Homeಮುಖಪುಟಮಹಿಳೆಗೆ ಹಲ್ಲೆ ನಡೆಸಿ, ಅಶ್ಲೀಲವಾಗಿ ನಿಂದಿಸಿದ ಬಿಜೆಪಿ ಮುಖಂಡನ ಮೇಲೆ ಎಫ್‌ಐಆರ್‌‌; ಆರೋಪಿ ಪರಾರಿ

ಮಹಿಳೆಗೆ ಹಲ್ಲೆ ನಡೆಸಿ, ಅಶ್ಲೀಲವಾಗಿ ನಿಂದಿಸಿದ ಬಿಜೆಪಿ ಮುಖಂಡನ ಮೇಲೆ ಎಫ್‌ಐಆರ್‌‌; ಆರೋಪಿ ಪರಾರಿ

- Advertisement -
- Advertisement -

ಉತ್ತರ ಪ್ರದೇಶದ ನೋಯ್ಡಾ ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆಯೊಬ್ಬರಿಗೆ ಅಶ್ಲೀಲವಾಗಿ ನಿಂದಿಸಿ ಹಲ್ಲೆ ನಡೆಸಿದ್ದ ಬಿಜೆಪಿ ನಾಯಕ ಶ್ರೀಕಾಂತ್‌ ತ್ಯಾಗಿ ವಿರುದ್ಧ ಎಫ್‌ಐಆರ್ ದಾಖಲಿಸಿ ಅವರನ್ನು ಬಂಧಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಶನಿವಾರ ಹೇಳಿದೆ. ಆದರೆ ಆರೋಪಿಯು ಪರಾರಿಯಾಗಿದ್ದು, ಆತನ ಪತ್ತೆಗಾಗಿ ತಂಡವನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯು ನೋಯ್ಡಾದ ಗ್ರ್ಯಾಂಡ್ ಒಮ್ಯಾಕ್ಸ್ ಸೊಸೈಟಿ ಸೆಕ್ಟರ್ 93B ಅಪಾರ್ಟ್‌ಮೆಂಟ್‌ನಲ್ಲಿ ನಡೆದಿತ್ತು.

ಎನ್‌ಸಿಡಬ್ಲ್ಯೂ ಅಧ್ಯಕ್ಷೆ ರೇಖಾ ಶರ್ಮಾ ಅವರು ಉತ್ತರ ಪ್ರದೇಶ ಡಿಜಿಪಿಗೆ ಪತ್ರ ಬರೆದು ಘಟನೆಯ ಬಗ್ಗೆ ನ್ಯಾಯಯುತ ಮತ್ತು ತ್ವರಿತ ತನಿಖೆಯನ್ನು ಖಚಿತಪಡಿಸಿಕೊಳ್ಳುವಂತೆ ಸೂಚಿಸಿದ್ದು, ದುಷ್ಕರ್ಮಿಯ ವಿರುದ್ಧ ಎಫ್‌ಐಆರ್ ದಾಖಲಿಸಿ ಅವನನ್ನು ಬಂಧಿಸುವಂತೆ ಕೋರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಪಾರ್ಟ್‌ಮೆಂಟ್‌ನ ಕಾಮನ್ ಏರಿಯಾ ಜಾಗವನ್ನು ಶ್ರಿಕಾಂತ್ ತ್ಯಾಗಿ ಅತಿಕ್ರಮಣ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು. ಈ ಕುರಿತು ಅಪಾರ್ಟ್‌ಮೆಂಟ್ ಆಡಳಿತ ಮಂಡಳಿಯ ಸದಸ್ಯರೊಂದಿಗೆ ಶ್ರೀಕಾಂತ್ ತ್ಯಾಗಿ ಬಳಿ ಚರ್ಚೆ ನಡೆಸುತ್ತಿದ್ದ ಸಂದರ್ಭದಲ್ಲಿ ಅಶ್ಲೀಲ ಶಬ್ದಗಳಿಂದ ಮಹಿಳೆಯನ್ನು ನಿಂದಿಸಿ ಹಲ್ಲೆ ನಡೆಸಿದ್ದನು. ದುಷ್ಕರ್ಮಿಯ ಶ್ರೀಕಾಂತ್ ತ್ಯಾಗಿ ವಿರುದ್ಧ ನೋಯ್ಡಾ ಪೊಲೀಸರು ಶುಕ್ರವಾರ ಆಗಸ್ಟ್ 5 ರಂದು ಮೊಕದ್ದಮೆ ದಾಖಲಿಸಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮಹಿಳೆಯ ಮೇಲೆ ಕೈ ಮಾಡಿ, ಅಶ್ಲೀಲ ಪದಗಳಲ್ಲಿ ನಿಂದಿಸಿದ ಬಿಜೆಪಿ ಮುಖಂಡ

ಘಟನೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಬಿಜೆಪಿ ನಾಯಕ ಶ್ರೀಕಾಂತ್ ತ್ಯಾಗಿ ಮಹಿಳೆಯನ್ನು ಕೆಟ್ಟದಾಗಿ ನಿಂದಿಸುವುದು ಮತ್ತು ಅವರನ್ನು ಕೈಯಿಂದ ತಳ್ಳುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ.

“ಶ್ರೀಕಾಂತ್ ತ್ಯಾಗಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 354 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಸರಿಯಾದ ತನಿಖೆಯ ನಂತರ ಮತ್ತಷ್ಟು ಆರೋಪಗಳನ್ನು ಸೇರಿಸಬಹುದು” ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತೆ (ಮಹಿಳಾ ಸುರಕ್ಷತೆ) ಅಂಕಿತಾ ಶರ್ಮಾ ಪಿಟಿಐಗೆ ತಿಳಿಸಿದ್ದಾರೆ.

ಶ್ರೀಕಾಂತ್ ತ್ಯಾಗಿ ಅವರು ಸೊಸೈಟಿ ಪಾರ್ಕ್ ಅನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಆತ ಅಕ್ರಮ ಕಟ್ಟಡ ಕಟ್ಟುತ್ತಿರುವುದು ಕಳೆದ ಎರಡು ವರ್ಷಗಳಿಂದ ಅಲ್ಲಿ ವಿವಾದವಾಗಿ ಮಾರ್ಪಟ್ಟಿದೆ. ಈ ಹಿಂದೆಯೂ ನೋಯ್ಡಾ ಆಡಳಿತವು ಆತನಿಗೆ ಅಕ್ರಮ ಕಟ್ಟಡ ತೆರವುಗೊಳಿಸುವಂತೆ ನೋಟಿಸ್ ಜಾರಿಗೊಳಿಸಿತ್ತು. ಆದರೆ ಆತ ಅದನ್ನು ಇಂದಿಗೂ ಮುಂದುವರೆಸಿಕೊಂಡು ಬಂದಿದ್ದಾರೆ. ಅದನ್ನು ಪ್ರಶ್ನಿಸಿ ಮಹಿಳಾ ನಿವಾಸಿಯ ಮೇಲೆ ಕೈಮಾಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೇಗೆ ನೇಮಕ ಮಾಡಲಾಗುತ್ತದೆ? | ಸಂಕ್ಷಿಪ್ತ ವಿವರಣೆ

ಈ ಶ್ರೀಕಾಂತ್ ತ್ಯಾಗಿ ಎಂಬುವವರು ಶಾಸಕನಲ್ಲದಿದ್ದರೂ ತನ್ನ ಕಾರಿಗೆ MLA ಎಂಬ ಸ್ಟಿಕ್ಕರ್ ಅಂಟಿಸಿಕೊಂಡು ವಸೂಲಿಗಿಳಿದಿದ್ದಾರೆ ಎಂದು ಹಲವು ಟ್ವಿಟರ್ ಬಳಕೆದಾರರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...