Homeಕರ್ನಾಟಕಪ್ರೊಫೈಲ್‌ನಲ್ಲಿ ರಾಷ್ಟ್ರಧ್ವಜ: ಮೋದಿ ಮನವಿ ಆರ್‌ಎಸ್‌ಎಸ್‌ಗೆ ಮುಜುಗರ ತಂದಿತೇ?

ಪ್ರೊಫೈಲ್‌ನಲ್ಲಿ ರಾಷ್ಟ್ರಧ್ವಜ: ಮೋದಿ ಮನವಿ ಆರ್‌ಎಸ್‌ಎಸ್‌ಗೆ ಮುಜುಗರ ತಂದಿತೇ?

“ರಾಷ್ಟ್ರಧ್ವಜ ಪ್ರೊಫೈಲ್ ವಿಚಾರದಲ್ಲಿ ರಾಜಕೀಯ ಮಾಡಬೇಡಿ” ಎಂದು ಆರ್‌ಎಸ್‌ಎಸ್‌ ಪ್ರಚಾರ್ ಪ್ರಮುಖ್ ಸುನೀಲ್ ಅಂಬೇಕರ್ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ತನ್ನ ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಚಿತ್ರವಾಗಿ ತ್ರಿವರ್ಣ ಧ್ವಜವನ್ನು ಏಕೆ ಹಾಕಿಕೊಂಡಿಲ್ಲ ಎಂಬ ಪ್ರಶ್ನೆಯನ್ನು ಜನರು ಕೇಳುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಚಾರ್ ಪ್ರಮುಖ್ ಸುನೀಲ್ ಅಂಬೇಕರ್, “ಇಂತಹ ವಿಷಯಗಳನ್ನು ರಾಜಕೀಯಗೊಳಿಸಬಾರದು. ಆರ್‌ಎಸ್‌ಎಸ್ ಈಗಾಗಲೇ ‘ಹರ್ ಘರ್ ತಿರಂಗ’ ಮತ್ತು ‘ಆಜಾದಿ ಕಾ ಅಮೃತ್ ಮಹೋತ್ಸವ’ ಕಾರ್ಯಕ್ರಮಗಳಿಗೆ ತನ್ನ ಬೆಂಬಲವನ್ನು ನೀಡಿದೆ. ಸರ್ಕಾರ, ಖಾಸಗಿ ಸಂಸ್ಥೆಗಳು ಮತ್ತು ಆರ್‌ಎಸ್‌ಎಸ್ ಅಂಗ ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಜನ ಮತ್ತು ಸ್ವಯಂಸೇವಕರು ಸಂಪೂರ್ಣವಾಗಿ ಪಾಲ್ಗೊಳ್ಳುವಂತೆ ಆರ್‌ಎಸ್‌ಎಸ್‌ ಜುಲೈನಲ್ಲೇ ಮನವಿ ಮಾಡಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತ್ರಿವರ್ಣ ಧ್ವಜದ ಚಿತ್ರವನ್ನು ಸಾಮಾಜಿಕ ಮಾಧ್ಯಮಗಳ ಪ್ರೊಫೈಲ್‌ನಲ್ಲಿ ಹಾಕಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರು ಮನವಿ ಮಾಡಿದ ನಂತರವೂ ಆರ್‌ಎಸ್‌ಎಸ್‌ ಮುಖಂಡರು ತಮ್ಮ ಖಾತೆಗಳಲ್ಲಿ ಏಕೆ ತ್ರಿವರ್ಣ ಧ್ವಜದ ಚಿತ್ರವನ್ನು ಹಾಕಿಕೊಂಡಿಲ್ಲ ಎಂಬ ವಿವಾದ ಮುನ್ನೆಲೆಗೆ ಬಂದಿದೆ.

“ಆರ್‌ಎಸ್‌ಎಸ್‌ ಎಂದಿಗೂ ಭಗವಾಧ್ವಜವನ್ನು ಒಪ್ಪುತ್ತದೆಯೇ ಹೊರತು, ತ್ರಿವರ್ಣ ಧ್ವಜವನ್ನಲ್ಲ” ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ. ಆರ್‌ಎಸ್‌ಎಸ್‌ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಕಾಲದಿಂದಲೂ ಸ್ವಾತಂತ್ರ್ಯ ನಂತರದಲ್ಲೂ ಆರ್‌‌ಎಸ್‌ಎಸ್‌ ತ್ರಿವರ್ಣ ಧ್ವಜವನ್ನು ಒಪ್ಪಿಲ್ಲ. ರಾಜಕೀಯ ಕಾರಣಗಳಿಗಷ್ಟೇ ಇತ್ತೀಚಿನ ವರ್ಷಗಳಲ್ಲಿ ಆರ್‌ಎಸ್‌ಎಸ್‌ ರಾಷ್ಟ್ರಧ್ವಜವನ್ನು ಗೌರವಿಸುತ್ತಿದೆ” ಎಂಬ ಆರೋಪಗಳು ಬಂದಿವೆ.

ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಕೆಲವು ತಿಂಗಳ ಹಿಂದೆ, “ನಾವು ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸುತ್ತೇವೆ” ಎಂದು ಹೇಳಿಕೆ ನೀಡಿದ್ದು ವಿವಾದ ಉಂಟಾಗಿತ್ತು. ಅಲ್ಲದೆ ‘ಭಗವಾಧ್ವಜ’ದ ಕುರಿತು ಹೆಗಡೇವಾರ್‌ ಮಾತನಾಡಿರುವುದನ್ನು ‘ಧ್ವಜ’ ಎಂದು ತಿರುಚಿ ಕರ್ನಾಟಕ ಸರ್ಕಾರ ಪಠ್ಯಪುಸ್ತಕದಲ್ಲಿ ಸೇರಿಸಿದೆ.

ಈ ಎಲ್ಲ ಬೆಳವಣಿಗೆಗಳ ನಡುವೆ ಮೋದಿ ಹೇಳಿಕೆ ಹೊರಬಿದ್ದಿದೆ. ಬಹುತೇಕ ಆರ್‌ಎಸ್‌ಎಸ್ ನಾಯಕರು ಮೋದಿಯವರ ಮನವಿಗೆ ಸೊಪ್ಪು ಹಾಕಿಲ್ಲ. ಈ  ಕುರಿತು ಟೀಕೆಗಳು ವ್ಯಕ್ತವಾದ ಬಳಿಕ ಕೆಲವು ನಾಯಕರು ತಮ್ಮ ಪ್ರೊಫೈಲ್ ಬದಲಿಸಿದ್ದಾರೆ.

ಆರ್‌ಎಸ್‌ಎಸ್ ಸರಸಂಚಾಲಕ ಮೋಹನ್‌ ಭಾಗವತ್‌, ರಾಷ್ಟ್ರೀಯ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಮೊದಲಾದ ನಾಯಕರು ಈಗಲೂ ತಮ್ಮ ಟ್ಟಿಟರ್‌ ಪ್ರೊಫೈಲ್‌ನಲ್ಲಿ ತ್ರಿವರ್ಣಧ್ವಜದ ಚಿತ್ರವನ್ನು ಹಾಕಿಕೊಂಡಿಲ್ಲ.

‘ಆರ್‌ಎಸ್‌ಎಸ್‌’ನ ಅಧಿಕೃತ ಟ್ವಿಟರ್‌ ಹಾಗೂ ಫೇಸ್‌ಬುಕ್‌ ಖಾತೆಯಲ್ಲಿ ಈವರೆಗೂ ಭಗವಾಧ್ವಜವೇ ಪ್ರೊಫೈಲ್‌ ಚಿತ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಮನವಿಯು ಆರ್‌ಎಸ್‌ಎಸ್‌ಗೆ ಮುಜುಗರ ತಂದಿದಿಯೇ ಎಂಬ ಚರ್ಚೆಗಳು ಶುರುವಾಗಿವೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಆರ್‌ಎಸ್‌ಎಸ್‌ ಪ್ರಮುಖ್‌ ಸುನೀಲ್‌, “ಇಂತಹ ವಿಷಯಗಳಲ್ಲಿ ರಾಜಕೀಯ ಮಾಡಬಾರದು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಎದ್ದಿರುವ ಪ್ರಶ್ನೆಗಳ ಬಗ್ಗೆ ಸ್ಪಷ್ಟವಾಗಿ ಉತ್ತರಿಸದ ಅವರು, “ಇದು ಒಂದು ಪ್ರಕ್ರಿಯೆ. ಅದನ್ನು ನಮ್ಮದೇ ರೀತಿಯಲ್ಲಿ ನಿಭಾಯಿಸುತ್ತೇವೆ. ಹೇಗೆ ಆಚರಿಸಬೇಕು ಎಂದು ಯೋಚಿಸುತ್ತಿದ್ದೇವೆ. ಸಂಘವು ಈಗಾಗಲೇ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಅಮೃತ ಮಹೋತ್ಸವಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಪ್ರಾರಂಭಿಸಿದ ಎಲ್ಲಾ ಕಾರ್ಯಕ್ರಮಗಳನ್ನು ಸಂಘವು ಬೆಂಬಲಿಸಿದೆ” ಎಂದಿದ್ದಾರೆ.

‘ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ಉತ್ಸಾಹದಿಂದ ಆಚರಿಸಲು ಜನರು ಮತ್ತು ಸ್ವಯಂಸೇವಕರನ್ನು ಆರ್‌ಎಸ್‌ಎಸ್ ಕೇಳಿಕೊಂಡಿದೆ. ಸಿದ್ಧತೆಗಳು ನಡೆಯುತ್ತಿವೆ ಎಂದಿದ್ದಾರೆ.

ಇದನ್ನೂ ಓದಿರಿ: ಬೊಮ್ಮಾಯಿ ಆಡಳಿತದ ಒಂದು ವರ್ಷದಲ್ಲಿ ರಾಜ್ಯ ಕಂಡ ಕೋಮುದ್ವೇಷ ಪ್ರಕರಣಗಳಿವು

“ಇದು ಸಂಘದ ನಿಲುವು. ಇದನ್ನು ರಾಜಕೀಯ ವಿಷಯ ಮಾಡುವುದು ತಪ್ಪು. ಈ ರೀತಿಯ ತೀಕ್ಷ್ಣವಾದ ಪ್ರಶ್ನೆಗಳು ಇರಬಾರದು. ಇಂತಹ ಪ್ರಶ್ನೆಗಳನ್ನು ಎತ್ತುತ್ತಿರುವ ಪಕ್ಷವೇ ದೇಶ ವಿಭಜನೆಗೆ ಕಾರಣವಾಗಿತ್ತು” ಎಂದು ಕಾಂಗ್ರೆಸ್‌ ಮೇಲೆ ಆರೋಪ ಹೊರಿಸಿದ್ದಾರೆ.

ಪಿಎಂ ಮೋದಿ ಮತ್ತು ಹಲವಾರು ಬಿಜೆಪಿ ನಾಯಕರು ಸಾಮಾಜಿಕ ಮಾಧ್ಯಮದಲ್ಲಿ ತ್ರಿವರ್ಣ ಧ್ವಜವನ್ನು ತಮ್ಮ ಪ್ರೊಫೈಲ್ ಚಿತ್ರವನ್ನಾಗಿ ಅಪ್‌ಲೋಡ್ ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಇದಕ್ಕೆ ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಭಾರತದ ಮೊದಲ ಪ್ರಧಾನಿ ಜವಹರಲಾಲ್‌ ನೆಹರೂ ಅವರು ತ್ರಿವರ್ಣಧ್ವಜವನ್ನು ಹಿಡಿದಿರುವ ಫೋಟೋವನ್ನು ಪ್ರೊಫೈಲ್‌ ಚಿತ್ರವಾಗಿ ಅಪ್‌ಲೋಡ್ ಮಾಡಿದ್ದಾರೆ. ಆ ಮೂಲಕ ತ್ರಿವರ್ಣಧ್ವಜವನ್ನು ಅಂದಿನ ಕಾಂಗ್ರೆಸ್ ಸರ್ಕಾರ ಅಂಗೀಕರಿಸಿತು ಎಂಬ ಸಂದೇಶವನ್ನು ಕಾಂಗ್ರೆಸ್ ನೀಡಿದೆ.

ದೇಶದ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಾರಂಭಿಸಲಾದ “ಹರ್ ಘರ್ ತಿರಂಗ” ಅಭಿಯಾನವು ಈಗ ಆರ್‌ಎಸ್‌ಎಸ್‌ ಅಂಗಳದಲ್ಲಿ ಸದ್ದು ಮಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...