Homeಕರ್ನಾಟಕಕನ್ನಡ ರಾಜ್ಯೋತ್ಸವದಂದು ‘ಪುನೀತ್ ರಾಜ್‌ಕುಮಾರ್‌‌’ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

ಕನ್ನಡ ರಾಜ್ಯೋತ್ಸವದಂದು ‘ಪುನೀತ್ ರಾಜ್‌ಕುಮಾರ್‌‌’ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

- Advertisement -
- Advertisement -

ಕನ್ನಡ ಚಿತ್ರರಂಗದ ಮೇರುನಟ ದಿವಂಗತ ಡಾ. ಪುನೀತ್ ರಾಜ್‍ಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ನವೆಂಬರ್ 1ರಂದು ಪ್ರದಾನ ಮಾಡಲು ರಾಜ್ಯ ಸರ್ಕಾರ ತಿರ್ಮಾನಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಕನ್ನಡ ರಾಜ್ಯೋತ್ಸವದಂದು ಪ್ರಶಸ್ತಿ ಪ್ರದಾನ ಮಾಡುವ ಕುರಿತು ತಿಳಿಸಿದ್ದಾರೆ.

ನಮ್ಮನ್ನಗಲಿದ ನಾಡಿನ ಪ್ರತಿಭಾನ್ವಿತ ನಟ ಪುನೀತ್ ರಾಜ್‌ಕುಮಾರ್‌ ಅವರಿಗೆ ಮರಣೋತ್ತರವಾಗಿ ಪ್ರತಿಷ್ಠಿತ ಕರ್ನಾಟಕ ರತ್ನ ಗೌರವ ನೀಡಬೇಕು ಎಂಬ ಅಭಿಮಾನಿಗಳ ಕೂಗಿಗೆ ರಾಜ್ಯ ಸರ್ಕಾರ ಸಕರಾತ್ಮಕವಾಗಿ ಸ್ಪಂದಿಸಿ, ಪ್ರಶಸ್ತಿ ಘೊಷಣೆ ಮಾಡಿತ್ತು.

’ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂಬ ಬೇಡಿಕೆ ಚಿತ್ರರಂಗ ಮತ್ತು ಅಭಿಮಾನಿಗಳಿಂದ ಕೇಳಿ ಬಂದಿದೆ. ತಕ್ಷಣಕ್ಕೆ ಈ ಬೇಡಿಕರ ಬಗ್ಗೆ ಏನು ಹೇಳಲಾಗದು. ಈ ಬಗ್ಗೆ ಪ್ರಮುಖರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ’ ಎಂದು ಈ ಹಿಂದೆ ಬೊಮ್ಮಾಯಿಯವರು ಹೇಳಿದ್ದರು.

ಅಭಿಮಾನಿಗಳಿಂದ ಪ್ರೀತಿಯಿಂದ ಅಪ್ಪು ಎಂದು ಕರೆಸಿಕೊಳ್ಳುವ ಪವರ್‌ ಸ್ಟಾರ್ ಪುನೀತ್ ರಾಜಕುಮಾರ್ ಕನ್ನಡ ಚಿತ್ರರಂಗದ ಪ್ರಮುಖ ನಾಯಕನಟ. ಪುನೀತ್ ರಾಜ್‌ಕುಮಾರ್‌ ನಟರಾಗಿಯಷ್ಟೇ ಅಲ್ಲದೆ ಹಿನ್ನೆಲೆ ಗಾಯಕರಾಗಿ, ನಿರ್ಮಾಪಕರಾಗಿಯೂ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದಾರೆ.

1976 ರಲ್ಲಿ ತೆರೆಕಂಡ ಡಾ.ರಾಜ್‌ಕುಮಾರ್‌ ಅಭಿನಯದ ‘ಪ್ರೇಮದ ಕಾಣಿಕೆ’ ಚಿತ್ರದ ಮೂಲಕ ತೆರೆಯ ಮೇಲೆ ಕಾಣಿಸಿಕೊಂಡಿದ್ದರು. ಆಗ ಪುನೀತ್ ಆರು ತಿಂಗಳು ಮಗು. ನಂತರ ವಸಂತ ಗೀತ (1980)ಮೂಲಕ ಬಾಲ ನಟನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಪುನೀತ್‌ ರಾಜ್‌ಕುಮಾರ್, ಸುಮಾರು ನಾಲ್ಕು ದಶಕಗಳ ತಮ್ಮ ಸಿನಿಜೀವನದಲ್ಲಿ ಬಾಲ ಕಲಾವಿದನಾಗಿ 14 ಚಿತ್ರಗಳು ಮತ್ತು ನಾಯಕ ನಟನಾಗಿ 28ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿರುವ ಅಣ್ಣಾವ್ರ ಕುಟುಂಬದ ಕುಡಿ ಪುನೀತ್ ರಾಜ್‌ಕುಮಾರ್. 1975 ರ ಮಾರ್ಚ್ 17 ರಂದು ವರನಟ ಡಾ.ರಾಜಕುಮಾರ್ ಮತ್ತು ಪಾರ್ವತಮ್ಮರವರ ಕಿರಿಯ ಪುತ್ರನಾಗಿ ಪುನೀತ್ ರಾಜ್‌ಕುಮಾರ್ ಜನಿಸಿದರು. ಇವರ ಹಿರಿಯ ಸಹೋದರರಾದ ಶಿವರಾಜ ಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಕನ್ನಡ ಚಿತ್ರರಂಗದ ಯಶಸ್ವಿ ನಾಯಕನಟರು.

ತಂದೆ ರಾಜ್‌ಕುಮಾರ್ ಅವರ ಚಿತ್ರಗಳನ್ನು ನೋಡುತ್ತಾ, ಅವರ ಶೂಟಿಂಗ್‌ ಸೆಟ್‌ಗಳಿಗೆ ಭೇಟಿ ಕೊಡುತ್ತಿದ್ದ ಅಪ್ಪುಗೆ ಬಾಲ್ಯದಿಂದಲೇ ನಟನೆಯಲ್ಲಿ ಆಸಕ್ತಿಯಿತ್ತು. ಈ ಕಾರಣದಿಂದಲೇ ಬಾಲ ನಟನಾಗಿ ಚಿತ್ರರಂಗದಲ್ಲಿ ಅಳಿಸದ ಹೆಜ್ಜೆಗುರುತು ಮೂಡಿಸಿದ್ದಾರೆ.

ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ್ಯ ನಟನಾಗಿ, ಭಾಗ್ಯವಂತ, ಚಲಿಸುವ ಮೋಡಗಳು, ಎರಡು ನಕ್ಷತ್ರಗಳು, ಪ್ರೇಮದ ಕಾಣಿಕೆ, ಬೆಟ್ಟದ ಹೂವು, ಶಿವ ಮೆಚ್ಚಿದ ಕಣ್ಣಪ್ಪ, ಪರಶುರಾಮ್, ಯಾರಿವನು, ಭಕ್ತ ಪ್ರಹ್ಲಾದ, ವಸಂತ ಗೀತ, ಭೂಮಿಗೆ ಬಂದ ಭಗವಂತ, ಸನಾದಿ ಅಪ್ಪಣ್ಣ, ತಾಯಿಗೆ ತಕ್ಕ ಮಗ ಸೇರಿದಂತೆ ಹಲವು ಚಿತ್ರಗಳ ಮೂಲಕ ಜನರ ಮನಗೆದ್ದಿದ್ದಾರೆ. ಪುನೀತ್ ಅವರ ಮೊದಲು ಹೆಸರು ಮಾ.ಲೋಹಿತ್.

ಪುನೀತ್‌ ನಟನೆಯ 1985ರಲ್ಲಿ ತೆರೆಕಂಡ ಬೆಟ್ಟದ ಹೂವು ಚಿತ್ರದ ರಾಮು ಪಾತ್ರಕ್ಕೆ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದಾರೆ. ‘ಚಲಿಸುವ ಮೋಡಗಳು’ ಹಾಗೂ ‘ಎರಡು ಕನಸು’ ಚಿತ್ರಗಳಿಗಾಗಿ ಅತ್ಯುತ್ತಮ ಬಾಲ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ.

ನಂತರ ಪುನೀತ್ 2002ರ ಅಪ್ಪು ಚಿತ್ರದ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಕಾಲಿಟ್ಟರು. ಅವರ ಅಭಿ, ಆಕಾಶ್, ಅರಸು, ಮಿಲನ, ಜಾಕಿ, ಹುಡುಗರು, ಅಣ್ಣಾ ಬಾಂಡ್, ಪವರ್, ಮೌರ್ಯ, ನಮ್ಮ ಬಸವ, ಪೃಥ್ವಿ, ವಂಶಿ, ರಾಜ್‌, ಪರಮಾತ್ಮ, ಯಾರೇ ಕೂಗಾಡಲಿ, ನಟ ಸಾರ್ವಭೌಮ, ರಾಜಕುಮಾರ, ಅಂಜನಿಪುತ್ರ, ರಣವಿಕ್ರಮ, ದೊಡ್ಮನೆ ಹುಡುಗ, ರಾಮ್, ನಿನ್ನಿಂದಲೇ, ಮೈತ್ರಿ, ಚಕ್ರವ್ಯೂಹ, ಯುವರತ್ನ ಸೇರಿದಂತೆ ಹಲವು ಯಶಸ್ವಿ ಚಲನಚಿತ್ರಗಳಲ್ಲಿ ನಟಿಸಿದರು.

ಇದನ್ನೂ ಓದಿ: ಪುನೀತ್ ರಾಜಕುಮಾರ್ ನುಡಿನಮನ; ಮುಗ್ಧ ನಗುವೊಂದರ ಕಣ್ಮರೆ

ಪುನೀತ್‌ ರಾಜ್‌ಕುಮಾರ್ ಚಿತ್ರ ನಿರ್ಮಾಪಕರಾಗಿ`ಕವಲುದಾರಿ’, `ಮಾಯಾಬಜಾರ್’, ಫ್ರೆಂಚ್ ಬಿರಿಯಾನಿ, ಲಾ, ಫ್ಯಾಮಿಲಿ ಪ್ಯಾಕ್ ಎಂಬ ಚಿತ್ರಗಳನ್ನು ಪಿಆರ್‌ಕೆ ಪ್ರೊಡಕ್ಷನ್‌ ಎಂಬ ತಮ್ಮ ಹೋಮ್ ಬ್ಯಾನರ್ನಲ್ಲಿ ನಿರ್ಮಿಸಿದ್ದಾರೆ. ಜೊತೆಗೆ ಪ್ರೊಡಕ್ಷನ್‌ ಹೌಸ್ ಮೂಲಕ ಕಿರುತೆರೆ ಧಾರಾವಾಹಿಗಳನ್ನು ಕೂಡ ನಿರ್ಮಿಸಿದ್ದಾರೆ. ತಾಯಿಯ ನೆನಪಿನಲ್ಲಿ `ಪಿ.ಆರ್.ಕೆ ‘ ಆಡಿಯೋ ಕಂಪನಿಯೊಂದನ್ನು ಸ್ಥಾಪಿಸಿದ್ದಾರೆ.

ಇದರ ಜೊತೆಗೆ ಪ್ರಸಿದ್ಧ ಟಿವಿ ಕಾರ್ಯಕ್ರಮ ಕನ್ನಡದ ಕೋಟ್ಯಧಿಪತಿ, ಫ್ಯಾಮಿಲಿ ಪವರ್ ಶೋ ಗಳನ್ನು ನಿರೂಪಣೆ ಮಾಡಿದ್ದಾರೆ. ಚಿತ್ರನಟ ,ಹಿನ್ನೆಲೆ ಗಾಯಕ ಮತ್ತು ದೂರದರ್ಶನ ನಿರೂಪಕರೂ ಆಗಿದ್ದ ಪುನೀತ್‌ ರಾಜ್‌ಕುಮಾರ್, ನಾಯಕ ನಟರಾಗಿ ನಟಿಸಿದ್ದ ಮಿಲನ ಮತ್ತು ಜಾಕಿ ಚಿತ್ರಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಯ ಉತ್ತಮ ನಟ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದರು. ಅಲ್ಲದೆ, ಹುಡುಗರು, ಯಾರೇ ಕೂಗಾಡಲಿ, ರಣ ವಿಕ್ರಮ, ರಾಜಕುಮಾರ ಸಿನಿಮಾಗಳಿಗೆ ದಕ್ಷಿಣ ಭಾರತ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...