Homeಮುಖಪುಟಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆ: ಮಸೀದಿ ವೀಕ್ಷಣೆ ಪ್ರವಾಸ ರದ್ದು ಮಾಡಿದ ಶಿಶುವಿಹಾರ

ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆ: ಮಸೀದಿ ವೀಕ್ಷಣೆ ಪ್ರವಾಸ ರದ್ದು ಮಾಡಿದ ಶಿಶುವಿಹಾರ

- Advertisement -
- Advertisement -

ಗುಜರಾತಿನ ವಡೋದರದ ಖಾಸಗಿ ಶಾಲೆಯು ಶಿಶುವಿಹಾರದ ಮಕ್ಕಳಿಗೆ ನಗರದ ಮಸೀದಿಗೆ ಪ್ರವಾಸವನ್ನು ಯೋಜಿಸಿತ್ತು. ಆದರೆ ಬಿಜೆಪಿ ಬೆಂಬಲಿತ ಭಜರಂಗದಳದ ದುಷ್ಕರ್ಮಿಗಳ ಪ್ರತಿಭಟನೆಯ ಕಾರಣಕ್ಕೆ ಈ ಪ್ರವಾಸವನ್ನು ಮಂಗಳವಾರ ರದ್ದುಗೊಳಿಸಲಾಗಿದೆ. ಮಸೀದಿ ಪ್ರವಾಸದ ಬಗ್ಗೆ ಪೋಷಕರು “ದೂರು ನೀಡಿದ್ದಾರೆ” ಎಂದು ಪ್ರತಿಪಾದಿಸಿರುವ ಬಜರಂಗದಳದ ದುಷ್ಕರ್ಮಿಗಳು ಶಾಲೆಗೆ ತೆರಳಿ ಮಕ್ಕಳನ್ನು ಮಸೀದಿಗೆ ಕರೆದೊಯ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಶಾಲಾ ಆಡಳಿತ ಮಂಡಳಿಗೆ ಬೆದರಿಕೆ ಹಾಕಿದ್ದಾರೆ.

ವಡೋದರದ ಕಲಾಲಿಯಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್, ಈ ಹಿಂದೆ ನಗರದ ದೇವಸ್ಥಾನಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿತ್ತು. ಈ ವಾರ ಮೌಲ್ಯ ಶಿಕ್ಷಣಕ್ಕಾಗಿ ಕ್ಷೇತ್ರ ಭೇಟಿಯ ಭಾಗವಾಗಿ ಶಿಶುವಿಹಾರದ ಮಕ್ಕಳನ್ನು ಮಸೀದಿಗೆ ಕರೆದೊಯ್ಯಲು ಯೋಜಿಸಿತ್ತು. ಆದರೆ, ಮಂಗಳವಾರ ಬಜರಂಗದಳದ ದುಷ್ಕರ್ಮಿಗಳು ಶಾಲಾ ಆವರಣಕ್ಕೆ ತೆರಳಿ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಇದರ ನಂತರ ಅವರು ಶಾಲೆಯ ಪ್ರಾಂಶುಪಾಲರನ್ನು ಭೇಟಿ ಮಾಡಿ, ಮಸೀದಿಗೆ ಕ್ಷೇತ್ರ ಪ್ರವಾಸವನ್ನು ರದ್ದುಗೊಳಿಸದಿದ್ದರೆ ಆಂದೋಲನ ನಡೆಸುವುದಾಗಿ ‘ಎಚ್ಚರಿಕೆ’ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಡೋದರಾದ ಬಜರಂಗದಳದ ಅಧ್ಯಕ್ಷ ಕೇತನ್ ತ್ರಿವೇದಿ, “ಮಸೀದಿಗೆ ಕ್ಷೇತ್ರ ಪ್ರವಾಸವನ್ನು ರದ್ದುಗೊಳಿಸಬೇಕು ಎಂದು ನಾವು ಶಾಲೆಯ ಪ್ರಾಂಶುಪಾಲರಿಗೆ ಹೇಳಿದ್ದೇವೆ…ಶಿಕ್ಷಣದೊಂದಿಗೆ ಧರ್ಮವನ್ನು ಬೆರೆಸುವ ಅಗತ್ಯವಿಲ್ಲ. ಅವರು ಚಿಕ್ಕ ಮಕ್ಕಳನ್ನು ಮಸೀದಿಗಳಿಗೆ ಕರೆದೊಯ್ಯುವ ಬದಲು ಪೂಜಾ ಸ್ಥಳಗಳನ್ನು ತೋರಿಸಲು ವರ್ಚುವಲ್ ತಂತ್ರಜ್ಞಾನವನ್ನು ಬಳಸಬಹುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಸೀದಿ-ಮಂದಿರ ವಿವಾದಗಳಲ್ಲಿ ನ್ಯಾಯಾಲಯಗಳು ಸಂವಿಧಾನಬದ್ಧವಾಗಿ ನಡೆದುಕೊಳ್ಳುತ್ತಿವೆಯೇ?

“ಧರ್ಮದ ಹೆಸರಿನಲ್ಲಿ ತನ್ನ ಶಾಲೆಗೆ ಕೆಟ್ಟ ಹೆಸರು ಬರಬಾರದು. ಇದನ್ನು ಪರಿಗಣಿಸುವ ಬಗ್ಗೆ ನಾವು ಪ್ರಾಂಶುಪಾಲರಿಗೆ ಬಿಟ್ಟಿದ್ದೇವೆ… ಈ ಬಗ್ಗೆ ಪೋಷಕರು ನಮಗೆ ದೂರಿಕೊಂಡಿದ್ದು, ಹೀಗಾಗಿ ನಾವು ಇಲ್ಲಿಗೆ ಬಂದಿದ್ದೇವೆ. ಅವರು ಮಕ್ಕಳನ್ನು ಮಸೀದಿಗೆ ಕರೆದೊಯ್ಯಬೇಕಾಗಿದ್ದ ಗೊತ್ತುಪಡಿಸಿದ ದಿನದಂದು ನಾವು ಮತ್ತೆ ಶಾಲೆಗೆ ಬರಲಿದ್ದು, ಒಂದು ವೇಳೆ ನಮ್ಮ ಎಚ್ಚರಿಕೆ ಪಾಲಿಸದಿದ್ದರೆ, ನಾವು ಆಂದೋಲನ ಪ್ರಾರಂಭಿಸುತ್ತೇವೆ” ಎಂದು ಹೇಳಿದ್ದಾರೆ.

ಶಾಲೆಯು ಕಳೆದ ವಾರ ಪೋಷಕರಿಗೆ ಒಪ್ಪಿಗೆ ಪತ್ರವನ್ನು ನೀಡಿ, ತಮ್ಮ ಮಗುವನ್ನು ನಗರದ ಮಸೀದಿಗೆ ಭೇಟಿ ನೀಡಲು ಸ್ವಯಂಪ್ರೇರಿತ ಅನುಮತಿಯನ್ನು ಕೋರಿತ್ತು. ಫೀಲ್ಡ್ ಟ್ರಿಪ್‌ಗೆ ತಮ್ಮ ಮಕ್ಕಳನ್ನು ಕಳುಹಿಸಲು ಬಯಸುವ ಎಲ್ಲಾ ಪೋಷಕರು ಒಪ್ಪಿಗೆಯಲ್ಲಿ ಫಾರ್ಮ್ ಅನ್ನು ಹಿಂತಿರುಗಿಸಿದ್ದಾರೆ ಎಂದು ಶಾಲೆ ತಿಳಿಸಿದೆ.

ಮಕ್ಕಳನ್ನು ಪ್ರವಾಸಕ್ಕೆ ಕಳುಹಿಸಬೇಕೆ ಅಥವಾ ಬೇಡವೆ ಎಂಬುದು ಪೋಷಕರ ಆಯ್ಕೆಯಾಗಿರುವುದರಿಂದ ಯಾವುದೇ ಪೋಷಕರಿಂದ ಯಾವುದೇ ದೂರು ಅಥವಾ ಆಕ್ಷೇಪಣೆ ಬಂದಿಲ್ಲ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ. ಶೈಕ್ಷಣಿಕ ವರ್ಷದಲ್ಲಿ ಮಕ್ಕಳಿಗಾಗಿ ಯೋಜಿಸಲಾದ ಕ್ಷೇತ್ರ ಭೇಟಿಗಳ ಪಟ್ಟಿಯನ್ನು ಶಾಲೆಯು ಎಲ್ಲಾ ಪೋಷಕರಿಗೆ ಮುಂಚಿತವಾಗಿ ಹಸ್ತಾಂತರಿಸಿದೆ. ಈ ಧಾರ್ಮಿಕ ಪೂಜಾ ಸ್ಥಳಗಳ ಭೇಟಿಯಲ್ಲಿ ಚರ್ಚ್‌ಗೆ ಭೇಟಿ ನೀಡುವುದು ಕೂಡಾ ಒಳಗೊಂಡಿದೆ. ಇತರ ಕ್ಷೇತ್ರ ಪ್ರವಾಸಗಳ ಅಂಗವಾಗಿ ಬ್ಯಾಂಕ್, ಬೇಕರಿ ಮತ್ತು ಕಿರಾಣಿ ಅಂಗಡಿಗೆ ಭೇಟಿ ನೀಡುತ್ತವೆ ಎಂದು ಶಾಲೆ ಹೇಳಿದೆ.

ಇದನ್ನೂ ಓದಿ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ; ಇತಿಹಾಸ ಏನು ಹೇಳುತ್ತದೆ?

“ನಮ್ಮ ಗುಂಪುಗಳಲ್ಲಿ ನಮಗೆ ತಿಳಿದಿರುವ ಬಹುತೇಕ ಎಲ್ಲಾ ಪೋಷಕರು ಒಪ್ಪಿಗೆಯ ನಮೂನೆಗಳಿಗೆ ಸ್ವಇಚ್ಛೆಯಿಂದ ಸಹಿ ಮಾಡಿದ್ದಾರೆ. ನಾವೆಲ್ಲರೂ ನಮ್ಮ ಮಕ್ಕಳು ಜಗತ್ತನ್ನು ಅನ್ವೇಷಿಸಲು ಮತ್ತು ಕಲಿಯಲು ಎದುರು ನೋಡುತ್ತಿದ್ದೇವೆ. ಪೂಜಾಸ್ಥಳದ ಭೇಟಿ ನೀಡುವ ಶಾಲೆಯ ಯೋಜನೆಯ ಬಗ್ಗೆ ಯಾವುದೇ ತಪ್ಪು ಇಲ್ಲ” ಎಂದು ಶಿಶುವಿಹಾರದ ವಿದ್ಯಾರ್ಥಿಯ ಪೋಷಕರೊಬ್ಬರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಈ ಹಿಂದೆ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಮಕ್ಕಳು ಸಂತೋಷಪಟ್ಟರು. ಅದೇ ರೀತಿ ಈ ಪ್ರವಾಸದಲ್ಲಿ ಅವರು ಇನ್ನೊಂದು ಪೂಜಾ ಸ್ಥಳದ ಬಗ್ಗೆ ತಿಳಿದುಕೊಳ್ಳಬಹುದು. ಇದು ತುಂಬಾ ನಿರಾಶಾದಾಯಕವಾಗಿದ್ದು, ಕೆಲವು ಫ್ರಿಂಜ್ ಗುಂಪುಗಳು ಪೋಷಕರು ಮತ್ತು ಶಾಲೆಯ ನಡುವೆ ಮಾತ್ರ ಇರಬೇಕಾದ ವಿಷಯಗಳ ಬಗ್ಗೆ ಪ್ರತಿಭಟಿಸುತ್ತಿವೆ” ಎಂದು ಅವರು ಹೇಳಿದ್ದಾರೆ.

ಶಿಶುವಿಹಾರದ ವಿದ್ಯಾರ್ಥಿಯ ಮತ್ತೊಬ್ಬ ಪೋಷಕರೊಬ್ಬರು, “ನನ್ನ ಮಗಳು ಈ ಪ್ರವಾಸಕ್ಕಾಗಿ ತುಂಬಾ ಉತ್ಸುಕಳಾಗಿದ್ದಳು. ನಾವು ಮಸೀದಿಯ ಬಗ್ಗೆ ಅವಳಿಗೆ ಹೇಳುತ್ತಿದ್ದೆವು. ಇದು ಕೇವಲ ಕ್ಷೇತ್ರ ಪ್ರವಾಸವಾಗಿದೆ ಮತ್ತು ಪೋಷಕರಾಗಿ ಅದನ್ನು ನಾವು ಬೆಂಬಲಿಸಿದ್ದೇವೆ. ಮಕ್ಕಳಿಗೆ ಸಾಮರಸ್ಯ ಮತ್ತು ಏಕತೆಯ ಮೌಲ್ಯಗಳನ್ನು ಕಲಿಸಲು ಶಾಲೆ ಪ್ರಯತ್ನಿಸುತ್ತಿದೆ. ಯಾವುದೇ ಚಟುವಟಿಕೆ ಅಥವಾ ಕ್ಷೇತ್ರ ಪ್ರವಾಸಕ್ಕೆ ಮಕ್ಕಳನ್ನು ಕಳುಹಿಸುವಂತೆ ಪೋಷಕರ ಮೇಲೆ ಯಾವುದೇ ಒತ್ತಡ ಇರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬುಲ್ಡೋಜರ್‌‌, ಹಿಜಾಬ್‌, ಬಾಬ್ರಿ ಮಸೀದಿ ಪ್ರಕರಣ: ಲಂಡನ್‌ನಲ್ಲಿ ಜಸ್ಟೀಸ್ ಚಂದ್ರಚೂಡ್‌ ಹೇಳಿದ್ದೇನು?

ಈ ಬಗ್ಗೆ ಶಾಲೆಯ ಪ್ರಿನ್ಸಿಪಾಲ್ ಎ.ಕೆ.ಸಿನ್ಹಾ ಅವರು ಮಾತನಾಡಿ, “ಪ್ರತಿಭಟನಾ ಗುಂಪಿನ ಕಾರ್ಯಕರ್ತರನ್ನು ಭೇಟಿಯಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆಯು ಶಾಲೆಯ ಪ್ರಮುಖ ಆದ್ಯತೆಯಾಗಿದೆ. ಈಗಿನಿಂದಲೆ ಆಗಸ್ಟ್ ತಿಂಗಳಲ್ಲಿ ಶಾಲೆಯು ಆಯೋಜಿಸಿದ ಎಲ್ಲಾ ಕ್ಷೇತ್ರ ಪ್ರವಾಸಗಳನ್ನು ರದ್ದುಗೊಳಿಸಲಾಗಿದೆ” ಎಂದು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...