Homeಮುಖಪುಟಯಂಗ್ ಇಂಡಿಯನ್ ಕಚೇರಿಗೆ ಇಡಿ ಸೀಲ್: ‘ನೀವು ಏನು ಬೇಕಾದರೂ ಮಾಡಿ; ಮೋದಿಗೆ ಹೆದರುವುದಿಲ್ಲ’ ಎಂದ...

ಯಂಗ್ ಇಂಡಿಯನ್ ಕಚೇರಿಗೆ ಇಡಿ ಸೀಲ್: ‘ನೀವು ಏನು ಬೇಕಾದರೂ ಮಾಡಿ; ಮೋದಿಗೆ ಹೆದರುವುದಿಲ್ಲ’ ಎಂದ ರಾಹುಲ್ ಗಾಂಧಿ

ದೇಶವನ್ನು, ಪ್ರಜಾಪ್ರಭುತ್ವವನ್ನು ಮತ್ತು ಸೌಹಾರ್ದತೆಯನ್ನ ಕಾಪಾಡುವುದು ನನ್ನ ಕರ್ತವ್ಯವಾಗಿದ್ದು, ಅದನ್ನು ನಾನು ಮಾಡುತ್ತಲೆ ಇರುತ್ತೇನೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ನವದೆಹಲಿಯ ಹೆರಾಲ್ಡ್ ಹೌಸ್ ಕಟ್ಟಡದಲ್ಲಿರುವ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನ ಆವರಣವನ್ನು ಜಾರಿ ನಿರ್ದೇಶನಾಲಯವು ಬುಧವಾರ ಸೀಲ್ ಮಾಡಿದೆ. ಇದರ ನಂತರ ಕಾಂಗ್ರೆಸ್ ಕೇಂದ್ರ ಕಚೇರಿ ಮತ್ತು ಪಕ್ಷದ ಅಧ್ಯಕ್ಷ ಸೋನಿಯಾ ಗಾಂಧಿ ನಿವಾಸಕ್ಕೆ ಹೆಚ್ಚುವರಿ ಪಡೆಯನ್ನು ನಿಯೋಜಿಸಲಾಗಿದೆ. ಬೆಳವಣಿಗೆಯ ಬಗ್ಗೆ ಮಾತನಾಡಿರುವ ರಾಹುಲ್ ಗಾಂಧಿ,“ನೀವು ಏನು ಬೇಕಾದರೂ ಮಾಡಿ, ನಾನು ಪ್ರಧಾನಿ ನರೇಂದ್ರ ಮೋದಿಗೆ ಹೆದರುವುದಿಲ್ಲ; ದೇಶವನ್ನು, ಪ್ರಜಾಪ್ರಭುತ್ವವನ್ನು ಮತ್ತು ಸೌಹಾರ್ದತೆಯನ್ನ ಕಾಪಾಡುವುದು ನನ್ನ ಕರ್ತವ್ಯ. ಅದನ್ನು ನಾನು ಮಾಡುತ್ತಲೆ ಇರುತ್ತೇನೆ” ಎಂದು ಗುರುವಾರ ಹೇಳಿದ್ದಾರೆ.

ದೆಹಲಿಯಲ್ಲಿರುವ ಪಕ್ಷದ ಮುಖ್ಯ ಕಚೇರಿ ಸೇರಿದಂತೆ, ಕಾಂಗ್ರೆಸ್‌ ಸಂಯೋಜಿತ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಹನ್ನೆರಡು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಹುಡುಕಾಟ ನಡೆಸಿದ ಮರುದಿನ ಈ ಬೆಳವಣಿಗೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಷನಲ್ ಹೆರಾಲ್ಡ್ ಅನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಪ್ರಕಟಿಸಿದ್ದು, ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದೆ. ಮನಿ ಲಾಂಡರಿಂಗ್‌ ಪ್ರಕರಣದಲ್ಲಿ ಪತ್ರಿಕೆಯ ವಿರುದ್ಧ ತನಿಖೆ ನಡೆಯುತ್ತಿದೆ.

“ಕಾಂಗ್ರೆಸ್ ಪ್ರಧಾನ ಕಚೇರಿ ಮತ್ತು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಮನೆಯ ಹೊರಗೆ ಹೆಚ್ಚುವರಿ ಪಡೆಯನ್ನು ನಿಯೋಜಿಸಲಾಗಿದೆ” ಎಂದು ಎಎನ್‌ಐ ವರದಿ ಮಾಡಿದೆ.

ಮಲ್ಲಿಕಾರ್ಜುನ ಖರ್ಗೆ, ಸಲ್ಮಾನ್ ಖುರ್ಷಿದ್, ದಿಗ್ವಿಜಯ ಸಿಂಗ್, ಪಿ ಚಿದಂಬರಂ ಅವರಂತಹ ಹಲವಾರು ಹಿರಿಯ ಕಾಂಗ್ರೆಸ್ ನಾಯಕರು ಬುಧವಾರ ಪಕ್ಷದ ಪ್ರಧಾನ ಕಚೇರಿಯನ್ನು ತಲುಪಿದ್ದಾರೆ. ಪಕ್ಷದ ಸಂಸದ ಜೈರಾಮ್ ರಮೇಶ್ ಅವರು ಕಾಂಗ್ರೆಸ್‌‌ ಕಚೇರಿಗೆ ದಿಗ್ಭಂಧನ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರ ವಿಫಲವಾದಾಗ ಪ್ರತಿಪಕ್ಷಗಳು ’ಇಡಿ’ ಪರೀಕ್ಷೆ ಎದುರಿಸಬೇಕು- ಅಖಿಲೇಶ್ ಯಾದವ್

“ದೆಹಲಿ ಪೊಲೀಸರು ನಮ್ಮ ಕೇಂದ್ರ ಕಚೇರಿ ಮತ್ತು ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷೆ ಮತ್ತು ಮಾಜಿ ಅಧ್ಯಕ್ಷರ ಮನೆಗಳನ್ನು ಸುತ್ತುವರೆದಿದ್ದಾರೆ. ಇದು ಸೇಡಿನ ರಾಜಕಾರಣದ ಅತ್ಯಂತ ಕೆಟ್ಟ ರೂಪ. ನಾವು ಸಲ್ಲಿಸುವುದಿಲ್ಲ! ನಾವು ಮೌನವಾಗುವುದಿಲ್ಲ! ಮೋದಿ ಸರ್ಕಾರದ ಅನ್ಯಾಯ ಮತ್ತು ವೈಫಲ್ಯಗಳ ವಿರುದ್ಧ ನಾವು ಧ್ವನಿ ಎತ್ತುವುದನ್ನು ಮುಂದುವರಿಸುತ್ತೇವೆ!” ಎಂದು ಹೇಳಿದ್ದಾರೆ.

ಈ ಮಧ್ಯೆ, ನ್ಯಾಷನಲ್ ಹೆರಾಲ್ಡ್ ಪತ್ರಿಕೆ ತನ್ನ ಕಚೇರಿಯನ್ನು ಸೀಲ್ ಮಾಡಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ನಿರಾಕರಿಸಿದೆ. ಈ ಹಿಂದೆ ಹೀಗೆ ವರದಿ ಮಾಡಿದ್ದ ಸುದ್ದಿ ಸಂಸ್ಥೆ ಎಎನ್‌ಐ, “ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನ ಆವರಣವನ್ನು ಮಾತ್ರ ಸೀಲ್ ಮಾಡಲಾಗಿದೆ” ಎಂದು ನಂತರ ಸ್ಪಷ್ಟೀಕರಣ ನೀಡಿತು.

“ನ್ಯಾಷನಲ್ ಹೆರಾಲ್ಡ್ ಕಚೇರಿಯನ್ನು ಸೀಲ್ ಮಾಡಲಾಗಿದೆ ಎಂದು ಕೆಲವು ಮಾಧ್ಯಮಗಳು ಸುಳ್ಳು ವರದಿಗಳನ್ನು ಮಾಡಿವೆ. ನಾವು ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದೇವೆ” ಎಂದು ಪತ್ರಿಕೆ ಟ್ವೀಟ್‌ನಲ್ಲಿ ತಿಳಿಸಿದೆ.

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಹೆಚ್ಚುವರಿ ಸಾಕ್ಷ್ಯಗಳನ್ನು ಸಂಗ್ರಹಿಸಲು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ದಾಳಿ ನಡೆಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಮಂಗಳವಾರ ತಿಳಿಸಿತ್ತು.

ಇದನ್ನೂ ಓದಿ: ಪ್ರತಿಭಟನೆ ವೇಳೆ ಪೊಲೀಸರಿಂದ ಕಾಂಗ್ರೆಸ್ ನಾಯಕರ ಮೇಲೆ ಅಮಾನವೀಯ ಹಲ್ಲೆ-ಆರೋಪ

ಪ್ರಕರಣಕ್ಕೆ ಸಂಬಂಧಿಸಿದ “ಹಲವು ಜನರನ್ನು” ಪ್ರಶ್ನಿಸಿದ ನಂತರ ಜಾರಿ ನಿರ್ದೇಶನಾಲಯವು ಹೊಸದಾಗಿ ಪುರಾವೆಗಳನ್ನು ಪಡೆದು ಹುಡುಕಾಟ ನಡೆಸುತ್ತಿದೆ ಎಂದು ಕೆಲವು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಯ ಬಗ್ಗೆ ಮಾತನಾಡಿರುವ ರಾಹುಲ್ ಗಾಂಧಿ,“ಸತ್ಯಕ್ಕೆ ಅಡ್ಡಗಾಲು ಹಾಕಲು ಸಾಧ್ಯವಿಲ್ಲ. ನೀವು ಏನು ಬೇಕಾದರೂ ಮಾಡಿ, ನಾನು ಪ್ರಧಾನಿ ನರೇಂದ್ರ ಮೋದಿಗೆ ಹೆದರುವುದಿಲ್ಲ. ನಾನು ಯಾವಾಗಲೂ ದೇಶದ ಹಿತದೃಷ್ಟಿಯಿಂದ ಕೆಲಸ ಮಾಡುತ್ತೇನೆ. ಕೇಳಿಸಿಕೊಳ್ಳಿ ಮತ್ತು ಅರ್ಥಮಾಡಿಕೊಳ್ಳಿ!”

ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈನಲ್ಲಿ ಕೇಂದ್ರ ತನಿಖಾ ಸಂಸ್ಥೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಮೂರು ದಿನಗಳ ಕಾಲ ವಿಚಾರಣೆ ನಡೆಸಿತ್ತು. ಜೊತೆಗೆ ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಅವರನ್ನು ಜೂನ್‌ನಲ್ಲಿ ಐದು ದಿನಗಳ ಕಾಲ ಜಾರಿ ನಿರ್ದೇಶನಾಲಯವು 50 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.

ಇದನ್ನೂ ಓದಿ: ‘ಮೋದಿ ಪೊಲೀಸ್‌ ರಾಜ್ಯದ ದೊರೆ’: ಪ್ರತಿಭಟನೆ ವೇಳೆ ರಾಹುಲ್ ಗಾಂಧಿ; ವಶಕ್ಕೆ ಪಡೆದ ಪೊಲೀಸರು

ಗಾಂಧಿ ಕುಟುಂಬದ ವಿರುದ್ಧ ಕೇಸು

ನ್ಯಾಷನಲ್ ಹೆರಾಲ್ಡ್‌ ಅನ್ನು ಜವಾಹರಲಾಲ್ ನೆಹರು ಅವರು ಭಾರತದ ಮೊದಲ ಪ್ರಧಾನಿಯಾಗುವ ಮೊದಲು ಸ್ಥಾಪಿಸಿದ್ದರು ಮತ್ತು ಅದರ ಸಂಪಾದಕರಾಗಿದ್ದರು. ಏಪ್ರಿಲ್ 2008 ರಲ್ಲಿ, ಪತ್ರಿಕೆಯು 90 ಕೋಟಿ ರೂಪಾಯಿಗಿಂತ ಹೆಚ್ಚಿನ ಸಾಲವನ್ನು ಹೊಂದಿದ್ದರಿಂದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿತ್ತು.

ಆದರೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ, “ಕಾಂಗ್ರೆಸ್‌ನ ಹಣವನ್ನು ಬಳಸಿಕೊಂಡು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ನ್ಯಾಯಾಲಯದ ದಾಖಲೆಗಳ ಪ್ರಕಾರ, ಪಕ್ಷವು ಬಡ್ಡಿರಹಿತ ಆಧಾರದ ಮೇಲೆ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ಗೆ ಸಾಲವನ್ನು ನೀಡಿದೆ. ಯಾವುದೆ ಹಣ ವಿನಿಮಯವಿಲ್ಲದೆ ಸಂಬಳದಂತಹ ಬಾಕಿಗಳನ್ನು ಪಾವತಿಸಲು ಸಾಲವನ್ನು ಈಕ್ವಿಟಿಯಾಗಿ ಪರಿವರ್ತಿಸಲಾಗಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...