Homeಮುಖಪುಟಭಾರತದಲ್ಲಿ ಕೈಯಿಂದ ಶೌಚಗುಂಡಿ ಸ್ವಚ್ಛಗೊಳಿಸುವ ಪದ್ದತಿಯಿಲ್ಲ; ಆದರೆ ಸ್ವಚ್ಛಗೊಳಿಸುವ ವೇಳೆ 330 ಜನರು ಸಾವಿಗೀಡಾಗಿದ್ದಾರೆ: ಕೇಂದ್ರ...

ಭಾರತದಲ್ಲಿ ಕೈಯಿಂದ ಶೌಚಗುಂಡಿ ಸ್ವಚ್ಛಗೊಳಿಸುವ ಪದ್ದತಿಯಿಲ್ಲ; ಆದರೆ ಸ್ವಚ್ಛಗೊಳಿಸುವ ವೇಳೆ 330 ಜನರು ಸಾವಿಗೀಡಾಗಿದ್ದಾರೆ: ಕೇಂದ್ರ ಸರ್ಕಾರ

ಕಳೆದ ಐದು ವರ್ಷಗಳಲ್ಲಿ ಕೈಯಿಂದ ಶೌಚಗುಂಡಿಗಳ ಸ್ವಚ್ಛಗೊಳಿಸುವಿಕೆಯಿಂದಾಗಿ ಯಾವುದೇ ಸಾವುಗಳು ವರದಿಯಾಗಿಲ್ಲ ಎಂದು ಸರ್ಕಾರ ಹೇಳಿದೆ

- Advertisement -
- Advertisement -

ಭಾರತದಲ್ಲಿ ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವ ಕೆಲಸದಲ್ಲಿ ಯಾರೂ ತೊಡಗಿಸಿಕೊಂಡಿಲ್ಲ, ಆದರೆ 2017 ಮತ್ತು 2021 ರ ನಡುವೆ ಒಳಚರಂಡಿ ಮತ್ತು ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವಾಗ 330 ಜನರು ಮೃತಪಟ್ಟಿದ್ದಾರೆ ಎಂದು ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಮಂಗಳವಾರ ಲೋಕಸಭೆಗೆ ತಿಳಿಸಿದೆ. ಬಹುಜನ ಸಮಾಜ ಪಕ್ಷದ ಸಂಸದ ಗಿರೀಶ್ ಚಂದ್ರ ಅವರು ಕೇಳಿದ ಪ್ರಶ್ನೆಗೆ ಉತ್ತರವಾಗಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರಾಮದಾಸ್ ಅಠಾವಳೆ ಅವರು ‘ಮ್ಯಾನುಯಲ್ ಸ್ಕ್ಯಾವೆಂಜಿಂಗ್’ ಕುರಿತ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಒಳಚರಂಡಿ ಅಥವಾ ಶೌಚಗುಂಡಿಯಿಂದ ಕೈಗಳ ಮೂಲಕ ಮಲವನ್ನು ತೆಗೆಯುವ ಪದ್ದತಿಯನ್ನು, ‘ಮ್ಯಾನುಯಲ್ ಸ್ಕ್ಯಾವೆಂಜರ್‍ಸ್‌‌‌ ಉದ್ಯೋಗ ನಿಷೇಧ ಮತ್ತು ಪುನರ್ವಸತಿ ಕಾಯಿದೆ-2013’ ರ ಅಡಿಯಲ್ಲಿ ನಿಷೇಧಿಸಲಾಗಿದೆ. ಅದಾಗಿಯೂ ಈ ಪದ್ದತಿ ಭಾರತದ ಅನೇಕ ಭಾಗಗಳಲ್ಲಿ ಪ್ರಚಲಿತದಲ್ಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗಿರೀಶ್‌ ಚಂದ್ರ ಅವರು, ದೇಶದಲ್ಲಿ ಶೌಚಗುಂಡಿಗಳಲ್ಲಿ ಕೆಲಸ ಮಾಡುವವರು ಗುತ್ತಿಗೆ, ವಲಸೆ ಮತ್ತು ಸಾಂದರ್ಭಿಕ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆಯೇ ಅಥವಾ ಬಂಧಿತ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆಯೇ ಹಾಗೂ ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಕೈಗೊಂಡ ಕ್ರಮಗಳ ಕುರಿತು ವಿವರಗಳನ್ನು ಕೋರಿದ್ದರು.

ಇದನ್ನೂ ಓದಿ: ಚಂದ್ರಯಾನ ಇರಲಿ; ಒಳಚರಂಡಿ ಸ್ವಚ್ಛಗೊಳಿಸುವ ತಂತ್ರಜ್ಞಾನ ಎಲ್ಲಿದೆ? ಗುಜರಾತ್ ಸರಕಾರಕ್ಕೆ ಜಿಗ್ನೇಶ್ ಮೇವಾನಿ ಪ್ರಶ್ನೆ

ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಉದ್ಯೋಗ ನಿಷೇಧ ಮತ್ತು ಪುನರ್ವಸತಿ ಕಾಯಿದೆಯಡಿಯಲ್ಲಿ 20% ಕ್ಕಿಂತ ಹೆಚ್ಚು ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು ನೋಂದಾಯಿಸಲ್ಪಟ್ಟಿಲ್ಲವೇ ಎಂದು ಅವರು ಕೇಳಿದ್ದರು. ಕಳೆದ ಐದು ವರ್ಷಗಳಲ್ಲಿ ಒಳಚರಂಡಿ ಮತ್ತು ಶೌಚಗುಂಡಿಗಳನ್ನು ಅಪಾಯಕಾರಿಯಾಗಿ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಸಾವನ್ನಪ್ಪಿದ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಸಂಖ್ಯೆಯ ಕುರಿತು ಚಂದ್ರಾ ಅವರು ರಾಜ್ಯವಾರು ಮಾಹಿತಿಯನ್ನು ಕೋರಿದ್ದರು.

“2013 ರ ಉದ್ಯೋಗ ನಿಷೇಧ ಮತ್ತು ಪುನರ್ವಸತಿ ಕಾಯಿದೆಯ ಸೆಕ್ಷನ್ 2 (1) (ಜಿ) ಅಡಿಯಲ್ಲಿ ವ್ಯಾಖ್ಯಾನಿಸಲಾದ ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವ ಪದ್ದತಿಯಲ್ಲಿ ತೊಡಗಿರುವ ಜನರ ಯಾವುದೇ ವರದಿಯಿಲ್ಲ” ಎಂದು ಸಚಿವ ರಾಮದಾಸ್ ಅಠಾವಳೆ ಪ್ರತಿಕ್ರಿಯಿಸಿದ್ದಾರೆ.

“ಡಿಸೆಂಬರ್ 6, 2013 ರಿಂದ ಜಾರಿಗೆ ಬರುವಂತೆ ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವ ಪದ್ದತಿಯನ್ನು ನಿಷೇಧಿಸಲಾಗಿದೆ. ಹೇಳಿದ ದಿನಾಂಕದಿಂದ ಯಾವುದೇ ವ್ಯಕ್ತಿ ಅಥವಾ ಏಜೆನ್ಸಿಯು ಯಾವುದೇ ವ್ಯಕ್ತಿಯನ್ನು ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವಂತೆ ತೊಡಗಿಸಿಕೊಳ್ಳಲು ಅಥವಾ ಬಳಸಿಕೊಳ್ಳಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಕಳೆದ ಮೂರು ವರ್ಷಗಳಲ್ಲಿ ದೇಶದಲ್ಲಿ 58,098 ಮ್ಯಾನುವಲ್ ಸ್ಕ್ಯಾವೆಂಜರ್‌ಗಳನ್ನು ಸರ್ಕಾರ ಗುರುತಿಸಿದೆ ಎಂದು ಜುಲೈ 26 ರಂದು ಅಠಾವಳೆ ಲೋಕಸಭೆಗೆ ತಿಳಿಸಿದ್ದರು. ಜುಲೈ 19 ರಂದು, 2017 ರಿಂದ ಭಾರತದಾದ್ಯಂತ 347 ನೈರ್ಮಲ್ಯ ಕಾರ್ಮಿಕರು ಒಳಚರಂಡಿ ಮತ್ತು ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವಾಗ ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ಲೋಕಸಭೆಗೆ ತಿಳಿಸಿತ್ತು.

ಮಂಗಳವಾರ, 2017 ರಿಂದ 2021 ರವರೆಗೆ ದೇಶದಲ್ಲಿ ಕೈಯಿಂದ ಶೌಚಗುಂಡಿಗಳ ಸ್ವಚ್ಛಗೊಳಿಸುವಿಕೆಯಿಂದಾಗಿ ಯಾವುದೇ ಸಾವುಗಳು ವರದಿಯಾಗಿಲ್ಲ ಎಂದು ಅಠವಾಲೆ ಹೇಳಿದ್ದಾರೆ.

“ಆದಾಗ್ಯೂ, ಕಳೆದ ಐದು ವರ್ಷಗಳಲ್ಲಿ ಒಳಚರಂಡಿ ಮತ್ತು ಶೌಚಗುಂಡಿಗಳನ್ನು ಅಪಾಯಕಾರಿಯಾಗಿ ಸ್ವಚ್ಛಗೊಳಿಸುವ ಸಂದರ್ಭ 330 ಜನರು ಸಾವನ್ನಪ್ಪಿದ್ದಾರೆ” ಎಂದು ಸಚಿವ ಅಠಾವಳೆ ಹೇಳಿದ್ದಾರೆ.

2017 ಮತ್ತು 2021 ರ ನಡುವೆ ಉತ್ತರ ಪ್ರದೇಶದಲ್ಲಿ ಇಂತಹ 47 ಸಾವುನೋವುಗಳು ವರದಿಯಾಗಿವೆ ಎಂದು ಅವರು ತಿಳಿಸಿದ್ದಾರೆ. ತಮಿಳುನಾಡಿನಲ್ಲಿ 43 ಮತ್ತು ದೆಹಲಿಯಲ್ಲಿ 42, ಹರಿಯಾಣದಲ್ಲಿ 36 ಮತ್ತು ಮಹಾರಾಷ್ಟ್ರದಲ್ಲಿ 30 ಸಾವುಗಳು ವರದಿಯಾಗಿವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮ್ಯಾನ್‌ಹೋಲ್‌ಗೆ ಇಳಿದ ಪರಿಣಾಮ ಗಂಭೀರ ಆರೋಗ್ಯ ಸಮಸ್ಯೆ: ಪೌರಕಾರ್ಮಿಕ ICU ಗೆ ದಾಖಲು

‘ಸ್ವಚ್ಛ ಭಾರತ್ ಮಿಷನ್  ಕೈಯಿಂದ ಶೌಚಗುಂಡಿಗಳ ಸ್ವಚ್ಛಗೊಳಿಸುವಿಕೆ ಪದ್ದತಿಯನ್ನು ಕೊನೆಗೊಳಿಸಿದೆ’ ಎಂದು ಅಠಾವಳೆ ಪ್ರತಿಪಾದಿಸಿದ್ದಾರೆ. ಅಕ್ಟೋಬರ್ 2014 ರಿಂದ, ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ 10.99 ಕೋಟಿಗೂ ಹೆಚ್ಚು ಮತ್ತು ನಗರ ಪ್ರದೇಶಗಳಲ್ಲಿ 62.65 ಲಕ್ಷಕ್ಕೂ ಹೆಚ್ಚು ನೈರ್ಮಲ್ಯ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೈಯಿಂದ ಶೌಚವನ್ನು ಸ್ವಚ್ಛಗೊಳಿಸುವ ಪದ್ದತಿಯನ್ನು ಕೊನೆಗೊಳಿಸಲು ಈ ಸ್ವಚ್ಛ ಭಾರತ್‌ ಮಿಷನ್‌ ದೊಡ್ಡ ಕೊಡುಗೆ ನೀಡಿದೆ ಎಂದು ಅವರು ಹೇಳಿದ್ದಾರೆ. “ಈ ಪದ್ದತಿಯ ಮುಂದುವರಿಕೆಯ ಬಗ್ಗೆ ಸಾಮಾಜಿಕ ಸಂಸ್ಥೆಗಳಿಂದ ವರದಿಗಳನ್ನು ಪಡೆದ ನಂತರ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಇನ್ನೂ ಅಸ್ತಿತ್ವದಲ್ಲಿರುವ ಈ ಪದ್ದತಿಯ ಮಾಹಿತಿ ಪಡೆಯಲು ಡಿಸೆಂಬರ್ 24, 2020 ರಂದು ‘ಸ್ವಚ್ಛತಾ ಅಭಿಯಾನ’ ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಆದರೆ, ಇದುವರೆಗೆ ಒಂದೇ ಒಂದು ಪ್ರಕರಣ ದೃಢಪಟ್ಟಿಲ್ಲ” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತರೊಬ್ಬರು, “ಒಂದು ಕಡೆ ಸರ್ಕಾರವೇ ಶೌಚಗುಂಡಿ ಶುಚಿಕೊಳಿಸುವಾಗ 330 ಜನರು ಸಾವಿಗೀಡಾಗಿದ್ದಾರೆ ಎಂದು ಹೇಳುತ್ತಿದೆ. ಇನ್ನೊಂದು ಕಡೆ ಕೈಯಿಂದ ಸ್ವಚ್ಛಗೊಳಿಸುವ ಪದ್ದತಿಯಿಲ್ಲ ಎಂದು ಹೇಳುತ್ತಿದೆ. ಆದರೆ ಇವೆಲ್ಲಾ ಸುಳ್ಳು ಹೇಳಿಕೆಯಾಗಿದ್ದು, ದೇಶದಾದ್ಯಂತ ಕೈಯಿಂದ ಸ್ವಚ್ಛಗೊಳಿಸುವ ಎಷ್ಟೊ ಪ್ರಕರಣಗಳು ಪತ್ರಿಕೆಗಳಲ್ಲಿ ವರದಿಯಾವೆ. ಆದರೆ ಈ ಸರ್ಕಾರ ಅಂಕಿ ಅಂಶ ನೀಡಲು ಹೆದರಿಕೊಳ್ಳುತ್ತಿವೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...