Homeಮುಖಪುಟಕೇರಳ: ರಾಮಾಯಣ ರಸಪ್ರಶ್ನೆ ಸ್ಪರ್ಧೆ ವಿಜೇತರಾದ ಇಸ್ಲಾಮಿಕ್ ಅಧ್ಯಯನ ವಿದ್ಯಾರ್ಥಿಗಳು

ಕೇರಳ: ರಾಮಾಯಣ ರಸಪ್ರಶ್ನೆ ಸ್ಪರ್ಧೆ ವಿಜೇತರಾದ ಇಸ್ಲಾಮಿಕ್ ಅಧ್ಯಯನ ವಿದ್ಯಾರ್ಥಿಗಳು

- Advertisement -
- Advertisement -

ಕೇರಳದಲ್ಲಿ ನಡೆದ ರಾಜ್ಯ ಮಟ್ಟದ ರಾಮಾಯಣ ರಸಪ್ರಶ್ನೆಯಲ್ಲಿ ವಿಜೇತರಾದ ಐವರು ವಿದ್ಯಾರ್ಥಿಗಳಲ್ಲಿ ಇಸ್ಲಾಮಿಕ್ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಾದ ಮುಹಮ್ಮದ್ ಬಾಸಿತ್‌ ಎಂ. ಮತ್ತು ಮುಹಮ್ಮದ್ ಜಾಬಿರ್ ಪಿ.ಕೆ. ಕೂಡಾ ಸ್ಥಾನ ಪಡೆದು ದೇಶದ ಗಮನ ಸೆಳೆದಿದ್ದಾರೆ. ಈ ಇಬ್ಬರೂ ರಾಜ್ಯದ ಮರ್ಕಝ್ ವಲಾಂಚೇರಿಯ ಕೆ.ಕೆ.ಎಚ್‌.ಎಂ. ಇಸ್ಲಾಮಿಕ್ ಮತ್ತು ಆರ್ಟ್ಸ್ ಕಾಲೇಜಿನ ಇಸ್ಲಾಮಿಕ್ ಅಧ್ಯಯನ ಕೋರ್ಸ್‌ (ವಾಫಿ)ನ ವಿದ್ಯಾರ್ಥಿಗಳಾಗಿದ್ದಾರೆ.

ರಾಮಾಯಣದ ಆಳವಾದ ಅಧ್ಯಯನದ ಆಧಾರದ ಮೇಲೆ ಜುಲೈ 23 ರಿಂದ ಜುಲೈ 25 ರ ನಡುವೆ ಕೇರಳದ ಪ್ರಕಾಶನ ಸಂಸ್ಥೆ ಡಿ.ಸಿ. ಬುಕ್ಸ್ ಆನ್‌ಲೈನ್ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಿತ್ತು. ತಮ್ಮ ಕಾಲೇಜಿನಲ್ಲಿ ಅಧ್ಯಯನದ ಭಾಗವಾಗಿ ರಾಮಾಯಣವನ್ನು ಓದಿಕೊಂಡಿದ್ದ ಜಾಬೀರ್ ಮತ್ತು ಬಾಸಿತ್ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ವಿಜೇತರಾದ ಇತರ ವಿದ್ಯಾರ್ಥಿಗಳೆಂದರೆ ನವನೀತ್ ಗೋಪನ್, ಅಭಿರಾಮ್ ಎಂಪಿ ಮತ್ತು ಗೀತು ಕೃಷ್ಣನ್.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಮಾತನಾಡಿದ ಧರ್ಮಶಾಸ್ತ್ರ ಅಧ್ಯಯನದ ಹಿರಿಯ ವಿದ್ಯಾರ್ಥಿಯಾಗಿರುವ ಜಾಬೀರ್, “ಎಲ್ಲಾ ಧರ್ಮಗಳು ಮಾನವೀಯತೆಯ ಶಾಂತಿಯುತ ಜೀವನಕ್ಕಾಗಿ ಮಾಡಲ್ಪಟ್ಟಿವೆ. ಆದರೆ ಅವುಗಳ ಸುತ್ತಲಿನ ಎಲ್ಲಾ ಇತರ ಉದ್ವಿಗ್ನತೆಗಳು ಮಾನವ ನಿರ್ಮಿತ” ಎಂದು ಹೇಳಿದ್ದಾರೆ.

“ನಾಡಿನಲ್ಲಿ ಉತ್ತಮ ಆಡಳಿತ ಮತ್ತು ನ್ಯಾಯವನ್ನು ಹೇಗೆ ಜಾರಿಗೆ ತರಬಹುದು ಎಂಬುದನ್ನು ರಾಮಾಯಣ ವಿವರಿಸುತ್ತದೆ. ರಾಮಾಯಣವು ರಾಮನನ್ನು ಆದರ್ಶ ರಾಜನೆಂದು ತೋರಿಸುತ್ತದೆ ಮತ್ತು ದೇಶದಲ್ಲಿ ಉತ್ತಮ ಆಡಳಿತ, ನ್ಯಾಯ, ಸದ್ಗುಣ ಮತ್ತು ಕರ್ತವ್ಯಗಳನ್ನು ಹೇಗೆ ಕಾರ್ಯಗತಗೊಳಿಸಬಹುದು ಎಂಬುದನ್ನು ತೋರಿಸುತ್ತದೆ. ಇದು ಜಗತ್ತಿನಲ್ಲಿ ಆದರ್ಶಪ್ರಾಯವಾಗಿ ನಡೆಯಬೇಕು. ಪವಿತ್ರ ಗ್ರಂಥದಲ್ಲಿ ದ್ವೇಷದ ಉಲ್ಲೇಖವಿಲ್ಲ. ಯಾವುದೇ ಧರ್ಮವು ದ್ವೇಷವನ್ನು ಉತ್ತೇಜಿಸುವುದಿಲ್ಲ” ಎಂದು ಜಾಬೀರ್ ಹೇಳಿದ್ದಾರೆ.

ಇದನ್ನೂ ಓದಿ: ನೆಲದ ಸೌಹಾರ್ದಕ್ಕೆ ಸರಣಿ ಕೊಲೆಗಳ ಕೊಡಲಿಯೇಟು; ಸಾಂಸ್ಕೃತಿಕ ಕ್ರಾಂತಿಗೆ ಓಗೊಡಬೇಕಿದೆ ಯುವಜನತೆ

“ತಮ್ಮ ಅಧ್ಯಯನದ ಭಾಗವಾಗಿ ವಿದ್ಯಾರ್ಥಿಗಳು ಎಲ್ಲಾ ಧರ್ಮಗಳ ಬಗ್ಗೆ ಕಲಿಯುತ್ತಾರೆ. ಹಾಗಾಗಿ ಧರ್ಮಗಳ ಪುಸ್ತಕಗಳನ್ನು ನೇರವಾಗಿ ಓದಿ ಅರ್ಥ ಮಾಡಿಕೊಳ್ಳಬಹುದು. ನಮ್ಮಲ್ಲಿ ಹೆಚ್ಚಿನವರು ನೇರವಾಗಿ ಓದುವ ಮತ್ತು ಅರ್ಥಮಾಡಿಕೊಳ್ಳುವ ಮೂಲಕ ಅವುಗಳನ್ನು ಕಲಿಯುತ್ತಾರೆ. ನಮ್ಮ ಕಾಲೇಜಿನ ಗ್ರಂಥಾಲಯವು ಎಲ್ಲಾ ಧಾರ್ಮಿಕ ಪವಿತ್ರ ಪುಸ್ತಕಗಳನ್ನು ಹೊಂದಿದೆ” ಎಂದು ಅವರು ಹೇಳಿದ್ದಾರೆ.

ವಾಫಿ ಕೋರ್ಸ್‌ ವಿದ್ಯಾರ್ಥಿಗಳು ಇಸ್ಲಾಮಿಕ್ ಅಧ್ಯಯನಗಳೊಂದಿಗೆ ತಮ್ಮ ಪದವಿ ಅಧ್ಯಯನವನ್ನು ನಡೆಸುತ್ತಾರೆ. ಈ ಕೋರ್ಸ್‌ನ ಪ್ರಮಾಣಪತ್ರ ಪಡೆಯಬೇಕೆಂದಿದ್ದರೆ ನಾವು ವಿಶ್ವವಿದ್ಯಾಲಯದ ಅನುಮೋದಿತ ಪದವಿಯನ್ನು ಹೊಂದಿರಬೇಕು. ಅದರ ಹೊರತಾಗಿ ನಾವು ಇತರ ಎಲ್ಲಾ ಧರ್ಮಗಳು ಮತ್ತು ಸಂಸ್ಕೃತಿಗಳ ಬಗ್ಗೆ ಕಲಿಯಬೇಕಾಗಿದೆ. ನಮ್ಮ ದೇಶವನ್ನು ವಿಶಾಲ ಮನಸ್ಸಿನ ರೀತಿಯಲ್ಲಿ ತಿಳಿದುಕೊಳ್ಳಲು ಮತ್ತು ಉತ್ತಮ ನಾಗರಿಕರಾಗಲು ನಮಗೆ ಇಲ್ಲಿ ಕಲಿಸಲಾಗುತ್ತದೆ ಎಂದು ಜಾಬಿರ್ ಹೇಳಿದ್ದಾರೆ.

ಮಕ್ಕಳ ನಿಯತಕಾಲಿಕಗಳಲ್ಲಿ ಪ್ರಕಟವಾಗುವ ರಾಮಾಯಣ ಚಿತ್ರಕಥೆಗಳು ಮತ್ತು ಸಣ್ಣ ಕಥೆಗಳನ್ನು ಓದಿದ ಕಾರಣದಿಂದ ಬಾಲ್ಯದಿಂದಲೂ ರಾಮಾಯಣವನ್ನು ಕಲಿಯಲು ಆಸಕ್ತಿ ಹೊಂದಿದ್ದಾಗಿ ರಾಮಾಯಣ ಸ್ಪರ್ಧೆಯಲ್ಲಿ ವಿಜೇತರಾದ ಮತ್ತೊಬ್ಬ ವಿದ್ಯಾರ್ಥಿ ಬಾಸಿತ್ ಹೇಳುತ್ತಾರೆ.

ಇದನ್ನೂ ಓದಿ: ಮೂರೂವರೆ ವರ್ಷದಲ್ಲಿ 752 ಕೋಮು ಪ್ರಕರಣಗಳನ್ನು ಕಂಡ ’ಸೌಹಾರ್ದ ಕರ್ನಾಟಕ’

“ನಾನು ವಾಫಿ ಕೋರ್ಸ್‌‌ಗೆ ಬಂದಾಗ ಇಲ್ಲಿ ಎಲ್ಲಾ ಧಾರ್ಮಿಕ ಪವಿತ್ರ ಪುಸ್ತಕಗಳು ಇದ್ದವು. ಅವರೆಲ್ಲವೂ ಜ್ಞಾನದ ಆಗರಗಳಾಗಿದ್ದು, ರಾಮಾಯಣವು ಹಿಂದೂ ಧಾರ್ಮಿಕ ಜ್ಞಾನದ ಆಗರವಾಗಿದೆ” ಎಂದು ಅವರು ಹೇಳಿದ್ದಾರೆ. ಜಾಬೀರ್ ಮತ್ತು ಬಾಸಿತ್ ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ ಧರ್ಮದ ಮೂಲಕ ಶಾಂತಿಯನ್ನು ಹರಡಲು ಆಶಿಸುವುದಾಗಿ ಹೇಳಿದ್ದಾರೆ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...