Homeದಲಿತ್ ಫೈಲ್ಸ್ಗುಜರಾತ್‌: ದಲಿತ ಮಹಿಳೆ ತಯಾರಿಸಿದ ಮಧ್ಯಾಹ್ನದ ಬಿಸಿಯೂಟ ನಿರಾಕರಿಸಿದ ಒಬಿಸಿ ಮಕ್ಕಳು!

ಗುಜರಾತ್‌: ದಲಿತ ಮಹಿಳೆ ತಯಾರಿಸಿದ ಮಧ್ಯಾಹ್ನದ ಬಿಸಿಯೂಟ ನಿರಾಕರಿಸಿದ ಒಬಿಸಿ ಮಕ್ಕಳು!

- Advertisement -
- Advertisement -

ಗುಜರಾತ್‌ನ ಮೊರ್ಬಿ ಜಿಲ್ಲೆಯ ಶ್ರೀಸೋಖ್ದಾ ಪ್ರಾಥಮಿಕ ಶಾಲೆಯಲ್ಲಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯಗಳಿಗೆ ಸೇರಿದ 153 ವಿದ್ಯಾರ್ಥಿಗಳ ಪೈಕಿ 147 ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟವನ್ನು ನಿರಾಕರಿಸಿದ್ದು, ದಲಿತ ಮಹಿಳೆ ಅಡುಗೆ ಮಾಡುತ್ತಿರುವುದೇ ಇದಕ್ಕೆ ಕಾರಣ ಎಂದು ವರದಿಯಾಗಿದೆ.

ಮಧ್ಯಾಹ್ನದ ಬಿಸಿಯೂಟ ಮಾಡುವ ಕೆಲಸವನ್ನು ಕಳೆದ ಜೂನ್‌ನಲ್ಲಿ ದಲಿತ ಮಹಿಳೆ ಧಾರಾ ಮಕ್ವಾನಾ ಅವರಿಗೆ ಶಾಲಾ ಅಧಿಕಾರಿಗಳು ಗುತ್ತಿಗೆ ನೀಡಿದರು. ಆ ನಂತರದಲ್ಲಿ ವಿದ್ಯಾರ್ಥಿಗಳ ಪೋಷಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ತಮ್ಮ ಮಕ್ಕಳು ಮಧ್ಯಾಹ್ನದ ಬಿಸಿಯೂಟ ಮಾಡದಂತೆ ತಡೆದಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವಿದ್ಯಾರ್ಥಿಗಳು ಊಟಕ್ಕೆ ಬರುತ್ತಿರಲಿಲ್ಲ. ನಂತರ ಪೋಷಕರನ್ನು ಪ್ರಶ್ನಿಸಲಾಯಿತು. ದಲಿತ ಮಹಿಳೆ ಬೇಯಿಸಿದ ಆಹಾರವನ್ನು ನಮ್ಮ ಮಕ್ಕಳು ತಿನ್ನಲು ಬಿಡುವುದಿಲ್ಲ ಎಂದು ಹೇಳಿದರು” ಎಂದು ಎಂದು ದಲಿತ ಮಹಿಳೆಯ ಪತಿ ಗೋಪಿ ಪ್ರತಿಕ್ರಿಯೆ ನೀಡಿದ್ದಾರೆ. ಮಾರ್ಕ್ವಾನಾ ತಯಾರಿಸಿದ ದೊಡ್ಡ ಪ್ರಮಾಣದ ಆಹಾರ ವ್ಯರ್ಥವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಘಟನೆಯ ನಂತರ, ಗೋಪಿ ಪೊಲೀಸರಿಗೆ ದೂರು ನೀಡಿದ್ದು, ಅದನ್ನು ಪೊಲೀಸ್ ಉಪಾಧೀಕ್ಷಕರಿಗೆ ವರ್ಗಾಯಿಸಲಾಗಿದೆ. “ಆದರೆ, ಇದು ಶಾಲಾ ಅಧಿಕಾರಿಗಳು ಮತ್ತು ಜಿಲ್ಲಾಡಳಿತದ ನಡುವಿನ ವಿಷಯವಾಗಿರುವುದರಿಂದ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ” ಎಂದು ಪೊಲೀಸ್ ಅಧಿಕಾರಿಗಳು ಹೇಳಿರುವುದಾಗಿ ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ಶಾಲೆಯ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳ ಪೋಷಕರ ನಡುವೆ ಈ ವಿಷಯದ ಬಗ್ಗೆ ಎರಡು ಭಾರಿ ಸಭೆಗಳನ್ನು ನಡೆಸಲಾಗಿದೆ. ಆದರೆ ತಮ್ಮ ನಿಲುವನ್ನು ಬದಲಾಯಿಸಲು ಪೋಷಕರು ನಿರಾಕರಿಸಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರು ಪ್ರತಿಕ್ರಿಯೆ ನೀಡಿದ್ದಾರೆ.

“ಜಾತಿವಾದಿ ಧೋರಣೆ ಬೇಡ. ಎಲ್ಲರೂ ಸಮಾನರು. ಯಾರೂ ಅಸ್ಪೃಶ್ಯರಲ್ಲ ಎಂದು ನಾವು ಮಕ್ಕಳಿಗೆ ಕಲಿಸಬಹುದು. ದುಃಖಕರವೆಂದರೆ, ನಾವು ಅವರ ಪೋಷಕರನ್ನು ಮನವೊಲಿಸಲು ಸಾಧ್ಯವಿಲ್ಲ” ಎಂದು ಪ್ರಾಂಶುಪಾಲರು ವಿಷಾದಿಸಿದ್ದಾರೆ.

ಇದನ್ನೂ ಓದಿರಿ: ‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

ದಲಿತ ಮಹಿಳೆ ತಯಾರಿಸಿ ಊಟವನ್ನು ನಿರಾಕರಿಸಿದ ಪ್ರಕರಣಗಳು ಈ ಹಿಂದೆಯೂ ನಡೆದಿವೆ. ದಲಿತ ಭೋಜನ್ಮಾತಾ (ಬಿಸಿಯೂಟದ ಸಿಬ್ಬಂದಿ) ಸುನಿತಾ ದೇವಿ ಅವರು ಬೇಯಿಸಿದ ಮಧ್ಯಾಹ್ನದ ಊಟವನ್ನು ಕೆಲವು ಮೇಲ್ಜಾತಿಯ ವಿದ್ಯಾರ್ಥಿಗಳು ನಿರಾಕರಿಸಿದ ಪ್ರಕರಣ ನಡೆದು ಆರು ತಿಂಗಳಾಯಿತು. ಆದರೆ ಇಷ್ಟು ದಿನದ ನಂತರವೂ ಉತ್ತರಖಾಂಡ್‌ನ ಚಂಪಾವತ್‌ನ ಸುಖಿದಂಗ್ ಸರ್ಕಾರಿ ಅಂತರ ಕಾಲೇಜಿನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸವರ್ಣೀಯ ಜಾತಿಯ ಮಕ್ಕಳು ಅಸ್ಪೃಶ್ಯತೆ ಆಚರಿಸುವುದನ್ನು ಮುಂದುರಿಸಿದ್ದಾರೆ ಎಂದು ಇತ್ತೀಚೆಗೆ ವರದಿಯಾಗಿದೆ.

‘ಟೈಮ್ಸ್ ಆಫ್‌ ಇಂಡಿಯಾ’ ಜೊತೆ ಮಾತನಾಡಿದ್ದ ಸುನೀತಾ, “ನಾನು ತಯಾರಿಸಿದ ಊಟವನ್ನು ಡಿಎಂ ಕೋರಿಕೆಯ ನಂತರವೂ ಅವರು ತಿನ್ನಲು ಸಿದ್ಧರಿಲ್ಲ. ಆದರೆ, ಇತರ ಭೋಜನ್ಮಾತಾ ವಿಷಯದಲ್ಲಿ ಹೀಗಾಗಿಲ್ಲ. ನನ್ನ ಬಗೆಗೆ ಇರುವ ತಾರತಮ್ಯದ ಮನೋಭಾವವನ್ನು ಅಧಿಕಾರಿಗಳಿಂದ ಬದಲಾಯಿಸಲು ಸಾಧ್ಯವಾಗದಿದ್ದಾಗ, ಇನ್ಯಾರೂ ಸರಿಪಡಿಸಬಲ್ಲರು?” ಎಂದು ಪ್ರಶ್ನಿಸಿದ್ದರು.

“ನಾನು ಅಡುಗೆ ಕೆಲಸ ಬಿಟ್ಟು ಕೂಲಿ ಕೆಲಸ ಮಾಡಬೇಕೆಂದು ಮಕ್ಕಳು ಬಯಸುತ್ತಾರೆ” ಎಂದು ಸುನಿತಾ ದುಃಖ ತೋಡಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ವಿಚಾರದಲ್ಲಿ ಮಕ್ಕಳಿಗಿಂತಲೂ ಪೋಷಕರುಗಳಿಗೆ ಜಾತಿ ವ್ಯವಸ್ಥೆಯ ಅನಿಷ್ಟತೆಯ ಬಗ್ಗೆ ಮನವರಿಕೆ ಮಾಡಿಕೊಡಬೇಕು, ಎಳೆ ವಯಸ್ಸಿನ ಮಕ್ಕಳಲ್ಲಿ ಈಗ ಬಗ್ಗೆ ಜಾಗ್ರತಿ ಮೂಡಿಸಬೇಕು, ಆದರೆ ಇಡೀ ವ್ಯವಸ್ಥೆಯೇ ಜಾತಿ ಆಧಾರಿತ ಆಗಿರುವಾಗ ಅರಿವು ಮೂಡಿಸುವವರು ಯಾರು.

LEAVE A REPLY

Please enter your comment!
Please enter your name here

- Advertisment -

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...