Homeಮುಖಪುಟಹಿಂಸೆಯೊಳಗಣ ಕಾರುಣ್ಯ: ಪ.ರಂಜಿತ್‌ ನಿರ್ದೇಶನದ ‘ಧಮ್ಮಮ್‌’ ತೆರೆದಿಟ್ಟ ತಾತ್ವಿಕತೆ

ಹಿಂಸೆಯೊಳಗಣ ಕಾರುಣ್ಯ: ಪ.ರಂಜಿತ್‌ ನಿರ್ದೇಶನದ ‘ಧಮ್ಮಮ್‌’ ತೆರೆದಿಟ್ಟ ತಾತ್ವಿಕತೆ

- Advertisement -
- Advertisement -

ಸೋನಿ ಲೈವ್‌ ಒಟಿಟಿಯಲ್ಲಿ ಬಿಡುಗಡೆಯಾಗಿರುವ ‘ವಿಕ್ಟಿಮ್’ ಎಂಬ ಆಂಥಾಲಜಿಯ ಮೊದಲ ಚಾಪ್ಟರ್‌ ‘ಧಮ್ಮಮ್‌’- ವಿಮರ್ಶಕರ ಮನಗೆದ್ದಿದೆ. ದಲಿತ ಪ್ರತಿರೋಧದ ಕಥನಗಳನ್ನು ತಮಿಳು ನೆಲದಲ್ಲಿ ಕಟ್ಟಿಕೊಡುತ್ತಿರುವ ಪ.ರಂಜಿತ್‌, ‘ಧಮ್ಮಮ್‌’ ನಿರ್ದೇಶಕರೆಂಬುದು ಮತ್ತೊಂದು ಗಮನಾರ್ಹ ಸಂಗತಿ.

ಅರ್ಧ ಗಂಟೆಯಲ್ಲಿ ಮುಗಿದು ಹೋಗುವ ಧಮ್ಮಮ್‌, ಹಿಂಸೆಯಾಚೆ ಅವಿತಿರುವ ಪ್ರೀತಿ ಮತ್ತು ಕಾರುಣ್ಯವನ್ನು ಶೋಧಿಸುವ ಪ್ರಯತ್ನ ಮಾಡಿದೆ. ಮನುಷ್ಯನ ಜಾತಿ ಅಹಂಕಾರದ ಕುರಿತು ಗಂಭೀರವಾದ ಚರ್ಚೆಗೆ ಅವಕಾಶ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಧಮ್ಮಮ್‌’ ಸ್ಟ್ರೀಮ್ ಆಗುತ್ತಿರುವ ಹೊತ್ತಿನಲ್ಲಿಯೇ ತಮಿಳುನಾಡಿನ ಶಿವಗಂಗೈ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿಶೇಷ ನ್ಯಾಯಾಲಯವು, ಮೂವರು ದಲಿತರ ತ್ರಿವಳಿ ಹತ್ಯೆಗೆ ಸಂಬಂಧಿಸಿದಂತೆ 27 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಸುದ್ದಿ ಬಂತು. ದಲಿತರ ಆರ್ಥಿಕ ಸ್ವಾವಲಂಬನೆಯೇ ಸವರ್ಣೀಯರ ಅಸಹನೆಗೆ ಕಾರಣವಾಗಿತ್ತು. ಅಗಮುಡಿಯಾರ್ (ಪ್ರಬಲವಾದ ತೇವರ್ ಜಾತಿ ಸಮೂಹದ ಒಂದು ಭಾಗ) ಸಮುದಾಯದವರ ಮನೆಯ ಮುಂದೆ ದಲಿತ ಯುವಕನೊಬ್ಬ ಜೋರಾಗಿ ಫೋನಿನಲ್ಲಿ ಮಾತನಾಡಿದ ಎಂಬುದಷ್ಟೇ ಸವರ್ಣೀಯರ ಅಹಂಗೆ ಪೆಟ್ಟು ನೀಡಿತ್ತು. ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಅಗಮುಡಿಯಾರರು ಮೂವರು ದಲಿತರನ್ನು ಕೊಂದು, ಐವರನ್ನು ಭೀಕರವಾಗಿ ಗಾಯಗೊಳಿಸಿದ್ದರು. ಈ ಪ್ರಕರಣದಲ್ಲಿ 27 ಅಪರಾಧಿಗಳಿಗೆ ಇತ್ತೀಚೆಗಷ್ಟೇ ಶಿಕ್ಷೆ ನೀಡಲಾಗಿದೆ. ಪ.ರಂಜಿತ್ ಅವರ ‘ಧಮ್ಮಮ್‌’ ಕೂಡ ಶಿವಗಂಗೈ ಪ್ರಕರಣವನ್ನು ಕೊಂಚ ನೆನಪಿಸುತ್ತದೆ.

ವಿಶಾಲವಾದ ಗದ್ದೆ ಬಯಲು. ಸುತ್ತಲು ಹಸಿರು. ನಡುವೆ ಇನ್ನೂ ನಾಟಿ ಮಾಡದಿರುವ ಗದ್ದೆ. ಅಲ್ಲೊಬ್ಬ ಶೋಷಿತ ಸಮುದಾಯದ ವ್ಯಕ್ತಿ. ಆತನ ಹೆಸರು ‘ಗುಣ’. ಬದುವಿನಲ್ಲಿ ಬುದ್ಧನ ವಿಗ್ರಹ. ಆ ಶೋಷಿತನ ಪುಟ್ಟ ಮಗಳು ‘ಕೇಮ’.

ಬುದ್ಧನ ಮೇಲೆ ಹತ್ತಿ ನಿಂತು ಹಕ್ಕಿಯಂತೆ ಹಾರುತ್ತೇನೆಂಬ ಸೂಚನೆಗಳನ್ನು ನೀಡುತ್ತಿರುವ ಮಗುವಿಗೆ, “ದೇವರ ಮೇಲೆ ನಿಲ್ಲಬಾರದು. ಕೆಳಗಿಳಿ” ಎಂದು ಗುಣ ಎಚ್ಚರಿಸುತ್ತಾನೆ. “ದೇವರೇ ಇಲ್ಲವೆಂದು ಬುದ್ಧ ಹೇಳಿದ್ದಾನೆ. ಆತನನ್ನು ದೇವರು ಅನ್ನುತ್ತೀಯಲ್ಲ” ಎಂದು ಅಪ್ಪನಿಗೆ ಮಗಳು ತಿರುಗೇಟು ನೀಡುತ್ತಾಳೆ. ಅಪ್ಪಾ ಕಕ್ಕಾಬಿಕ್ಕಿ. ಪ್ರಶ್ನಿಸುವ ರೂಪಕವೇ ಬುದ್ಧ. ಹಳೆಯ ಕಾಲಕ್ಕೆ ಜೋತು ಬಿದ್ದಿರುವ ಅಪ್ಪನ ಎದುರು, ಹೊಸದಾರಿಯ ಹುಡುಕಾಟದಲ್ಲಿರುವ ಮಗು!

ಇದನ್ನೂ ಓದಿರಿ: ಡಬ್‌‌ ಸಿನಿಮಾ ‘ಡೊಳ್ಳು’ ಸಿಂಕ್‌ಸೌಂಡ್‌ ವಿಭಾಗದಲ್ಲಿ ಆಯ್ಕೆ: ‘ರಾಷ್ಟ್ರಪ್ರಶಸ್ತಿ ಲಾಬಿ’ ರಾಜಕಾರಣದ ಕಥೆ ಇದು!

ಈ ಶೋಷಿತ ಸಮುದಾಯದ ಹೊಸತಲೆಮಾರಲ್ಲಿ ಅನ್ಯಾಯವನ್ನು ಪ್ರಶ್ನಿಸುವ, ನ್ಯಾಯೋಚಿತವಾಗಿ ಸಿಡಿದೇಳುವ ಗುಣ ಮನೆಮಾಡಿದೆ. ಇದನ್ನು ಇನ್ನೊಂದು ಬದಿಯಲ್ಲಿರುವವರು ತಮ್ಮ ಅಹಂಕಾರಕ್ಕೆ ಪೆಟ್ಟೆಂದು ಭಾವಿಸುತ್ತಾರೆ. ದಲಿತನ ಸಣ್ಣ ಪ್ರತಿರೋಧವೂ ಬಲಾಢ್ಯರಲ್ಲಿ ದೊಡ್ಡ ಅಸಹನೆಯನ್ನು ಹುಟ್ಟಿಹಾಕಿಬಿಡುತ್ತದೆ. ಸವರ್ಣೀಯರು ಎಸಗುವ ದೌರ್ಜನ್ಯದಲ್ಲಿ ನಿತ್ಯವೂ ನಲುಗುತ್ತಿರುವ ದಲಿತ ಎಲ್ಲ ಹಿಂಸೆಗಳಾಚೆಗೆ ಜಿಗಿದು ಪ್ರೀತಿ, ಮಮತೆ, ಕಾರುಣ್ಯವನ್ನು ಶೋಷಕ ಸಮುದಾಯಕ್ಕೂ ತೋರುವ ಗುಣವೇ ಬೌದ್ಧತತ್ವ.

ಮತ್ತೆ ಮತ್ತೆ ಕಿರಿಕಿರಿ ಮಾಡುತ್ತಲೇ ಇರುವ ಬಲಾಢ್ಯ ಜಾತಿಯ ಸೇಕರ, ದಲಿತನಾದ ಗುಣನನ್ನು ಕಿಚಾಯಿಸುತ್ತಲೇ ಇದ್ದಾನೆ.‌ ದಲಿತನೊಬ್ಬ ಭೂಮಿ ಉಳುಮೆ ಮಾಡುತ್ತಿರುವುದೇ ಈ ಬಲಾಢ್ಯನ ಅಸಹನೆಯ ಮೂಲ ಎಂದು ಬಿಡಿಸಿ ಹೇಳಬೇಕಿಲ್ಲ. ದಲಿತನ ಪುಟ್ಟ ಮಗಳು ಕೇಮ ಆ ಗದ್ದೆಯ ಬದುವಿಯಲ್ಲಿ ಆಟವಾಡುತ್ತಿದ್ದಾಳೆ. ಯಾವುದೇ ಹಿಂಸೆ ನೀಡುವ ಗುರಿ ಇಲ್ಲವಾದರೂ ಆ ಮೀನನ್ನು ಹಿಡಿಯುವ ವ್ಯರ್ಥ ಪ್ರಯತ್ನದಲ್ಲಿ ಆ ಮಗು ತೊಡಗಿದೆ.

ಕಾಲು ಕೆರೆದು ಜಗಳ ಮಾಡಲೆತ್ನಿಸುತ್ತಿರುವ ಸೇಕರ, ಬದುವಿನಲ್ಲಿ ನಡೆದು ಬರುವಾಗ ಕೇಮ ಕೂಡ ಅದೇ ದಾರಿಯಲ್ಲಿ ಸಾಗುತ್ತಿದ್ದಾಳೆ. ಕಿರಿದಾದ ಬದು. ಪಕ್ಕಕ್ಕೆ ಹೆಜ್ಜೆ ಇಟ್ಟರೆ ಕೆಸರು. ತಾನು ಮೊದಲು ನಡೆದು ಬಂದ ಕಾರಣ, ನನಗೆ ಅತ್ತ ಹೋಗಲು ದಾರಿ ನೀಡಬೇಕು ಎಂದು ಕೇಮ ವಾದಿಸುತ್ತಾಳೆ. ಇದನ್ನು ಸಹಿಸದ ಸೇಕರ, ಹಿಂದೆ ಹೋಗುವಂತೆ ಮಗುವನ್ನು ಗದರುತ್ತಾನೆ. ಗುಣ ಕೂಡ ಇದನ್ನು ಗಮನಿಸುತ್ತಾ, ಮುಂದಾಗುವ ಅನಾಹುತವನ್ನು ಊಹಿಸಿ, ಹಳೆಯ ತಲೆಮಾರಿನ ವರಸೆಯನ್ನೂ ತೋರುತ್ತಾ, ‘ಕೇಮ ಬದಿಗೆ ಸರಿಯಮ್ಮ’ ಎನ್ನುತ್ತಾನೆ. ಆದರೆ ಮಗು, “ನಾನು ಮೊದಲು ಬಂದಿದ್ದು, ನಾನೇಕೆ ಜಾಗ” ಬಿಡಲಿ ಎಂದು ನ್ಯಾಯೋಚಿತವಾಗಿ ಪ್ರಶ್ನಿಸುತ್ತದೆ.

ಸೇಕರ ಮುಂದೆ ನುಗ್ಗಲು ಬಂದಾಗ, ಆತನನ್ನು ಗದ್ದೆಯ ಕೆಸರಿಗೆ ನೂಕಿ ಕೇಮ ಮುಂದೆ ಸಾಗುತ್ತಾಳೆ. ಆತನ ಬಿಳಿ ಬಟ್ಟೆಗೆ ಕೆಸರು ಮೆತ್ತಿಕೊಳ್ಳುತ್ತದೆ. ಇದನ್ನೆಲ್ಲ ನೋಡುತ್ತಿದ್ದ ಗುಣ, ಮಗಳನ್ನು ಕಾಪಾಡಲು ಬಂದಾಗ ಆಕಸ್ಮಿಕವಾಗಿ ಬಲಾಢ್ಯನ ರಕ್ತ ಹರಿಯುತ್ತದೆ. ಸೇಕರನ ಮನೆಗೆ ವಿಷಯ ತಿಳಿದು ಆತನ ತಂದೆ, ಕಿರಿಯ ಮಗ ಹಾಗೂ ಹಿರಿಯ ಮಗ ಅಲ್ಲಿಗೆ ಧಾವಿಸುತ್ತಾರೆ.

ಸಾವು, ಬದುಕಿನ ನಡುವೆ ಸೇಕರ ಹೊರಳಾಡುತ್ತಿದ್ದರೂ ಆತನನ್ನು ರಕ್ಷಿಸದೆ ಗುಣನ ಹೆಣ ಉರುಳಿಸಬೇಕೆಂಬುದು ಹಪಾಹಪಿಸುತ್ತಾರೆ. ಇವರಿಂದ ತಪ್ಪಿಸಿಕೊಳ್ಳಲೆತ್ನಿಸುವ ದಲಿತ ಅನಿವಾರ್ಯವಾಗಿ ಮಿಕ್ಕವರನ್ನೂ ಗಾಯಗೊಳಿಸಿ ಬಚಾವಾಗುತ್ತಾನೆ. ಆದರೆ ಕೇಮ ತನ್ನ ಅಪ್ಪನಲ್ಲಿ, ಸಾವು ಬದುಕಿನ ನಡುವೆ ಹೊರಳಾಡುತ್ತಿರುವ ಸೇಕರನ್ನು ಆಸ್ಪತ್ರೆಗೆ ಕರೆದೊಯ್ಯೋಣ ಎನ್ನುತ್ತದೆ. ಇದೇ ಕಾರುಣ್ಯ. ಶೋಷಿತ ಸಮುದಾಯದ ಆದಿಮ ಗುಣವದು.

ಇದನ್ನೂ ಓದಿರಿ: ವಿಕ್ರಾಂತ್‌ ರೋಣ ಸಿನಿಮಾ ದಲಿತರನ್ನು ಚಿತ್ರಿಸಿರುವ ರೀತಿ ಅಪಾಯಕಾರಿ ಏಕೆ?

ಯಾರನ್ನೂ ನೋಯಿಸದ, ಅನ್ಯಾಯವನ್ನು ಪ್ರಶ್ನಿಸಿದ ಮಾತ್ರಕ್ಕೆ ದಲಿತ ಸಮುದಾಯ ತಾನೇ ನೋಯುವ ಸಂಕಟ ಇದೆಯಲ್ಲ- ಅದಕ್ಕೆ ಶತಶತಮಾನಗಳ ಚರಿತ್ರೆ ಇದೆ. ಇದರ ಜೊತೆಗೆ ಶೋಷಕ ಸಮುದಾಯದ ಆತ್ಮವಿಮರ್ಶೆಯ ಅಗತ್ಯವನ್ನು ಇಲ್ಲಿ ತೆರೆದಿರುವ ಪ್ರಯತ್ನವನ್ನು ಪ.ರಂಜಿತ್ ಮಾಡಿದ್ದಾರೆ. ಗುದ್ದಾಡಿ ಹೈರಾಣಾಗಿರುವ ಗುಣನ ಮೇಲೆ ಮುಗಿ ಬೀಳಲು ಹೋಗುವ ಸಹೋದರನನ್ನು ಇನ್ನೊಬ್ಬ ಸಹೋದರ ತಡೆಯುವುದು ಕೂಡ ಮನಃ ಪರಿವರ್ತನೆಯ ದಾರಿಯೂ ಹೌದು.

ಶೋಷಿತನ ಕಾರುಣ್ಯವನ್ನು, ಶೋಷಕನ ಮನಃಪರಿವರ್ತನೆಯನ್ನು ರೂಪಕವಾಗಿ ತೆರೆದಿರುವ ಪ್ರಯತ್ನವನ್ನು ಪ.ರಂಜಿತ್ ಮಾಡಿರುವುದು ‘ಧಮ್ಮಮ್‌’ನ ಹೆಗ್ಗಳಿಕೆ. ಧಮ್ಮದ ತಾತ್ವಿಕತೆಯನ್ನು ಹೊಸ ಕಾಲದ ವಿದ್ಯಮಾನಗಳೊಂದಿಗೆ ವಿವರಿಸುವ ಪ್ರಯತ್ನವೂ ಇದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...