Homeಮುಖಪುಟಆಂಧ್ರಪ್ರದೇಶ: ಜಗನ್‌ ಸರ್ಕಾರ ತನ್ನದೇ ಟಿ.ವಿ. ಚಾನೆಲ್ ಆರಂಭಿಸುತ್ತಿರುವುದೇಕೆ?

ಆಂಧ್ರಪ್ರದೇಶ: ಜಗನ್‌ ಸರ್ಕಾರ ತನ್ನದೇ ಟಿ.ವಿ. ಚಾನೆಲ್ ಆರಂಭಿಸುತ್ತಿರುವುದೇಕೆ?

- Advertisement -
- Advertisement -

ಆಂಧ್ರಪ್ರದೇಶದ ಸರ್ಕಾರಿ ಸ್ವಾಮ್ಯದ ಘಟಕವಾದ ಆಂಧ್ರಪ್ರದೇಶ ಸ್ಟೇಟ್ ಫೈಬರ್‌ನೆಟ್ ಲಿಮಿಟೆಡ್ (APSFL), ಈಗ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲು, 2024ರ ವಿಧಾನಸಭೆಯಲ್ಲಿ ಜನರನ್ನು ಜಗನ್‌ ಮೋಹನ್‌ ರೆಡ್ಡಿಯವರತ್ತ ಸೆಳೆಯಲು ‘ಎಪಿ ಫೈಬರ್ ನ್ಯೂಸ್’ ಎಂಬ ಟಿವಿ ಚಾನೆಲ್ ಆರಂಭಿಸಲು ಮುಂದಾಗಿದೆ.

ಜನರು ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಈ ಚಾನೆಲ್‌ ಕಾರ್ಯನಿರ್ವಹಿಸಲಿದೆ. ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು, ಅನುಷ್ಠಾನಗೊಳ್ಳುತ್ತಿರುವ ಅಭಿವೃದ್ಧಿ ಯೋಜನೆಗಳು ಮತ್ತು ಜಗನ್‌ ಅವರ ಕಾರ್ಯಕ್ರಮಗಳನ್ನು ‌ಈ ಚಾನೆಲ್‌ ಪ್ರಸಾರ ಮಾಡಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಎಲ್ಲಾ ಸುದ್ದಿಗಳನ್ನು ಚಾನಲ್ ತನ್ನ ಫೈಬರ್-ಟು-ಹೋಮ್ (FTH) ನೆಟ್ವರ್ಕ್ ಮೂಲಕ  ಪ್ರಸಾರ ಮಾಡುತ್ತದೆ” ಎಂದು ಎಪಿಎಸ್‌ಎಫ್‌ಎಲ್‌ ಅಧ್ಯಕ್ಷ ಪಿ. ಗೌತಮ್ ರೆಡ್ಡಿ ಹೇಳಿದ್ದಾರೆ. “ಹೊರಗುತ್ತಿಗೆ ವಿಷಯದ ಅಗತ್ಯತೆಗಳ ನಿರೀಕ್ಷೆಗಳು ಸೇರಿದಂತೆ ನಾವು ಚಾನೆಲ್‌ನ ಪ್ರಸಾರಕ್ಕೆ ಸಂಬಂಧಿಸಿದ ವಿವಿಧ ಅಂಶಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಆಂಧ್ರ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳುತ್ತಾರೆ.

ಎಪಿಎಸ್‌ಎಫ್‌ಎಲ್‌ ತನ್ನ ಟ್ರಿಪಲ್-ಪ್ಲೇ ಸೇವೆಗಳ ಅಸ್ತಿತ್ವದಲ್ಲಿರುವ 1 ಮಿಲಿಯನ್ ಚಂದಾದಾರರಿಗೆ ಸೇರಿಸಲು 5 ಮಿಲಿಯನ್ ಸೆಟ್-ಟಾಪ್ ಬಾಕ್ಸ್‌ಗಳನ್ನು ಖರೀದಿಸುತ್ತಿದೆ. ರಾಜ್ಯದ ಅರ್ಧದಷ್ಟು ಮನೆಗಳಿಗೆ ‘ಎಪಿ ಫೈಬರ್ ನ್ಯೂಸ್’ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ ಎನ್ನಲಾಗಿದೆ.

ಇತ್ತೀಚಿನ ಜನಾಭಿಪ್ರಾಯ ಸಂಗ್ರಹಣೆಗಳು ವೈಎಸ್‌ಆರ್ ಕಾಂಗ್ರೆಸ್‌ಗೆ ಮೇಲುಗೈ ತೋರಿಸಿದ್ದರೂ ಜಗನ್ ಕಣಕ್ಕಿಳಿದಿದ್ದಾರೆ ಎಂದು ವಿಶ್ಲೇಷಕರು ಹೇಳುತ್ತಾರೆ. ಜುಲೈ 9 ಮತ್ತು 10 ರಂದು ನಡೆದ ಪಕ್ಷದ ಸರ್ವಸದಸ್ಯರ ಅಧಿವೇಶನದಲ್ಲಿ ಜಗನ್‌, “ಮಿಷನ್ 175 ಅಸಾಧ್ಯವಲ್ಲ” ಎಂದು ಘೋಷಿಸಿದ್ದಾರೆ.

ಚುನಾವಣಾ ಸಮರಕ್ಕೆ ಸಿದ್ಧರಾಗಿರಲು ಕಾರ್ಯಕರ್ತರನ್ನು ಕೋರಿದ್ದಾರೆ. ಏಪ್ರಿಲ್ 2019ರ ವಿಧಾನಸಭಾ ಚುನಾವಣೆಯಲ್ಲಿ ವೈಎಸ್ಆರ್ ಕಾಂಗ್ರೆಸ್ 175 ಸ್ಥಾನಗಳಲ್ಲಿ 151 ಸ್ಥಾನಗಳನ್ನು ಗೆದ್ದಿದೆ. ಮುಂದಿನ ಚುನಾವಣೆಯಲ್ಲಿ ಪಕ್ಷವು ಉತ್ತಮ ಪ್ರದರ್ಶನ ನೀಡಬೇಕೆಂದು ಜಗನ್ ಬಯಸಿದ್ದಾರೆ.

ಇದನ್ನೂ ಓದಿರಿ: Watch: ಕೋಮುವಾದ ತಡೆಗೆ ಪ್ರತಿಪಕ್ಷಗಳು ಜಾತಿ ಸಮಾವೇಶಗಳನ್ನು ನಡೆಸಬೇಕಿದೆ- ನವೀನ್‌ ಸೂರಿಂಜೆ

ಈಗಾಗಲೇ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿಯನ್ನು ಗುರಿಯಾಗಿಸಿಕೊಂಡು ಜಗನ್ ತನ್ನ ಪಕ್ಷದ ಕಾರ್ಯಕರ್ತರಿಗೆ ಸೂಚನೆಗಳನ್ನು ನೀಡಿದ್ದಾರೆ. ನಾಯ್ಡು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ಪ್ರತಿ ಹಳ್ಳಿಯಲ್ಲೂ ಪ್ರಚಾರ ಮಾಡಲು ಸೂಚಿಸಿದ್ದಾರೆ. ಪ್ರತಿಪಕ್ಷದ ಕಡೆಗೆ ಜನರ ಗಮನ ಹರಿದಂತೆ ನೋಡಿಕೊಳ್ಳಲು ಟಿ.ವಿ.ಚಾನೆಲ್‌ ಆರಂಭಿಸಿದ್ದಾರೆಂದು ವಿಶ್ಲೇಷಣೆಗಳು ಬರುತ್ತಿವೆ.

ಮುಖ್ಯಮಂತ್ರಿಯವರು ಪ್ರಸ್ತುತ ಸಾಕ್ಷಿ ಟೆಲಿವಿಷನ್‌ ಸುದ್ದಿ ವಾಹಿನಿ, ಸಾಕ್ಷಿ ತೆಲುಗು ಪತ್ರಿಕೆಯನ್ನು ತಮ್ಮ ಒಡೆತನದಲ್ಲಿ ಹೊಂದಿದ್ದಾರೆ. ಆಡಳಿತರೂಢ ಸರ್ಕಾರವನ್ನು ಮೂರು ಪ್ರಮುಖ ತೆಲುಗು ಸುದ್ದಿ ವಾಹಿನಿಗಳು ಹೆಚ್ಚು ಟೀಕಿಸುತ್ತಿವೆ. ಈ ಚಾನೆಲ್‌ಗಳು ಪ್ರಮುಖ ವಿರೋಧ ಪಕ್ಷವಾದ ಟಿಡಿಪಿಯತ್ತ ಒಲವು ತೋರುತ್ತಿವೆ ಎಂಬ ವಿಶ್ಲೇಷಣೆಗಳು ಬಂದಿವೆ. ಆದಾಗ್ಯೂ, ಎರಡು ಇತರ ಪ್ರಮುಖ ತೆಲುಗು ಟಿವಿ ಸುದ್ದಿ ವಾಹಿನಿಗಳು ಜಗನ್ ಮೋಹನ್ ರೆಡ್ಡಿ ಕಡೆಗೆ ಒಲವು ತೋರಿಸುತ್ತಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಜನರಿಗೆ ತನ್ನದೇ ಆದ ವರದಿಗಳನ್ನು ಹೇಳಲು ಮಾಧ್ಯಮ ಕ್ಷೇತ್ರಕ್ಕೆ ಕಾಲಿಡಲು ಸರ್ಕಾರ ನಿರ್ಧರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...