Homeದಲಿತ್ ಫೈಲ್ಸ್ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣ; 27 ಮಂದಿಗೆ ಜೀವಾವಧಿ ಶಿಕ್ಷೆ

ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣ; 27 ಮಂದಿಗೆ ಜೀವಾವಧಿ ಶಿಕ್ಷೆ

ಸೈನಿಕನಾಗಿ ಕೆಲಸ ಮಾಡುತ್ತಿದ್ದ ದಲಿತ ಯುವಕನೊಬ್ಬ ಸವರ್ಣೀಯರ ಮನೆಯ ಎದುರು ಫೋನಿನಲ್ಲಿ ಮಾತನಾಡಿದ್ದಕ್ಕೆ ಕೋಪಗೊಂಡ ಜಾತಿವಾದಿಗಳು ಮೂವರು ದಲಿತರನ್ನು ಹತ್ಯೆ ಮಾಡಿದ್ದರು.

- Advertisement -
- Advertisement -

ತಮಿಳುನಾಡಿನ ಶಿವಗಂಗೈ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿಶೇಷ ನ್ಯಾಯಾಲಯವು ಶುಕ್ರವಾರ (ಆ.5), ಮೂವರು ದಲಿತರ ತ್ರಿವಳಿ ಹತ್ಯೆಗೆ ಸಂಬಂಧಿಸಿದಂತೆ 27 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಮೇ 28, 2018ರಂದು ತಮಿಳುನಾಡಿನ ಶಿವಗಂಗೈ ಜಿಲ್ಲೆಯ ಕಾಂಚನಾಥಂನ ದೇವೇಂದ್ರ ಕುಲ್ಲಾ ವೆಲ್ಲಲರ್ (ದಲಿತ ಸಮುದಾಯ) ಗ್ರಾಮಸ್ಥರು ತಮ್ಮ ಕರುಪ್ಪುಸಾಮಿ ದೇವಸ್ಥಾನದಲ್ಲಿ ಹಬ್ಬ ಮುಗಿಸಿ ಮನೆಗಳಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆ ದಿನ ರಾತ್ರಿ ಅಗಮುಡಿಯಾರ್ (ಪ್ರಬಲವಾದ ತೇವರ್ ಜಾತಿ ಸಮೂಹದ ಒಂದು ಭಾಗ) ಸಮುದಾಯದ ವ್ಯಕ್ತಿಗಳು ಎಂಟು ಮಂದಿ ದಲಿತರ ಮೇಲೆ ದಾಳಿ ಮಾಡಿ ಚಾಕು ಮತ್ತು ಕುಡುಗೋಲುಗಳಿಂದ ತೀವ್ರವಾಗಿ ಗಾಯಗೊಳಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದಾಳಿಯಲ್ಲಿ ಮೂವರು ಗಾಯಗೊಂಡು ಸಾವನ್ನಪ್ಪಿದರು. ಗಂಭೀರವಾಗಿ ಗಾಯಗೊಂಡಿದ್ದ ಐವರು ಬದುಕುಳಿದರು. ಈ ಪ್ರಕರಣದಲ್ಲಿ ಮೂಲತಃ ನಾಲ್ವರು ಬಾಲಾಪರಾಧಿಗಳು ಸೇರಿದಂತೆ ಒಟ್ಟು 33 ಅಗಮುಡಿಯರರ ಮೇಲೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿತ್ತು.

ವಿಚಾರಣೆಯ ಅವಧಿಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 27 ಆರೋಪಿಗಳು ದುಷ್ಕೃತ್ಯದಲ್ಲಿ ಭಾಗಿಯಾಗಿರುವ ದೋಷಿಗಳೆಂದು ಆಗಸ್ಟ್ 1ರಂದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಘೋಷಿಸಲಾಗಿದೆ. 27 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಇದಕ್ಕೂ ಮೊದಲು 2019ರಲ್ಲಿ, ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಆರೋಪಿಗಳಿಗೆ ಜಾಮೀನು ನಿರಾಕರಿಸಿತ್ತು. ಜಾಮೀನು ತಿರಸ್ಕರಿಸುವಾಗ ಆರುಮುಗಂ (68), ಷಣ್ಮುಗನಾಥನ್ (31) ಮತ್ತು ಚಂದ್ರಶೇಖರನ್ (34) ಅವರ ತ್ರಿವಳಿ ಹತ್ಯೆಗಳು ಜಾತಿ ಅಸಮಾನತೆಯ ಕೊಳಕು ಮುಖವನ್ನು ಕಠೋರವಾಗಿ ನೆನಪಿಸುತ್ತದೆ ಎಂದು ಪೀಠವು ಹೇಳಿತ್ತು. (ಶಿವಗಂಗೈ ಜಿಲ್ಲೆಯು ಜಾತಿ ಹಿಂಸಾಚಾರಗಳಿಂದ ಕುಖ್ಯಾತಿ ಪಡೆದಿದೆ.)

ಎಂಟು ಮಂದಿ ದಲಿತರ ಮೇಲೆ ಕ್ರೂರವಾಗಿ ಹಲ್ಲೆ ಮಾಡುವ ಎರಡು ದಿನಗಳ ಹಿಂದೆ (ಮೇ 26, 2018) ಈ ಘಟನೆಗೆ ಕಾರಣವಾಗುವ ಬೆಳವಣಿಗೆಗಳಾಗಿದ್ದವು. ಅಗಮುಡಿಯಾರ್ ಸಮುದಾಯದ ಮನೆಯ ಹೊರಗೆ ಫೋನಿನಲ್ಲಿ ದಲಿತ ಯುವಕನೊಬ್ಬ ಜೋರಾಗಿ ಮಾತನಾಡಿದ್ದಾನೆಂದು ಜಾತಿವಾದಿಗಳು ಕೋಪಗೊಂಡರು. ಅಪರಾಧಿಗಳಾದ ಸುಮನ್ ಮತ್ತು ಅರುಣ್‌ಕುಮಾರ್ ಯುವಕನ ಮೇಲೆ ದಾಳಿ ಮಾಡಿದ್ದರು.

ಮನೆಯ ಹೊರಗೆ ಮಾತನಾಡಿದ್ದು ತಮಗೆ ತೋರಿದ ‘ಅಗೌರವ’ ಎಂದು ಪರಿಗಣಿಸಿದ್ದರು. ಯುವಕನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದರು. ಜಾತಿ ನಿಂದನೆಗಳನ್ನು ಮಾಡಿದರು. ಕೊಲೆ ಬೆದರಿಕೆಗಳನ್ನು ಹಾಕಿದರು. ಮೇ 28ರಂದು ನಡೆದ ದಾಳಿಯಲ್ಲಿ ಬದುಕುಳಿದವರಾದ ಧನಶೇಖರನ್ (52), ಮಲೈಚಾಮಿ (50), ಸುಕುಮಾರನ್ (22), ದೇವೇಂದ್ರನ್ (45) ಮತ್ತು ಮಗೇಶ್ವರನ್ (18) ಗಂಭೀರವಾಗಿ ಗಾಯಗೊಂಡಿದ್ದರು. ಅವರಲ್ಲಿ ಹಲವರಿಗೆ 40ರಿಂದ 50 ಕುಡುಗೋಲಿನೇಟು ಬಿದ್ದಿವೆ ಎಂದು ‘ದಿ ವೈರ್’ ವರದಿ ಮಾಡಿದೆ.

ಗ್ರಾಮದಲ್ಲಿ 36 ಕುಟುಂಬಗಳಿವೆ. ಅವರಲ್ಲಿ ಒಬ್ಬರು ಮಾತ್ರ ಅಗಮುಡಿಯಾರ್ ಸಮುದಾಯಕ್ಕೆ ಸೇರಿದವರು. ಇದರ ಹೊರತಾಗಿಯೂ ಅಗಮುಡಿಯಾರ್ ಕುಟುಂಬವು ಉಳಿದ 35 ದಲಿತ ಕುಟುಂಬಗಳ ವಿರುದ್ಧ ಪದೇ ಪದೇ ತಾರತಮ್ಯವನ್ನು ಎಸಗುತ್ತಿದೆ ಎಂದು ‘ದಿ ವೈರ್‌’ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.

ಇದನ್ನೂ ಓದಿರಿ: ‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ…

ಗ್ರಾಮದ ದಲಿತರಲ್ಲಿ ಪದವೀಧರರು, ಪೊಲೀಸರು, ಸರ್ಕಾರಿ ನೌಕರರು ಇದ್ದು, ಆರ್ಥಿಕವಾಗಿ ಮುಂದುವರಿದಿದ್ದಾರೆ. ಇದನ್ನು ಅಗಮುಡಿಯಾರ್ ಜಾತಿವಾದಿ ಮನಸ್ಥಿತಿಯು ಸಹಿಕೊಳ್ಳಲಿಲ್ಲ ಎಂದು ಗ್ರಾಮಸ್ಥರು ಹೇಳಿಕೊಂಡಿದ್ದಾರೆ. ಕೊಲೆಯಾದ ಮೂವರಲ್ಲಿ ಒಬ್ಬರಾದ ಆರುಮುಗಂ ಅವರ ಪುತ್ರ ಪ್ರಭಾಕರ್ ಫೋನಿನಲ್ಲಿ ಮಾತನಾಡಿದ ಕಾರಣಕ್ಕೆ ಸುಮನ್ ಮತ್ತು ಅರುಣಕುಮಾರ್ ಎಂಬವರು ಹಲ್ಲೆ ಮಾಡಿದ್ದರು.

ಪ್ರಭಾಕರ್ ಒಬ್ಬ ಸೈನಿಕ, ಮುಂಬರುವ ಮದುವೆಯ ಕಾರಣದಿಂದ ಮನೆಯಲ್ಲಿದ್ದರು. ಮೇ 26 ರಂದು ನಿಂದನೆ ಮತ್ತು ದೈಹಿಕ ಹಲ್ಲೆಯ ನಂತರ ಅವರು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ಕಣ್ಣುಮುಚ್ಚಿ ಕುಳಿತಿದ್ದರು. ದಾಳಿಯ ರಾತ್ರಿ ಪ್ರಭಾಕರ್ ಸ್ಥಳದಲ್ಲಿರದ ಕಾರಣ, ಆತನ ತಂದೆ ಆರುಮುಗಂ ಅವರನ್ನು ಜಾತಿವಾದಿಗಳು ಟಾರ್ಗೆಟ್ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

ವರದಿ ಕೃಪೆ: ನ್ಯೂಸ್‌ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...