Homeಅಂತರಾಷ್ಟ್ರೀಯ1,200 ವರ್ಷಗಳಷ್ಟು ಹಳೆಯ ಹಿಂದೂ ದೇವಾಲಯ ಜೀರ್ಣೋದ್ಧಾರ ಮಾಡಲಿರುವ ಪಾಕಿಸ್ತಾನ!

1,200 ವರ್ಷಗಳಷ್ಟು ಹಳೆಯ ಹಿಂದೂ ದೇವಾಲಯ ಜೀರ್ಣೋದ್ಧಾರ ಮಾಡಲಿರುವ ಪಾಕಿಸ್ತಾನ!

ಭಾರತದಲ್ಲಿ ಬಾಬರಿ ಮಸೀದಿ ಧ್ವಂಸದ ವೇಳೆ ದೇವಾಲಯವನ್ನು ಧ್ವಂಸ ಮಾಡಿ ಬೆಂಕಿ ಹಚ್ಚಲಾಗಿತ್ತು

- Advertisement -
- Advertisement -

ಸುದೀರ್ಘ ಕಾನೂನು ಹೋರಾಟದ ನಂತರ ಪಾಕಿಸ್ತಾನದ ಲಾಹೋರ್ ನಗರದಲ್ಲಿ 1,200 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯವನ್ನು ಪುನಃಸ್ಥಾಪಿಸಲಾಗುವುದು ಎಂದು ದೇಶದ ಅಲ್ಪಸಂಖ್ಯಾತರ ಪೂಜಾ ಸ್ಥಳಗಳ ಮೇಲ್ವಿಚಾರಣಾ ಫೆಡರಲ್ ಸಂಸ್ಥೆಯಾದ ದಿ ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ಇಟಿಪಿಬಿ)  ಬುಧವಾರ ತಿಳಿಸಿದೆ. ಈಗಾಗಲೆ ಅಲ್ಲಿರುವ “ಅಕ್ರಮ ನಿವಾಸಿಗಳನ್ನು” ಹೊರಹಾಕಿದ ನಂತರ ಕೆಲಸ ಪ್ರಾರಂಭಿಸುವುದಾಗಿ ಸಂಸ್ಥೆ ಹೇಳಿದೆ.

ಇವಾಕ್ಯೂ ಟ್ರಸ್ಟ್‌ ಕಳೆದ ತಿಂಗಳು ಪ್ರಸಿದ್ಧ ಅನಾರ್ಕಲಿ ಬಜಾರ್ ಲಾಹೋರ್ ಬಳಿ ಇರುವ ವಾಲ್ಮೀಕಿ ದೇವಾಲಯವನ್ನು ಕ್ರಿಶ್ಚಿಯನ್ ಕುಟುಂಬದಿಂದ ಹಿಂಪಡೆದಿದೆ. ಕೃಷ್ಣ ದೇವಾಲಯದ ಪಕ್ಕದ ವಾಲ್ಮೀಕಿ ದೇವಾಲಯವು ಲಾಹೋರ್‌ನಲ್ಲಿರುವ ಏಕೈಕ ಸಕ್ರಿಯವಾಗಿರುವ ದೇವಾಲಯವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವುದಾಗಿ ಹೇಳಿಕೊಳ್ಳುವ ಕ್ರೈಸ್ತ ಕುಟುಂಬ ಕಳೆದ ಎರಡು ದಶಕಗಳಿಂದ ವಾಲ್ಮೀಕಿ ಜಾತಿಯ ಹಿಂದೂಗಳಿಗೆ ಮಾತ್ರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅನುಕೂಲ ಮಾಡಿಕೊಡುತ್ತಿತ್ತು. ಇಪ್ಪತ್ತು ವರ್ಷಗಳ ಹಿಂದೆ ಕ್ರಿಶ್ಚಿಯನ್ ಕುಟುಂಬ ದೇವಾಲಯವನ್ನು ವಶಪಡಿಸಿಕೊಂಡಿತ್ತು.

‘ಮಾಸ್ಟರ್ ಪ್ಲಾನ್’ ಪ್ರಕಾರ ಮುಂದಿನ ದಿನಗಳಲ್ಲಿ ವಾಲ್ಮೀಕಿ ದೇವಾಲಯವನ್ನು ಪುನಃಸ್ಥಾಪಿಸಲಾಗುವುದು ಎಂದು ಇವಾಕ್ಯೂ ಟ್ರಸ್ಟ್ ವಕ್ತಾರ ಅಮೀರ್ ಹಶ್ಮಿ ಪಿಟಿಐಗೆ ತಿಳಿಸಿದ್ದಾರೆ. “100 ಕ್ಕೂ ಹೆಚ್ಚು ಹಿಂದೂಗಳು, ಕೆಲವು ಸಿಖ್ ಮತ್ತು ಕ್ರಿಶ್ಚಿಯನ್ ನಾಯಕರು ಇಂದು ವಾಲ್ಮೀಕಿ ದೇವಸ್ಥಾನದಲ್ಲಿ ಜಮಾಯಿಸಿದರು. ಹಿಂದೂಗಳು ತಮ್ಮ ಧಾರ್ಮಿಕ ಆಚರಣೆಗಳನ್ನು ಮಾಡಿದರು” ಎಂದು ಅವರು ಹೇಳಿದ್ದಾರೆ.

“ದೇವಾಲಯದ ಭೂಮಿಯನ್ನು ಕಂದಾಯ ದಾಖಲೆಯಲ್ಲಿ ಇಟಿಪಿಬಿಗೆ ವರ್ಗಾಯಿಸಲಾಗಿದೆ. ಆದರೆ ಕುಟುಂಬವು 2010-2011 ರಲ್ಲಿ ಆಸ್ತಿಯ ಮಾಲೀಕರು ಎಂದು ಹೇಳಿಕೊಂಡು ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿತ್ತು” ಎಂದು ಇವಾಕ್ಯೂ ಟ್ರಸ್ಟ್‌ ಅಧಿಕಾರಿಯೊಬ್ಬರು ಡಾನ್ ಪತ್ರಿಕೆಗೆ ತಿಳಿಸಿದ್ದಾರೆ.

ಇದನ್ನೂ ಓದಿ: ‘Go to India!’: ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ಗೆ ವಿಪಕ್ಷ ನಾಯಕಿ ವಾಗ್ದಾಳಿ

“ಕುಟುಂಬವು ನ್ಯಾಯಾಲಯಕ್ಕೆ ಹೋಗಿದ್ದು ಮಾತ್ರವಲ್ಲದೆ ದೇವಾಲಯವನ್ನು ವಾಲ್ಮೀಕಿ ಹಿಂದೂಗಳಿಗೆ ಮಾತ್ರ ಪೂಜೆ ಸಲ್ಲಿಸಲು ಅವಕಾಶ ಕೊಟ್ಟಿತ್ತು. ಹಾಗಾಗಿ ಇವಾಕ್ಯೂ ಟ್ರಸ್ಟ್‌ಗೆ ಪ್ರಕರಣದ ಹೋರಾಟವನ್ನು ನ್ಯಾಯಾಲಯ ಹೊರತುಪಡಿಸಿ ಯಾವುದೇ ಆಯ್ಕೆ ಇರಲಿಲ್ಲ. ನ್ಯಾಯಾಲಯವು ಸುಳ್ಳು ಪ್ರತಿಪಾದನೆ ಮಾಡಿದ್ದಕ್ಕಾಗಿ ಕುಟುಂಬಕ್ಕೆ ಛೀಮಾರಿ ಹಾಕಿದೆ” ಎಂದು ಅಧಿಕಾರಿ ಹೇಳಿದ್ದಾರೆ.

1992 ರಲ್ಲಿ ಭಾರತದಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ, ಉದ್ರಿಕ್ತ ಜನಸಮೂಹವು ಶಸ್ತ್ರಾಸ್ತ್ರಗಳನ್ನು ಹಿಡಿದು ವಾಲ್ಮೀಕಿ ದೇವಾಲಯಕ್ಕೆ ನುಗ್ಗಿತ್ತು. ಕೃಷ್ಣ ಮತ್ತು ವಾಲ್ಮೀಕಿ ವಿಗ್ರಹಗಳನ್ನು ಒಡೆದು, ಅಡುಗೆಮನೆಯಲ್ಲಿದ್ದ ಪಾತ್ರೆ ಪಗಡೆಗಳನ್ನು ಒಡೆದು, ಪ್ರತಿಮೆಗಳ ಮೇಲೆ ಅಲಂಕರಿಸಿದ ಚಿನ್ನವನ್ನು ವಶಪಡಿಸಿಕೊಂಡಿದ್ದರು ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ. ದೇವಾಲಯವನ್ನು ಕೆಡವಿ ಕಟ್ಟಡಕ್ಕೆ ಬೆಂಕಿ ಹಚ್ಚಲಾಗಿತ್ತು. ಈ ಬೆಂಕಿ  ಅಕ್ಕಪಕ್ಕದ ಅಂಗಡಿಗಳಿಗೂ ಬೆಂಕಿ ಹೊತ್ತಿಕೊಂಡಿದ್ದರಿಂದ ಬೆಂಕಿ ನಂದಿಸಲು ಅಧಿಕಾರಿಗಳಿಗೆ ದಿನಗಟ್ಟಲೆ ಪರದಾಡಬೇಕಾಯಿತು ಎಂದು ವರದಿ ಹೇಳಿದೆ.

ಪಾಕಿಸ್ತಾನದ ಸುಪ್ರೀಂ ಕೋರ್ಟ್‌ನಿಂದ ರಚಿಸಲ್ಪಟ್ಟ ಏಕವ್ಯಕ್ತಿ ಆಯೋಗವು ತನ್ನ ಶಿಫಾರಸುಗಳನ್ನು ಸರ್ಕಾರಕ್ಕೆ ಸಲ್ಲಿಸಿತು. ಈ ಆಯೋಗವೂ ಹಿಂದೂ ಸಮುದಾಯಕ್ಕೆ ಉತ್ತಮ ಸೌಲಭ್ಯಗಳೊಂದಿಗೆ ದೇವಾಲಯವನ್ನು ನವೀಕರಿಸಬೇಕು ಎಂದು ಇವಾಕ್ಯೂ ಟ್ರಸ್ಟ್‌ ವಕ್ತಾರರು ಡಾನ್ ಪತ್ರಿಕೆಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ ಸುಪ್ರೀಂಕೋರ್ಟ್‌ನ ಮೊದಲ ಮಹಿಳಾ ನ್ಯಾಯಮೂರ್ತಿಯಾಗಿ ಆಯೆಷಾ ಮಲಿಕ್ ನೇಮಕ

ದೇಶ ವಿಭಜನೆಯ ನಂತರ ಭಾರತಕ್ಕೆ ವಲಸೆ ಬಂದ ಸಿಖ್ಖರು ಮತ್ತು ಹಿಂದೂಗಳು ಬಿಟ್ಟುಹೋದ ದೇವಾಲಯಗಳು ಮತ್ತು ಭೂಮಿಯನ್ನು ಇವಾಕ್ಯೂ ಟ್ರಸ್ಟ್‌ ನೋಡಿಕೊಳ್ಳುತ್ತದೆ. ಇವಾಕ್ಯೂ ಟ್ರಸ್ಟ್‌‌ ಪಾಕಿಸ್ತಾನದಾದ್ಯಂತ 200 ಗುರುದ್ವಾರಗಳು ಮತ್ತು 150 ದೇವಾಲಯಗಳನ್ನು ನೋಡಿಕೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...