Homeಅಂತರಾಷ್ಟ್ರೀಯಚೀನಾ-ತೈವಾನ್ ಬಿಕ್ಕಟ್ಟಿನ ಮಧ್ಯೆ, ತೈವಾನ್‌ನ ಉನ್ನತ ರಕ್ಷಣಾ ಅಧಿಕಾರಿ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆ

ಚೀನಾ-ತೈವಾನ್ ಬಿಕ್ಕಟ್ಟಿನ ಮಧ್ಯೆ, ತೈವಾನ್‌ನ ಉನ್ನತ ರಕ್ಷಣಾ ಅಧಿಕಾರಿ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆ

- Advertisement -
- Advertisement -

ತೈವಾನ್‌ಗೆ ಅಮೆರಿಕ ಸಂಸತ್ತಿನ ಸ್ಪೀಕರ್ ಸ್ಪೀಕರ್‌ ನ್ಯಾನ್ಸಿ ಪೆಲೋಸಿ ಭೇಟಿಯ ಹಿನ್ನಲೆಯಲ್ಲಿ ಚೀನಾ-ತೈವಾನ್ ಬಿಕ್ಕಟ್ಟು ಮತ್ತಷ್ಟು ಹೆಚ್ಚಾಗಿದೆ. ಈ ಮಧ್ಯೆ ತೈವಾನ್ ರಕ್ಷಣಾ ಸಚಿವಾಲಯದ ಸಂಶೋಧನೆ ಮತ್ತು ಅಭಿವೃದ್ಧಿ ಘಟಕದ ಉಪ ಮುಖ್ಯಸ್ಥ ಔ ಯಾಂಗ್ ಲಿ ಹಸಿಂಗ್ ಅವರು ಶನಿವಾರ ಬೆಳಿಗ್ಗೆ ದಕ್ಷಿಣ ತೈವಾನ್‌ನ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು CNA ವರದಿ ಮಾಡಿದೆ. ಅಧಿಕಾರಿಗಳು ಅವರ ಸಾವಿನ ಕಾರಣವನ್ನು ಹುಡುಕುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಔ ಯಾಂಗ್ ಅವರು ವಿವಿಧ ಕ್ಷಿಪಣಿ ಉತ್ಪಾದನಾ ಯೋಜನೆಗಳ ಮೇಲ್ವಿಚಾರಣೆಗಾಗಿ ಈ ವರ್ಷದ ಆರಂಭದಲ್ಲಿ ಮಿಲಿಟರಿ ಒಡೆತನದ ನ್ಯಾಷನಲ್ ಚುಂಗ್-ಶಾನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿಯ ಉಪ ಮುಖ್ಯಸ್ಥರಾಗಿ ತಮ್ಮ ಹುದ್ದೆಯನ್ನು ವಹಿಸಿಕೊಂಡಿದ್ದರು. ಪ್ರಸ್ತುತ ಅವರು ವ್ಯಾಪಾರದ ಉದ್ದೇಶಗಳಿಗಾಗಿ ಪ್ರವಾಸದಲ್ಲಿದ್ದರು ಎಂದು ಸಿಎನ್‌ಎ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯುಎಸ್ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರ ತೈವಾನ್ ಭೇಟಿಯ ನಂತರ ಚೀನಾ ಮತ್ತು ತೈವಾನ್ ನಡುವಿನ ಉದ್ವಿಗ್ನತೆಯ ನಡುವೆ ಅವರು ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: ಲಡಾಖ್: ಪಾಂಗಾಂಗ್ ಸರೋವರಕ್ಕೆ ಸೇತುವೆ ನಿರ್ಮಿಸುತ್ತಿರುವ ಚೀನಾ!

ಚೀನಾ ಮತ್ತು ತೈವಾನ್ ನಡುವೆ ಉದ್ವಿಗ್ನತೆ

ತೈವಾನ್‌ಗೆ ನ್ಯಾನ್ಸಿ ಪೆಲೋಸಿಯನ್ನು ಚೀನಾ ವಿರೋಧಿಸಿದ್ದು, “ತನ್ನ ರಾಷ್ಟ್ರೀಯ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ದೃಢವಾಗಿ ರಕ್ಷಿಸಲು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ಹೇಳಿದೆ. ಆಗಸ್ಟ್ 2 ರಂದು ನ್ಯಾನ್ಸಿ ತೈವಾನ್‌ಗೆ ಭೇಟಿ ನೀಡಿದ್ದು, ಅಮೆರಿಕದ ಚುನಾಯಿತ ಪ್ರತಿನಿಧಿಯೊಬ್ಬರು ಕಳೆದ 25 ವರ್ಷಗಳಲ್ಲೆ ಇದು ಮೊದಲ ಬಾರಿಯಾಗಿದೆ.

ಪೆಲೋಸಿ ತೈವಾನ್‌ಗೆ ಆಗಮಿಸುವ ಮುಂಚೆಯೇ, ಚೀನಾ ‘ಯುದ್ಧಕ್ಕೆ ಸಿದ್ಧರಾಗಲು’ ತನ್ನ ಮಿಲಿಟರಿಗೆ ಎಚ್ಚರಿಕೆ ನೀಡಿತ್ತು. ಅವರ ಭೇಟಿಯ ದಿನದಂದು, ಚೀನಾದ ಯುದ್ಧನೌಕೆಗಳು ತೈವಾನ್ ತೀರದ ಕಡೆಗೆ ಚಲಿಸಲು ಪ್ರಾರಂಭಿಸಿದವು. ಚೀನಾದ ವಿಮಾನವಾಹಕ ನೌಕೆ ಶಾಂಡೊಂಗ್ (CV-17) ಸನ್ಯಾ ಮತ್ತು ಲಿಯಾನಿಂಗ್-001 ನೌಕಾನೆಲೆಯನ್ನು ತೊರೆದಿದ್ದವು.

27 ಚೀನಾದ ಫೈಟರ್ ಜೆಟ್‌ಗಳು ತೈವಾನ್‌ ವಾಯು ರಕ್ಷಣಾ ವಲಯವನ್ನು ಪ್ರವೇಶಿಸಿದೆ ಎಂದು ಪೆಲೋಸಿ ಭೇಟಿಯ ಒಂದು ದಿನದ ನಂತರ ತೈವಾನ್‌ನ ರಕ್ಷಣಾ ಸಚಿವಾಲಯ ಹೇಳಿದೆ. ವಾಯು ರಕ್ಷಣಾ ವಲಯ ಪ್ರವೇಶಿದ ಫೈಟರ್ ಜೆಟ್‌ಗಳಲ್ಲಿ ಚೀನಾದ ನೌಕಾಪಡೆಯ ಆರು ಜೆ-11 ಯುದ್ಧವಿಮಾನಗಳು, ಐದು ಜೆ-16 ಫೈಟರ್ ಜೆಟ್‌ಗಳು ಮತ್ತು 16 ಎಸ್‌ಯು-30 ಫೈಟರ್ ಜೆಟ್‌ಗಳನ್ನು ಒಳಗೊಂಡಿತ್ತು ಎಂದು ಅದು ಹೇಳಿದೆ.

ಇದನ್ನೂ ಓದಿ: ಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ತನ್ನ ‘ಅತಿದೊಡ್ಡ’ ಮಿಲಿಟರಿ ಅಭ್ಯಾಸವನ್ನು ಪ್ರಾರಂಭಿಸಿದ ನಂತರ ತೈವಾನ್ ಜಲಸಂಧಿಯಲ್ಲಿ ‘ನಿಖರವಾದ ಕ್ಷಿಪಣಿ ದಾಳಿ’ ನಡೆಸಿ ಸಮರಾಭ್ಯಾಸ ನಡೆಸಿದೆ ಎಂದು ಚೀನಾ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...