Homeರಾಜಕೀಯಒಕ್ಕಲಿಗ ವರ್ಸಸ್ ಲಿಂಗಾಯತ : ಅಪಾಯಕಾರಿ ಜಾತಿ ರಣಾಂಗಣವಾಗುತ್ತಾ ಕರ್ನಾಟಕ?

ಒಕ್ಕಲಿಗ ವರ್ಸಸ್ ಲಿಂಗಾಯತ : ಅಪಾಯಕಾರಿ ಜಾತಿ ರಣಾಂಗಣವಾಗುತ್ತಾ ಕರ್ನಾಟಕ?

- Advertisement -
- Advertisement -

ಮಾಚಯ್ಯ |

2018ರ ವಿಧಾನಸಭಾ ಫಲಿತಾಂಶ ಹೇರಿರುವ ಅನಿಶ್ಚಿತತೆ ನಿಧಾನಕ್ಕೆ ರಾಜ್ಯವನ್ನು ಜಾತಿ ಕದನದ ಅಖಾಡವಾಗಿಸುವ ಅಪಾಯದತ್ತ ತಳ್ಳುತ್ತಿದೆ. ಇದಕ್ಕೆ ಮುನ್ನುಡಿ ಬರೆಯುತ್ತಿರೋದು ಬಿಜೆಪಿ! ಯಾವಾಗ ತಮಗೆ ಸ್ಪಷ್ಟ ಬಹುಮತ ಬರಲಿಲ್ಲ ಅನ್ನೋದು ಖಾತ್ರಿ ಆಯ್ತೋ, ಆಗ ಆಪರೇಷನ್ ಕಮಲ ಮಾಡಲು ಹೋಗಿ ವಿಲವಿಲ ಹೊದ್ದಾಡಿದರೂ ವಾಮ ಮಾರ್ಗದಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಅಷ್ಟೇ ಅಲ್ಲ ಶತಾಯಗತಾಯ ಆ ಅಧಿಕಾರವನ್ನು ಉಳಿಸಿಕೊಳ್ಳಲು ಜಾತಿ ರಾಜಕಾರಣಕ್ಕೆ ಚಾಲನೆ ನೀಡಿದೆ. ಯಡ್ಯೂರಪ್ಪರನ್ನು ಸಿಎಂ ಮಾಡಿರುವ ಬಿಜೆಪಿ, ಇದೀಗ ಅವರ ಮೂಲಕ ಲಿಂಗಾಯತ ಟ್ರಂಪ್ ಕಾರ್ಡ್ ಬಳಸಲು ಮುಂದಾಗಿದೆ. ಇತರೆ ಪಕ್ಷಗಳು ಅವರನ್ನು ಕಾನೂನಾತ್ಮಕ ಕಾರಣಕ್ಕೆ ಕೆಳಗಿಳಿಸಲು ಮುಂದಾದರೂ, ಆ ಪ್ರಯತ್ನ ಮಾಡುತ್ತಿರುವ ಪಕ್ಷ ಲಿಂಗಾಯತರಿಂದ ಅಧಿಕಾರ ಕಿತ್ತುಕೊಳ್ಳಲು ಹವಣಿಸುತ್ತಿದೆ ಎಂಬ ಸುದ್ದಿಗೆ ಜನ್ಮ ನೀಡಲು ಬೇಕಾದ ತಯಾರಿಗಳನ್ನೆಲ್ಲ ಮಾಡಿಕೊಂಡಿದೆ.

ದೇವೇಗೌಡರ ವಿರುದ್ಧ ವ್ಯಾಟ್ಸಪ್ ನಲ್ಲಿ ಹರಿದಾಡಿಸಲಾಗುತ್ತಿರುವ ಪೋಸ್ಟರ್
ಕುಮಾರಸ್ವಾಮಿಯವರು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ವ್ಯಾಟ್ಸಪ್ ಗಳಲ್ಲಿ ಅವರನ್ನು ಲೇವಡಿ ಮಾಡುತ್ತಿರುವ ಎರಡು ನಾಲಗೆಯ ಫೋಟೊಶಾಪ್ ಪೋಸ್ಟರ್

ಅದಕ್ಕಾಗೇ ಪ್ರಕಾಶ್ ಜಾವ್ಡೇಕರ್ ಕಾಂಗ್ರೆಸ್ಸಿನಲ್ಲಿರುವ 14 ಮಂದಿ ಲಿಂಗಾಯತ ಶಾಸಕರ ಬಗ್ಗೆ ನಿರ್ದಿಷ್ಟವಾಗಿ ಉಲ್ಲೇಖಿಸಿ ಅವರು ಬೆಂಬಲ ನೀಡುತ್ತಾರೆ ಎಂಬ ಗೊಂದಲ ಸೃಷ್ಟಿಸಿದರೆ, ಸಿಎಂ ಹುದ್ದೆ ಯಾವ ಕ್ಷಣದಲ್ಲಾದರು ಕೈಬಿಟ್ಟುಹೋಗುವ ಆತಂಕದ ನಡುವೆಯೂ ತರಾತುರಿಯಲ್ಲಿ ಯಡ್ಯೂರಪ್ಪ ಸಿದ್ದಗಂಗಾ ಮಠವನ್ನು ಎಡತಾಕಿ ತಮ್ಮ ಅಧಿಕಾರ ಪದಗ್ರಹಣಕ್ಕೆ ಲಿಂಗಾಯತ ಲೇಪ ಹಚ್ಚಲು ನೋಡಿದ್ದರು. ಈ ಹಿಂದೆ ವೀರೇಂದ್ರ ಪಾಟೀಲರನ್ನು ಕೆಳಗಿಳಿಸಿದ ಕಾರಣಕ್ಕೆ ಲಿಂಗಾಯತರು ಸಾರಾಸಗಟಾಗಿ ಕಾಂಗ್ರೆಸ್ ವಿರುದ್ಧ ಇಲ್ಲಿಯವರೆಗೂ ತಿರುಗಿ ಬಿದ್ದಿರುವ ಇತಿಹಾಸ ಬಿಜೆಪಿಯನ್ನು ಇಂಥಾ ತಂತ್ರಗಾರಿಕೆಗೆ ಪ್ರಚೋದಿಸುತ್ತಿದೆ. ಇಂಥಾ ಜಾತಿ ತಂತ್ರಕ್ಕೆ ಅಪಾಯಕಾರಿ ಸೈಡ್ ಎಫೆಕ್ಟ್ ಇರೋದು ಪ್ರಜ್ಞಾವಂತರನ್ನು ಆತಂಕಕ್ಕೆ ತಳ್ಳಿದೆ. ಈ ಪ್ರಯತ್ನದಲ್ಲಿ ಸಿಎಂ ಹುದ್ದೆಯ ಸನಿಹದಲ್ಲಿದ್ದ ಒಕ್ಕಲಿಗ ಸಮುದಾಯದ ಕುಮಾರಸ್ವಾಮಿಗೆ ಲಿಂಗಾಯತರ ಯಡ್ಯೂರಪ್ಪನಿಂದ ಅನ್ಯಾಯವಾಗುತ್ತಿದೆ ಎಂಬ ಸಂದೇಶ ಹಳೇ ಮೈಸೂರು ಭಾಗದಲ್ಲಿ ಈಗಾಗಲೇ ಹರಿದಾಡಲು ಶುರುವಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯಿಂದ ಮುಖ್ಯಮಂತ್ರಿ ಗಾದಿ ಸಿಗುವಂತ ಸನ್ನಿವೇಶ ನಿರ್ಮಾಣವಾದಾಗ ಬಿಜೆಪಿಯ ಐಟಿ ಸೆಲ್ಲು ಮೊದಲೇ ಪ್ಲ್ಯಾನ್ ಮಾಡಿಕೊಂಡಂತೆ ದೇವೇಗೌಡ ಮತ್ತು ಕುಮಾರಸ್ವಾಮಿಗಳ ಫೋಟೊಗೆ `ಲಿಂಗಾಯತರು ಮುಖ್ಯಮಂತ್ರಿ ಆಗೋದನ್ನು ತಪ್ಪಿಸುತ್ತಿರುವ ಇವರು ಲಿಂಗಾಯತ ವಿರೋಧಿಗಳು’ ಎಂವ ವಾಟ್ಸಾಪ್ ಸಂದೇಶಗಳು ಹರಿದಾಡಲು ಶುರುವಾಗಿವೆ. ಮುಂದಿನ ದಿನಗಳಲ್ಲಿ ಇದು ಎರಡು ಬಲಾಢ್ಯ ಸಮುದಾಯಗಳ ನಡುವಿನ ಕಾದಾಟಕ್ಕೆ ನಾಂದಿಯಾದರೂ ಅಚ್ಚರಿಯಿಲ್ಲ. ಇದು ಕರ್ನಾಟಕದ ಭವಿಷ್ಯದ ದೃಷ್ಟಿಯಿಂದ ನಿಜಕ್ಕೂ ಒಳ್ಳೆಯ ಬೆಳವಣಿಗೆಯಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...