Homeದಲಿತ್ ಫೈಲ್ಸ್ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣ; 27 ಮಂದಿಗೆ ಜೀವಾವಧಿ ಶಿಕ್ಷೆ

ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣ; 27 ಮಂದಿಗೆ ಜೀವಾವಧಿ ಶಿಕ್ಷೆ

ಸೈನಿಕನಾಗಿ ಕೆಲಸ ಮಾಡುತ್ತಿದ್ದ ದಲಿತ ಯುವಕನೊಬ್ಬ ಸವರ್ಣೀಯರ ಮನೆಯ ಎದುರು ಫೋನಿನಲ್ಲಿ ಮಾತನಾಡಿದ್ದಕ್ಕೆ ಕೋಪಗೊಂಡ ಜಾತಿವಾದಿಗಳು ಮೂವರು ದಲಿತರನ್ನು ಹತ್ಯೆ ಮಾಡಿದ್ದರು.

- Advertisement -
- Advertisement -

ತಮಿಳುನಾಡಿನ ಶಿವಗಂಗೈ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿಶೇಷ ನ್ಯಾಯಾಲಯವು ಶುಕ್ರವಾರ (ಆ.5), ಮೂವರು ದಲಿತರ ತ್ರಿವಳಿ ಹತ್ಯೆಗೆ ಸಂಬಂಧಿಸಿದಂತೆ 27 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಮೇ 28, 2018ರಂದು ತಮಿಳುನಾಡಿನ ಶಿವಗಂಗೈ ಜಿಲ್ಲೆಯ ಕಾಂಚನಾಥಂನ ದೇವೇಂದ್ರ ಕುಲ್ಲಾ ವೆಲ್ಲಲರ್ (ದಲಿತ ಸಮುದಾಯ) ಗ್ರಾಮಸ್ಥರು ತಮ್ಮ ಕರುಪ್ಪುಸಾಮಿ ದೇವಸ್ಥಾನದಲ್ಲಿ ಹಬ್ಬ ಮುಗಿಸಿ ಮನೆಗಳಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆ ದಿನ ರಾತ್ರಿ ಅಗಮುಡಿಯಾರ್ (ಪ್ರಬಲವಾದ ತೇವರ್ ಜಾತಿ ಸಮೂಹದ ಒಂದು ಭಾಗ) ಸಮುದಾಯದ ವ್ಯಕ್ತಿಗಳು ಎಂಟು ಮಂದಿ ದಲಿತರ ಮೇಲೆ ದಾಳಿ ಮಾಡಿ ಚಾಕು ಮತ್ತು ಕುಡುಗೋಲುಗಳಿಂದ ತೀವ್ರವಾಗಿ ಗಾಯಗೊಳಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದಾಳಿಯಲ್ಲಿ ಮೂವರು ಗಾಯಗೊಂಡು ಸಾವನ್ನಪ್ಪಿದರು. ಗಂಭೀರವಾಗಿ ಗಾಯಗೊಂಡಿದ್ದ ಐವರು ಬದುಕುಳಿದರು. ಈ ಪ್ರಕರಣದಲ್ಲಿ ಮೂಲತಃ ನಾಲ್ವರು ಬಾಲಾಪರಾಧಿಗಳು ಸೇರಿದಂತೆ ಒಟ್ಟು 33 ಅಗಮುಡಿಯರರ ಮೇಲೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿತ್ತು.

ವಿಚಾರಣೆಯ ಅವಧಿಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 27 ಆರೋಪಿಗಳು ದುಷ್ಕೃತ್ಯದಲ್ಲಿ ಭಾಗಿಯಾಗಿರುವ ದೋಷಿಗಳೆಂದು ಆಗಸ್ಟ್ 1ರಂದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಘೋಷಿಸಲಾಗಿದೆ. 27 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಇದಕ್ಕೂ ಮೊದಲು 2019ರಲ್ಲಿ, ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಆರೋಪಿಗಳಿಗೆ ಜಾಮೀನು ನಿರಾಕರಿಸಿತ್ತು. ಜಾಮೀನು ತಿರಸ್ಕರಿಸುವಾಗ ಆರುಮುಗಂ (68), ಷಣ್ಮುಗನಾಥನ್ (31) ಮತ್ತು ಚಂದ್ರಶೇಖರನ್ (34) ಅವರ ತ್ರಿವಳಿ ಹತ್ಯೆಗಳು ಜಾತಿ ಅಸಮಾನತೆಯ ಕೊಳಕು ಮುಖವನ್ನು ಕಠೋರವಾಗಿ ನೆನಪಿಸುತ್ತದೆ ಎಂದು ಪೀಠವು ಹೇಳಿತ್ತು. (ಶಿವಗಂಗೈ ಜಿಲ್ಲೆಯು ಜಾತಿ ಹಿಂಸಾಚಾರಗಳಿಂದ ಕುಖ್ಯಾತಿ ಪಡೆದಿದೆ.)

ಎಂಟು ಮಂದಿ ದಲಿತರ ಮೇಲೆ ಕ್ರೂರವಾಗಿ ಹಲ್ಲೆ ಮಾಡುವ ಎರಡು ದಿನಗಳ ಹಿಂದೆ (ಮೇ 26, 2018) ಈ ಘಟನೆಗೆ ಕಾರಣವಾಗುವ ಬೆಳವಣಿಗೆಗಳಾಗಿದ್ದವು. ಅಗಮುಡಿಯಾರ್ ಸಮುದಾಯದ ಮನೆಯ ಹೊರಗೆ ಫೋನಿನಲ್ಲಿ ದಲಿತ ಯುವಕನೊಬ್ಬ ಜೋರಾಗಿ ಮಾತನಾಡಿದ್ದಾನೆಂದು ಜಾತಿವಾದಿಗಳು ಕೋಪಗೊಂಡರು. ಅಪರಾಧಿಗಳಾದ ಸುಮನ್ ಮತ್ತು ಅರುಣ್‌ಕುಮಾರ್ ಯುವಕನ ಮೇಲೆ ದಾಳಿ ಮಾಡಿದ್ದರು.

ಮನೆಯ ಹೊರಗೆ ಮಾತನಾಡಿದ್ದು ತಮಗೆ ತೋರಿದ ‘ಅಗೌರವ’ ಎಂದು ಪರಿಗಣಿಸಿದ್ದರು. ಯುವಕನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದರು. ಜಾತಿ ನಿಂದನೆಗಳನ್ನು ಮಾಡಿದರು. ಕೊಲೆ ಬೆದರಿಕೆಗಳನ್ನು ಹಾಕಿದರು. ಮೇ 28ರಂದು ನಡೆದ ದಾಳಿಯಲ್ಲಿ ಬದುಕುಳಿದವರಾದ ಧನಶೇಖರನ್ (52), ಮಲೈಚಾಮಿ (50), ಸುಕುಮಾರನ್ (22), ದೇವೇಂದ್ರನ್ (45) ಮತ್ತು ಮಗೇಶ್ವರನ್ (18) ಗಂಭೀರವಾಗಿ ಗಾಯಗೊಂಡಿದ್ದರು. ಅವರಲ್ಲಿ ಹಲವರಿಗೆ 40ರಿಂದ 50 ಕುಡುಗೋಲಿನೇಟು ಬಿದ್ದಿವೆ ಎಂದು ‘ದಿ ವೈರ್’ ವರದಿ ಮಾಡಿದೆ.

ಗ್ರಾಮದಲ್ಲಿ 36 ಕುಟುಂಬಗಳಿವೆ. ಅವರಲ್ಲಿ ಒಬ್ಬರು ಮಾತ್ರ ಅಗಮುಡಿಯಾರ್ ಸಮುದಾಯಕ್ಕೆ ಸೇರಿದವರು. ಇದರ ಹೊರತಾಗಿಯೂ ಅಗಮುಡಿಯಾರ್ ಕುಟುಂಬವು ಉಳಿದ 35 ದಲಿತ ಕುಟುಂಬಗಳ ವಿರುದ್ಧ ಪದೇ ಪದೇ ತಾರತಮ್ಯವನ್ನು ಎಸಗುತ್ತಿದೆ ಎಂದು ‘ದಿ ವೈರ್‌’ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.

ಇದನ್ನೂ ಓದಿರಿ: ‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ…

ಗ್ರಾಮದ ದಲಿತರಲ್ಲಿ ಪದವೀಧರರು, ಪೊಲೀಸರು, ಸರ್ಕಾರಿ ನೌಕರರು ಇದ್ದು, ಆರ್ಥಿಕವಾಗಿ ಮುಂದುವರಿದಿದ್ದಾರೆ. ಇದನ್ನು ಅಗಮುಡಿಯಾರ್ ಜಾತಿವಾದಿ ಮನಸ್ಥಿತಿಯು ಸಹಿಕೊಳ್ಳಲಿಲ್ಲ ಎಂದು ಗ್ರಾಮಸ್ಥರು ಹೇಳಿಕೊಂಡಿದ್ದಾರೆ. ಕೊಲೆಯಾದ ಮೂವರಲ್ಲಿ ಒಬ್ಬರಾದ ಆರುಮುಗಂ ಅವರ ಪುತ್ರ ಪ್ರಭಾಕರ್ ಫೋನಿನಲ್ಲಿ ಮಾತನಾಡಿದ ಕಾರಣಕ್ಕೆ ಸುಮನ್ ಮತ್ತು ಅರುಣಕುಮಾರ್ ಎಂಬವರು ಹಲ್ಲೆ ಮಾಡಿದ್ದರು.

ಪ್ರಭಾಕರ್ ಒಬ್ಬ ಸೈನಿಕ, ಮುಂಬರುವ ಮದುವೆಯ ಕಾರಣದಿಂದ ಮನೆಯಲ್ಲಿದ್ದರು. ಮೇ 26 ರಂದು ನಿಂದನೆ ಮತ್ತು ದೈಹಿಕ ಹಲ್ಲೆಯ ನಂತರ ಅವರು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ಕಣ್ಣುಮುಚ್ಚಿ ಕುಳಿತಿದ್ದರು. ದಾಳಿಯ ರಾತ್ರಿ ಪ್ರಭಾಕರ್ ಸ್ಥಳದಲ್ಲಿರದ ಕಾರಣ, ಆತನ ತಂದೆ ಆರುಮುಗಂ ಅವರನ್ನು ಜಾತಿವಾದಿಗಳು ಟಾರ್ಗೆಟ್ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

ವರದಿ ಕೃಪೆ: ನ್ಯೂಸ್‌ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....