Homeಕರ್ನಾಟಕಆಪರೇಷನ್ ಫೈನಲ್: ಸಿದ್ದರಾಮಯ್ಯನವರಿಗೇ ಬೇಡವಾಗಿದ್ದ ಸರ್ಕಾರ!

ಆಪರೇಷನ್ ಫೈನಲ್: ಸಿದ್ದರಾಮಯ್ಯನವರಿಗೇ ಬೇಡವಾಗಿದ್ದ ಸರ್ಕಾರ!

- Advertisement -
- Advertisement -

ಮೂರು ದಿನದ ಹಿಂದಷ್ಟೇ ಮಾಧ್ಯಮದವರು ಸಮನ್ವಯ ಸಮಿತಿ ಆಧ್ಯಕ್ಷ ಸಿದ್ದರಾಮಯ್ಯನವರಿಗೆ, ‘ಸರ್, ಅತೃಪ್ತರ ಜೊತೆ ಮಾತನಾಡಿ ಮನವೊಲಿಸುತ್ತಿದ್ದಾರಾ?’ ಎಂದು ಕೇಳಿದಾಗ, ಅವರು ಹೇಳಿದ್ದ ಈ ಮಾತೊಂದೇ ಅವರಿಗೆ ಈ ಸರ್ಕಾರದ ಬಗ್ಗೆ ಮೊದಲಿನಿಂದಲೂ ಇದ್ದ ಅಸಮಾಧಾನದ ಅಂತಿಮವಾದ ಬಹಿರಂಗ ಸ್ಫೋಟದಂತಿತ್ತು: ‘ರೀ, ಎಷ್ಟೂ ಅಂತ ಮಾತನಾಡೋದು? ಎಷ್ಟು ಅಂತ ಅವರ ಮನವೊಲಿಸೋದು? ಈ ಅತೃಪ್ತರ ಜೊತೆ ಮಾತಾಡಿ, ಮಾತಾಡಿ ಸಾಕಾಗಿ ಹೋಗಿದೆ. ಇನ್ನೇನೂ ಮಾತೂ ಇಲ್ಲ, ಕತೆಯೂ ಇಲ್ಲ…’

ಬಹುಷ: ಅಷ್ಟೊತ್ತಿಗೆ ಸಿದ್ದರಾಮಯ್ಯರ ಕಟ್ಟಾ ಬೆಂಬಲಿಗರು ಎನಿಸಿಕೊಂಡಿದ್ದ ಶಾಸಕರು ಅತೃಪ್ತರೊಂದಿಗೆ ‘ಸಮನ್ವಯ’ ಸಭೆ ನಡೆಸಿ ಅವರಿಗೆ ಸಾಥ್ ನೀಡಿಯಾಗಿತ್ತು. ಶನಿವಾರವಷ್ಟೇ ಅವರು ಬಹಿರಂಗವಾಗಿ ಕಾಣಿಸಿಕೊಂಡರು. ಅದು ದೊಡ್ಡ ಸುದ್ದಿಯಾಗುತ್ತಿದ್ದ ಸಮಯದಲ್ಲಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಡಿ.ಕೆ. ಶಿವಕುಮಾರ್ ಧಾವಿಸಿದರಷ್ಟೇ. ಇಂತಹ ಸಂದರ್ಭಗಳಲ್ಲಿ ಎಂದಿನಂತೆ, ‘ಏನಾಗಿಲ್ಲ ಬಿಡ್ರಿ. ಸರ್ಕಾರ ಭದ್ರವಾಗಿದೆ’ ಎಂದು ಸುಮ್ಮನೇ ಆದರೂ ಹೇಳುತ್ತಿದ್ದ ಸಿದ್ದರಾಮಯ್ಯ ಶನಿವಾರ ಆಪರೇಷನ್ನಿನ ಟ್ರೈಲರ್ ‘ಟ್ರೆಂಡಿಂಗ್’ ಆಗುತ್ತಿದ್ದ ಪೀಕ್ ಅವರ್‍ಗಳಲ್ಲೂ ಮಾಧ್ಯಮಗಳ ಸಂಪರ್ಕಕಕ್ಕೆ ಸಿಗಲೇ ಇಲ್ಲ. ಅವರು ಟ್ರೈಲರ್ ಮುಗಿದು, ಬುಧವಾರದ ವೇಳೆಗೆ ಪಿಚ್ಚರ್ ರಿಲೀಸ್ ಆಗುವುದು ನಿಕ್ಕಿ ಆದ ಮೇಲಷ್ಟೇ ಕಾಣಿಸಿಕೊಂಡು, ‘ರೀ ಸ್ಪೀಕರ್ ರಾಜೀನಾಮೆ ಅಂಗೀಕರಿಸಿದ್ದಾರೇನ್ರಿ?’ ಎಂದು ಯಾವುದೇ ಮಹತ್ತರ ಬೆಳವಣಿಗೆ ನಡೆದೇ ಇಲ್ಲ ಎಂಬಂತೆ ಸಾಗಿಬಿಟ್ಟರು. ಟ್ರೈಲರ್‍ನಲ್ಲಿ ಅವರ ಆಪ್ತರ ಸೀನ್‍ಗಳೇ ಹೈಲಾಟಾಗಿದ್ದರೂ ಅವರಿಗೆ ಅದು ಆಶ್ಚರ್ಯದ ವಿಷಯವೇ ಆಗಿರಲಿಲ್ಲ.

ಕಳೆದ ವರ್ಷ ವಿಧಾನಸಭಾ ಚುನಾವಣೆ ಫಲಿತಾಂಶ ಕಣ್ಮುಂದೆ ಬಂದಾಗಲೇ ವಿರೋಧ ಪಕ್ಷದಲ್ಲಿ ಕೂಡುವುದೇ ಅವರ ನಿರ್ಧಾರವಾಗಿತ್ತು. ಆದರೆ ಕಾಂಗ್ರೆಸ್ ಹೈಕಮಾಂಡ್ ಕೋಮುವಾದಿ ಸರ್ಕಾರ ರಚನೆಗೆ ಅವಕಾಶ ನೀಡಬಾರದೆಂದು ತರಾತುರಿಯಲ್ಲಿ ಜೆಡಿಎಸ್‍ಗೆ ಬೇಷರತ್ ಬೆಂಬಲ ಕೊಡಲು ನಿರ್ಧರಿಸಿದಾಗ ಸಿದ್ದರಾಮಯ್ಯರಿಗೆ ಬೇರೆ ದಾರಿಯೇ ಇರಲಿಲ್ಲ. ಆರಂಭದಿಂದಲೂ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಬಹುಪಾಲು ನಿರ್ಧಾರಗಳ ಬಗ್ಗೆ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸುತ್ತಲೇ ಬಂದಿದ್ದರು. ಕುಮಾರಸ್ವಾಮಿ ತಮ್ಮ ಮೊದಲ ಬಜೆಟ್‍ನಲ್ಲಿ ಸಿದ್ದರಾಮಯ್ಯ ಸರ್ಕಾರದ ಕೆಲವು ಯೋಜನೆಗಳಲ್ಲಿ ಮಾರ್ಪಾಡು ಮಾಡಿದಾಗ ಸಿದ್ದರಾಮಯ್ಯ ಅದನ್ನು ಬಲವಾಗಿ ವಿರೋಧಿಸಿದ್ದರು.

ಅನ್ನಭಾಗ್ಯದಲ್ಲಿ ಪ್ರತಿ ತಿಂಗಳು ನೀಡುವ ಅಕ್ಕಿ ಪ್ರಮಾಣವನ್ನು 7 ರಿಂದ 5 ಕೆ.ಜಿ.ಗೆ ಇಳಿಸಿದ್ದು ಸಿದ್ದರಾಮಯ್ಯ ಮತ್ತು ಅವರ ಬೆಂಬಲಿಗರಿಗೆ ಅಪಾರ ಸಿಟ್ಟು ತರಿಸಿತ್ತು. ಕುಮಾರಸ್ವಾಮಿ ತಮ್ಮ ಹಿಂದಿನ ಸರ್ಕಾರದ ಜನಪರ ಯೋಜನೆಗಳಿಗೆ ಧಕ್ಕೆ ಮಾಡುವ ಮೂಲಕ ಕಾಂಗ್ರೆಸ್‍ಗೆ ಹಿನ್ನಡೆ ಮಾಡಲು ಹೊರಟಿದ್ದಾರೆ ಎಂದು ವಿರೋಧ ಮಾಡಿದ್ದ ಸಿದ್ದರಾಮಯ್ಯ ಸಮನ್ವಯ ಸಮಿತಿಯಲ್ಲಿ ಈ ವಿಷಯ ಎತ್ತಿ ತಮ್ಮ ಸರ್ಕಾರದ ಯೋಜನೆಗಳು ಮೊದಲಿನಂತೆ ಸರಾಗವಾಗಿ ಜಾರಿಯಾಗುವಂತೆ ನೋಡಿಕೊಂಡರು. ಸಾಮಾಜಿಕ ಅಭಿವೃದ್ಧಿ ದೃಷ್ಟಿಯಿಂದ ಇದೂ ಅಗತ್ಯವೂ ಆಗಿತ್ತು. ಆಗಿಂದಲೇ ಕುಮಾರಸ್ವಾಮಿ ಕಾಂಗ್ರೆಸ್ ಅನ್ನು ಹಿನ್ನಡೆಗೆ ಸರಿಸಿ ಜೆಡಿಎಸ್ ಪ್ರಾಬಲ್ಯ ಬೆಳೆಯುವಂತೆ ಮಾಡಲು ಹೊರಟಿದ್ದಾರೆ ಎಂಬ ಅಸಮಾಧಾನ ಹೊಂದಿದ್ದ ಸಿದ್ದರಾಮಯ್ಯನವರಿಗೆ, ಈ ಸರ್ಕಾರದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಎಂಬುದು ಖಾತ್ರಿಯಾಗಿತ್ತು.

ಅದು ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಕಾಣಿಸಿಕೊಂಡಿತು. ಕಾಂಂಗ್ರೆಸ್ ಹೀನಾಯವಾಗಿ ಸೋತು ಕೇವಲ ಒಂದು ಸ್ಥಾನ ಗಳಿಸಿದ ಮೇಲಂತೂ ಜೆಡಿಎಸ್ ಸಹವಾಸ ತೊರೆದು ವಿರೋಧ ಪಕ್ಷದಲ್ಲಿ ಕೂಡುವುದೇ ಕಾಂಗ್ರೆಸ್ ಮತ್ತು ತಮ್ಮ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಒಳ್ಳೆಯದು ಎಂದು ಅವರು ನಿರ್ಧರಿಸಿಯಾಗಿತ್ತು. ದೆಹಲಿಯಲ್ಲಿ ನಡೆದ ಸಭೆಯಲ್ಲಿ ರಾಹುಲ್‍ಗಾಂಧಿಯವರಿಗೂ ಇದನ್ನು ಮನವರಿಕೆ ಮಾಡಿದ್ದರು. ಆದರೆ ಮತ್ತೆ ಮಿತ್ರಪಕ್ಷಗಳ ಸ್ನೇಹ ಉಳಿಸಿಕೊಳ್ಳುವ ದೃಷ್ಟಿಯಿಂದ ರಾಹುಲ್ ಗಾಂಧಿ ಸರ್ಕಾರಕ್ಕೆ ತೊದರೆಯಾಗದಂತೆ ಸೂಚಿಸಿದ್ದನ್ನು ಮನಸ್ಸಿಲ್ಲದೇ ಸಿದ್ದರಾಮಯ್ಯ ಒಪ್ಪಿಕೊಂಡು ಬಂದಿದ್ದರು.

ಲೋಕಸಭೆ ಚುನಾವಣಾ ಫಲಿತಾಂಶದ ನಂತರ ಬಿಜೆಪಿ ಆಪರೇಷನ್ ಕಮಲವನ್ನು ತೀವ್ರಗೊಳಿಸಿ ಸರ್ಕಾರವನ್ನು ಕೆಡವಲು ನಿರಂತರ ಯತ್ನ ನಡೆಸಿದ್ದು ಅವರಿಗೆ ಸಮಾಧಾನ ತಂದಿತ್ತೇನೋ? ಮೊದಲಿಂದಲೂ ಸಚಿವ ಪದವಿಗೆ ಯತ್ನಿಸಿ ನಿರಾಶರಾಗಿದ್ದ ಅವರ ಹಲವು ಪರಮಾಪ್ತ ಶಾಸಕರು ಬಿಜೆಪಿ ಸರ್ಕಾರದಲ್ಲಾದರೂ ಅಧಿಕಾರ ಪಡೆಯಲಿ ಎಂದು ಸಿದ್ದರಾಮಯ್ಯ ಯೋಚಿಸಿರಬಹುದು. ‘ಹೋಗಿ ಬಿಡಿ ಅತ್ಲಾಗೆ. ಮುಂದೆ ಎಲ್ಲ ನೋಡಿದರಾಯಿತು’ ಎಂದು ಅವರು ಆಶೀರ್ವಾದ ಮಾಡಿದ ಪರಿಣಾಮವಾಗಿಯೇ ಅವರ ನಿಷ್ಠ ಶಾಸಕರು, ಅವರ ಮಾತಿಗೆ ಗೌರವ ಕೊಡುತ್ತಿದ್ದ ಇನ್ನಷ್ಟು ಶಾಸಕರು ಈಗ ಬಿಜೆಪಿ ಪಾಳೆಯದತ್ತ ಮುಖ ಮಾಡಿದ್ದಾರೆ.

ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ, ಕೆ.ಆರ್. ಪುರ ಶಾಸಕ ಬೈರತಿ ಬಸವರಾಜ, ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನಂ, ಚಿಕ್ಕಬಳ್ಳಾಪುರ ಶಾಸಕ ಡಾ. ಕೆ. ಸುಧಾಕರ್ ಮತ್ತು ಸಿದ್ದರಾಮಯ್ಯನವರೇ ನಮ್ಮ ನಾಯಕರು ಎನ್ನುತ್ತಿದ್ದ ಚಿಕ್ಕೋಡಿ ಶಾಸಕ ಪ್ರಕಾಶ ಹುಕ್ಕೇರಿ, ಖಾನಾಪುರ ಶಾಸಕಿ ಅಂಜಲಿ ಹೆಬ್ಬಾಳ್ಕರ್ ಈಗ ಕಾಂಗ್ರೆಸ್ ತೊರೆಯುತ್ತಿರುವುದೇನೂ ಸಿದ್ದರಾಮಯ್ಯರಿಗೆ ಬೇಸರ ತಂದಿರಲಾರದು. ಈ ಪಟ್ಟಿ ನಾಳೆ ಬೆಳೆಯಲೂಬಹುದು.

ನಾಳೆ ಅವರ ಅತಿ ಪರಮಾಪ್ತ, ಹೊಸಕೋಟೆ ಶಾಸಕ, ಸಚಿವ ಎಂ.ಟಿ.ಬಿ. ನಾಗರಾಜ್ ಕೂಡ ರಾಜಿನಾಮೆ ನೀಡಲಿದ್ದಾರಂತೆ. ಇದೆಲ್ಲಕ್ಕೂ ಸಿದ್ದರಾಮಯ್ಯರ ಸಮ್ಮತಿ ಇದ್ದೇ ಇದೆ. ಕಳೆದ ಒಂದು ವರ್ಷದಿಂದ ಸಿದ್ದರಾಮಯ್ಯ ಈ ಸರ್ಕಾರದ ಕುರಿತು ಮನದಾಳದಿಂದ ಪ್ರೀತಿಯ ಮಾತನ್ನೇ ಆಡಿಲ್ಲ. ಲೋಕಸಭೆ ಸೀಟು ಮೈತ್ರಿಯ ಸಂದರ್ಭದಲ್ಲಿ ಜೆಡಿಎಸ್ ಮಾಡಿದ ಎಡವಟ್ಟಿನಿಂದ ಕಾಂಗ್ರೆಸ್‍ಗೆ ಮತ್ತು ತಮಗೆ ರಾಜಕೀಯವಾಗಿ ಆದ ಹಿನ್ನಡೆ ಇನ್ನಷ್ಟು ಮುಂದುವರಿಯಬಾರದು ಎಂದು ನಿರ್ಧರಿಸಿರುವ ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿ ಕುಳಿತು ರಚನಾತ್ಮಕವಾಗಿ ಜನಪರ ಹೋರಾಟ ಮಾಡುತ್ತ ಮತ್ತೆ ಕಾಂಗ್ರೆಸ್‍ ಗೆ ನವಶಕ್ತಿ ತುಂಬುವ ಯೋಚನೆಯಲ್ಲಂತೂ ಇದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...