Homeಕರ್ನಾಟಕWatch: ಕೋಮುವಾದ ತಡೆಗೆ ಪ್ರತಿಪಕ್ಷಗಳು ಜಾತಿ ಸಮಾವೇಶಗಳನ್ನು ನಡೆಸಬೇಕಿದೆ- ನವೀನ್‌ ಸೂರಿಂಜೆ

Watch: ಕೋಮುವಾದ ತಡೆಗೆ ಪ್ರತಿಪಕ್ಷಗಳು ಜಾತಿ ಸಮಾವೇಶಗಳನ್ನು ನಡೆಸಬೇಕಿದೆ- ನವೀನ್‌ ಸೂರಿಂಜೆ

- Advertisement -
- Advertisement -

“ಕೋಮುವಾದವನ್ನು ಮಣಿಸಬೇಕೆಂದರೆ ಜಾತಿಗಳು ಸಶಕ್ತಗೊಳ್ಳುವ ಅಗತ್ಯವಿದೆ. ಹಿಂದುಳಿದ ವರ್ಗಗಳ ಜಾತಿಗಳು ಪ್ರತ್ಯೇಕ ಪ್ರತ್ಯೇಕವಾಗಿ ಸಮಾವೇಶಗಳನ್ನು ಮಾಡಬೇಕು. ಪ್ರತ್ಯೇಕ ಅಸ್ತಿತ್ವಗಳನ್ನು ಕಂಡುಕೊಳ್ಳಬೇಕು. ಆಗ ಮಾತ್ರ ಈ ಹಿಂದುತ್ವ ರಾಜಕಾರಣಕ್ಕೆ ದೊಡ್ಡದಾದ ಪೆಟ್ಟು ಕೊಡಲು ಸಾಧ್ಯವಾಗುತ್ತದೆ ಎಂಬುದು ಬಹುತೇಕ ಚಿಂತಕರ ಅಭಿಪ್ರಾಯ” ಎನ್ನುತ್ತಾರೆ ಪತ್ರಕರ್ತ ನವೀನ್ ಸೂರಿಂಜೆ.

‘ನ್ಯಾಯಪಥ’ ವಾರಪತ್ರಿಕೆ ಹಾಗೂ ‘ನಾನುಗೌರಿ.ಕಾಂ’ಗೆ ಇತ್ತೀಚೆಗೆ ನೀಡಿರುವ ವಿಡಿಯೊ ಸಂದರ್ಶನದಲ್ಲಿ ಅವರು ಕರಾವಳಿಯ ಕೋಮು ರಾಜಕಾರಣದ ಕುರಿತು ವಿಸ್ತೃತವಾಗಿ ಮಾತನಾಡಿದ್ದಾರೆ. ಕರಾವಳಿಯ ಕೋಮುಸಂಘರ್ಷದ ಕುರಿತು ಅವರು ಇತ್ತೀಚೆಗೆ ಬರೆದಿರುವ ‘ನೇತ್ರಾವತಿಯಲ್ಲಿ ನೆತ್ತರು’ ಕೃತಿ ಕುರಿತ ಸ್ವಾರಸ್ಯಕರ ಸಂಗತಿಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ.

“ಜಾತಿ ಸಮಾವೇಶಗಳನ್ನು ಯಾವ ರೀತಿಯಲ್ಲಿ ಮಾಡಬೇಕು ಎಂಬುದನ್ನು ಬಿಜೆಪಿಯೇತರ ರಾಜಕೀಯ ಪಕ್ಷಗಳು ಯೋಚನೆ ಮಾಡಿಲ್ಲ. ಸಿಪಿಐಎಂ ಸಣ್ಣಮಟ್ಟದಲ್ಲಿ ಈ ಪ್ರಯತ್ನವನ್ನು ಮಾಡಿತು. ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರನ್ನು ಕರೆಸಿ ಬಿಲ್ಲವ ಸಮಾವೇಶಗಳನ್ನು, ನಾರಾಯಣಗುರು ಸಮಾವೇಶಗಳನ್ನು ಏರ್ಪಡಿಸಿತು. ಅದು ಕೆಲವು ಪರಿಣಾಮಗಳನ್ನು ಬೀರಿತು” ಎಂದಿದ್ದಾರೆ.

“ಬಿಲ್ಲವರು ಈಗ ಸ್ವಲ್ಪ ಜಾಗೃತರಾಗಿದ್ದಾರೆ. ಯಾಕೆ ನಾವು ಮಾತ್ರ ಕೊಲೆಯಾಗುತ್ತಿದ್ದೇವೆ, ನಾವು ಮಾತ್ರ ಏಕೆ ಕೊಲ್ಲುತ್ತಿದ್ದೇವೆ, ಅಧಿಕಾರಕ್ಕೆ ಏರುವುದು ಮಾತ್ರ ಬ್ರಾಹ್ಮಣರು ಮತ್ತು ಬಂಟರು ಮಾತ್ರ ಏಕೆ ಎಂಬ ಪ್ರಶ್ನೆಯನ್ನು ಸಮುದಾಯ ಕೇಳಿಕೊಳ್ಳುತ್ತಿದೆ. ಪ್ರವೀಣ್‌ ಕೊಲೆಯ ಸಂದರ್ಭದಲ್ಲಿ- ನೋಡಿ ಮತ್ತೊಬ್ಬ ಬಿಲ್ಲವ ಸತ್ತ- ಎಂಬ ವಿಷಾದ ವ್ಯಕ್ತವಾಯಿತು. ಫಾಝಿಲ್ ಕೊಲೆ ಸಂಬಂಧ ಅರೆಸ್ಟ್‌ ಆಗಿರುವವರಲ್ಲಿ ಬಿಲ್ಲವ, ಬಂಟರನ್ನು ಬಿಟ್ಟರೆ ಬ್ರಾಹ್ಮಣರು, ಮೇಲ್ವರ್ಗಗಳು ಯಾಕಿಲ್ಲ ಎಂಬ ಪ್ರಶ್ನೆ ಮೂಡಿದೆ. ಇದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಜಾತಿ ಜಾಗೃತಿಯ ಸಮಾವೇಶಗಳು ಹೆಚ್ಚಾಗಿ ಆಗಬೇಕಿದೆ. ಕೆಳವರ್ಗಗಳು ಜಾತಿ ಸಮಾವೇಶಗಳನ್ನು ಮಾಡುವುದು ಜಾತಿವಾದ ಆಗುವುದಿಲ್ಲ. ಅದು ಸಮಾಜ ಸುಧಾರಣೆಯ ಭಾಗವಾಗುತ್ತದೆ. ಎಲ್ಲ ಕೆಳಸ್ತರದ ಜಾತಿಗಳ ಜಾಗೃತಿ ಸಮಾವೇಶಗಳನ್ನು ಮಾಡುವ ತುರ್ತು ಇದೆ. ಇದಕ್ಕೆ ಕಾಂಗ್ರೆಸ್‌, ಜೆಡಿಎಸ್‌ ಥರದ ಪಕ್ಷಗಳು ಸಹಾಯ ಮಾಡಬೇಕು” ಎಂದು ಆಶಿಸಿದ್ದಾರೆ.

ವಿಡಿಯೊ ಸಂದರ್ಶನದಲ್ಲಿ ಕೇಳಲಾಗಿರುವ ಪ್ರಶ್ನೆಗಳು

* ಚುನಾವಣೆ ಹತ್ತಿರವಾದಂತೆ ಕರಾವಳಿ ಮತ್ತೆ ಸುದ್ದಿಯಲ್ಲಿದೆ. ಹಿಂದೂ ಮುಸ್ಲಿಂ ಬೈನರಿಯಾಚೆಗೆ ಕರಾವಳಿ ಕರ್ನಾಟಕದ ರಾಜಕಾರಣ ಇಲ್ಲವೇ?

* ಸಂಘಪರಿವಾರದ ಅಜೆಂಡಾಗಳನ್ನು ಇಲ್ಲಿನ ಬಲಿಪಶುಗಳಿಗೆ ತಿಳಿಸುವ ಪ್ರಯತ್ನಗಳಾಗುತ್ತಿವೆಯೇ? ಅದು ಯಾವ ಮಟ್ಟಿಗಿನ ಯಶಸ್ಸು ಲಭಿಸಿದೆ.

* ಕೋಮುದ್ವೇಷ ಹಿನ್ನೆಲೆಯ ಕೊಲೆಗಳಲ್ಲಿ ಸರ್ಕಾರ ಪರಿಹಾರ ನೀಡುವಾಗ ತಾರತಮ್ಯ ನೀತಿ ಅನುಭವಿಸುತ್ತಿರುವ ಟೀಕೆಗಳು ಬರುತ್ತಿವೆ. ಇದನ್ನು ಹೇಗೆ ನೋಡುತ್ತೀರಿ?

* ಕರಾವಳಿ ಪೊಲೀಸರ ಮತೀಯವಾದಿ ಧೋರಣೆಯ ಕುರಿತು ಆತಂಕಗಳು ವ್ಯಕ್ತವಾಗುತ್ತಿವೆ. ‌ಇದರ ಕುರಿತು ನಿಮ್ಮ ಅನಿಸಿಕೆಗಳೇನು?

* ಕೋಮುವಾದದಾಚೆಗೆ ಕರಾವಳಿ ಜನತೆಯ ನಿಜವಾದ ಸಮಸ್ಯೆಗಳು ಯಾವುವು?

* ಕರಾವಳಿ ಭಾಗದ ಮುಸ್ಲಿಮರ ಆರ್ಥಿಕ ಸಬಲೀಕರಣ ಕೂಡ ಮುಸ್ಲಿಮೇತರರ ಅಸೂಹೆಗೆ ಕಾರಣವಾಗಿದೆಯೇ?

* ಕರಾವಳಿಯ ಸಮಸ್ಯೆಯಲ್ಲಿ ಸರ್ಕಾರ failure ಅಂತೂ ಇದ್ದೇ ಇದೆ. ಆದರೆ ನಾಗರಿಕ ಸಮಾಜ ಎಲ್ಲಿ ಎಡವುತ್ತಾ ಇದೆ?

* ಅಕಸ್ಮಾತ್, ಕೋಮು ಧ್ರುವೀಕರಣವನ್ನು ತಗ್ಗಿಸಿ, ದಕ್ಷಿಣ ಕನ್ನಡದಲ್ಲಿ ಸೌಹಾರ್ದತೆ ನೆಲೆಸಲು ತಯ್ಯಾರಾಗುವ ಪಕ್ಷ ಅಧಿಕಾರಕ್ಕೆ ಬಂದರೆ, ಅವರು ಯಾವ್ಯಾವ ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕು?

* ನೀವು ಬರೆದ ‘ನೇತ್ರಾವತಿಯಲ್ಲಿ ನೆತ್ತರು’ ಕೃತಿ ಕರಾವಳಿಯ ಗಂಭೀರ ಸಮಸ್ಯೆಯ ಕುರಿತು ಮಾತನಾಡಿದೆ. ಓದುಗರಿಂದ ಪ್ರತಿಕ್ರಿಯೆ ಹೇಗಿದೆ?

* ‘ನೇತ್ರಾವತಿಯಲ್ಲಿ ನೆತ್ತರು’ ಕೃತಿ ಮುಸ್ಲಿಂ ಕೋಮುವಾದದ ಕುರಿತು ಚರ್ಚೆ ನಡೆಸಿಲ್ಲ ಎಂಬ ಆಕ್ಷೇಪಗಳಿವೆಯಲ್ಲ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ದೇಶದಿಂದ ಜಾತಿವಾದ ತೊಲಗಲಿ ಎಂದು ಕರೆ ಕೊಡುವ ಬದಲು, ಜಾತಿಯ ವಿಷ ಬೀಜ ಬಿತ್ತಬೇಡಿ. ಜಾತಿವಾದ ಹೋಗುವವರೆಗೂ ಈ ದೇಶ ಉದ್ಧಾರ ಆಗಲ್ಲ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...