Homeರಾಜಕೀಯಒಕ್ಕಲಿಗ ವರ್ಸಸ್ ಲಿಂಗಾಯತ : ಅಪಾಯಕಾರಿ ಜಾತಿ ರಣಾಂಗಣವಾಗುತ್ತಾ ಕರ್ನಾಟಕ?

ಒಕ್ಕಲಿಗ ವರ್ಸಸ್ ಲಿಂಗಾಯತ : ಅಪಾಯಕಾರಿ ಜಾತಿ ರಣಾಂಗಣವಾಗುತ್ತಾ ಕರ್ನಾಟಕ?

- Advertisement -
- Advertisement -

ಮಾಚಯ್ಯ |

2018ರ ವಿಧಾನಸಭಾ ಫಲಿತಾಂಶ ಹೇರಿರುವ ಅನಿಶ್ಚಿತತೆ ನಿಧಾನಕ್ಕೆ ರಾಜ್ಯವನ್ನು ಜಾತಿ ಕದನದ ಅಖಾಡವಾಗಿಸುವ ಅಪಾಯದತ್ತ ತಳ್ಳುತ್ತಿದೆ. ಇದಕ್ಕೆ ಮುನ್ನುಡಿ ಬರೆಯುತ್ತಿರೋದು ಬಿಜೆಪಿ! ಯಾವಾಗ ತಮಗೆ ಸ್ಪಷ್ಟ ಬಹುಮತ ಬರಲಿಲ್ಲ ಅನ್ನೋದು ಖಾತ್ರಿ ಆಯ್ತೋ, ಆಗ ಆಪರೇಷನ್ ಕಮಲ ಮಾಡಲು ಹೋಗಿ ವಿಲವಿಲ ಹೊದ್ದಾಡಿದರೂ ವಾಮ ಮಾರ್ಗದಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಅಷ್ಟೇ ಅಲ್ಲ ಶತಾಯಗತಾಯ ಆ ಅಧಿಕಾರವನ್ನು ಉಳಿಸಿಕೊಳ್ಳಲು ಜಾತಿ ರಾಜಕಾರಣಕ್ಕೆ ಚಾಲನೆ ನೀಡಿದೆ. ಯಡ್ಯೂರಪ್ಪರನ್ನು ಸಿಎಂ ಮಾಡಿರುವ ಬಿಜೆಪಿ, ಇದೀಗ ಅವರ ಮೂಲಕ ಲಿಂಗಾಯತ ಟ್ರಂಪ್ ಕಾರ್ಡ್ ಬಳಸಲು ಮುಂದಾಗಿದೆ. ಇತರೆ ಪಕ್ಷಗಳು ಅವರನ್ನು ಕಾನೂನಾತ್ಮಕ ಕಾರಣಕ್ಕೆ ಕೆಳಗಿಳಿಸಲು ಮುಂದಾದರೂ, ಆ ಪ್ರಯತ್ನ ಮಾಡುತ್ತಿರುವ ಪಕ್ಷ ಲಿಂಗಾಯತರಿಂದ ಅಧಿಕಾರ ಕಿತ್ತುಕೊಳ್ಳಲು ಹವಣಿಸುತ್ತಿದೆ ಎಂಬ ಸುದ್ದಿಗೆ ಜನ್ಮ ನೀಡಲು ಬೇಕಾದ ತಯಾರಿಗಳನ್ನೆಲ್ಲ ಮಾಡಿಕೊಂಡಿದೆ.

ದೇವೇಗೌಡರ ವಿರುದ್ಧ ವ್ಯಾಟ್ಸಪ್ ನಲ್ಲಿ ಹರಿದಾಡಿಸಲಾಗುತ್ತಿರುವ ಪೋಸ್ಟರ್
ಕುಮಾರಸ್ವಾಮಿಯವರು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ವ್ಯಾಟ್ಸಪ್ ಗಳಲ್ಲಿ ಅವರನ್ನು ಲೇವಡಿ ಮಾಡುತ್ತಿರುವ ಎರಡು ನಾಲಗೆಯ ಫೋಟೊಶಾಪ್ ಪೋಸ್ಟರ್

ಅದಕ್ಕಾಗೇ ಪ್ರಕಾಶ್ ಜಾವ್ಡೇಕರ್ ಕಾಂಗ್ರೆಸ್ಸಿನಲ್ಲಿರುವ 14 ಮಂದಿ ಲಿಂಗಾಯತ ಶಾಸಕರ ಬಗ್ಗೆ ನಿರ್ದಿಷ್ಟವಾಗಿ ಉಲ್ಲೇಖಿಸಿ ಅವರು ಬೆಂಬಲ ನೀಡುತ್ತಾರೆ ಎಂಬ ಗೊಂದಲ ಸೃಷ್ಟಿಸಿದರೆ, ಸಿಎಂ ಹುದ್ದೆ ಯಾವ ಕ್ಷಣದಲ್ಲಾದರು ಕೈಬಿಟ್ಟುಹೋಗುವ ಆತಂಕದ ನಡುವೆಯೂ ತರಾತುರಿಯಲ್ಲಿ ಯಡ್ಯೂರಪ್ಪ ಸಿದ್ದಗಂಗಾ ಮಠವನ್ನು ಎಡತಾಕಿ ತಮ್ಮ ಅಧಿಕಾರ ಪದಗ್ರಹಣಕ್ಕೆ ಲಿಂಗಾಯತ ಲೇಪ ಹಚ್ಚಲು ನೋಡಿದ್ದರು. ಈ ಹಿಂದೆ ವೀರೇಂದ್ರ ಪಾಟೀಲರನ್ನು ಕೆಳಗಿಳಿಸಿದ ಕಾರಣಕ್ಕೆ ಲಿಂಗಾಯತರು ಸಾರಾಸಗಟಾಗಿ ಕಾಂಗ್ರೆಸ್ ವಿರುದ್ಧ ಇಲ್ಲಿಯವರೆಗೂ ತಿರುಗಿ ಬಿದ್ದಿರುವ ಇತಿಹಾಸ ಬಿಜೆಪಿಯನ್ನು ಇಂಥಾ ತಂತ್ರಗಾರಿಕೆಗೆ ಪ್ರಚೋದಿಸುತ್ತಿದೆ. ಇಂಥಾ ಜಾತಿ ತಂತ್ರಕ್ಕೆ ಅಪಾಯಕಾರಿ ಸೈಡ್ ಎಫೆಕ್ಟ್ ಇರೋದು ಪ್ರಜ್ಞಾವಂತರನ್ನು ಆತಂಕಕ್ಕೆ ತಳ್ಳಿದೆ. ಈ ಪ್ರಯತ್ನದಲ್ಲಿ ಸಿಎಂ ಹುದ್ದೆಯ ಸನಿಹದಲ್ಲಿದ್ದ ಒಕ್ಕಲಿಗ ಸಮುದಾಯದ ಕುಮಾರಸ್ವಾಮಿಗೆ ಲಿಂಗಾಯತರ ಯಡ್ಯೂರಪ್ಪನಿಂದ ಅನ್ಯಾಯವಾಗುತ್ತಿದೆ ಎಂಬ ಸಂದೇಶ ಹಳೇ ಮೈಸೂರು ಭಾಗದಲ್ಲಿ ಈಗಾಗಲೇ ಹರಿದಾಡಲು ಶುರುವಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯಿಂದ ಮುಖ್ಯಮಂತ್ರಿ ಗಾದಿ ಸಿಗುವಂತ ಸನ್ನಿವೇಶ ನಿರ್ಮಾಣವಾದಾಗ ಬಿಜೆಪಿಯ ಐಟಿ ಸೆಲ್ಲು ಮೊದಲೇ ಪ್ಲ್ಯಾನ್ ಮಾಡಿಕೊಂಡಂತೆ ದೇವೇಗೌಡ ಮತ್ತು ಕುಮಾರಸ್ವಾಮಿಗಳ ಫೋಟೊಗೆ `ಲಿಂಗಾಯತರು ಮುಖ್ಯಮಂತ್ರಿ ಆಗೋದನ್ನು ತಪ್ಪಿಸುತ್ತಿರುವ ಇವರು ಲಿಂಗಾಯತ ವಿರೋಧಿಗಳು’ ಎಂವ ವಾಟ್ಸಾಪ್ ಸಂದೇಶಗಳು ಹರಿದಾಡಲು ಶುರುವಾಗಿವೆ. ಮುಂದಿನ ದಿನಗಳಲ್ಲಿ ಇದು ಎರಡು ಬಲಾಢ್ಯ ಸಮುದಾಯಗಳ ನಡುವಿನ ಕಾದಾಟಕ್ಕೆ ನಾಂದಿಯಾದರೂ ಅಚ್ಚರಿಯಿಲ್ಲ. ಇದು ಕರ್ನಾಟಕದ ಭವಿಷ್ಯದ ದೃಷ್ಟಿಯಿಂದ ನಿಜಕ್ಕೂ ಒಳ್ಳೆಯ ಬೆಳವಣಿಗೆಯಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...