇತರ ಕ್ಷೇತ್ರ ಪ್ರವಾಸಗಳ ಅಂಗವಾಗಿ ಬ್ಯಾಂಕ್, ಬೇಕರಿ ಮತ್ತು ಕಿರಾಣಿ ಅಂಗಡಿಗೆ ಭೇಟಿ ನೀಡುತ್ತವೆ ಎಂದು ಶಾಲೆ ಹೇಳಿದೆ.

ಇದನ್ನೂ ಓದಿ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ; ಇತಿಹಾಸ ಏನು ಹೇಳುತ್ತದೆ?

“ನಮ್ಮ ಗುಂಪುಗಳಲ್ಲಿ ನಮಗೆ ತಿಳಿದಿರುವ ಬಹುತೇಕ ಎಲ್ಲಾ ಪೋಷಕರು ಒಪ್ಪಿಗೆಯ ನಮೂನೆಗಳಿಗೆ ಸ್ವಇಚ್ಛೆಯಿಂದ ಸಹಿ ಮಾಡಿದ್ದಾರೆ. ನಾವೆಲ್ಲರೂ ನಮ್ಮ ಮಕ್ಕಳು ಜಗತ್ತನ್ನು ಅನ್ವೇಷಿಸಲು ಮತ್ತು ಕಲಿಯಲು ಎದುರು ನೋಡುತ್ತಿದ್ದೇವೆ. ಪೂಜಾಸ್ಥಳದ ಭೇಟಿ ನೀಡುವ ಶಾಲೆಯ ಯೋಜನೆಯ ಬಗ್ಗೆ ಯಾವುದೇ ತಪ್ಪು ಇಲ್ಲ” ಎಂದು ಶಿಶುವಿಹಾರದ ವಿದ್ಯಾರ್ಥಿಯ ಪೋಷಕರೊಬ್ಬರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಈ ಹಿಂದೆ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಮಕ್ಕಳು ಸಂತೋಷಪಟ್ಟರು. ಅದೇ ರೀತಿ ಈ ಪ್ರವಾಸದಲ್ಲಿ ಅವರು ಇನ್ನೊಂದು ಪೂಜಾ ಸ್ಥಳದ ಬಗ್ಗೆ ತಿಳಿದುಕೊಳ್ಳಬಹುದು. ಇದು ತುಂಬಾ ನಿರಾಶಾದಾಯಕವಾಗಿದ್ದು, ಕೆಲವು ಫ್ರಿಂಜ್ ಗುಂಪುಗಳು ಪೋಷಕರು ಮತ್ತು ಶಾಲೆಯ ನಡುವೆ ಮಾತ್ರ ಇರಬೇಕಾದ ವಿಷಯಗಳ ಬಗ್ಗೆ ಪ್ರತಿಭಟಿಸುತ್ತಿವೆ” ಎಂದು ಅವರು ಹೇಳಿದ್ದಾರೆ.

ಶಿಶುವಿಹಾರದ ವಿದ್ಯಾರ್ಥಿಯ ಮತ್ತೊಬ್ಬ ಪೋಷಕರೊಬ್ಬರು, “ನನ್ನ ಮಗಳು ಈ ಪ್ರವಾಸಕ್ಕಾಗಿ ತುಂಬಾ ಉತ್ಸುಕಳಾಗಿದ್ದಳು. ನಾವು ಮಸೀದಿಯ ಬಗ್ಗೆ ಅವಳಿಗೆ ಹೇಳುತ್ತಿದ್ದೆವು. ಇದು ಕೇವಲ ಕ್ಷೇತ್ರ ಪ್ರವಾಸವಾಗಿದೆ ಮತ್ತು ಪೋಷಕರಾಗಿ ಅದನ್ನು ನಾವು ಬೆಂಬಲಿಸಿದ್ದೇವೆ. ಮಕ್ಕಳಿಗೆ ಸಾಮರಸ್ಯ ಮತ್ತು ಏಕತೆಯ ಮೌಲ್ಯಗಳನ್ನು ಕಲಿಸಲು ಶಾಲೆ ಪ್ರಯತ್ನಿಸುತ್ತಿದೆ. ಯಾವುದೇ ಚಟುವಟಿಕೆ ಅಥವಾ ಕ್ಷೇತ್ರ ಪ್ರವಾಸಕ್ಕೆ ಮಕ್ಕಳನ್ನು ಕಳುಹಿಸುವಂತೆ ಪೋಷಕರ ಮೇಲೆ ಯಾವುದೇ ಒತ್ತಡ ಇರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬುಲ್ಡೋಜರ್‌‌, ಹಿಜಾಬ್‌, ಬಾಬ್ರಿ ಮಸೀದಿ ಪ್ರಕರಣ: ಲಂಡನ್‌ನಲ್ಲಿ ಜಸ್ಟೀಸ್ ಚಂದ್ರಚೂಡ್‌ ಹೇಳಿದ್ದೇನು?

ಈ ಬಗ್ಗೆ ಶಾಲೆಯ ಪ್ರಿನ್ಸಿಪಾಲ್ ಎ.ಕೆ.ಸಿನ್ಹಾ ಅವರು ಮಾತನಾಡಿ, “ಪ್ರತಿಭಟನಾ ಗುಂಪಿನ ಕಾರ್ಯಕರ್ತರನ್ನು ಭೇಟಿಯಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆಯು ಶಾಲೆಯ ಪ್ರಮುಖ ಆದ್ಯತೆಯಾಗಿದೆ. ಈಗಿನಿಂದಲೆ ಆಗಸ್ಟ್ ತಿಂಗಳಲ್ಲಿ ಶಾಲೆಯು ಆಯೋಜಿಸಿದ ಎಲ್ಲಾ ಕ್ಷೇತ್ರ ಪ್ರವಾಸಗಳನ್ನು ರದ್ದುಗೊಳಿಸಲಾಗಿದೆ” ಎಂದು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...