Homeಮುಖಪುಟಹೆಣ್ಣು ಮಕ್ಕಳನ್ನು ಹೆತ್ತಿದ್ದಕ್ಕೆ ಗಂಡನ ಕಿರುಕುಳ; ಭಾರತ ಮೂಲದ ಮಹಿಳೆ ಅಮೆರಿಕದಲ್ಲಿ ಆತ್ಮಹತ್ಯೆ

ಹೆಣ್ಣು ಮಕ್ಕಳನ್ನು ಹೆತ್ತಿದ್ದಕ್ಕೆ ಗಂಡನ ಕಿರುಕುಳ; ಭಾರತ ಮೂಲದ ಮಹಿಳೆ ಅಮೆರಿಕದಲ್ಲಿ ಆತ್ಮಹತ್ಯೆ

ಸಾವಿಗೂ ಮುನ್ನ ವಿಡಿಯೊ ಮಾಡಿರುವ ಸಂತ್ರಸ್ತ ಮಹಿಳೆ, ತಾನು ಅನುಭವಿಸಿರುವ ಕಿರುಕುಳವನ್ನು ಹಂಚಿಕೊಂಡಿದ್ದಾರೆ.

- Advertisement -
- Advertisement -

ಅಮೆರಿಕದ ನ್ಯೂಯಾರ್ಕ್‌ನಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ವಿಡಿಯೊ ಮಾಡಿ ಹಂಚಿಕೊಂಡಿದ್ದಾರೆ. “ಗಂಡನ ಕಿರುಕುಳವೇ ಕಾರಣ” ಎಂದು ತಿಳಿಸಿ ಸಾವಿಗೆ ಶರಣಾಗಿದ್ದಾರೆ.

“ಹೆಣ್ಣು ಮಕ್ಕಳಿಗೆ ಮಾತ್ರ ಜನ್ಮ ನೀಡುತ್ತಿದ್ದೀಯ” ಎಂದು ಗಂಡ ವರ್ಷಗಳ ಕಾಲ ಕಿರುಕುಳ ನೀಡಿರುವುದನ್ನು ಮಹಿಳೆ ವಿಡಿಯೊದಲ್ಲಿ ಉಲ್ಲೇಖಿಸಿದ್ದಾರೆ.

30 ವರ್ಷ ವಯಸ್ಸಿನ ಮಂದೀಪ್ ಕೌರ್ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, “ನಾನು ಎಲ್ಲವನ್ನೂ ಸಹಿಸಿಕೊಂಡಿದ್ದೇನೆ, ಆತ ಒಂದು ದಿನ ತನ್ನ ದಾರಿಯನ್ನು ಸರಿ ಮಾಡಿಕೊಳ್ಳಬಹುದು ಎಂದು ಭಾವಿಸುತ್ತೇನೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಎಂಟು ವರ್ಷವಾಯಿತು. ನಾನು ಈಗ ದಿನವೂ ಹಲ್ಲೆಗೊಳಗಾಗುತ್ತಿದ್ದೇನೆ” ಎಂದು ಪದೇ ಪದೇ ಹೇಳಿರುವುದು ವಿಡಿಯೊದಲ್ಲಿ ದಾಖಲಾಗಿದೆ. 4 ಮತ್ತು 2 ವರ್ಷ ವಯಸ್ಸಿನ ಇಬ್ಬರು ಹೆಣ್ಣುಮಕ್ಕಳ ತಾಯಿ ಇವರಾಗಿದ್ದಾರೆ.

ಪಂಜಾಬಿ ಭಾಷೆಯಲ್ಲಿ ಮಾತನಾಡಿರುವ ಕೌರ್‌, ‘ನನ್ನ ಪತಿ ಮತ್ತು ಅತ್ತೆ ನಾನು ಆತ್ಮಹತ್ಯೆ ಮಾಡಿಕೊಳ್ಳುವಂತೆ ಬಲವಂತ ಮಾಡಿದ್ದಾರೆ. ಅಪ್ಪಾ, ನಾನು ಸಾಯುತ್ತೇನೆ, ದಯವಿಟ್ಟು ನನ್ನನ್ನು ಕ್ಷಮಿಸಿ” ಎಂದಿದ್ದಾರೆ.

ಯುಪಿಯ ಬಿಜ್ನೋರ್‌ನವರಾದ ಕೌರ್, 2015ರಲ್ಲಿ ರಂಜೋಧ್‌ಬೀರ್ ಸಿಂಗ್ ಸಂಧು ಅವರನ್ನು ಮದುವೆಯಾಗಿ ಅಮೆರಿಕಕ್ಕೆ ತೆರಳಿದ್ದರು. ಬಿಜ್ನೋರ್‌ನಲ್ಲಿರುವ ಕೌರ್‌‌ ಕುಟುಂಬವು, “ಈ ಶೋಷಣೆಯು ಒಂದು ದಿನ ಕೊನೆಗೊಳ್ಳುತ್ತದೆ ಎಂದು ಭಾವಿಸಿದ್ದೆವು” ಎಂದಿದೆ. ಇದೀಗ ಕೌರ್‌ ಅವರ ಮೃತದೇಹವನ್ನು ಭಾರತಕ್ಕೆ ತರಲು ಸರ್ಕಾರದ ನೆರವನ್ನು ಕುಟುಂಬ ಕೋರಿದೆ.

ಗಂಡ ನಿಂದಿಸುತ್ತಿರುವ ಹಲವಾರು ವೀಡಿಯೊಗಳು ವೈರಲ್ ಆಗಿದ್ದು, ಅದರಲ್ಲಿ ಹೆಣ್ಣುಮಕ್ಕಳು ಕಿರುಚುವುದು ಮತ್ತು ಅಳುವುದು ಕೇಳುತ್ತದೆ. ಮತ್ತೊಂದು ವಿಡಿಯೊ ಮನೆಯೊಳಗಿನ ಕ್ಯಾಮೆರಾದಲ್ಲಿ ದಾಖಲಾಗಿದೆ. ಕ್ಷಮೆ ಕೇಳುವವರೆಗೂ ಕೌರ್‌ಗೆ ಗಂಡ ಹೊಡೆಯುತ್ತಾರೆ.

ಈ ವಿಡಿಯೊಗಳನ್ನು ಉಲ್ಲೇಖಿಸಿರುವ ಎನ್‌ಡಿಟಿವಿ, “ಇವುಗಳ ಅಧಿಕೃತತೆಯನ್ನು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಲಿಲ್ಲ. ಈ ವಿಡಿಯೊಗಳನ್ನು ಮಹಿಳೆ ತನ್ನ ಸ್ನೇಹಿತರಿಗೆ ಕಳುಹಿಸಿರಬಹುದು ಎಂದು ಊಹಿಸಲಾಗಿದೆ” ಎಂದು ವರದಿ ಮಾಡಿದೆ.

“ನನ್ನನ್ನು ಐದು ದಿನಗಳ ಕಾಲ ಟ್ರಕ್‌ನಲ್ಲಿ ಬಂಧಿಯಾಗಿಟ್ಟ. ನನ್ನ ತಂದೆ ಪೊಲೀಸ್ ಕೇಸ್ ದಾಖಲಿಸಿದ್ದಾರೆ. ಕೇಸ್‌ ವಾಪಸ್ ಪಡೆಯುವಂತೆ ಆತ ನನ್ನಲ್ಲಿ ಬೇಡಿಕೊಂಡ. ನಾನು ಆತನ ಮನವಿಯನ್ನು ಒಪ್ಪಿದೆ” ಎಂದಿರುವ ಕೌರ್‌‌, ತಾನು ಅನುಭವಿಸಿರುವ ಚಿತ್ರಹಿಂಸೆಯನ್ನು ವಿವರಿಸಿದ್ದಾರೆ.

ಯುಎಸ್‌ನಲ್ಲಿರುವ ಪತಿ ಅಥವಾ ಭಾರತದಲ್ಲಿರುವ ಆತನ ಕುಟುಂಬದ ವಿರುದ್ಧ ಯಾವುದೇ ಕಾನೂನು ಜಾರಿಯಾಗಿರುವ ಮಾಹಿತಿ ಲಭ್ಯವಾಗಿಲ್ಲ.

ಸಿಖ್ ಸಮುದಾಯದೊಳಗೆ ಲೈಂಗಿಕ ಮತ್ತು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದವರಿಗಾಗಿ ಕೆಲಸ ಮಾಡುತ್ತಿರುವ ದಿ ಕೌರ್ ಮೂವ್‌ಮೆಂಟ್ ಸಂಸ್ಥೆಯು ಈ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದೆ. ಘಟನೆಯ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿರಿ: ರಾಜಸ್ಥಾನ: ಬಿಜೆಪಿ ಶಾಸಕನ ಕಿರುಕುಳಕ್ಕೆ ಬೇಸತ್ತು ಸಂತ ಆತ್ಮಹತ್ಯೆ- ಆರೋಪ

ನ್ಯೂಯಾರ್ಕ್‌ನ ರಿಚ್‌ಮಂಡ್ ಹಿಲ್‌ನಲ್ಲಿರುವ ಸಂತ್ರಸ್ತೆಯ ಮನೆಯ ಹೊರಗೆ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನಾಕಾರರು ಜಮಾಯಿಸಿದ್ದಾರೆ. ಪಂಜಾಬ್‌ನ ಕೆಲವು ಕಾರ್ಯಕರ್ತರು ಕೌರ್‌ ಕುಟುಂಬವನ್ನು ಬಿಜ್ನೋರ್‌ನಲ್ಲಿ ಭೇಟಿಯಾಗಿದ್ದಾರೆ.

ಹಲವು ದೇಶಗಳಲ್ಲಿನ ಜನರು (ಮುಖ್ಯವಾಗಿ ಪಂಜಾಬಿ ಹಾಗೂ ಸಿಖ್‌ಗಳು) ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ‌ವ್ಯಕ್ತಪಡಿಸಿದ್ದು, #JusticeForMandeep ಎಂಬ ಹ್ಯಾಶ್‌ಟ್ಯಾಗ್ ಬಳಸಿದ್ದಾರೆ.

ಸಿಖ್ ಮತ್ತು ಪಂಜಾಬಿ ಸಮುದಾಯಗಳಲ್ಲಿನ ದೌರ್ಜನ್ಯಗಳ ವಿರುದ್ಧ ಕಾರ್ಯನಿರ್ವಹಿಸುವ ಯುಕೆ ಮೂಲದ ಎನ್‌ಜಿಒ ಸಿಖ್ ವುಮೆನ್ಸ್ ಏಡ್ ಹೇಳಿಕೆಯನ್ನು ನೀಡಿದ್ದು, “ಆಕೆ ಜೀವನದಲ್ಲಿ ಅನುಭವಿಸಿದ ಹಿಂಸೆಯನ್ನು ಹೇಳಿಕೊಂಡಿದ್ದಾಳೆ” ಎಂದು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....