Homeಕರ್ನಾಟಕಧ್ವಜ ಸಂಹಿತೆ ಉಲ್ಲಂಘನೆ: ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಳಪೆಯಾಗಿ ಹೊಲಿದ ತ್ರಿವರ್ಣ ಧ್ವಜ ಮಾರಾಟ

ಧ್ವಜ ಸಂಹಿತೆ ಉಲ್ಲಂಘನೆ: ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಳಪೆಯಾಗಿ ಹೊಲಿದ ತ್ರಿವರ್ಣ ಧ್ವಜ ಮಾರಾಟ

- Advertisement -
- Advertisement -

ಭಾರತದ ಧ್ವಜ ಸಂಹಿತೆಯನ್ನು ಉಲ್ಲಂಘಿಸಿ ವಿರೂಪಗೊಳಿಸಲಾಗಿರುವ ಮತ್ತು ಕಳಪೆಯಾಗಿ ಹೊಲಿದ ಧ್ವಜಗಳನ್ನು ರಾಜ್ಯ ಬಿಜೆಪಿ ತನ್ನ ಕೇಂದ್ರ ಕಚೇರಿಯ ಮಳಿಗೆಯಲ್ಲಿ ಮಾರಾಟ ಮಾಡುತ್ತಿದೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ಜುಲೈ 31 ರಂದು ಸಚಿವ ಎಸ್ ಟಿ ಸೋಮಶೇಖರ್ ಅವರು ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ‘ಹರ್ ಘರ್ ತಿರಂಗ’ ಅಭಿಯಾನದ ಅಂಗವಾಗಿ ತ್ರಿವರ್ಣ ಧ್ವಜವನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಈ ಮಾರಾಟದ ಮಳಿಗೆಯನ್ನು ಉದ್ಘಾಟಿಸಿದ್ದರು.

ಮಲ್ಲೇಶ್ವರಂನಲ್ಲಿರುವ ತನ್ನ ರಾಜ್ಯ ಕೇಂದ್ರ ಕಚೇರಿಯಿಂದ 10 ಲಕ್ಷ ಸೇರಿದಂತೆ ಕರ್ನಾಟಕದಾದ್ಯಂತ 75 ಲಕ್ಷ ಧ್ವಜಗಳನ್ನು ಪ್ರತಿ ಮನೆಯಲ್ಲಿ ಹಾರಿಸುವ ಗುರಿಯನ್ನು ಬಿಜೆಪಿ ಹೊಂದಿದೆ. ಬಿಜೆಪಿ ಕಚೇರಿಯಿಂದ ಮಾರಾಟವಾಗುವ ಧ್ವಜಗಳು ಪಾಲಿಯೆಸ್ಟರ್‌ನಿಂದ ತಯಾರಿಸಲ್ಪಟ್ಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಹರ್ ಘರ್ ತಿರಂಗಾ’ ಅಭಿಯಾನಕ್ಕಾಗಿ ಪಾಲಿಯೆಸ್ಟರ್ ಮತ್ತು ಯಂತ್ರ-ನಿರ್ಮಿತ ರಾಷ್ಟ್ರಧ್ವಜಗಳ ಉತ್ಪಾದನೆಯನ್ನು ಅನುಮತಿಸಲು ಕೇಂದ್ರ ಸರ್ಕಾರವು 2021ರ ಡಿಸೆಂಬರ್ 30 ರಂದು ಭಾರತದ ಧ್ವಜ ಸಂಹಿತೆಯನ್ನು ತಿದ್ದುಪಡಿ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

ಧ್ವಜದ ಸಂಹಿತೆ ಪ್ರಕಾರ, “ತ್ರಿವರ್ಣ ಧ್ವಜವು ಆಯತಾಕಾರದ ಆಕಾರದಲ್ಲಿರಬೇಕು. ಧ್ವಜವೂ ಯಾವುದೇ ಗಾತ್ರದ್ದಾಗಿದ್ದರೂ ಅದರ ಉದ್ದ ಮತ್ತು ಅಗಲದ ಅನುಪಾತವು 3:2 ಆಗಿರಬೇಕು. ಅಶೋಕ ಚಕ್ರವನ್ನು ಮಧ್ಯದಲ್ಲಿ ಇಡಬೇಕು. ಮೂರು ಅಡ್ಡ ಪಟ್ಟೆಗಳು (ಕೇಸರಿ, ಬಿಳಿ, ಹಸಿರು) ಸಮಾನ ಪ್ರಮಾಣದಲ್ಲಿರಬೇಕು”

ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾರಾಟ ಮಾಡಲಾಗುತ್ತಿರುವ ಅನೇಕ ಧ್ವಜಗಳು ಆಯತಾಕಾರ ಅಥವಾ 3:2 ಅನುಪಾತಕ್ಕೆ ಅನುಗುಣವಾಗಿಲ್ಲ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. “ಕೆಲವು ಧ್ವಜಗಳಲ್ಲಿ ಅಶೋಕ ಚಕ್ರ ಮಧ್ಯದಲ್ಲಿ ಇಲ್ಲ. ಇನ್ನೂ ಕೆಲವು ಧ್ವಜಗಳಲ್ಲಿ ಹಸಿರು ಪಟ್ಟೆಗಳು ಕೇಸರಿ ಮತ್ತು ಬಿಳಿ ಬಣ್ಣಗಳಿಗಿಂತ ದೊಡ್ಡದಾಗಿವೆ” ಎಂದು ವರದಿಯು ಉಲ್ಲೇಖಿಸಿದೆ. ಗುಣಮಟ್ಟ ತುಂಬಾ ಕಳಪೆಯಾಗಿದ್ದು, ಅನೇಕ ಧ್ವಜಗಳು ಕೆಟ್ಟದಾಗಿ ಹೊಲಿಯಲಾಗಿದೆ ಎಂದು ಅದು ಹೇಳಿದೆ.

ಪ್ರತಿಯೊಂದು ಧ್ವಜವನ್ನು 25 ರೂ.ಗೆ ಮಾರಾಟ ಮಾಡಲಾಗುತ್ತಿದ್ದು, ನಗದು ರೂಪದಲ್ಲಿ ಪಾವತಿಸಲು ಕೇಳಲಾಗುತ್ತಿದೆ. ಯಾವುದೇ ಕಾರ್ಡ್/ಯುಪಿಐ ಪಾವತಿಯನ್ನು ಸ್ವೀಕರಿಸಲಾಗುತ್ತಿಲ್ಲ ಎಂದು ವರದಿ ಹೇಳಿದೆ. ಪಾವತಿ ಮಾಡಿರುವುದಕ್ಕೆ ಯಾವುದೇ ರಸೀದಿ ನೀಡಲಾಗುವುದಿಲ್ಲ. ಧ್ವಜ ಖರೀದಿಸುವವರು ತಮ್ಮ ಹೆಸರನ್ನು ನೀಡಬೇಕಾಗಿದೆ. ಹಲವು ದೋಷಗಳ ಹೊರತಾಗಿಯೂ, ಧ್ವಜಗಳು ಬಿಸಿ ಕೇಕ್‌ನಂತೆ ಮಾರಾಟವಾಗುತ್ತಿವೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

“ಮಾರಾಟವು ಉತ್ತಮವಾಗಿದ್ದು, ಹೆಚ್ಚಿನ ಜನರು ದೊಡ್ಡ ಪ್ರಮಾಣದಲ್ಲಿ ಖರೀದಿಸುತ್ತಿದ್ದಾರೆ” ಎಂದು ಪಕ್ಷದ ಕಾರ್ಯಕರ್ತರೊಬ್ಬರು ಹೇಳಿಕೆಯನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

“ನಾವು ಈಗಾಗಲೇ ನಮ್ಮ ಕಚೇರಿಯಿಂದ ಸುಮಾರು 3 ಲಕ್ಷ ಧ್ವಜಗಳನ್ನು ಮಾರಾಟ ಮಾಡಿದ್ದೇವೆ” ಎಂದು ಪಕ್ಷದ ಎಂಎಲ್‌ಸಿ, ಕರ್ನಾಟಕದಲ್ಲಿ ತಿರಂಗ ಪ್ರಚಾರದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಹೇಳಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಧ್ವಜಗಳಲ್ಲಿ ಯಾವುದೇ ಉತ್ಪಾದನಾ ದೋಷಗಳನ್ನು ತಾನು ಗಮನಿಸಿಲ್ಲ ಎಂದು ರವಿಕುಮಾರ್ ಹೇಳಿಕೊಂಡಿದ್ದು, ಧ್ವಜದ ವಿರೂಪಗೊಂಡ ವಿಚಾರದ ಬಗ್ಗೆ ಪರಿಶೀಲಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

“ನಾವು ಅದನ್ನು 25 ರೂ.ಗೆ ಖರೀದಿಸಿ ಅದೇ ದರದಲ್ಲಿ ಮಾರಾಟ ಮಾಡುತ್ತಿದ್ದೇವೆ. ಸಾರಿಗೆ ಸೇರಿದಂತೆ ಇತ್ಯಾದಿ ಯಾವುದೇ ಶುಲ್ಕ ವಿಧಿಸುತ್ತಿಲ್ಲ. ವಿವಿಧ ಮಾರಾಟಗಾರರಿಂದ ಧ್ವಜಗಳನ್ನು ಪಡೆಯಲಾಗಿದೆ. ಪಕ್ಷದ ಕಾರ್ಯಕರ್ತರು ಕೂಡಾ ಧ್ವಜಗಳನ್ನು ಸ್ವಯಂಪ್ರೇರಿತರಾಗಿ ಹೊಲಿಯುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು

ಆಡಳಿತ ಪಕ್ಷ ಬಿಜೆಪಿ ಮಾರಾಟ ಮಾಡುತ್ತಿರುವ ಕೆಲವು ಧ್ವಜಗಳು ಭಾರತದ ಧ್ವಜ ಸಂಹಿತೆಯಲ್ಲಿ ಸೂಚಿಸಲಾದ ಮಾರ್ಗಸೂಚಿಗಳನ್ನು “ಸ್ಪಷ್ಟವಾಗಿ ಉಲ್ಲಂಘಿಸುತ್ತವೆ” ಎಂದು ಕಾನೂನು ತಜ್ಞರು ಹೇಳಿದ್ದಾರೆಂದು ಡೆಕ್ಕನ್‌ ಹೆರಾಲ್ಡ್‌ ಪತ್ರಿಕೆ ವರದಿಯಲ್ಲಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....