Homeಮುಖಪುಟದೆಹಲಿಯಲ್ಲಿ ಕಾಂಗ್ರೆಸ್‌ನಿಂದ ಭಾರೀ ಪ್ರತಿಭಟನೆ: ರಾಹುಲ್ ಮತ್ತು ಪ್ರಿಯಾಂಕ ಗಾಂಧಿ ವಶಕ್ಕೆ

ದೆಹಲಿಯಲ್ಲಿ ಕಾಂಗ್ರೆಸ್‌ನಿಂದ ಭಾರೀ ಪ್ರತಿಭಟನೆ: ರಾಹುಲ್ ಮತ್ತು ಪ್ರಿಯಾಂಕ ಗಾಂಧಿ ವಶಕ್ಕೆ

- Advertisement -
- Advertisement -

ಏರುತ್ತಿರುವ ಬೆಲೆಗಳು, ನಿರುದ್ಯೋಗ ಮತ್ತು ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ಹೆಚ್ಚಳದ ವಿರುದ್ಧ ಕಾಂಗ್ರೆಸ್‌ ಪಕ್ಷದ ದೆಹಲಿ ಪ್ರಧಾನ ಕಚೇರಿಯ ಹೊರಗೆ ಪಕ್ಷವು ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸರು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವಾರು ನಾಯಕರನ್ನು ವಶಕ್ಕೆ ಪಡೆದಿದ್ದಾರೆ.

ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಸಂಸದರು ಇಂದು ಸಂಸತ್ತಿನಲ್ಲಿ ಕಪ್ಪು ಬಟ್ಟೆ ಧರಿಸಿ ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ಪ್ರತಿಭಟಿಸಿದರು. ತನಿಖಾ ಸಂಸ್ಥೆಗಳನ್ನು ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಸದಸ್ಯರು ಕೋಲಾಹಲ ಸೃಷ್ಟಿಸಿದ್ದರಿಂದ ರಾಜ್ಯಸಭೆ ಕಲಾಪವನ್ನು ಇಂದು ಮುಂದೂಡಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸದಸ್ಯರು ಮತ್ತು ಹಿರಿಯ ನಾಯಕರು “ಪಿಎಂ ಹೌಸ್ ಘೇರಾವ್”ನಲ್ಲಿ ಭಾಗವಹಿಸಲು ಯೋಜಿಸಿದ್ದರಾದರೂ, ಲೋಕಸಭೆ ಮತ್ತು ರಾಜ್ಯಸಭಾ ಸಂಸದರು ಸಂಸತ್ತಿನಿಂದ “ಚಲೋ ರಾಷ್ಟ್ರಪತಿ ಭವನ” ನಡೆಸಲಿದ್ದಾರೆ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಗುಜರಾತ್‌ನಲ್ಲಿ ಕಳ್ಳಭಟ್ಟಿ ಮದ್ಯ ಕುಡಿದು 36 ಸಾವು: ಅಕ್ರಮ ದಂಧೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಕಾಂಗ್ರೆಸ್ ಮೆರವಣಿಗೆಗೆ ಮುಂಚಿತವಾಗಿ ದೆಹಲಿಯ ಕೆಲವು ಪ್ರದೇಶಗಳಲ್ಲಿ ದೊಡ್ಡ ಸಭೆಗಳನ್ನು ನಿಷೇಧಿಸಿ ಆಡಳಿತವು ನಿಷೇಧಾಜ್ಞೆಗಳನ್ನು ವಿಧಿಸಿತ್ತು. ಈ ನಿರ್ಬಂಧಗಳನ್ನು ಉಲ್ಲೇಖಿಸಿ ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ಗೆ ಅನುಮತಿ ನಿರಾಕರಿಸಿದ್ದರು.

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರನ್ನು ದೆಹಲಿ ಪೊಲೀಸರು ಪಕ್ಷದ ಪ್ರಧಾನ ಕಚೇರಿಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾಗ ವಶಕ್ಕೆ ಪಡೆದಿದ್ದಾರೆ. ಅವರನ್ನು ದೆಹಲಿಯ ಕಿಂಗ್ಸ್‌ವೇ ಕ್ಯಾಂಪ್‌ನಲ್ಲಿರುವ ಪೊಲೀಸ್ ಲೈನ್ಸ್‌ನಲ್ಲಿ ಇರಿಸಲಾಗಿದೆ.

ಪ್ರತಿಭಟನೆಗೂ ಮುನ್ನ ಮಾತನಾಡಿದ ರಾಹುಲ್ ಗಾಂಧಿ, “ನಾವು ಪ್ರಜಾಪ್ರಭುತ್ವದ ಸಾವಿಗೆ ಸಾಕ್ಷಿಯಾಗಿದ್ದೇವೆ. ಸುಮಾರು ಒಂದು ಶತಮಾನದ ಹಿಂದಿನಿಂದ ನಿರಂತರವಾಗಿ ಕಟ್ಟುತ್ತಾ ಬಂದಿರುವ ಭಾರತವು ನಿಮ್ಮ ಕಣ್ಣುಗಳ ಮುಂದೆ ನಾಶವಾಗುತ್ತಿದೆ. ಇದರ ವಿರುದ್ಧ ನಿಂತಿರುವವರ ವಿರುದ್ಧ ಸರ್ವಾಧಿಕಾರವು ಕ್ರೂರವಾಗಿ ದಾಳಿ ಮಾಡುತ್ತಿದೆ, ಜೈಲಿಗೆ ಹಾಕುತ್ತಿದೆ, ಬಂಧಿಸುತ್ತಿದೆ ಮತ್ತು ಥಳಿಸುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಯಂಗ್ ಇಂಡಿಯನ್ ಕಚೇರಿಗೆ ಇಡಿ ಸೀಲ್: ‘ನೀವು ಏನು ಬೇಕಾದರೂ ಮಾಡಿ; ಮೋದಿಗೆ ಹೆದರುವುದಿಲ್ಲ’ ಎಂದ ರಾಹುಲ್ ಗಾಂಧಿ

ಬೆಲೆ ಏರಿಕೆ, ನಿರುದ್ಯೋಗ ಮತ್ತು ಸಮಾಜದಲ್ಲಿನ ಹಿಂಸಾಚಾರದಂತಹ ಜನರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಬಾರದು ಎಂಬುದು ಸರ್ಕಾರದ ಏಕೈಕ ಅಜೆಂಡಾ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದೆ.

ಬೆಲೆ ಏರಿಕೆ ಮತ್ತು ಜಿಎಸ್‌ಟಿ ಹೆಚ್ಚಳದ ವಿರುದ್ಧ ಕಾಂಗ್ರೆಸ್ ನಿರಂತರವಾಗಿ ಪ್ರಶ್ನೆಗಳನ್ನು ಎತ್ತುತ್ತಿದೆ. ಈ ವಿಷಯಗಳ ಕುರಿತು ಕಾಂಗ್ರೆಸ್ ಸಂಸದರು ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...