Homeಮುಖಪುಟಕೇರಳ: ರಾಮಾಯಣ ರಸಪ್ರಶ್ನೆ ಸ್ಪರ್ಧೆ ವಿಜೇತರಾದ ಇಸ್ಲಾಮಿಕ್ ಅಧ್ಯಯನ ವಿದ್ಯಾರ್ಥಿಗಳು

ಕೇರಳ: ರಾಮಾಯಣ ರಸಪ್ರಶ್ನೆ ಸ್ಪರ್ಧೆ ವಿಜೇತರಾದ ಇಸ್ಲಾಮಿಕ್ ಅಧ್ಯಯನ ವಿದ್ಯಾರ್ಥಿಗಳು

- Advertisement -
- Advertisement -

ಕೇರಳದಲ್ಲಿ ನಡೆದ ರಾಜ್ಯ ಮಟ್ಟದ ರಾಮಾಯಣ ರಸಪ್ರಶ್ನೆಯಲ್ಲಿ ವಿಜೇತರಾದ ಐವರು ವಿದ್ಯಾರ್ಥಿಗಳಲ್ಲಿ ಇಸ್ಲಾಮಿಕ್ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಾದ ಮುಹಮ್ಮದ್ ಬಾಸಿತ್‌ ಎಂ. ಮತ್ತು ಮುಹಮ್ಮದ್ ಜಾಬಿರ್ ಪಿ.ಕೆ. ಕೂಡಾ ಸ್ಥಾನ ಪಡೆದು ದೇಶದ ಗಮನ ಸೆಳೆದಿದ್ದಾರೆ. ಈ ಇಬ್ಬರೂ ರಾಜ್ಯದ ಮರ್ಕಝ್ ವಲಾಂಚೇರಿಯ ಕೆ.ಕೆ.ಎಚ್‌.ಎಂ. ಇಸ್ಲಾಮಿಕ್ ಮತ್ತು ಆರ್ಟ್ಸ್ ಕಾಲೇಜಿನ ಇಸ್ಲಾಮಿಕ್ ಅಧ್ಯಯನ ಕೋರ್ಸ್‌ (ವಾಫಿ)ನ ವಿದ್ಯಾರ್ಥಿಗಳಾಗಿದ್ದಾರೆ.

ರಾಮಾಯಣದ ಆಳವಾದ ಅಧ್ಯಯನದ ಆಧಾರದ ಮೇಲೆ ಜುಲೈ 23 ರಿಂದ ಜುಲೈ 25 ರ ನಡುವೆ ಕೇರಳದ ಪ್ರಕಾಶನ ಸಂಸ್ಥೆ ಡಿ.ಸಿ. ಬುಕ್ಸ್ ಆನ್‌ಲೈನ್ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಿತ್ತು. ತಮ್ಮ ಕಾಲೇಜಿನಲ್ಲಿ ಅಧ್ಯಯನದ ಭಾಗವಾಗಿ ರಾಮಾಯಣವನ್ನು ಓದಿಕೊಂಡಿದ್ದ ಜಾಬೀರ್ ಮತ್ತು ಬಾಸಿತ್ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ವಿಜೇತರಾದ ಇತರ ವಿದ್ಯಾರ್ಥಿಗಳೆಂದರೆ ನವನೀತ್ ಗೋಪನ್, ಅಭಿರಾಮ್ ಎಂಪಿ ಮತ್ತು ಗೀತು ಕೃಷ್ಣನ್.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಮಾತನಾಡಿದ ಧರ್ಮಶಾಸ್ತ್ರ ಅಧ್ಯಯನದ ಹಿರಿಯ ವಿದ್ಯಾರ್ಥಿಯಾಗಿರುವ ಜಾಬೀರ್, “ಎಲ್ಲಾ ಧರ್ಮಗಳು ಮಾನವೀಯತೆಯ ಶಾಂತಿಯುತ ಜೀವನಕ್ಕಾಗಿ ಮಾಡಲ್ಪಟ್ಟಿವೆ. ಆದರೆ ಅವುಗಳ ಸುತ್ತಲಿನ ಎಲ್ಲಾ ಇತರ ಉದ್ವಿಗ್ನತೆಗಳು ಮಾನವ ನಿರ್ಮಿತ” ಎಂದು ಹೇಳಿದ್ದಾರೆ.

“ನಾಡಿನಲ್ಲಿ ಉತ್ತಮ ಆಡಳಿತ ಮತ್ತು ನ್ಯಾಯವನ್ನು ಹೇಗೆ ಜಾರಿಗೆ ತರಬಹುದು ಎಂಬುದನ್ನು ರಾಮಾಯಣ ವಿವರಿಸುತ್ತದೆ. ರಾಮಾಯಣವು ರಾಮನನ್ನು ಆದರ್ಶ ರಾಜನೆಂದು ತೋರಿಸುತ್ತದೆ ಮತ್ತು ದೇಶದಲ್ಲಿ ಉತ್ತಮ ಆಡಳಿತ, ನ್ಯಾಯ, ಸದ್ಗುಣ ಮತ್ತು ಕರ್ತವ್ಯಗಳನ್ನು ಹೇಗೆ ಕಾರ್ಯಗತಗೊಳಿಸಬಹುದು ಎಂಬುದನ್ನು ತೋರಿಸುತ್ತದೆ. ಇದು ಜಗತ್ತಿನಲ್ಲಿ ಆದರ್ಶಪ್ರಾಯವಾಗಿ ನಡೆಯಬೇಕು. ಪವಿತ್ರ ಗ್ರಂಥದಲ್ಲಿ ದ್ವೇಷದ ಉಲ್ಲೇಖವಿಲ್ಲ. ಯಾವುದೇ ಧರ್ಮವು ದ್ವೇಷವನ್ನು ಉತ್ತೇಜಿಸುವುದಿಲ್ಲ” ಎಂದು ಜಾಬೀರ್ ಹೇಳಿದ್ದಾರೆ.

ಇದನ್ನೂ ಓದಿ: ನೆಲದ ಸೌಹಾರ್ದಕ್ಕೆ ಸರಣಿ ಕೊಲೆಗಳ ಕೊಡಲಿಯೇಟು; ಸಾಂಸ್ಕೃತಿಕ ಕ್ರಾಂತಿಗೆ ಓಗೊಡಬೇಕಿದೆ ಯುವಜನತೆ

“ತಮ್ಮ ಅಧ್ಯಯನದ ಭಾಗವಾಗಿ ವಿದ್ಯಾರ್ಥಿಗಳು ಎಲ್ಲಾ ಧರ್ಮಗಳ ಬಗ್ಗೆ ಕಲಿಯುತ್ತಾರೆ. ಹಾಗಾಗಿ ಧರ್ಮಗಳ ಪುಸ್ತಕಗಳನ್ನು ನೇರವಾಗಿ ಓದಿ ಅರ್ಥ ಮಾಡಿಕೊಳ್ಳಬಹುದು. ನಮ್ಮಲ್ಲಿ ಹೆಚ್ಚಿನವರು ನೇರವಾಗಿ ಓದುವ ಮತ್ತು ಅರ್ಥಮಾಡಿಕೊಳ್ಳುವ ಮೂಲಕ ಅವುಗಳನ್ನು ಕಲಿಯುತ್ತಾರೆ. ನಮ್ಮ ಕಾಲೇಜಿನ ಗ್ರಂಥಾಲಯವು ಎಲ್ಲಾ ಧಾರ್ಮಿಕ ಪವಿತ್ರ ಪುಸ್ತಕಗಳನ್ನು ಹೊಂದಿದೆ” ಎಂದು ಅವರು ಹೇಳಿದ್ದಾರೆ.

ವಾಫಿ ಕೋರ್ಸ್‌ ವಿದ್ಯಾರ್ಥಿಗಳು ಇಸ್ಲಾಮಿಕ್ ಅಧ್ಯಯನಗಳೊಂದಿಗೆ ತಮ್ಮ ಪದವಿ ಅಧ್ಯಯನವನ್ನು ನಡೆಸುತ್ತಾರೆ. ಈ ಕೋರ್ಸ್‌ನ ಪ್ರಮಾಣಪತ್ರ ಪಡೆಯಬೇಕೆಂದಿದ್ದರೆ ನಾವು ವಿಶ್ವವಿದ್ಯಾಲಯದ ಅನುಮೋದಿತ ಪದವಿಯನ್ನು ಹೊಂದಿರಬೇಕು. ಅದರ ಹೊರತಾಗಿ ನಾವು ಇತರ ಎಲ್ಲಾ ಧರ್ಮಗಳು ಮತ್ತು ಸಂಸ್ಕೃತಿಗಳ ಬಗ್ಗೆ ಕಲಿಯಬೇಕಾಗಿದೆ. ನಮ್ಮ ದೇಶವನ್ನು ವಿಶಾಲ ಮನಸ್ಸಿನ ರೀತಿಯಲ್ಲಿ ತಿಳಿದುಕೊಳ್ಳಲು ಮತ್ತು ಉತ್ತಮ ನಾಗರಿಕರಾಗಲು ನಮಗೆ ಇಲ್ಲಿ ಕಲಿಸಲಾಗುತ್ತದೆ ಎಂದು ಜಾಬಿರ್ ಹೇಳಿದ್ದಾರೆ.

ಮಕ್ಕಳ ನಿಯತಕಾಲಿಕಗಳಲ್ಲಿ ಪ್ರಕಟವಾಗುವ ರಾಮಾಯಣ ಚಿತ್ರಕಥೆಗಳು ಮತ್ತು ಸಣ್ಣ ಕಥೆಗಳನ್ನು ಓದಿದ ಕಾರಣದಿಂದ ಬಾಲ್ಯದಿಂದಲೂ ರಾಮಾಯಣವನ್ನು ಕಲಿಯಲು ಆಸಕ್ತಿ ಹೊಂದಿದ್ದಾಗಿ ರಾಮಾಯಣ ಸ್ಪರ್ಧೆಯಲ್ಲಿ ವಿಜೇತರಾದ ಮತ್ತೊಬ್ಬ ವಿದ್ಯಾರ್ಥಿ ಬಾಸಿತ್ ಹೇಳುತ್ತಾರೆ.

ಇದನ್ನೂ ಓದಿ: ಮೂರೂವರೆ ವರ್ಷದಲ್ಲಿ 752 ಕೋಮು ಪ್ರಕರಣಗಳನ್ನು ಕಂಡ ’ಸೌಹಾರ್ದ ಕರ್ನಾಟಕ’

“ನಾನು ವಾಫಿ ಕೋರ್ಸ್‌‌ಗೆ ಬಂದಾಗ ಇಲ್ಲಿ ಎಲ್ಲಾ ಧಾರ್ಮಿಕ ಪವಿತ್ರ ಪುಸ್ತಕಗಳು ಇದ್ದವು. ಅವರೆಲ್ಲವೂ ಜ್ಞಾನದ ಆಗರಗಳಾಗಿದ್ದು, ರಾಮಾಯಣವು ಹಿಂದೂ ಧಾರ್ಮಿಕ ಜ್ಞಾನದ ಆಗರವಾಗಿದೆ” ಎಂದು ಅವರು ಹೇಳಿದ್ದಾರೆ. ಜಾಬೀರ್ ಮತ್ತು ಬಾಸಿತ್ ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ ಧರ್ಮದ ಮೂಲಕ ಶಾಂತಿಯನ್ನು ಹರಡಲು ಆಶಿಸುವುದಾಗಿ ಹೇಳಿದ್ದಾರೆ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...