Homeಮುಖಪುಟಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆ: ಮಸೀದಿ ವೀಕ್ಷಣೆ ಪ್ರವಾಸ ರದ್ದು ಮಾಡಿದ ಶಿಶುವಿಹಾರ

ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆ: ಮಸೀದಿ ವೀಕ್ಷಣೆ ಪ್ರವಾಸ ರದ್ದು ಮಾಡಿದ ಶಿಶುವಿಹಾರ

- Advertisement -
- Advertisement -

ಗುಜರಾತಿನ ವಡೋದರದ ಖಾಸಗಿ ಶಾಲೆಯು ಶಿಶುವಿಹಾರದ ಮಕ್ಕಳಿಗೆ ನಗರದ ಮಸೀದಿಗೆ ಪ್ರವಾಸವನ್ನು ಯೋಜಿಸಿತ್ತು. ಆದರೆ ಬಿಜೆಪಿ ಬೆಂಬಲಿತ ಭಜರಂಗದಳದ ದುಷ್ಕರ್ಮಿಗಳ ಪ್ರತಿಭಟನೆಯ ಕಾರಣಕ್ಕೆ ಈ ಪ್ರವಾಸವನ್ನು ಮಂಗಳವಾರ ರದ್ದುಗೊಳಿಸಲಾಗಿದೆ. ಮಸೀದಿ ಪ್ರವಾಸದ ಬಗ್ಗೆ ಪೋಷಕರು “ದೂರು ನೀಡಿದ್ದಾರೆ” ಎಂದು ಪ್ರತಿಪಾದಿಸಿರುವ ಬಜರಂಗದಳದ ದುಷ್ಕರ್ಮಿಗಳು ಶಾಲೆಗೆ ತೆರಳಿ ಮಕ್ಕಳನ್ನು ಮಸೀದಿಗೆ ಕರೆದೊಯ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಶಾಲಾ ಆಡಳಿತ ಮಂಡಳಿಗೆ ಬೆದರಿಕೆ ಹಾಕಿದ್ದಾರೆ.

ವಡೋದರದ ಕಲಾಲಿಯಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್, ಈ ಹಿಂದೆ ನಗರದ ದೇವಸ್ಥಾನಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿತ್ತು. ಈ ವಾರ ಮೌಲ್ಯ ಶಿಕ್ಷಣಕ್ಕಾಗಿ ಕ್ಷೇತ್ರ ಭೇಟಿಯ ಭಾಗವಾಗಿ ಶಿಶುವಿಹಾರದ ಮಕ್ಕಳನ್ನು ಮಸೀದಿಗೆ ಕರೆದೊಯ್ಯಲು ಯೋಜಿಸಿತ್ತು. ಆದರೆ, ಮಂಗಳವಾರ ಬಜರಂಗದಳದ ದುಷ್ಕರ್ಮಿಗಳು ಶಾಲಾ ಆವರಣಕ್ಕೆ ತೆರಳಿ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಇದರ ನಂತರ ಅವರು ಶಾಲೆಯ ಪ್ರಾಂಶುಪಾಲರನ್ನು ಭೇಟಿ ಮಾಡಿ, ಮಸೀದಿಗೆ ಕ್ಷೇತ್ರ ಪ್ರವಾಸವನ್ನು ರದ್ದುಗೊಳಿಸದಿದ್ದರೆ ಆಂದೋಲನ ನಡೆಸುವುದಾಗಿ ‘ಎಚ್ಚರಿಕೆ’ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಡೋದರಾದ ಬಜರಂಗದಳದ ಅಧ್ಯಕ್ಷ ಕೇತನ್ ತ್ರಿವೇದಿ, “ಮಸೀದಿಗೆ ಕ್ಷೇತ್ರ ಪ್ರವಾಸವನ್ನು ರದ್ದುಗೊಳಿಸಬೇಕು ಎಂದು ನಾವು ಶಾಲೆಯ ಪ್ರಾಂಶುಪಾಲರಿಗೆ ಹೇಳಿದ್ದೇವೆ…ಶಿಕ್ಷಣದೊಂದಿಗೆ ಧರ್ಮವನ್ನು ಬೆರೆಸುವ ಅಗತ್ಯವಿಲ್ಲ. ಅವರು ಚಿಕ್ಕ ಮಕ್ಕಳನ್ನು ಮಸೀದಿಗಳಿಗೆ ಕರೆದೊಯ್ಯುವ ಬದಲು ಪೂಜಾ ಸ್ಥಳಗಳನ್ನು ತೋರಿಸಲು ವರ್ಚುವಲ್ ತಂತ್ರಜ್ಞಾನವನ್ನು ಬಳಸಬಹುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಸೀದಿ-ಮಂದಿರ ವಿವಾದಗಳಲ್ಲಿ ನ್ಯಾಯಾಲಯಗಳು ಸಂವಿಧಾನಬದ್ಧವಾಗಿ ನಡೆದುಕೊಳ್ಳುತ್ತಿವೆಯೇ?

“ಧರ್ಮದ ಹೆಸರಿನಲ್ಲಿ ತನ್ನ ಶಾಲೆಗೆ ಕೆಟ್ಟ ಹೆಸರು ಬರಬಾರದು. ಇದನ್ನು ಪರಿಗಣಿಸುವ ಬಗ್ಗೆ ನಾವು ಪ್ರಾಂಶುಪಾಲರಿಗೆ ಬಿಟ್ಟಿದ್ದೇವೆ… ಈ ಬಗ್ಗೆ ಪೋಷಕರು ನಮಗೆ ದೂರಿಕೊಂಡಿದ್ದು, ಹೀಗಾಗಿ ನಾವು ಇಲ್ಲಿಗೆ ಬಂದಿದ್ದೇವೆ. ಅವರು ಮಕ್ಕಳನ್ನು ಮಸೀದಿಗೆ ಕರೆದೊಯ್ಯಬೇಕಾಗಿದ್ದ ಗೊತ್ತುಪಡಿಸಿದ ದಿನದಂದು ನಾವು ಮತ್ತೆ ಶಾಲೆಗೆ ಬರಲಿದ್ದು, ಒಂದು ವೇಳೆ ನಮ್ಮ ಎಚ್ಚರಿಕೆ ಪಾಲಿಸದಿದ್ದರೆ, ನಾವು ಆಂದೋಲನ ಪ್ರಾರಂಭಿಸುತ್ತೇವೆ” ಎಂದು ಹೇಳಿದ್ದಾರೆ.

ಶಾಲೆಯು ಕಳೆದ ವಾರ ಪೋಷಕರಿಗೆ ಒಪ್ಪಿಗೆ ಪತ್ರವನ್ನು ನೀಡಿ, ತಮ್ಮ ಮಗುವನ್ನು ನಗರದ ಮಸೀದಿಗೆ ಭೇಟಿ ನೀಡಲು ಸ್ವಯಂಪ್ರೇರಿತ ಅನುಮತಿಯನ್ನು ಕೋರಿತ್ತು. ಫೀಲ್ಡ್ ಟ್ರಿಪ್‌ಗೆ ತಮ್ಮ ಮಕ್ಕಳನ್ನು ಕಳುಹಿಸಲು ಬಯಸುವ ಎಲ್ಲಾ ಪೋಷಕರು ಒಪ್ಪಿಗೆಯಲ್ಲಿ ಫಾರ್ಮ್ ಅನ್ನು ಹಿಂತಿರುಗಿಸಿದ್ದಾರೆ ಎಂದು ಶಾಲೆ ತಿಳಿಸಿದೆ.

ಮಕ್ಕಳನ್ನು ಪ್ರವಾಸಕ್ಕೆ ಕಳುಹಿಸಬೇಕೆ ಅಥವಾ ಬೇಡವೆ ಎಂಬುದು ಪೋಷಕರ ಆಯ್ಕೆಯಾಗಿರುವುದರಿಂದ ಯಾವುದೇ ಪೋಷಕರಿಂದ ಯಾವುದೇ ದೂರು ಅಥವಾ ಆಕ್ಷೇಪಣೆ ಬಂದಿಲ್ಲ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ. ಶೈಕ್ಷಣಿಕ ವರ್ಷದಲ್ಲಿ ಮಕ್ಕಳಿಗಾಗಿ ಯೋಜಿಸಲಾದ ಕ್ಷೇತ್ರ ಭೇಟಿಗಳ ಪಟ್ಟಿಯನ್ನು ಶಾಲೆಯು ಎಲ್ಲಾ ಪೋಷಕರಿಗೆ ಮುಂಚಿತವಾಗಿ ಹಸ್ತಾಂತರಿಸಿದೆ. ಈ ಧಾರ್ಮಿಕ ಪೂಜಾ ಸ್ಥಳಗಳ ಭೇಟಿಯಲ್ಲಿ ಚರ್ಚ್‌ಗೆ ಭೇಟಿ ನೀಡುವುದು ಕೂಡಾ ಒಳಗೊಂಡಿದೆ. ಇತರ ಕ್ಷೇತ್ರ ಪ್ರವಾಸಗಳ ಅಂಗವಾಗಿ ಬ್ಯಾಂಕ್, ಬೇಕರಿ ಮತ್ತು ಕಿರಾಣಿ ಅಂಗಡಿಗೆ ಭೇಟಿ ನೀಡುತ್ತವೆ ಎಂದು ಶಾಲೆ ಹೇಳಿದೆ.

ಇದನ್ನೂ ಓದಿ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ; ಇತಿಹಾಸ ಏನು ಹೇಳುತ್ತದೆ?

“ನಮ್ಮ ಗುಂಪುಗಳಲ್ಲಿ ನಮಗೆ ತಿಳಿದಿರುವ ಬಹುತೇಕ ಎಲ್ಲಾ ಪೋಷಕರು ಒಪ್ಪಿಗೆಯ ನಮೂನೆಗಳಿಗೆ ಸ್ವಇಚ್ಛೆಯಿಂದ ಸಹಿ ಮಾಡಿದ್ದಾರೆ. ನಾವೆಲ್ಲರೂ ನಮ್ಮ ಮಕ್ಕಳು ಜಗತ್ತನ್ನು ಅನ್ವೇಷಿಸಲು ಮತ್ತು ಕಲಿಯಲು ಎದುರು ನೋಡುತ್ತಿದ್ದೇವೆ. ಪೂಜಾಸ್ಥಳದ ಭೇಟಿ ನೀಡುವ ಶಾಲೆಯ ಯೋಜನೆಯ ಬಗ್ಗೆ ಯಾವುದೇ ತಪ್ಪು ಇಲ್ಲ” ಎಂದು ಶಿಶುವಿಹಾರದ ವಿದ್ಯಾರ್ಥಿಯ ಪೋಷಕರೊಬ್ಬರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಈ ಹಿಂದೆ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಮಕ್ಕಳು ಸಂತೋಷಪಟ್ಟರು. ಅದೇ ರೀತಿ ಈ ಪ್ರವಾಸದಲ್ಲಿ ಅವರು ಇನ್ನೊಂದು ಪೂಜಾ ಸ್ಥಳದ ಬಗ್ಗೆ ತಿಳಿದುಕೊಳ್ಳಬಹುದು. ಇದು ತುಂಬಾ ನಿರಾಶಾದಾಯಕವಾಗಿದ್ದು, ಕೆಲವು ಫ್ರಿಂಜ್ ಗುಂಪುಗಳು ಪೋಷಕರು ಮತ್ತು ಶಾಲೆಯ ನಡುವೆ ಮಾತ್ರ ಇರಬೇಕಾದ ವಿಷಯಗಳ ಬಗ್ಗೆ ಪ್ರತಿಭಟಿಸುತ್ತಿವೆ” ಎಂದು ಅವರು ಹೇಳಿದ್ದಾರೆ.

ಶಿಶುವಿಹಾರದ ವಿದ್ಯಾರ್ಥಿಯ ಮತ್ತೊಬ್ಬ ಪೋಷಕರೊಬ್ಬರು, “ನನ್ನ ಮಗಳು ಈ ಪ್ರವಾಸಕ್ಕಾಗಿ ತುಂಬಾ ಉತ್ಸುಕಳಾಗಿದ್ದಳು. ನಾವು ಮಸೀದಿಯ ಬಗ್ಗೆ ಅವಳಿಗೆ ಹೇಳುತ್ತಿದ್ದೆವು. ಇದು ಕೇವಲ ಕ್ಷೇತ್ರ ಪ್ರವಾಸವಾಗಿದೆ ಮತ್ತು ಪೋಷಕರಾಗಿ ಅದನ್ನು ನಾವು ಬೆಂಬಲಿಸಿದ್ದೇವೆ. ಮಕ್ಕಳಿಗೆ ಸಾಮರಸ್ಯ ಮತ್ತು ಏಕತೆಯ ಮೌಲ್ಯಗಳನ್ನು ಕಲಿಸಲು ಶಾಲೆ ಪ್ರಯತ್ನಿಸುತ್ತಿದೆ. ಯಾವುದೇ ಚಟುವಟಿಕೆ ಅಥವಾ ಕ್ಷೇತ್ರ ಪ್ರವಾಸಕ್ಕೆ ಮಕ್ಕಳನ್ನು ಕಳುಹಿಸುವಂತೆ ಪೋಷಕರ ಮೇಲೆ ಯಾವುದೇ ಒತ್ತಡ ಇರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬುಲ್ಡೋಜರ್‌‌, ಹಿಜಾಬ್‌, ಬಾಬ್ರಿ ಮಸೀದಿ ಪ್ರಕರಣ: ಲಂಡನ್‌ನಲ್ಲಿ ಜಸ್ಟೀಸ್ ಚಂದ್ರಚೂಡ್‌ ಹೇಳಿದ್ದೇನು?

ಈ ಬಗ್ಗೆ ಶಾಲೆಯ ಪ್ರಿನ್ಸಿಪಾಲ್ ಎ.ಕೆ.ಸಿನ್ಹಾ ಅವರು ಮಾತನಾಡಿ, “ಪ್ರತಿಭಟನಾ ಗುಂಪಿನ ಕಾರ್ಯಕರ್ತರನ್ನು ಭೇಟಿಯಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆಯು ಶಾಲೆಯ ಪ್ರಮುಖ ಆದ್ಯತೆಯಾಗಿದೆ. ಈಗಿನಿಂದಲೆ ಆಗಸ್ಟ್ ತಿಂಗಳಲ್ಲಿ ಶಾಲೆಯು ಆಯೋಜಿಸಿದ ಎಲ್ಲಾ ಕ್ಷೇತ್ರ ಪ್ರವಾಸಗಳನ್ನು ರದ್ದುಗೊಳಿಸಲಾಗಿದೆ” ಎಂದು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...