Homeಕರ್ನಾಟಕWatch: ಕೋಮುವಾದ ತಡೆಗೆ ಪ್ರತಿಪಕ್ಷಗಳು ಜಾತಿ ಸಮಾವೇಶಗಳನ್ನು ನಡೆಸಬೇಕಿದೆ- ನವೀನ್‌ ಸೂರಿಂಜೆ

Watch: ಕೋಮುವಾದ ತಡೆಗೆ ಪ್ರತಿಪಕ್ಷಗಳು ಜಾತಿ ಸಮಾವೇಶಗಳನ್ನು ನಡೆಸಬೇಕಿದೆ- ನವೀನ್‌ ಸೂರಿಂಜೆ

- Advertisement -
- Advertisement -

“ಕೋಮುವಾದವನ್ನು ಮಣಿಸಬೇಕೆಂದರೆ ಜಾತಿಗಳು ಸಶಕ್ತಗೊಳ್ಳುವ ಅಗತ್ಯವಿದೆ. ಹಿಂದುಳಿದ ವರ್ಗಗಳ ಜಾತಿಗಳು ಪ್ರತ್ಯೇಕ ಪ್ರತ್ಯೇಕವಾಗಿ ಸಮಾವೇಶಗಳನ್ನು ಮಾಡಬೇಕು. ಪ್ರತ್ಯೇಕ ಅಸ್ತಿತ್ವಗಳನ್ನು ಕಂಡುಕೊಳ್ಳಬೇಕು. ಆಗ ಮಾತ್ರ ಈ ಹಿಂದುತ್ವ ರಾಜಕಾರಣಕ್ಕೆ ದೊಡ್ಡದಾದ ಪೆಟ್ಟು ಕೊಡಲು ಸಾಧ್ಯವಾಗುತ್ತದೆ ಎಂಬುದು ಬಹುತೇಕ ಚಿಂತಕರ ಅಭಿಪ್ರಾಯ” ಎನ್ನುತ್ತಾರೆ ಪತ್ರಕರ್ತ ನವೀನ್ ಸೂರಿಂಜೆ.

‘ನ್ಯಾಯಪಥ’ ವಾರಪತ್ರಿಕೆ ಹಾಗೂ ‘ನಾನುಗೌರಿ.ಕಾಂ’ಗೆ ಇತ್ತೀಚೆಗೆ ನೀಡಿರುವ ವಿಡಿಯೊ ಸಂದರ್ಶನದಲ್ಲಿ ಅವರು ಕರಾವಳಿಯ ಕೋಮು ರಾಜಕಾರಣದ ಕುರಿತು ವಿಸ್ತೃತವಾಗಿ ಮಾತನಾಡಿದ್ದಾರೆ. ಕರಾವಳಿಯ ಕೋಮುಸಂಘರ್ಷದ ಕುರಿತು ಅವರು ಇತ್ತೀಚೆಗೆ ಬರೆದಿರುವ ‘ನೇತ್ರಾವತಿಯಲ್ಲಿ ನೆತ್ತರು’ ಕೃತಿ ಕುರಿತ ಸ್ವಾರಸ್ಯಕರ ಸಂಗತಿಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ.

“ಜಾತಿ ಸಮಾವೇಶಗಳನ್ನು ಯಾವ ರೀತಿಯಲ್ಲಿ ಮಾಡಬೇಕು ಎಂಬುದನ್ನು ಬಿಜೆಪಿಯೇತರ ರಾಜಕೀಯ ಪಕ್ಷಗಳು ಯೋಚನೆ ಮಾಡಿಲ್ಲ. ಸಿಪಿಐಎಂ ಸಣ್ಣಮಟ್ಟದಲ್ಲಿ ಈ ಪ್ರಯತ್ನವನ್ನು ಮಾಡಿತು. ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರನ್ನು ಕರೆಸಿ ಬಿಲ್ಲವ ಸಮಾವೇಶಗಳನ್ನು, ನಾರಾಯಣಗುರು ಸಮಾವೇಶಗಳನ್ನು ಏರ್ಪಡಿಸಿತು. ಅದು ಕೆಲವು ಪರಿಣಾಮಗಳನ್ನು ಬೀರಿತು” ಎಂದಿದ್ದಾರೆ.

“ಬಿಲ್ಲವರು ಈಗ ಸ್ವಲ್ಪ ಜಾಗೃತರಾಗಿದ್ದಾರೆ. ಯಾಕೆ ನಾವು ಮಾತ್ರ ಕೊಲೆಯಾಗುತ್ತಿದ್ದೇವೆ, ನಾವು ಮಾತ್ರ ಏಕೆ ಕೊಲ್ಲುತ್ತಿದ್ದೇವೆ, ಅಧಿಕಾರಕ್ಕೆ ಏರುವುದು ಮಾತ್ರ ಬ್ರಾಹ್ಮಣರು ಮತ್ತು ಬಂಟರು ಮಾತ್ರ ಏಕೆ ಎಂಬ ಪ್ರಶ್ನೆಯನ್ನು ಸಮುದಾಯ ಕೇಳಿಕೊಳ್ಳುತ್ತಿದೆ. ಪ್ರವೀಣ್‌ ಕೊಲೆಯ ಸಂದರ್ಭದಲ್ಲಿ- ನೋಡಿ ಮತ್ತೊಬ್ಬ ಬಿಲ್ಲವ ಸತ್ತ- ಎಂಬ ವಿಷಾದ ವ್ಯಕ್ತವಾಯಿತು. ಫಾಝಿಲ್ ಕೊಲೆ ಸಂಬಂಧ ಅರೆಸ್ಟ್‌ ಆಗಿರುವವರಲ್ಲಿ ಬಿಲ್ಲವ, ಬಂಟರನ್ನು ಬಿಟ್ಟರೆ ಬ್ರಾಹ್ಮಣರು, ಮೇಲ್ವರ್ಗಗಳು ಯಾಕಿಲ್ಲ ಎಂಬ ಪ್ರಶ್ನೆ ಮೂಡಿದೆ. ಇದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಜಾತಿ ಜಾಗೃತಿಯ ಸಮಾವೇಶಗಳು ಹೆಚ್ಚಾಗಿ ಆಗಬೇಕಿದೆ. ಕೆಳವರ್ಗಗಳು ಜಾತಿ ಸಮಾವೇಶಗಳನ್ನು ಮಾಡುವುದು ಜಾತಿವಾದ ಆಗುವುದಿಲ್ಲ. ಅದು ಸಮಾಜ ಸುಧಾರಣೆಯ ಭಾಗವಾಗುತ್ತದೆ. ಎಲ್ಲ ಕೆಳಸ್ತರದ ಜಾತಿಗಳ ಜಾಗೃತಿ ಸಮಾವೇಶಗಳನ್ನು ಮಾಡುವ ತುರ್ತು ಇದೆ. ಇದಕ್ಕೆ ಕಾಂಗ್ರೆಸ್‌, ಜೆಡಿಎಸ್‌ ಥರದ ಪಕ್ಷಗಳು ಸಹಾಯ ಮಾಡಬೇಕು” ಎಂದು ಆಶಿಸಿದ್ದಾರೆ.

ವಿಡಿಯೊ ಸಂದರ್ಶನದಲ್ಲಿ ಕೇಳಲಾಗಿರುವ ಪ್ರಶ್ನೆಗಳು

* ಚುನಾವಣೆ ಹತ್ತಿರವಾದಂತೆ ಕರಾವಳಿ ಮತ್ತೆ ಸುದ್ದಿಯಲ್ಲಿದೆ. ಹಿಂದೂ ಮುಸ್ಲಿಂ ಬೈನರಿಯಾಚೆಗೆ ಕರಾವಳಿ ಕರ್ನಾಟಕದ ರಾಜಕಾರಣ ಇಲ್ಲವೇ?

* ಸಂಘಪರಿವಾರದ ಅಜೆಂಡಾಗಳನ್ನು ಇಲ್ಲಿನ ಬಲಿಪಶುಗಳಿಗೆ ತಿಳಿಸುವ ಪ್ರಯತ್ನಗಳಾಗುತ್ತಿವೆಯೇ? ಅದು ಯಾವ ಮಟ್ಟಿಗಿನ ಯಶಸ್ಸು ಲಭಿಸಿದೆ.

* ಕೋಮುದ್ವೇಷ ಹಿನ್ನೆಲೆಯ ಕೊಲೆಗಳಲ್ಲಿ ಸರ್ಕಾರ ಪರಿಹಾರ ನೀಡುವಾಗ ತಾರತಮ್ಯ ನೀತಿ ಅನುಭವಿಸುತ್ತಿರುವ ಟೀಕೆಗಳು ಬರುತ್ತಿವೆ. ಇದನ್ನು ಹೇಗೆ ನೋಡುತ್ತೀರಿ?

* ಕರಾವಳಿ ಪೊಲೀಸರ ಮತೀಯವಾದಿ ಧೋರಣೆಯ ಕುರಿತು ಆತಂಕಗಳು ವ್ಯಕ್ತವಾಗುತ್ತಿವೆ. ‌ಇದರ ಕುರಿತು ನಿಮ್ಮ ಅನಿಸಿಕೆಗಳೇನು?

* ಕೋಮುವಾದದಾಚೆಗೆ ಕರಾವಳಿ ಜನತೆಯ ನಿಜವಾದ ಸಮಸ್ಯೆಗಳು ಯಾವುವು?

* ಕರಾವಳಿ ಭಾಗದ ಮುಸ್ಲಿಮರ ಆರ್ಥಿಕ ಸಬಲೀಕರಣ ಕೂಡ ಮುಸ್ಲಿಮೇತರರ ಅಸೂಹೆಗೆ ಕಾರಣವಾಗಿದೆಯೇ?

* ಕರಾವಳಿಯ ಸಮಸ್ಯೆಯಲ್ಲಿ ಸರ್ಕಾರ failure ಅಂತೂ ಇದ್ದೇ ಇದೆ. ಆದರೆ ನಾಗರಿಕ ಸಮಾಜ ಎಲ್ಲಿ ಎಡವುತ್ತಾ ಇದೆ?

* ಅಕಸ್ಮಾತ್, ಕೋಮು ಧ್ರುವೀಕರಣವನ್ನು ತಗ್ಗಿಸಿ, ದಕ್ಷಿಣ ಕನ್ನಡದಲ್ಲಿ ಸೌಹಾರ್ದತೆ ನೆಲೆಸಲು ತಯ್ಯಾರಾಗುವ ಪಕ್ಷ ಅಧಿಕಾರಕ್ಕೆ ಬಂದರೆ, ಅವರು ಯಾವ್ಯಾವ ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕು?

* ನೀವು ಬರೆದ ‘ನೇತ್ರಾವತಿಯಲ್ಲಿ ನೆತ್ತರು’ ಕೃತಿ ಕರಾವಳಿಯ ಗಂಭೀರ ಸಮಸ್ಯೆಯ ಕುರಿತು ಮಾತನಾಡಿದೆ. ಓದುಗರಿಂದ ಪ್ರತಿಕ್ರಿಯೆ ಹೇಗಿದೆ?

* ‘ನೇತ್ರಾವತಿಯಲ್ಲಿ ನೆತ್ತರು’ ಕೃತಿ ಮುಸ್ಲಿಂ ಕೋಮುವಾದದ ಕುರಿತು ಚರ್ಚೆ ನಡೆಸಿಲ್ಲ ಎಂಬ ಆಕ್ಷೇಪಗಳಿವೆಯಲ್ಲ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ದೇಶದಿಂದ ಜಾತಿವಾದ ತೊಲಗಲಿ ಎಂದು ಕರೆ ಕೊಡುವ ಬದಲು, ಜಾತಿಯ ವಿಷ ಬೀಜ ಬಿತ್ತಬೇಡಿ. ಜಾತಿವಾದ ಹೋಗುವವರೆಗೂ ಈ ದೇಶ ಉದ್ಧಾರ ಆಗಲ್ಲ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...