Homeಮುಖಪುಟಮಾಲೆಗಾಂವ್ ಸ್ಫೋಟ ಪ್ರಕರಣ: ಶಂಕಿತ ಭಯೋತ್ಪಾದಕಿ, ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್‌‌ ಬೈಕ್‌ನಲ್ಲಿ ಸ್ಫೋಟಕಗಳ ಕುರುಹು;...

ಮಾಲೆಗಾಂವ್ ಸ್ಫೋಟ ಪ್ರಕರಣ: ಶಂಕಿತ ಭಯೋತ್ಪಾದಕಿ, ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್‌‌ ಬೈಕ್‌ನಲ್ಲಿ ಸ್ಫೋಟಕಗಳ ಕುರುಹು; ತಜ್ಞರ ಸಾಕ್ಷಿ

- Advertisement -
- Advertisement -

ಎಲ್‌ಎಂಎಲ್ ವೆಸ್ಪಾ ಸ್ಕೂಟರ್ ಸೇರಿದಂತೆ ಸ್ಫೋಟದ ಸ್ಥಳದಿಂದ ವಶಪಡಿಸಿಕೊಂಡ ಹಲವಾರು ವಸ್ತುಗಳಲ್ಲಿ ಸ್ಫೋಟಕಗಳ ಕುರುಹುಗಳು ಕಂಡುಬಂದಿವೆ ಎಂದು 2008 ರ ಮಾಲೆಗಾಂವ್ ಸ್ಫೋಟ ಪ್ರಕರಣದ 261 ನೇ ಸಾಕ್ಷಿಯಾಗಿರುವ ವಿಧಿವಿಜ್ಞಾನ ತಜ್ಞರು ಮುಂಬೈನ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ಸ್ಕೂಟರ್‌‌ ಶಂಕಿತ ಭಯೋತ್ಪಾದಕಿ, ಭೋಪಾಲ್‌ನ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.

2008ರ ಸೆಪ್ಟೆಂಬರ್ 29 ರಂದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ಪಟ್ಟಣದ ಮಸೀದಿಯ ಬಳಿ ಸ್ಕೂಟರ್‌ಗೆ ಕಟ್ಟಲಾಗಿದ್ದ ಬಾಂಬ್ ಸ್ಫೋಟಗೊಂಡು ಆರು ಜನರು ಸಾವನ್ನಪ್ಪಿದ್ದರು ಮತ್ತು 100 ಜನರು ಗಾಯಗೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾಕ್ಷಿ ನುಡಿದ ವಿಧಿವಿಜ್ಞಾನ ತಜ್ಞರು 2008 ರಲ್ಲಿ ಸಹಾಯಕ ರಾಸಾಯನಿಕ ವಿಶ್ಲೇಷಕರಾಗಿ ಕೆಲಸ ಮಾಡಿದ್ದರು. ಸ್ಫೋಟದ ಸ್ಥಳದಿಂದ ವಶಪಡಿಸಿಕೊಂಡ ಸ್ಕೂಟರ್‌ನಲ್ಲಿ ಅಮೋನಿಯಂ ನೈಟ್ರೇಟ್ ಕುರುಹುಗಳು ಕಂಡುಬಂದಿವೆ ಎಂದು ಅವರು ಹೇಳಿದ್ದಾರೆ. ಅಮೋನಿಯಂ ನೈಟ್ರೇಟ್ ಅನ್ನು ಸ್ಫೋಟಕವಾಗಿ ಬಳಸಲಾಗುತ್ತದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಭಯೋತ್ಪಾದಕಿ ಪ್ರಗ್ಯಾ ಠಾಕೂರ್‌ , ಭಯೋತ್ಪಾದಕ ಗೋಡ್ಸೆಯನ್ನು ದೇಶಭಕ್ತ ಎಂದಿದ್ದಾರೆ: ರಾಹುಲ್‌ ಗಾಂಧಿ

2008 ರಲ್ಲಿ ಸ್ಫೋಟದ ಸ್ಥಳಕ್ಕೆ ಹೋಗಿದ್ದಾಗ LML ವೆಸ್ಪಾ ಸ್ಕೂಟರ್ ಗಂಭೀರವಾಗಿ ಹಾನಿಗೊಳಗಾದ ಸ್ಥಿತಿಯಲ್ಲಿ ನೋಡಿದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ವೇಳೆ ಹೋಂಡಾ ಯುನಿಕಾರ್ನ್, ಬೈಸಿಕಲ್ ಸೇರಿದಂತೆ ಇತರೆ ವಾಹನಗಳಿಗೂ ಭಾಗಶಃ ಹಾನಿಯಾಗಿದೆ ಎಂದು ಅವರು ಹೇಳಿದ್ದಾರೆ.

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವಿನಾಶ್ ರಸಲ್ ಅವರ ಪಾಟಿ ಸವಾಲಿಗೆ ಉತ್ತರಿಸಿದ ಪ್ರಸ್ತುತ ನಿವೃತ್ತರಾಗಿರುವ ವಿಧಿವಿಜ್ಞಾನ ತಜ್ಞರು, ಪೊಲೀಸರು ಕಳುಹಿಸಿದ ವಸ್ತು ಸಾಕ್ಷ್ಯಗಳ ರಾಸಾಯನಿಕ ವಿಶ್ಲೇಷಣೆ ಮತ್ತು ರಾಸಾಯನಿಕ ವಿಶ್ಲೇಷಣಾ ವರದಿಯನ್ನು ಒದಗಿಸುವುದು ಮತ್ತು ಸ್ಫೋಟದ ಸ್ಥಳಕ್ಕೆ ಭೇಟಿ ನೀಡುವ ಕೆಲಸದಲ್ಲಿ ತೊಡಗಿದ್ದಾಗಿ ಅವರು ತಮ್ಮ ಕೆಲಸವನ್ನು ವಿವರಿಸುತ್ತಾ ಹೇಳಿದ್ದಾರೆ.

ಸ್ಕೂಟರ್‌ನ ಎಂಜಿನ್ ಸಂಖ್ಯೆಯನ್ನು ಸ್ಕ್ರಾಚ್ ಮಾಡಲಾಗಿತ್ತು. ಕಾರ್ಯವಿಧಾನದ ಮೂಲಕ ತಾನು ಬೈಕ್‌ನಿಂದ ಮೂರು ಸಂಭವನೀಯ ಎಂಜಿನ್ ಸಂಖ್ಯೆಗಳನ್ನು ಕಂಡುಹಿಡಿಯುವಲ್ಲಿ ಯಶಸ್ವಿಯಾಗಿದ್ದಾಗಿ ಅವರು ಸಾಕ್ಷಿ ಹೇಳಿದ್ದಾರೆ.

ಇದನ್ನೂ ಓದಿ: ಫುಟ್‌ಬಾಲ್, ನೃತ್ಯ ಈಗ ಕ್ರಿಕೆಟ್ ಆಡಿದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್

ಸಂಖ್ಯೆಗಳನ್ನು ಗುರುತಿಸುವ ಮೊದಲು ನಂಬರ್‌‌ ಪ್ಲೇಟ್‌ನಲ್ಲಿ ಯಾವುದೇ ಎಂಜಿನ್ ಸಂಖ್ಯೆ ಇರಲಿಲ್ಲ ಎಂಬುವುದನ್ನು ತಾನು ಗಮನಿಸಿದ್ದಾಗಿ ಅವರು ಹೇಳಿದ್ದಾರೆ. ಇವರ ಸಾಕ್ಷಿಯ ವಿಚಾರಣೆ ಮತ್ತಷ್ಟು ಮುಂದುವರಿಯಲಿದೆ.

ಎರಡು ದ್ವಿಚಕ್ರವಾಹನಗಳು ಮತ್ತು ಐದು ಸೈಕಲ್‌ಗಳನ್ನು ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಕಚೇರಿಯಿಂದ ನ್ಯಾಯಾಲಯಕ್ಕೆ ತರಲಾಯಿತು. ವಿಶೇಷ ನ್ಯಾಯಾಧೀಶರು, ವಕೀಲರು, ನ್ಯಾಯಾಲಯದ ಸಿಬ್ಬಂದಿ, ಸಾಕ್ಷಿ ಮತ್ತು ಆರೋಪಿಗಳು ನ್ಯಾಯಾಲಯ ಒಳಗಿನಿಂದ ವಾಹನಗಳನ್ನು ನಿಲ್ಲಿಸಿದ ಸ್ಥಳಕ್ಕೆ ತೆರಳಿ ವಾಹನಗಳನ್ನು ಪರಿಶೀಲಿಸಿದರು ಆದರೆ ಛಾಯಾಗ್ರಹಣಕ್ಕೆ ಅವಕಾಶ ನೀಡಲಿಲ್ಲ.

2019 ರಲ್ಲಿ ಪಂಚ ಸಾಕ್ಷಿಯಾಗಿ ಕೆಲಸ ಮಾಡಿದ ಇನ್ನೊಬ್ಬ ಸಾಕ್ಷಿ ಸ್ಫೋಟದ ಸ್ಥಳದಲ್ಲಿದ್ದ ಬೈಕ್ ಅನ್ನು ಗುರುತಿಸಿದ್ದಾರೆ.

ಇದನ್ನೂ ಓದಿ: ಆರೋಗ್ಯ ಸರಿಯಿಲ್ಲ ಎಂದಿದ್ದ ಪ್ರಜ್ಞಾ ಠಾಕೂರ್‌‌ – ಡ್ಯಾನ್ಸ್‌ ಮಾಡುವ ವಿಡಿಯೊ ವೈರಲ್‌!

2008ರ ಸೆಪ್ಟೆಂಬರ್ 29 ರಂದು ಮಾಲೆಗಾಂವ್‌ನ ಭಿಕು ಚೌಕ್‌ನಲ್ಲಿ ಸ್ಕೂಟರ್‌ನಲ್ಲಿ ಇರಿಸಲಾಗಿದ್ದ ಬಾಂಬ್ ಸ್ಪೋಟಿಸಿ ಆರು ಮಂದಿ ಸಾವನ್ನಪ್ಪಿದ್ದರು ಮತ್ತು ನೂರಕ್ಕೂ ಹೆಚ್ಚು ಜನರು ಗಾಯಗೊಂಡರು ಎಂದು ಪ್ರಾಸಿಕ್ಯೂಷನ್ ಹೇಳಿಕೊಂಡಿದೆ. ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾಯಿಸುವ ಮೊದಲು ಮಹಾರಾಷ್ಟ್ರ ಎಟಿಎಸ್ ಆರಂಭದಲ್ಲಿ ತನಿಖೆ ನಡೆಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...