Homeದಲಿತ್ ಫೈಲ್ಸ್ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣ; 27 ಮಂದಿಗೆ ಜೀವಾವಧಿ ಶಿಕ್ಷೆ

ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣ; 27 ಮಂದಿಗೆ ಜೀವಾವಧಿ ಶಿಕ್ಷೆ

ಸೈನಿಕನಾಗಿ ಕೆಲಸ ಮಾಡುತ್ತಿದ್ದ ದಲಿತ ಯುವಕನೊಬ್ಬ ಸವರ್ಣೀಯರ ಮನೆಯ ಎದುರು ಫೋನಿನಲ್ಲಿ ಮಾತನಾಡಿದ್ದಕ್ಕೆ ಕೋಪಗೊಂಡ ಜಾತಿವಾದಿಗಳು ಮೂವರು ದಲಿತರನ್ನು ಹತ್ಯೆ ಮಾಡಿದ್ದರು.

- Advertisement -
- Advertisement -

ತಮಿಳುನಾಡಿನ ಶಿವಗಂಗೈ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿಶೇಷ ನ್ಯಾಯಾಲಯವು ಶುಕ್ರವಾರ (ಆ.5), ಮೂವರು ದಲಿತರ ತ್ರಿವಳಿ ಹತ್ಯೆಗೆ ಸಂಬಂಧಿಸಿದಂತೆ 27 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಮೇ 28, 2018ರಂದು ತಮಿಳುನಾಡಿನ ಶಿವಗಂಗೈ ಜಿಲ್ಲೆಯ ಕಾಂಚನಾಥಂನ ದೇವೇಂದ್ರ ಕುಲ್ಲಾ ವೆಲ್ಲಲರ್ (ದಲಿತ ಸಮುದಾಯ) ಗ್ರಾಮಸ್ಥರು ತಮ್ಮ ಕರುಪ್ಪುಸಾಮಿ ದೇವಸ್ಥಾನದಲ್ಲಿ ಹಬ್ಬ ಮುಗಿಸಿ ಮನೆಗಳಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆ ದಿನ ರಾತ್ರಿ ಅಗಮುಡಿಯಾರ್ (ಪ್ರಬಲವಾದ ತೇವರ್ ಜಾತಿ ಸಮೂಹದ ಒಂದು ಭಾಗ) ಸಮುದಾಯದ ವ್ಯಕ್ತಿಗಳು ಎಂಟು ಮಂದಿ ದಲಿತರ ಮೇಲೆ ದಾಳಿ ಮಾಡಿ ಚಾಕು ಮತ್ತು ಕುಡುಗೋಲುಗಳಿಂದ ತೀವ್ರವಾಗಿ ಗಾಯಗೊಳಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದಾಳಿಯಲ್ಲಿ ಮೂವರು ಗಾಯಗೊಂಡು ಸಾವನ್ನಪ್ಪಿದರು. ಗಂಭೀರವಾಗಿ ಗಾಯಗೊಂಡಿದ್ದ ಐವರು ಬದುಕುಳಿದರು. ಈ ಪ್ರಕರಣದಲ್ಲಿ ಮೂಲತಃ ನಾಲ್ವರು ಬಾಲಾಪರಾಧಿಗಳು ಸೇರಿದಂತೆ ಒಟ್ಟು 33 ಅಗಮುಡಿಯರರ ಮೇಲೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿತ್ತು.

ವಿಚಾರಣೆಯ ಅವಧಿಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 27 ಆರೋಪಿಗಳು ದುಷ್ಕೃತ್ಯದಲ್ಲಿ ಭಾಗಿಯಾಗಿರುವ ದೋಷಿಗಳೆಂದು ಆಗಸ್ಟ್ 1ರಂದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಘೋಷಿಸಲಾಗಿದೆ. 27 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಇದಕ್ಕೂ ಮೊದಲು 2019ರಲ್ಲಿ, ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಆರೋಪಿಗಳಿಗೆ ಜಾಮೀನು ನಿರಾಕರಿಸಿತ್ತು. ಜಾಮೀನು ತಿರಸ್ಕರಿಸುವಾಗ ಆರುಮುಗಂ (68), ಷಣ್ಮುಗನಾಥನ್ (31) ಮತ್ತು ಚಂದ್ರಶೇಖರನ್ (34) ಅವರ ತ್ರಿವಳಿ ಹತ್ಯೆಗಳು ಜಾತಿ ಅಸಮಾನತೆಯ ಕೊಳಕು ಮುಖವನ್ನು ಕಠೋರವಾಗಿ ನೆನಪಿಸುತ್ತದೆ ಎಂದು ಪೀಠವು ಹೇಳಿತ್ತು. (ಶಿವಗಂಗೈ ಜಿಲ್ಲೆಯು ಜಾತಿ ಹಿಂಸಾಚಾರಗಳಿಂದ ಕುಖ್ಯಾತಿ ಪಡೆದಿದೆ.)

ಎಂಟು ಮಂದಿ ದಲಿತರ ಮೇಲೆ ಕ್ರೂರವಾಗಿ ಹಲ್ಲೆ ಮಾಡುವ ಎರಡು ದಿನಗಳ ಹಿಂದೆ (ಮೇ 26, 2018) ಈ ಘಟನೆಗೆ ಕಾರಣವಾಗುವ ಬೆಳವಣಿಗೆಗಳಾಗಿದ್ದವು. ಅಗಮುಡಿಯಾರ್ ಸಮುದಾಯದ ಮನೆಯ ಹೊರಗೆ ಫೋನಿನಲ್ಲಿ ದಲಿತ ಯುವಕನೊಬ್ಬ ಜೋರಾಗಿ ಮಾತನಾಡಿದ್ದಾನೆಂದು ಜಾತಿವಾದಿಗಳು ಕೋಪಗೊಂಡರು. ಅಪರಾಧಿಗಳಾದ ಸುಮನ್ ಮತ್ತು ಅರುಣ್‌ಕುಮಾರ್ ಯುವಕನ ಮೇಲೆ ದಾಳಿ ಮಾಡಿದ್ದರು.

ಮನೆಯ ಹೊರಗೆ ಮಾತನಾಡಿದ್ದು ತಮಗೆ ತೋರಿದ ‘ಅಗೌರವ’ ಎಂದು ಪರಿಗಣಿಸಿದ್ದರು. ಯುವಕನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದರು. ಜಾತಿ ನಿಂದನೆಗಳನ್ನು ಮಾಡಿದರು. ಕೊಲೆ ಬೆದರಿಕೆಗಳನ್ನು ಹಾಕಿದರು. ಮೇ 28ರಂದು ನಡೆದ ದಾಳಿಯಲ್ಲಿ ಬದುಕುಳಿದವರಾದ ಧನಶೇಖರನ್ (52), ಮಲೈಚಾಮಿ (50), ಸುಕುಮಾರನ್ (22), ದೇವೇಂದ್ರನ್ (45) ಮತ್ತು ಮಗೇಶ್ವರನ್ (18) ಗಂಭೀರವಾಗಿ ಗಾಯಗೊಂಡಿದ್ದರು. ಅವರಲ್ಲಿ ಹಲವರಿಗೆ 40ರಿಂದ 50 ಕುಡುಗೋಲಿನೇಟು ಬಿದ್ದಿವೆ ಎಂದು ‘ದಿ ವೈರ್’ ವರದಿ ಮಾಡಿದೆ.

ಗ್ರಾಮದಲ್ಲಿ 36 ಕುಟುಂಬಗಳಿವೆ. ಅವರಲ್ಲಿ ಒಬ್ಬರು ಮಾತ್ರ ಅಗಮುಡಿಯಾರ್ ಸಮುದಾಯಕ್ಕೆ ಸೇರಿದವರು. ಇದರ ಹೊರತಾಗಿಯೂ ಅಗಮುಡಿಯಾರ್ ಕುಟುಂಬವು ಉಳಿದ 35 ದಲಿತ ಕುಟುಂಬಗಳ ವಿರುದ್ಧ ಪದೇ ಪದೇ ತಾರತಮ್ಯವನ್ನು ಎಸಗುತ್ತಿದೆ ಎಂದು ‘ದಿ ವೈರ್‌’ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.

ಇದನ್ನೂ ಓದಿರಿ: ‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ…

ಗ್ರಾಮದ ದಲಿತರಲ್ಲಿ ಪದವೀಧರರು, ಪೊಲೀಸರು, ಸರ್ಕಾರಿ ನೌಕರರು ಇದ್ದು, ಆರ್ಥಿಕವಾಗಿ ಮುಂದುವರಿದಿದ್ದಾರೆ. ಇದನ್ನು ಅಗಮುಡಿಯಾರ್ ಜಾತಿವಾದಿ ಮನಸ್ಥಿತಿಯು ಸಹಿಕೊಳ್ಳಲಿಲ್ಲ ಎಂದು ಗ್ರಾಮಸ್ಥರು ಹೇಳಿಕೊಂಡಿದ್ದಾರೆ. ಕೊಲೆಯಾದ ಮೂವರಲ್ಲಿ ಒಬ್ಬರಾದ ಆರುಮುಗಂ ಅವರ ಪುತ್ರ ಪ್ರಭಾಕರ್ ಫೋನಿನಲ್ಲಿ ಮಾತನಾಡಿದ ಕಾರಣಕ್ಕೆ ಸುಮನ್ ಮತ್ತು ಅರುಣಕುಮಾರ್ ಎಂಬವರು ಹಲ್ಲೆ ಮಾಡಿದ್ದರು.

ಪ್ರಭಾಕರ್ ಒಬ್ಬ ಸೈನಿಕ, ಮುಂಬರುವ ಮದುವೆಯ ಕಾರಣದಿಂದ ಮನೆಯಲ್ಲಿದ್ದರು. ಮೇ 26 ರಂದು ನಿಂದನೆ ಮತ್ತು ದೈಹಿಕ ಹಲ್ಲೆಯ ನಂತರ ಅವರು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ಕಣ್ಣುಮುಚ್ಚಿ ಕುಳಿತಿದ್ದರು. ದಾಳಿಯ ರಾತ್ರಿ ಪ್ರಭಾಕರ್ ಸ್ಥಳದಲ್ಲಿರದ ಕಾರಣ, ಆತನ ತಂದೆ ಆರುಮುಗಂ ಅವರನ್ನು ಜಾತಿವಾದಿಗಳು ಟಾರ್ಗೆಟ್ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

ವರದಿ ಕೃಪೆ: ನ್ಯೂಸ್‌ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...