Homeಮುಖಪುಟಯಂಗ್ ಇಂಡಿಯನ್ ಕಚೇರಿಗೆ ಇಡಿ ಸೀಲ್: ‘ನೀವು ಏನು ಬೇಕಾದರೂ ಮಾಡಿ; ಮೋದಿಗೆ ಹೆದರುವುದಿಲ್ಲ’ ಎಂದ...

ಯಂಗ್ ಇಂಡಿಯನ್ ಕಚೇರಿಗೆ ಇಡಿ ಸೀಲ್: ‘ನೀವು ಏನು ಬೇಕಾದರೂ ಮಾಡಿ; ಮೋದಿಗೆ ಹೆದರುವುದಿಲ್ಲ’ ಎಂದ ರಾಹುಲ್ ಗಾಂಧಿ

ದೇಶವನ್ನು, ಪ್ರಜಾಪ್ರಭುತ್ವವನ್ನು ಮತ್ತು ಸೌಹಾರ್ದತೆಯನ್ನ ಕಾಪಾಡುವುದು ನನ್ನ ಕರ್ತವ್ಯವಾಗಿದ್ದು, ಅದನ್ನು ನಾನು ಮಾಡುತ್ತಲೆ ಇರುತ್ತೇನೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ನವದೆಹಲಿಯ ಹೆರಾಲ್ಡ್ ಹೌಸ್ ಕಟ್ಟಡದಲ್ಲಿರುವ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನ ಆವರಣವನ್ನು ಜಾರಿ ನಿರ್ದೇಶನಾಲಯವು ಬುಧವಾರ ಸೀಲ್ ಮಾಡಿದೆ. ಇದರ ನಂತರ ಕಾಂಗ್ರೆಸ್ ಕೇಂದ್ರ ಕಚೇರಿ ಮತ್ತು ಪಕ್ಷದ ಅಧ್ಯಕ್ಷ ಸೋನಿಯಾ ಗಾಂಧಿ ನಿವಾಸಕ್ಕೆ ಹೆಚ್ಚುವರಿ ಪಡೆಯನ್ನು ನಿಯೋಜಿಸಲಾಗಿದೆ. ಬೆಳವಣಿಗೆಯ ಬಗ್ಗೆ ಮಾತನಾಡಿರುವ ರಾಹುಲ್ ಗಾಂಧಿ,“ನೀವು ಏನು ಬೇಕಾದರೂ ಮಾಡಿ, ನಾನು ಪ್ರಧಾನಿ ನರೇಂದ್ರ ಮೋದಿಗೆ ಹೆದರುವುದಿಲ್ಲ; ದೇಶವನ್ನು, ಪ್ರಜಾಪ್ರಭುತ್ವವನ್ನು ಮತ್ತು ಸೌಹಾರ್ದತೆಯನ್ನ ಕಾಪಾಡುವುದು ನನ್ನ ಕರ್ತವ್ಯ. ಅದನ್ನು ನಾನು ಮಾಡುತ್ತಲೆ ಇರುತ್ತೇನೆ” ಎಂದು ಗುರುವಾರ ಹೇಳಿದ್ದಾರೆ.

ದೆಹಲಿಯಲ್ಲಿರುವ ಪಕ್ಷದ ಮುಖ್ಯ ಕಚೇರಿ ಸೇರಿದಂತೆ, ಕಾಂಗ್ರೆಸ್‌ ಸಂಯೋಜಿತ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಹನ್ನೆರಡು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಹುಡುಕಾಟ ನಡೆಸಿದ ಮರುದಿನ ಈ ಬೆಳವಣಿಗೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಷನಲ್ ಹೆರಾಲ್ಡ್ ಅನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಪ್ರಕಟಿಸಿದ್ದು, ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದೆ. ಮನಿ ಲಾಂಡರಿಂಗ್‌ ಪ್ರಕರಣದಲ್ಲಿ ಪತ್ರಿಕೆಯ ವಿರುದ್ಧ ತನಿಖೆ ನಡೆಯುತ್ತಿದೆ.

“ಕಾಂಗ್ರೆಸ್ ಪ್ರಧಾನ ಕಚೇರಿ ಮತ್ತು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಮನೆಯ ಹೊರಗೆ ಹೆಚ್ಚುವರಿ ಪಡೆಯನ್ನು ನಿಯೋಜಿಸಲಾಗಿದೆ” ಎಂದು ಎಎನ್‌ಐ ವರದಿ ಮಾಡಿದೆ.

ಮಲ್ಲಿಕಾರ್ಜುನ ಖರ್ಗೆ, ಸಲ್ಮಾನ್ ಖುರ್ಷಿದ್, ದಿಗ್ವಿಜಯ ಸಿಂಗ್, ಪಿ ಚಿದಂಬರಂ ಅವರಂತಹ ಹಲವಾರು ಹಿರಿಯ ಕಾಂಗ್ರೆಸ್ ನಾಯಕರು ಬುಧವಾರ ಪಕ್ಷದ ಪ್ರಧಾನ ಕಚೇರಿಯನ್ನು ತಲುಪಿದ್ದಾರೆ. ಪಕ್ಷದ ಸಂಸದ ಜೈರಾಮ್ ರಮೇಶ್ ಅವರು ಕಾಂಗ್ರೆಸ್‌‌ ಕಚೇರಿಗೆ ದಿಗ್ಭಂಧನ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರ ವಿಫಲವಾದಾಗ ಪ್ರತಿಪಕ್ಷಗಳು ’ಇಡಿ’ ಪರೀಕ್ಷೆ ಎದುರಿಸಬೇಕು- ಅಖಿಲೇಶ್ ಯಾದವ್

“ದೆಹಲಿ ಪೊಲೀಸರು ನಮ್ಮ ಕೇಂದ್ರ ಕಚೇರಿ ಮತ್ತು ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷೆ ಮತ್ತು ಮಾಜಿ ಅಧ್ಯಕ್ಷರ ಮನೆಗಳನ್ನು ಸುತ್ತುವರೆದಿದ್ದಾರೆ. ಇದು ಸೇಡಿನ ರಾಜಕಾರಣದ ಅತ್ಯಂತ ಕೆಟ್ಟ ರೂಪ. ನಾವು ಸಲ್ಲಿಸುವುದಿಲ್ಲ! ನಾವು ಮೌನವಾಗುವುದಿಲ್ಲ! ಮೋದಿ ಸರ್ಕಾರದ ಅನ್ಯಾಯ ಮತ್ತು ವೈಫಲ್ಯಗಳ ವಿರುದ್ಧ ನಾವು ಧ್ವನಿ ಎತ್ತುವುದನ್ನು ಮುಂದುವರಿಸುತ್ತೇವೆ!” ಎಂದು ಹೇಳಿದ್ದಾರೆ.

ಈ ಮಧ್ಯೆ, ನ್ಯಾಷನಲ್ ಹೆರಾಲ್ಡ್ ಪತ್ರಿಕೆ ತನ್ನ ಕಚೇರಿಯನ್ನು ಸೀಲ್ ಮಾಡಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ನಿರಾಕರಿಸಿದೆ. ಈ ಹಿಂದೆ ಹೀಗೆ ವರದಿ ಮಾಡಿದ್ದ ಸುದ್ದಿ ಸಂಸ್ಥೆ ಎಎನ್‌ಐ, “ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನ ಆವರಣವನ್ನು ಮಾತ್ರ ಸೀಲ್ ಮಾಡಲಾಗಿದೆ” ಎಂದು ನಂತರ ಸ್ಪಷ್ಟೀಕರಣ ನೀಡಿತು.

“ನ್ಯಾಷನಲ್ ಹೆರಾಲ್ಡ್ ಕಚೇರಿಯನ್ನು ಸೀಲ್ ಮಾಡಲಾಗಿದೆ ಎಂದು ಕೆಲವು ಮಾಧ್ಯಮಗಳು ಸುಳ್ಳು ವರದಿಗಳನ್ನು ಮಾಡಿವೆ. ನಾವು ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದೇವೆ” ಎಂದು ಪತ್ರಿಕೆ ಟ್ವೀಟ್‌ನಲ್ಲಿ ತಿಳಿಸಿದೆ.

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಹೆಚ್ಚುವರಿ ಸಾಕ್ಷ್ಯಗಳನ್ನು ಸಂಗ್ರಹಿಸಲು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ದಾಳಿ ನಡೆಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಮಂಗಳವಾರ ತಿಳಿಸಿತ್ತು.

ಇದನ್ನೂ ಓದಿ: ಪ್ರತಿಭಟನೆ ವೇಳೆ ಪೊಲೀಸರಿಂದ ಕಾಂಗ್ರೆಸ್ ನಾಯಕರ ಮೇಲೆ ಅಮಾನವೀಯ ಹಲ್ಲೆ-ಆರೋಪ

ಪ್ರಕರಣಕ್ಕೆ ಸಂಬಂಧಿಸಿದ “ಹಲವು ಜನರನ್ನು” ಪ್ರಶ್ನಿಸಿದ ನಂತರ ಜಾರಿ ನಿರ್ದೇಶನಾಲಯವು ಹೊಸದಾಗಿ ಪುರಾವೆಗಳನ್ನು ಪಡೆದು ಹುಡುಕಾಟ ನಡೆಸುತ್ತಿದೆ ಎಂದು ಕೆಲವು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಯ ಬಗ್ಗೆ ಮಾತನಾಡಿರುವ ರಾಹುಲ್ ಗಾಂಧಿ,“ಸತ್ಯಕ್ಕೆ ಅಡ್ಡಗಾಲು ಹಾಕಲು ಸಾಧ್ಯವಿಲ್ಲ. ನೀವು ಏನು ಬೇಕಾದರೂ ಮಾಡಿ, ನಾನು ಪ್ರಧಾನಿ ನರೇಂದ್ರ ಮೋದಿಗೆ ಹೆದರುವುದಿಲ್ಲ. ನಾನು ಯಾವಾಗಲೂ ದೇಶದ ಹಿತದೃಷ್ಟಿಯಿಂದ ಕೆಲಸ ಮಾಡುತ್ತೇನೆ. ಕೇಳಿಸಿಕೊಳ್ಳಿ ಮತ್ತು ಅರ್ಥಮಾಡಿಕೊಳ್ಳಿ!”

ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈನಲ್ಲಿ ಕೇಂದ್ರ ತನಿಖಾ ಸಂಸ್ಥೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಮೂರು ದಿನಗಳ ಕಾಲ ವಿಚಾರಣೆ ನಡೆಸಿತ್ತು. ಜೊತೆಗೆ ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಅವರನ್ನು ಜೂನ್‌ನಲ್ಲಿ ಐದು ದಿನಗಳ ಕಾಲ ಜಾರಿ ನಿರ್ದೇಶನಾಲಯವು 50 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.

ಇದನ್ನೂ ಓದಿ: ‘ಮೋದಿ ಪೊಲೀಸ್‌ ರಾಜ್ಯದ ದೊರೆ’: ಪ್ರತಿಭಟನೆ ವೇಳೆ ರಾಹುಲ್ ಗಾಂಧಿ; ವಶಕ್ಕೆ ಪಡೆದ ಪೊಲೀಸರು

ಗಾಂಧಿ ಕುಟುಂಬದ ವಿರುದ್ಧ ಕೇಸು

ನ್ಯಾಷನಲ್ ಹೆರಾಲ್ಡ್‌ ಅನ್ನು ಜವಾಹರಲಾಲ್ ನೆಹರು ಅವರು ಭಾರತದ ಮೊದಲ ಪ್ರಧಾನಿಯಾಗುವ ಮೊದಲು ಸ್ಥಾಪಿಸಿದ್ದರು ಮತ್ತು ಅದರ ಸಂಪಾದಕರಾಗಿದ್ದರು. ಏಪ್ರಿಲ್ 2008 ರಲ್ಲಿ, ಪತ್ರಿಕೆಯು 90 ಕೋಟಿ ರೂಪಾಯಿಗಿಂತ ಹೆಚ್ಚಿನ ಸಾಲವನ್ನು ಹೊಂದಿದ್ದರಿಂದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿತ್ತು.

ಆದರೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ, “ಕಾಂಗ್ರೆಸ್‌ನ ಹಣವನ್ನು ಬಳಸಿಕೊಂಡು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ನ್ಯಾಯಾಲಯದ ದಾಖಲೆಗಳ ಪ್ರಕಾರ, ಪಕ್ಷವು ಬಡ್ಡಿರಹಿತ ಆಧಾರದ ಮೇಲೆ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ಗೆ ಸಾಲವನ್ನು ನೀಡಿದೆ. ಯಾವುದೆ ಹಣ ವಿನಿಮಯವಿಲ್ಲದೆ ಸಂಬಳದಂತಹ ಬಾಕಿಗಳನ್ನು ಪಾವತಿಸಲು ಸಾಲವನ್ನು ಈಕ್ವಿಟಿಯಾಗಿ ಪರಿವರ್ತಿಸಲಾಗಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...