Homeಮುಖಪುಟಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್‌: ‘ಮೋದಿಶಾಹಿ’ ಅಧೋಗತಿಗೆ ತಲುಪುತ್ತಿದೆ ಎಂದ ಕಾಂಗ್ರೆಸ್‌

ಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್‌: ‘ಮೋದಿಶಾಹಿ’ ಅಧೋಗತಿಗೆ ತಲುಪುತ್ತಿದೆ ಎಂದ ಕಾಂಗ್ರೆಸ್‌

- Advertisement -
- Advertisement -

ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ವಿಷಯವನ್ನು ಪ್ರಸ್ತಾಪಿಸಿದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಒಕ್ಕೂಟ ಸರ್ಕಾರವು ಪ್ರತಿಪಕ್ಷಗಳ ನೈತಿಕತೆಯನ್ನು ಕುಗ್ಗಿಸಲು ಮತ್ತು ಹೆದರಿಸಲು ಪ್ರಯತ್ನಿಸುತ್ತಿದೆ ಎಂದು ಗುರುವಾರ ಆರೋಪಿಸಿದ್ದಾರೆ. ಸಂಸತ್ತಿನ ಅಧಿವೇಶನ ನಡೆಯುತ್ತಿರುವ ಸಮಯದಲ್ಲಿ ಜಾರಿ ನಿರ್ದೇಶನಾಲಯದಿಂದ ತಮ್ಮನ್ನು ಕರೆಸಲಾಗಿದೆ ಎಂದು ಸೂಚಿಸಿದ ಖರ್ಗೆ, ಇಡಿ ಹಾಗೆ ಮಾಡುವುದು ನ್ಯಾಯವೇ ಎಂದು ಪ್ರಶ್ನಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ, ನಾಯಕರನ್ನು ಗುರಿಯಾಗಿಸಲು ಸರ್ಕಾರವು ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ ನಂತರ ಮಾತನಾಡಿದ ಕಾಂಗ್ರೆಸ್ ನಾಯಕ ಖರ್ಗೆ, “ಸದನ ಈಗ ಕಾರ್ಯನಿರ್ವಹಿಸುತ್ತಿದ್ದು, ನಾನು ವಿರೋಧ ಪಕ್ಷಗಳ ನಾಯಕನಾಗಿದ್ದೇನೆ. ಆದರೆ ಇದೀಗ ಸಂಸತ್ ಅಧಿವೇಶನ ನಡೆಯುತ್ತಿರುವಾಗಲೆ ಇಡಿ ಮುಂದೆ ಹಾಜರಾಗುವಂತೆ ನನಗೆ ಸಮನ್ಸ್ ಬಂದಿದೆ. ಸಂಸತ್ತು ಕಾರ್ಯನಿರ್ವಹಿಸುತ್ತಿರುವಾಗ ಇಡಿ ನನ್ನನ್ನು ಕರೆಸುವುದು ನ್ಯಾಯವೇ?” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಧ್ಯಾಹ್ನ 12.30ಕ್ಕೆ ಇಡಿ ಕಚೇರಿಗೆ ತೆರಳಬೇಕು ಎಂದು ಹೇಳಿದ ಖರ್ಗೆ, “ನಾನು ಕಾನೂನನ್ನು ಅನುಸರಿಸಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಿವಾಸಗಳನ್ನು ಪೊಲೀಸರು ಸುತ್ತುವರೆದಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ. “ನಾವು ಹೀಗೆಯೇ ಮುಂದುವರಿದರೆ, ನಮ್ಮ ಪ್ರಜಾಪ್ರಭುತ್ವ ಜೀವಂತವಾಗಿ ಉಳಿಯುತ್ತದೆಯೇ? ನಮ್ಮ ಸಂವಿಧಾನದ ಪ್ರಕಾರ ನಾವು ಕಾರ್ಯನಿರ್ವಹಿಸುತ್ತೇವೆಯೇ? ಇದನ್ನು ಉದ್ದೇಶಪೂರ್ವಕವಾಗಿ ನಮ್ಮನ್ನು ಕುಗ್ಗಿಸಲು, ನಾಶಪಡಿಸಲು ಮತ್ತು ನಮ್ಮನ್ನು ಬೆದರಿಸಲು ಮಾಡಲಾಗುತ್ತಿದೆ. ಆದರೆ ನಾವು ಇದಕ್ಕೆ ಹೆದರುವುದಿಲ್ಲ, ಇದರ ವಿರುದ್ಧ ಹೋರಾಟ ಮಾಡುತ್ತೇವೆ” ಎಂದು ಅವರು ಹೇಳಿದ್ದು, ಸದನದಲ್ಲಿ ಈ ವಿಷಯದ ಬಗ್ಗೆ ಚರ್ಚೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಭಾರತೀಯರನ್ನು ಸ್ಥಳಾಂತರಿಸುವಲ್ಲೂ ಪ್ರಚಾರ ಪಡೆಯುತ್ತಿರುವ ಬಿಜೆಪಿ; ಪ್ರಿಯಾಂಕ್ ಖರ್ಗೆ ತಿರುಗೇಟು

ಇದಕ್ಕೆ ಪ್ರತಿಕ್ರಿಯಿಸಿದ ಸದನದ ನಾಯಕ ಪಿಯೂಷ್ ಗೋಯಲ್, ಕಾನೂನು ಜಾರಿ ಸಂಸ್ಥೆಗಳ ಕಾರ್ಯಚಟುವಟಿಕೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಕಾಂಗ್ರೆಸ್ ನಾಯಕರು ಕಾನೂನನ್ನು ಎದುರಿಸಬೇಕು, ಅದರಿಂದ ಓಡಿಹೋಗಬಾರದು ಮತ್ತು ಸಂಸತ್ತಿನ ಕಾರ್ಯನಿರ್ವಹಣೆಗೆ ಅವಕಾಶ ನೀಡಬೇಕು ಎಂದು ಅವರು ಹೇಳಿದ್ದಾರೆ. ತಮ್ಮ ಸರ್ಕಾರದ ಮೇಲಿನ ಆರೋಪಕ್ಕೆ ತಿರುಗೇಟು ನೀಡಿದ ಗೋಯಲ್, “ಅವರು (ಕಾಂಗ್ರೆಸ್) ಅಧಿಕಾರದಲ್ಲಿದ್ದಾಗ ಕಾನೂನು ಜಾರಿ ಸಂಸ್ಥೆಗಳ ಕಾರ್ಯಚಟುವಟಿಕೆಯಲ್ಲಿ ಹಸ್ತಕ್ಷೇಪ ಮಾಡಿರಬಹುದು…” ಎಂದು ಹೇಳಿದ್ದಾರೆ.

“ನಮ್ಮ ಸರ್ಕಾರವು ಕಾನೂನು ಜಾರಿ ಸಂಸ್ಥೆಗಳ ಕಾರ್ಯಚಟುವಟಿಕೆಯಲ್ಲಿ ಯಾವುದೇ ರೀತಿಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಅವರ ಕೆಲಸವನ್ನು ಮಾಡಲು ಅವರಿಗೆ ಅವಕಾಶ ನೀಡುತ್ತದೆ. ಕಾಂಗ್ರೆಸ್‌ ಸರ್ಕಾರವು ಕಾನೂನು ಜಾರಿ ಸಂಸ್ಥೆಗಳ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿತ್ತು. ನಮ್ಮ ಸರ್ಕಾರ ಈ ರೀತಿ ಮಾಡಿಲ್ಲ” ಎಂದು ಗೋಯೆಲ್ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಮಕ್ಕಳು ಶಿಕ್ಷಿತರಾಗುವುದಕ್ಕಿಂತ, ಮನುಸ್ಮೃತಿಯ ರೋಬೊಟ್‌ಗಳಾಗಬೇಕಿದೆ: ಪ್ರಿಯಾಂಕ್‌ ಖರ್ಗೆ ಆಕ್ರೋಶ

ಸಂಸತ್ತಿನ ಅಧಿವೇಶನದ ಮಧ್ಯದಲ್ಲಿ ಜಾರಿ ನಿರ್ದೇಶನಾಲಯವು ಖರ್ಗೆ ಅವರಿಗೆ ಸಮನ್ಸ್‌ ನೀಡಿರುವುದು “ಮೋದಿಶಾಹಿ” ಹೊಸ ಅಧೋಗತಿಗೆ ತಲುಪುತ್ತಿದೆ ಎಂದು ರಾಜ್ಯಸಭೆಯಲ್ಲಿ ಕಾಂಗ್ರೆಸ್‌ನ ಮುಖ್ಯ ಸಚೇತಕ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಸಂಸತ್ತಿನ ಅಧಿವೇಶನ ನಡೆಯುತ್ತಿರುವಾಗ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಡಿ ಸಮನ್ಸ್ ನೀಡಿತ್ತು. ಅವರು ಸಹಜವಾಗಿಯೇ ಮಧ್ಯಾಹ್ನ 12:20 ರ ಸುಮಾರಿಗೆ ಹೊರಟು ಸ್ವತಃ ಹಾಜರಾದರು. ಇದು ‘ಮೋದಿಶಾಹಿ’ ಹೊಸದಾಗಿ ತನ್ನ ಕನಿಷ್ಠ ಮಟ್ಟವನ್ನು ತಲುಪುತ್ತಿದೆ” ಎಂದು ಜೈರಾಮ್‌ ರಮೇಶ್ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....