Homeಅಂತರಾಷ್ಟ್ರೀಯಚೀನಾ-ತೈವಾನ್ ಬಿಕ್ಕಟ್ಟಿನ ಮಧ್ಯೆ, ತೈವಾನ್‌ನ ಉನ್ನತ ರಕ್ಷಣಾ ಅಧಿಕಾರಿ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆ

ಚೀನಾ-ತೈವಾನ್ ಬಿಕ್ಕಟ್ಟಿನ ಮಧ್ಯೆ, ತೈವಾನ್‌ನ ಉನ್ನತ ರಕ್ಷಣಾ ಅಧಿಕಾರಿ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆ

- Advertisement -
- Advertisement -

ತೈವಾನ್‌ಗೆ ಅಮೆರಿಕ ಸಂಸತ್ತಿನ ಸ್ಪೀಕರ್ ಸ್ಪೀಕರ್‌ ನ್ಯಾನ್ಸಿ ಪೆಲೋಸಿ ಭೇಟಿಯ ಹಿನ್ನಲೆಯಲ್ಲಿ ಚೀನಾ-ತೈವಾನ್ ಬಿಕ್ಕಟ್ಟು ಮತ್ತಷ್ಟು ಹೆಚ್ಚಾಗಿದೆ. ಈ ಮಧ್ಯೆ ತೈವಾನ್ ರಕ್ಷಣಾ ಸಚಿವಾಲಯದ ಸಂಶೋಧನೆ ಮತ್ತು ಅಭಿವೃದ್ಧಿ ಘಟಕದ ಉಪ ಮುಖ್ಯಸ್ಥ ಔ ಯಾಂಗ್ ಲಿ ಹಸಿಂಗ್ ಅವರು ಶನಿವಾರ ಬೆಳಿಗ್ಗೆ ದಕ್ಷಿಣ ತೈವಾನ್‌ನ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು CNA ವರದಿ ಮಾಡಿದೆ. ಅಧಿಕಾರಿಗಳು ಅವರ ಸಾವಿನ ಕಾರಣವನ್ನು ಹುಡುಕುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಔ ಯಾಂಗ್ ಅವರು ವಿವಿಧ ಕ್ಷಿಪಣಿ ಉತ್ಪಾದನಾ ಯೋಜನೆಗಳ ಮೇಲ್ವಿಚಾರಣೆಗಾಗಿ ಈ ವರ್ಷದ ಆರಂಭದಲ್ಲಿ ಮಿಲಿಟರಿ ಒಡೆತನದ ನ್ಯಾಷನಲ್ ಚುಂಗ್-ಶಾನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿಯ ಉಪ ಮುಖ್ಯಸ್ಥರಾಗಿ ತಮ್ಮ ಹುದ್ದೆಯನ್ನು ವಹಿಸಿಕೊಂಡಿದ್ದರು. ಪ್ರಸ್ತುತ ಅವರು ವ್ಯಾಪಾರದ ಉದ್ದೇಶಗಳಿಗಾಗಿ ಪ್ರವಾಸದಲ್ಲಿದ್ದರು ಎಂದು ಸಿಎನ್‌ಎ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯುಎಸ್ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರ ತೈವಾನ್ ಭೇಟಿಯ ನಂತರ ಚೀನಾ ಮತ್ತು ತೈವಾನ್ ನಡುವಿನ ಉದ್ವಿಗ್ನತೆಯ ನಡುವೆ ಅವರು ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: ಲಡಾಖ್: ಪಾಂಗಾಂಗ್ ಸರೋವರಕ್ಕೆ ಸೇತುವೆ ನಿರ್ಮಿಸುತ್ತಿರುವ ಚೀನಾ!

ಚೀನಾ ಮತ್ತು ತೈವಾನ್ ನಡುವೆ ಉದ್ವಿಗ್ನತೆ

ತೈವಾನ್‌ಗೆ ನ್ಯಾನ್ಸಿ ಪೆಲೋಸಿಯನ್ನು ಚೀನಾ ವಿರೋಧಿಸಿದ್ದು, “ತನ್ನ ರಾಷ್ಟ್ರೀಯ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ದೃಢವಾಗಿ ರಕ್ಷಿಸಲು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ಹೇಳಿದೆ. ಆಗಸ್ಟ್ 2 ರಂದು ನ್ಯಾನ್ಸಿ ತೈವಾನ್‌ಗೆ ಭೇಟಿ ನೀಡಿದ್ದು, ಅಮೆರಿಕದ ಚುನಾಯಿತ ಪ್ರತಿನಿಧಿಯೊಬ್ಬರು ಕಳೆದ 25 ವರ್ಷಗಳಲ್ಲೆ ಇದು ಮೊದಲ ಬಾರಿಯಾಗಿದೆ.

ಪೆಲೋಸಿ ತೈವಾನ್‌ಗೆ ಆಗಮಿಸುವ ಮುಂಚೆಯೇ, ಚೀನಾ ‘ಯುದ್ಧಕ್ಕೆ ಸಿದ್ಧರಾಗಲು’ ತನ್ನ ಮಿಲಿಟರಿಗೆ ಎಚ್ಚರಿಕೆ ನೀಡಿತ್ತು. ಅವರ ಭೇಟಿಯ ದಿನದಂದು, ಚೀನಾದ ಯುದ್ಧನೌಕೆಗಳು ತೈವಾನ್ ತೀರದ ಕಡೆಗೆ ಚಲಿಸಲು ಪ್ರಾರಂಭಿಸಿದವು. ಚೀನಾದ ವಿಮಾನವಾಹಕ ನೌಕೆ ಶಾಂಡೊಂಗ್ (CV-17) ಸನ್ಯಾ ಮತ್ತು ಲಿಯಾನಿಂಗ್-001 ನೌಕಾನೆಲೆಯನ್ನು ತೊರೆದಿದ್ದವು.

27 ಚೀನಾದ ಫೈಟರ್ ಜೆಟ್‌ಗಳು ತೈವಾನ್‌ ವಾಯು ರಕ್ಷಣಾ ವಲಯವನ್ನು ಪ್ರವೇಶಿಸಿದೆ ಎಂದು ಪೆಲೋಸಿ ಭೇಟಿಯ ಒಂದು ದಿನದ ನಂತರ ತೈವಾನ್‌ನ ರಕ್ಷಣಾ ಸಚಿವಾಲಯ ಹೇಳಿದೆ. ವಾಯು ರಕ್ಷಣಾ ವಲಯ ಪ್ರವೇಶಿದ ಫೈಟರ್ ಜೆಟ್‌ಗಳಲ್ಲಿ ಚೀನಾದ ನೌಕಾಪಡೆಯ ಆರು ಜೆ-11 ಯುದ್ಧವಿಮಾನಗಳು, ಐದು ಜೆ-16 ಫೈಟರ್ ಜೆಟ್‌ಗಳು ಮತ್ತು 16 ಎಸ್‌ಯು-30 ಫೈಟರ್ ಜೆಟ್‌ಗಳನ್ನು ಒಳಗೊಂಡಿತ್ತು ಎಂದು ಅದು ಹೇಳಿದೆ.

ಇದನ್ನೂ ಓದಿ: ಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ತನ್ನ ‘ಅತಿದೊಡ್ಡ’ ಮಿಲಿಟರಿ ಅಭ್ಯಾಸವನ್ನು ಪ್ರಾರಂಭಿಸಿದ ನಂತರ ತೈವಾನ್ ಜಲಸಂಧಿಯಲ್ಲಿ ‘ನಿಖರವಾದ ಕ್ಷಿಪಣಿ ದಾಳಿ’ ನಡೆಸಿ ಸಮರಾಭ್ಯಾಸ ನಡೆಸಿದೆ ಎಂದು ಚೀನಾ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...