Homeಮುಖಪುಟಸಹಿಷ್ಣುತೆ ಎಂದರೆ ದ್ವೇಷದ ಮಾತುಗಳನ್ನೂ ಒಪ್ಪಬೇಕೆಂದಲ್ಲ: ಜಸ್ಟೀಸ್ ಚಂದ್ರಚೂಡ್‌

ಸಹಿಷ್ಣುತೆ ಎಂದರೆ ದ್ವೇಷದ ಮಾತುಗಳನ್ನೂ ಒಪ್ಪಬೇಕೆಂದಲ್ಲ: ಜಸ್ಟೀಸ್ ಚಂದ್ರಚೂಡ್‌

- Advertisement -
- Advertisement -

ಇತರರ ಅಭಿಪ್ರಾಯಗಳನ್ನು ಒಪ್ಪಿಕೊಳ್ಳುವುದು ಮತ್ತು ಸಹಿಸಿಕೊಳ್ಳುವುದು ಎಂದರೆ ದ್ವೇಷದ ಮಾತುಗಳನ್ನು ಸಹ ಒಪ್ಪಿಕೊಳ್ಳಬೇಕು ಎಂದಲ್ಲ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೇಳಿದ್ದಾರೆ.

ಗುಜರಾತ್ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯದಲ್ಲಿ (ಜಿಎನ್‌ಎಲ್‌ಯು) ಅವರು ಮಾಡಿದ ಘಟಿಕೋತ್ಸವ ಭಾಷಣದಲ್ಲಿ, ಪದವೀಧರ ವಿದ್ಯಾರ್ಥಿಗಳು ತಮ್ಮ ಸ್ವಂತ ಮಾರ್ಗದರ್ಶನ ಹಾಗೂ ಸಮಾನತೆಯ ಆಶಯದಲ್ಲಿ ಮುನ್ನಡೆಯಬೇಕು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನೀವು ಹೇಳುವುದನ್ನು ನಾನು ಒಪ್ಪುದಿರಬಹುದು, ಆದರೆ ನಿಮ್ಮ ಅಭಿವ್ಯಕ್ತಿಯನ್ನು ರಕ್ಷಿಸುತ್ತೇನೆ” ಎಂದ ವಾಲ್ಟೈರ್‌ನ ಮಾತನ್ನು ನಾವು ಅಳವಡಿಸಿಕೊಳ್ಳಬೇಕು. ತಪ್ಪುಗಳನ್ನು ಮಾಡುವುದು, ಇತರರ ಅಭಿಪ್ರಾಯಗಳನ್ನು ಒಪ್ಪಿಕೊಳ್ಳುವುದು, ಸಹಿಸಿಕೊಳ್ಳುವುದು ಎಂದರೆ ಕರುಡಾಗಿ ಅನುಸರಿಸುವುದೂ ಅಲ್ಲ. ದ್ವೇಷ ಭಾಷಣದ ಪರ ಇರುತ್ತೇವೆ ಎಂದರ್ಥವಲ್ಲ” ಎಂದು ವಿವರಿಸಿದ್ದಾರೆ.

“ಬಹುಮತದ ರಾಜಕೀಯ, ಸಾಮಾಜಿಕ, ನೈತಿಕ ಘರ್ಷಣೆಗಳ ಹೆಚ್ಚುತ್ತಿರುವ ಗದ್ದಲ ಮತ್ತು ಗೊಂದಲದ ನಡುವೆ ವಿದ್ಯಾರ್ಥಿಗಳು ಹೊರ ಜಗತ್ತಿಗೆ ಕಾಲಿಡುತ್ತಿದ್ದೀರಿ. ನೀವು ತಮ್ಮ ಸ್ವಂತ ಆತ್ಮಸಾಕ್ಷಿ ಮತ್ತು ಸಮಾನತೆ ಆಶಯಗಳ ಮಾರ್ಗದಿಂದ ಮುನ್ನಡೆಯಬೇಕು’’ ಎಂದು ಆಶಿಸಿದ್ದಾರೆ.

ಹಲವು ತೀರ್ಪುಗಳ ಮೂಲಕ ಗಮನ ಸೆಳೆದಿರುವ ಜಸ್ಟೀಸ್ ಚಂದ್ರಚೂಡ್ ಅವರು ಇತ್ತೀಚೆಗೆ ಲಂಡನ್‌ನಲ್ಲಿ ಮಾತನಾಡುತ್ತಾ, ಅನೇಕ ಕಟುವಾದ ಪ್ರಶ್ನೆಗಳನ್ನು ಎದುರಿಸಿದ್ದರು.

ಲಂಡನ್‌ನ ಕಿಂಗ್ಸ್ ಕಾಲೇಜ್‌ನಲ್ಲಿ ನಡೆದ ‘ಮಾನವ ಹಕ್ಕುಗಳ ರಕ್ಷಣೆ, ನಾಗರಿಕ ಸ್ವಾತಂತ್ರ್ಯದ ರಕ್ಷಣೆ: ಪ್ರಜಾಪ್ರಭುತ್ವದಲ್ಲಿ ನ್ಯಾಯಾಲಯಗಳ ಪಾತ್ರ’ ಕುರಿತ ವಿಚಾರಸಂಕಿರಣದಲ್ಲಿ ಹಲವು ಪ್ರಶ್ನೆಗಳನ್ನು ಚಂದ್ರಚೂಡ್ ಅವರಿಗೆ ಕೇಳಲಾಗಿತ್ತು.

ಬುಲ್ಡೋಜರ್‌ಗಳ ಮೂಲಕ ಮುಸ್ಲಿಮರ ಮನೆಗಳ ಧ್ವಂಸ, ಹಿಜಾಬ್ ವಿವಾದ, ಬಾಬರಿ ಮಸೀದಿ ತೀರ್ಪುಗಳಿಗೆ ಸಂಬಂಧಿಸಿದಂತೆ ಭಾರತದ ಸುಪ್ರೀಂ ಕೋರ್ಟ್‌ ಮುಸ್ಲಿಂ ಅಲ್ಪಸಂಖ್ಯಾತರಿಗೆ ನೀಡಿರುವ ನ್ಯಾಯದ ಕುರಿತು ಪ್ರಶ್ನಿಸಲಾಗಿತ್ತು.

ನ್ಯಾಯಮೂರ್ತಿ ಚಂದ್ರಚೂಡ್‌ ಮಾತನಾಡಿ, “ಬಹುತೇಕ ಪ್ರಕರಣಗಳು ಪ್ರಸ್ತುತ ನ್ಯಾಯಾಲಯದಲ್ಲಿವೆ. ಅವುಗಳ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ಸಾಧ್ಯವಾಗುವುದಿಲ್ಲ. ನ್ಯಾಯಾಧೀಶರಾದ ಬಳಿಕ ಕೆಲವು ನಿರ್ಬಂಧಗಳಿವೆ” ಎಂದು ತಿಳಿಸಿದ್ದರು.

ಇದನ್ನೂ ಓದಿರಿ: ಒಬ್ಬ ಪತ್ರಕರ್ತನಿಗೆ ಬರೆಯಬಾರದು ಎಂದು ಹೇಳಲು ಸಾಧ್ಯವಿಲ್ಲ: ಜುಬೇರ್‌ಗೆ ಜಾಮೀನು ನೀಡುವಾಗ ಜಸ್ಟೀಸ್ ಚಂದ್ರಚೂಡ್ ಹೇಳಿಕೆ

ಬಾಬರಿ ಮಸೀದಿ ಪ್ರಕರಣದಲ್ಲಿ ರಾಮ ಜನ್ಮಭೂಮಿ ಪರವಾಗಿ ತೀರ್ಪು ಹೊರಬಿದ್ದಿತು. “ತೀರ್ಪು ನೀಡಿದ ಪೀಠದ ಭಾಗವಾಗಿರುವುದರಿಂದ ಪ್ರತಿಕ್ರಿಯಿಸಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

ಮುಸ್ಲಿಮರು ಅಥವಾ ಇತರ ಅಲ್ಪಸಂಖ್ಯಾತರ ವಿರುದ್ಧದ ತಾರತಮ್ಯದ ಪ್ರಕರಣಗಳನ್ನು ನ್ಯಾಯಾಲಯಗಳು ವ್ಯವಹರಿಸುವುದಿಲ್ಲ ಎಂಬ ಅನಿಸಿಕೆಗಳಿವೆ ಎಂದ ಅವರು, “ಧ್ವಂಸ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗಮನ ಹರಿಸಿದ್ದು, ಈ ವಿಷಯದ ಬಗ್ಗೆ ನೋಟಿಸ್ ನೀಡಿದೆ” ಎಂದು ಪ್ರತಿಕ್ರಿಯಿಸಿದ್ದರು.

ಸುಪ್ರೀಂ ಕೋರ್ಟ್ ಸಾಮಾನ್ಯವಾಗಿ ರಕ್ಷಣೆಯ ಮೊದಲ ಅಸ್ತ್ರವಾಗಿದೆ. ಧಾರ್ಮಿಕ ಸ್ವಾತಂತ್ರ್ಯದ ವಿಷಯಗಳಲ್ಲಿ ನ್ಯಾಯಾಲಯವು ಧಾರ್ಮಿಕ ಪಂಥಗಳು ಮತ್ತು ನ್ಯಾಯಶಾಸ್ತ್ರದ ಪ್ರತಿಪಾದನೆಗಳನ್ನು ಎತ್ತಿಹಿಡಿದಿದೆ. ಶಿಕ್ಷಣ ಕೇಂದ್ರಗಳನ್ನು ಸ್ಥಾಪಿಸುವ ಅಲ್ಪಸಂಖ್ಯಾತರ ಹಕ್ಕನ್ನು ನಾವು ಎತ್ತಿ ಹಿಡಿದಿದ್ದೇವೆ ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...