Homeಕರ್ನಾಟಕಬಿಜೆಪಿ ನಾಯಕರೇ ‘ಹಿಂದಿ ರಾಷ್ಟ್ರಭಾಷೆ’ ಎಂಬ ಭ್ರಮೆಯಿಂದ ಹೊರಬನ್ನಿ: ಸಿದ್ದರಾಮಯ್ಯ

ಬಿಜೆಪಿ ನಾಯಕರೇ ‘ಹಿಂದಿ ರಾಷ್ಟ್ರಭಾಷೆ’ ಎಂಬ ಭ್ರಮೆಯಿಂದ ಹೊರಬನ್ನಿ: ಸಿದ್ದರಾಮಯ್ಯ

- Advertisement -
- Advertisement -

ಬಿಜೆಪಿ ನಾಯಕರೇ ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರಬನ್ನಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯದ ಬಿಜೆಪಿ ನಾಯಕರಿಗೆ ಶನಿವಾರ ಕರೆ ನೀಡಿದ್ದಾರೆ. ನಾನೊಬ್ಬ ಕನ್ನಡಿಗ ಎಂಬ ಸ್ವಾಭಿಮಾನವನ್ನು ನೀವೇ ಬೆಳೆಸಿಕೊಳ್ಳಬೇಕು, ಇದು ನಾವು ಹೇಳಿ ಬರುವಂತದ್ದಲ್ಲ ಎಂದು ಅವರು ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವೆಬ್‌ಸೈಟ್‌ನಲ್ಲಿ ಹಿಂದಿ ಪೋಸ್ಟರ್‌ಗಳನ್ನು ಹಾಕಿದ್ದಕ್ಕಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಆಕ್ರೊಶ ವ್ಯಕ್ತಪಡಿಸಿದ್ದರು. ಇದರ ನಂತರ ಎಚ್ಚೆತ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅದನ್ನು ಡಿಲೀಟ್ ಮಾಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, “ನಾನು ಚಾಟಿ ಬೀಸಿದ ನಂತರ ಸರ್ಕಾರ ಎಚ್ಚೆತ್ತುಕೊಂಡು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣದಲ್ಲಿ ಅನಗತ್ಯವಾಗಿ ತುರುಕಿದ್ದ ಹಿಂದಿಯನ್ನು ಕಿತ್ತೊಗೆದಿದೆ. ಕರ್ನಾಟಕದ ಬಿಜೆಪಿ ನಾಯಕರೇ, ನಾನೊಬ್ಬ ಕನ್ನಡಿಗ ಎಂಬ ಸ್ವಾಭಿಮಾನವನ್ನು ನೀವೇ ಬೆಳೆಸಿಕೊಳ್ಳಬೇಕು, ಇದು ನಾವು ಹೇಳಿ ಬರುವಂತದ್ದಲ್ಲ. ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರಬನ್ನಿ” ಎಂದು ಕರೆ ನೀಡಿದ್ದಾರೆ.

ಶುಕ್ರವಾರ ಟ್ವೀಟ್‌ ಮಾಡಿದ್ದ ಸಿದ್ದರಾಮಯ್ಯ ಅವರು, “ರಾಜ್ಯದ ಬೊಮ್ಮಾಹಿ ನೇತೃತ್ವದ ಸರ್ಕಾರ ಕೇಂದ್ರದ ಬಿಜೆಪಿ ಸರ್ಕಾರದ ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ‌‌ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ” ಎಂದು ಹೇಳಿದ್ದರು. ಅವರು ಈ ಟ್ವೀಟ್‌ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವೆಬ್‌ಸೈಟ್‌ನಲ್ಲಿ ಹಾಕಿದ್ದ ಹಿಂದಿ ಪೋಸ್ಟರ್‌ನ ಚಿತ್ರವನ್ನು ಹಾಕಿದ್ದರು.

ಇದನ್ನೂ ಓದಿ: ಬಹುಜನ ಭಾರತ; ಇಂಗ್ಲಿಷ್ ಜೊತೆ ಹಿಂದಿಯೂ ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ

“ಒಕ್ಕೂಟ ಸರ್ಕಾರದ ಸಚಿವ ಅಮಿತ್‌ ಶಾ ಅವರು ಭಾಗವಹಿಸಿದ್ದ ‘ಸಂಕಲ್ಪ್ ಸೆ ಸಿದ್ಧಿ’ ಎಂಬ ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯವಾಗಿತ್ತು.‌ ಇನ್ನೊಂದೆಡೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತನ್ನ ಜಾಲತಾಣದಲ್ಲಿ ಹಿಂದಿಯ ಕಿರೀಟ ಇಟ್ಟುಕೊಂಡು ಮೆರೆಸುತ್ತಿದೆ. ರಾಜ್ಯದ ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು‌ ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ ಎಂಬುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣವೇ ಸಾಕ್ಷಿ. ಮೊದಲು ಈ ಜಾಲತಾಣದಿಂದ ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ” ಎಂದು ಆಗ್ರಹಿಸಿದ್ದರು.

“ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ‌ ಮತ್ತು ಸಂಸ್ಕೃತಿ ಇಲಾಖೆಯೇ? ಎನ್ನುವುದನ್ನು ಮುಖ್ಯಮಂತ್ರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನಿಲ್ ಕುಮಾರ್‌ ಸ್ಪಷ್ಟಪಡಿಸಬೇಕು. ಕನ್ನಡ ಮತ್ತು ಸಂಸ್ಕೃತಿಯ ರಕ್ಷಣೆ ಮತ್ತು‌ ಪೋಷಣೆಗಾಗಿ ಇರುವ ಇಲಾಖೆಯೇ ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡವನ್ನು ಹೊರಗಿಟ್ಟು ಹಿಂದಿ ಭಾಷೆಯ ಪ್ರಚಾರಕ್ಕೆ ಇಳಿದರೆ ಕನ್ನಡ ಭಾಷೆಯನ್ನು ರಕ್ಷಿಸಿವವರು ಯಾರು?” ಎಂದು ಅವರು ಪ್ರಶ್ನಿಸಿದ್ದರು.

ಇದನ್ನೂ ಓದಿ: BJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

“ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಕನ್ನಡಿಗರ ಸ್ವಾಭಿಮಾನವನ್ನು ‘ಉತ್ತರ ಕುಮಾರ’ರ ಕಾಲಡಿ ಯಾಕೆ ಅಡವು ಇಡುತ್ತೀರಾ? ಶರಣಾಗತಿ ಕನ್ನಡದ ಮಣ್ಣಿನ ಗುಣವಲ್ಲ, ವೀರರಾಣಿ ಅಬ್ಬಕ್ಕನ ನೆಲದಿಂದ ಬಂದ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್‌ ಅವರಿಗೆ ಇಂಥಾ ಗುಲಾಮಿ‌ ಮನಸ್ಥಿತಿ ಬರಬಾರದಿತ್ತು..!!” ಎಂದು ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕರ್ನಾಟಕ ರಾಜ್ಯದ ಜನತೆ ಈಗಲೇ ಎಚ್ಚೆತ್ತುಕೊಂಡರೆ ಒಳ್ಳೆಯದು ಇಲ್ಲವಾದರೆ ಮುಂದೊಂದು ದಿನ ಬಿಜೆಪಿಗರೆಲ್ಲ ಕಾರು ಏರಿ ಕರ್ನಾಟಕವನ್ನ ನಾಗಪುರ್ ಮಾಡಿ ಎಲ್ಲಾ ಪ್ರಜೆಗಳ ಕೈಯಲ್ಲಿ ಕತ್ತಿ ತಲವಾರು ಗಳನ್ನು ಕೊಟ್ಟು ಕರ್ನಾಟಕದ ಗಾಂಧಿ ಹರ್ಡೇಕರ್ ರಲ್ಲ ಗೋಲ್ವಾಲ್ಕರ್ ರಂಥ ಇತಿಹಾಸವನ್ನೇ ಸೃಷ್ಟಿ ಮಾಡುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ ನಿಜವಾಗಿಯೂ ನಮ್ಮ ಕರ್ನಾಟಕ ಯಾವಾಗಲೂ ನಮ್ಮ ದೇಶ ಉಳಿಯಬೇಕಾದರೆ ಪಿ ಆರ್ ಎಸ್ ಎಸ್ ಹಾಗೂ ಬಿಜೆಪಿಯನ್ನು ಈ ದೇಶದಿಂದಲೇ ಓಡಿಸಬೇಕು

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...