Homeಮುಖಪುಟ ಗುಜರಾತ್ ಆರ್‍ಟಿಐ ಕಾರ್ಯಕರ್ತನ ಕೊಲೆ: ಆರೋಪಿ ಮಾಜಿ ಬಿಜೆಪಿ ಎಂಪಿ ಅಪರಾಧಿಯೆಂದು ಸಾಬೀತು

 ಗುಜರಾತ್ ಆರ್‍ಟಿಐ ಕಾರ್ಯಕರ್ತನ ಕೊಲೆ: ಆರೋಪಿ ಮಾಜಿ ಬಿಜೆಪಿ ಎಂಪಿ ಅಪರಾಧಿಯೆಂದು ಸಾಬೀತು

- Advertisement -
- Advertisement -

2010ರಲ್ಲಿ ನಡೆದ ಆರ್‍ಟಿಐ ಕಾರ್ಯಕರ್ತರೊಬ್ಬರ ಕೊಲೆಗೆ ಸಂಬಂಧಿಸಿದಂತೆ ತೀರ್ಪ ನೀಡಿರುವ ಗುಜರಾತಿನ ಸಿಬಿಐ ವಿಶೇಷ ನ್ಯಾಯಾಲಯ ಬಿಜೆಪಿ ಮಾಜಿ ಎಂಪಿ ದಿನು ಸೋಳಂಕಿ ಮತ್ತು ಇತರ ಆರು ಜನರನ್ನು ಅಪರಾಧಿಗಳೆಂದು ಶಿಕ್ಷಿಸಿ ತೀರ್ಪು ನೀಡಿದ್ದು ಜುಲೈ 11ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ.

ಗುಜರಾತಿನ ಗಿರ್ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆಯನ್ನು ಬಯಲು ಮಾಡಲು ಹೊರಟಿದ್ದ ಆರ್‍ಟಿಐ ಕಾರ್ಯಕರ್ತ ಅಮಿತ್ ಜೆಥ್ವಾ ಅವರನ್ನು 2010ರಲ್ಲಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಗುಜರಾತ್ ಸರ್ಕಾರದ ಅಪರಾಧಿ ತನಿಖಾ ವಿಭಾಗವು ಮಾಜಿ ಸಂಸದ ಸೋಲಂಕಿ ಅವರಿಗೆ ನಿರಪರಾಧಿ ಎಂದು ಕ್ಲೀನ್‍ಚಿಟ್ ನೀಡಿದ ನಂತರ ಗುಜರಾತ್ ಹೈಕೋರ್ಟ್ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು.

ಶನಿವಾರ ಸಿಬಿಐ ವಿಶೇಚ ನ್ಯಾಯಲಯದ ನ್ಯಾಯಾಧೀಶ ಕೆ.ಎಂ. ದಾವೆಯವರು, 2009-14ರ ಅವಧಿಯಲ್ಲಿ ಜುನಾಗಡ್ ಕ್ಷೇತ್ರವನ್ನು ಸಂಸತ್‍ನಲ್ಲಿ ಪ್ರತಿನಿಧಿಸಿದ್ದ ದಿನು ಸೋಲಂಕಿ, ಅವರ ಕಸಿನ್ ಶಿವಾ ಸೋಲಂಕಿ ಮತ್ತು ಇತರ ಐವರನ್ನು ಐಪಿಸಿ ಕಲಂ ಅಡಿ ಕೊಲೆ ಮತ್ತು ಕ್ರಿನಿಲ್ ಸಂಚು ಆರೋಗಳಡಿ ದೋಷಿಗಳೆಂದು ತೀರ್ಪ ನೀಡಿದ್ದಾರೆ.

ದಿನು ಸೋಲಂಕಿ

ಆರ್‍ಟಿಐ ಅರ್ಜಿಗಳ ನೆರವಿನಿಂದ ದಿನು ಸೋಲಂಕಿ ಅವರ ಅಕ್ರಮ ಗಣಿಗಾರಿಕೆಯನ್ನು ಬಯಲು ಮಾಡಲು ಯತ್ನಿಸುತ್ತಿದ್ದ ಅಮಿತ್ ಜೆಥ್ವಾ ಅವರನ್ನು ಗುಜರಾತ್ ಹೈಕೋರ್ಟ್ ಎದುರೇ ಜುಲೈ 20, 2010ರಂದು ಹತ್ಯೆ ಮಾಡಲಾಗಿತ್ತು. ಏಷ್ಯಾ ಹಲಿಗಳ ತಾಣವಾಗಿರುವ ಗಿರ್ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗರಿಕೆ ವಿರುದ್ಧ ಜೆಥ್ವಾ ಅವರು ಹೈಕೋರ್ಟಿನಲ್ಲಿ ಸಾರ್ವಜನಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
2016ರ ಮೇನಲ್ಲಿ ದಿನು ಸೋಲಂಕಿ ಮತ್ತು ಇತರ ಆರು ಜನರ ಮೇಲೆ ಕೊಲೆ ಮತ್ತು ಅಪರಾಧಿ ಸಂಚು ಆರೋಪಗಳನ್ನು ಹೊರಿಸಿ ದೂರು ದಾಖಲಿಸಲಾಗಿತ್ತು.

ಶೈಲೇಶ್ ಪಾಂಡ್ಯ, ಬಹದೂರ್‍ಸಿನ್ಹಾ ವಡೇರ್, ಪಾಂಚನ್ ದೇಸಾಯಿ, ಸಂಜಯ್ ಚೌಹಾಣ ಮತ್ತು ಉದಾಜಿ ಠಾಕೋರ್ ಶಿಕ್ಷೆಗೊಳಗಾದ ಇತರ ಆರೋಪಿಗಳು. ಒತ್ತಡ ಮತ್ತು ಬೆದರಿಕೆಯ ಕಾರಣದಿಂದ 105 ಸಾಕ್ಷಿಗಳು ತಿರುಗಿ ಬಿದ್ದಿದ್ದಾರೆಂದು ಜೆಥ್ವಾ ತಂದೆ ಹೈಕೋರ್ಟ್ ಮೊರೆ ಹೋಗಿದ್ದರಿಂದ ಹೈಕೋರ್ಟ್ ಮತ್ತೆ ವಿಚಾರಣಗೆ ಆದೇಶಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...