Homeಕರ್ನಾಟಕಕರ್ನಾಟಕ: ದೇಶಭಕ್ತಿ ಪ್ರದರ್ಶನಕ್ಕೆ 22 ರೂ. ನಿಗದಿ; ಬಾವುಟದಲ್ಲೂ ಬಿಸಿನೆಸ್!

ಕರ್ನಾಟಕ: ದೇಶಭಕ್ತಿ ಪ್ರದರ್ಶನಕ್ಕೆ 22 ರೂ. ನಿಗದಿ; ಬಾವುಟದಲ್ಲೂ ಬಿಸಿನೆಸ್!

“ನಿಜವಾಗಿಯೂ ಇವರಿಗೆ ದೇಶಭಕ್ತಿ ಇದ್ದರೆ ತ್ರಿವರ್ಣಧ್ವಜದ ಜೊತೆಗೆ ಸಂವಿಧಾನದ ಒಂದು ಪ್ರತಿಯನ್ನೂ ಉಚಿತವಾಗಿ ಹಂಚಲಿ” ಎನ್ನುತ್ತಾರೆ ಹಾಸನದ ರೈತ ಮುಖಂಡ ಎಚ್.ಆರ್‌.ನವೀನ್‌ಕುಮಾರ್‌.

- Advertisement -
- Advertisement -

ಸ್ವಾತಂತ್ರ್ಯದ ಅಮೃತ ಮಹೋತ್ಸಕ್ಕೆ ಸಜ್ಜಾಗುತ್ತಿದ್ದೇವೆ. ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸುವಂತೆ, ಸಾಮಾಜಿಕ ಮಾಧ್ಯಮಗಳ ಪ್ರೊಫೈಲ್‌ನಲ್ಲಿ ರಾಷ್ಟ್ರಧ್ವಜದ ಚಿತ್ರವನ್ನು ಹಾಕಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಪ್ರಧಾನಿಯವರ ಮನವಿಯ ಹಿನ್ನೆಲೆಯಲ್ಲಿ ಹಲವಾರು ಬೆಳವಣಿಗೆಗಳಾಗುತ್ತಿವೆ. ಇದರ ನಡುವೆ ರಾಜ್ಯ ಸರ್ಕಾರ ಶಾಲಾ, ಕಾಲೇಜುಗಳಲ್ಲಿ ಬಾವುಟವನ್ನು ಮಾರಲು ಮುಂದಾಗಿರುವ ಸುದ್ದಿ ಲಭ್ಯವಾಗಿದೆ.

ಹಾಸನ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ ಹಿನ್ನಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಜ್ಞಾಪನ ಪತ್ರವನ್ನು ಹೊರಡಿಸಿದ್ದಾರೆ.

 

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ‘ಹರ್‌ ಘರ್‌ ತಿರಂಗಾ’ ಅಭಿಯಾನವನ್ನು ಹಮ್ಮಿಕೊಂಡಿರುವ ಕುರಿತು ಈ ಜ್ಞಾಪನ ಪತ್ರವಿದೆ. “…ಆಗಸ್ಟ್‌ 13ರಿಂದ 15ರವರೆಗೆ ದೇಶದ ಪ್ರತಿ ಮನೆಮನೆಗಳಲ್ಲೂ ರಾಷ್ಟ್ರಧ್ವಜವನ್ನು ಹಾರಿಸಿ ದೇಶಭಕ್ತಿ, ದೇಶಾಭಿಮಾನ ಬಿಂಬಿಸಲು ಉದ್ದೇಶಿಸಿರುವುದರಿಂದ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಧ್ವಜವನ್ನು ಖರೀದಿಸಲು ಪದವಿ ಪೂರ್ವ ಕಾಲೇಜಿನ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪ್ರತಿ ವಿದ್ಯಾರ್ಥಿಯಿಂದ ರೂ. 22 ರಂತೆ ಸಂಗ್ರಹಿಸಿ ಬಾವುಟವನ್ನು ಖರೀದಿಸಲು (ಜಿಲ್ಲಾಧಿಕಾರಿ) ಸೂಚಿಸಿರುತ್ತಾರೆ. ಜಿಲ್ಲೆಯ ಪದವಿಪುರ್ವ ಕಾಲೇಜಿನ ಪ್ರಾಂಶುಪಾಲರು ಬಾವುಟಗಳನ್ನು ಮೋಹನ್‌ ಎಂ.ಪಿ. (ಪ್ರಾಂಶುಪಾಲರು, ಸರ್ಕಾರಿ ಪದವಿಪೂರ್ವ ಕಾಲೇಜು, ವಿದ್ಯಾನಗರ, ಆಕಾಶವಾಣಿ ಹತ್ತಿರ, ಹಾಸನ) ಅವರನ್ನು ಸಂಪರ್ಕಿಸಿ ಬಾವುಟಗಳನ್ನು ಪ್ರದರ್ಶಿಸಲು ಸೂಚಿಸಲಾಗಿದೆ..” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಭಾನುವಾರ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಹಾಸನ ಡಿಡಿಪಿಯು ಸಿ.ಎಂ.ಮಹಲಿಂಗಯ್ಯ ಅವರು, “ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಬಾವುಟ ಹಂಚಿಕೆ ಮಾಡಲು ಮುಂದಾಗಿದ್ದೇವೆ. ಜಿಲ್ಲಾಧಿಕಾರಿಯವರು ವಿವಿಧ ಇಲಾಖೆಗೆ ಇಂತಿಷ್ಟು ಬಾವುಟಗಳನ್ನು ನೀಡಿದ್ದಾರೆ. ಆಸಕ್ತರು ಮಾತ್ರ ಖರೀದಿಸಬಹುದು. 10,000 ಬಾವುಟಗಳನ್ನು ಮಾರುವಂತೆ ನಮ್ಮ ಇಲಾಖೆಗೆ ಟಾರ್ಗೆಟ್ ನೀಡಲಾಗಿದೆ. ಮಾರಾಟವಾಗದ ಬಾವುಟಗಳನ್ನು ವಾಪಸ್ ಕಳುಹಿಸುತ್ತೇವೆ. ನಮ್ಮ ವ್ಯಾಪ್ತಿಯಲ್ಲಿ 31,000 ವಿದ್ಯಾರ್ಥಿಗಳಿದ್ದಾರೆ. ಖಾದಿ ಬಾವುಟವನ್ನೇ ನೀಡಿದ್ದಾರೆ. ಪಿಯು ವಿದ್ಯಾರ್ಥಿಗಳಿಗಷ್ಟೇ ಅಲ್ಲ, ಪ್ರೌಢಶಾಲಾ ವಿದ್ಯಾರ್ಥಿಗಳಿಗೂ ಬಾವುಟ ಮಾರಲಾಗುತ್ತಿದೆ” ಎಂದು ಮಾಹಿತಿ ನೀಡಿದರು.

ಹಾಸನ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿ, “ಬಾವುಟವನ್ನು ಹೇಗೆ ಕೊಡಬೇಕು, ಎಲ್ಲಿ ಕೊಡಬೇಕು ಎಂದು ಯೋಜನೆ ರೂಪಿಸುತ್ತಿದ್ದೇವೆ. ಬಹುಶಃ ನಾಳೆ (ಸೋಮವಾರ) ಪತ್ರಿಕಾಗೋಷ್ಠಿ ಕರೆಯುತ್ತೇನೆ. ಜಿಲ್ಲಾ ಪಂಚಾಯಿತಿ ಮೂಲಕ 1.1 ಲಕ್ಷ ಬಾವುಟಗಳನ್ನು ಹಂಚುತ್ತಿದ್ದೇವೆ. ಸ್ಥಳೀಯ ಸಂಸ್ಥೆಗಳಿಂದ 50 ಸಾವಿರ ಬಾವುಟ, ಶಾಲಾ ಮಕ್ಕಳಿಗೆ ಸುಮಾರು 20,000 ಭಾವುಟವನ್ನು ಮಾರಲು ಇಚ್ಛಿಸಿದ್ದೇವೆ. ಬಾವುಟವನ್ನು ಉಚಿತವಾಗಿ ನೀಡುತ್ತಿಲ್ಲ. ಹಣ ನಿಗದಿ ಮಾಡಿದ್ದೇವೆ” ಎಂದು ಸ್ಪಷ್ಟಪಡಿಸಿದರು.

“ಹಾಸನ ಜಿಲ್ಲೆಯಷ್ಟೇ ಅಲ್ಲ. ಇಡೀ ರಾಜ್ಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ” ಎಂದ ಅವರು, ಸರ್ಕಾರದ ಮಟ್ಟದಿಂದಲೇ ಸೂಚನೆ ಬಂದಿರುವ ಕುರಿತು ಸುಳಿವು ನೀಡಿದರು.

“ದೇಶಭಕ್ತಿಯ ಹೆಸರಲ್ಲಿ ದುಡ್ಡು ಮಾಡುವ ಬಿಸಿನೆಟ್ ಇಲ್ಲಿ ನಡೆಯುತ್ತಿದೆಯೇ? ವಿದ್ಯಾರ್ಥಿಗಳಿಗೆ ಉಚಿತವಾಗಿ ಬಾವುಟವನ್ನು ಹಂಚಬಹುದಿತ್ತಲ್ಲ? ಸರಿಯಾದ ಸೂರಿಲ್ಲದ ಜನರು ಬಾವುಟವನ್ನು ಎಲ್ಲಿ ಹಾರಿಸಬೇಕು?” ಮೊದಲಾದ ಪ್ರಶ್ನೆಗಳು ಮುಂದೆ ಬಂದಿವೆ.

ಹಾಸನ ಜಿಲ್ಲೆಯ ರೈತ ಮುಖಂಡ ಎಚ್.ಆರ್‌.ನವೀನ್‌ಕುಮಾರ್ ಪ್ರತಿಕ್ರಿಯೆ ನೀಡಿ, “ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹೆಸರಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜನರನ್ನು ಮರಳು ಮಾಡುತ್ತಿವೆ. ಭಾವನಾತ್ಮಕವಾಗಿ ಸೆಳೆಯಲು ಬಾವುಟದ ವಿಚಾರವನ್ನು ತರುತ್ತಿದ್ದಾರೆ. ಜನರ ನೈಜ ಸಮಸ್ಯೆಗಳನ್ನು ವ್ಯವಸ್ಥಿತವಾಗಿ ಮರೆಮಾಚಲು ಹರ್‌ ಘರ್‌ ತಿರಂಗ ಎಂಬ ಕಾರ್ಯಕ್ರಮವನ್ನು ಬಳಸಿಕೊಳ್ಳಲಾಗುತ್ತಿದೆ” ಎಂದು ವಿಷಾದಿಸಿದರು.

ಇದನ್ನೂ ಓದಿರಿ: ಪ್ರತಿ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲು ಪ್ರಧಾನಿ ಮೋದಿ ಕರೆ: ಮನೆಯೇ ಇಲ್ಲದವರು ಏನು ಮಾಡಬೇಕು?

“ಒಂದು ಕಾರ್ಟೂನ್‌ ನೋಡಿದೆ. ನನಗೂ ತಿರಂಗ ಹಾರಿಸಲು ಇಷ್ಟ. ಆದರೆ ಮನೆಯಿಲ್ಲ. ಮೊದಲು ಮನೆ ನಿರ್ಮಿಸಿಕೊಡಿ ಎಂದು ಆ ಕಾರ್ಟೂನ್ ಆಗ್ರಹಿಸಿತ್ತು. ಸರ್ಕಾರ ಜನರ ನೈಜ ಪ್ರಶ್ನೆಗಳಿಗೆ ಗಮನ ಕೊಡುತ್ತಿಲ್ಲ. ಬೆಲೆ ಏರಿಕೆ, ಶಿಕ್ಷಣದ ಖಾಸಗೀಕರಣ, ಪಠ್ಯಪುಸ್ತಕಗಳ ಅಧ್ವಾನ ಮೊದಲಾದ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಲು, ಜನರನ್ನು ಬೇರೆ ದಿಕ್ಕಿಗೆ ತಿರುಗಿಸಲು ಯತ್ನಿಸುತ್ತಿದ್ದಾರೆ. ಭಾವುಟ, ಸೈನಿಕರು, ದೇಶಭಕ್ತಿ- ಇವೆಲ್ಲವೂ ಭಾವನಾತ್ಮಕ ಸಂಗತಿಗಳು. ಇವುಗಳ ಬಗ್ಗೆ ಮಾತನಾಡಿದರೆ ದೇಶದ್ರೋಹ ಎಂಬ ಮನಸ್ಥಿತಿಯನ್ನು ಬೆಳೆಸಲಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ದೇಶಭಕ್ತಿ ಬಗ್ಗೆ ಮಾತನಾಡೋರು ಕರ್ನಾಟಕದ ಖಾದಿ ಉದ್ಯಮಕ್ಕೆ ಪ್ರೋತ್ಸಾಹ ಕೊಡಬೇಕಿತ್ತು. ನಿಜವಾಗಿಯೂ ಇವರಿಗೆ ದೇಶಭಕ್ತಿ ಇದ್ದರೆ ತ್ರಿವರ್ಣಧ್ವಜದ ಜೊತೆಗೆ ಸಂವಿಧಾನ ಒಂದು ಪ್ರತಿಯನ್ನು ಉಚಿತವಾಗಿ ಹಂಚಲಿ. ದುಡ್ಡು ಪಡೆದು ಬಾವುಟವನ್ನು ಮಾರುತ್ತಿರುವುದು ದೇಶಭಕ್ತಿಯೂ ಅಲ್ಲ, ಅಮೃತ ಮಹೋತ್ಸವಕ್ಕೆ ಕೊಡುತ್ತಿರುವ ಗೌರವವೂ ಅಲ್ಲ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ ನಮಸ್ತೆ…ಇದು ಕೇವಲ ಪದವಿಪೂರ್ವ ಇಲಾಖೆ ಮಾತ್ರವಲ್ಲ ಎಲ್ಲಾ ಇಲಾಖೆಗಳು ,ಕಛೇರಿಗಳ ಕತೆಯೂ ಹೀಗೆಯೇ ಇದೆ..ಪ್ರಥಮ ದರ್ಜೆ ಕಾಲೇಜುಗಳಿಗೂ ಹೀಗೆಯೆ ಸುತ್ತೊಲೆ ಇದೆ ಜೊತೆಗೆ ಎನ್ ಎಸ್ ಎಸ್ ಘಟಕಗಳು ಇದರ ಹಿಂದೆ ಬಿದ್ದು ಕೊಳ್ಳುವಂತೆ ಸೂಚಿಸುತ್ತಿವೆ ಅದನ್ನು ಮಾರಲು ಕಾಲೇಜುಗಳು ವಿದ್ಯಾರ್ಥಿಗಳನ್ನ ಮನೆ ಮನೆಗೆ ಕಳುಹಿಸಿ ಮನೆಯವರಿಗೆ ಮಾರಿ ಫೋಟೊ ತೆಗೆದು ಗುಂಪುಗಳಲದಲಿ ಹಾಕುತ್ತಿದ್ದಾರೆ…ಎಲ್ಲಾ ಆಷಾಢಭೂತಿತನವಷ್ಟೆ.ಮಂಗ ಮಾಡ್ತಾ ಇದಾರೆ ಜನರನ್ನು

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...