Homeಮುಖಪುಟಮಿತ್ರಪಕ್ಷ ಬಿಜೆಪಿ ಜೊತೆ ನಿತೀಶ್‌ ಮುನಿಸು: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು

ಮಿತ್ರಪಕ್ಷ ಬಿಜೆಪಿ ಜೊತೆ ನಿತೀಶ್‌ ಮುನಿಸು: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜೆಡಿಯು ಶಾಸಕರು ಮತ್ತು ಸಂಸದರ ಸಭೆಯನ್ನು ಮಂಗಳವಾರ ಕರೆದಿದ್ದು, ಮಿತ್ರ ಪಕ್ಷ ಬಿಜೆಪಿಯೊಂದಿಗೆ ಹೆಚ್ಚುತ್ತಿರುವ ಬಿಕ್ಕಟ್ಟು ಮತ್ತೊಂದು ಹಂತಕ್ಕೆ ಮುಟ್ಟುವ ಸಾಧ್ಯತೆಗಳನ್ನು ರಾಜಕೀಯ ವಿಶ್ಲೇಷಣೆಗಳು ಹೇಳುತ್ತಿವೆ.

ಬಿಹಾರದಲ್ಲಿ ಜನತಾ ದಳ (ಯುನೈಟೆಡ್) ಅಥವಾ ಜೆಡಿಯು ಮೈತ್ರಿಕೂಟದ ಪಾಲುದಾರಿಕೆ ಹೊಂದಿರುವ ಬಿಜೆಪಿಯೊಂದಿಗೆ ನಿತೀಶ್‌‌ ಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮಿತ್ರಪಕ್ಷಗಳ ಮಾತಿಗೆ ಬೆಲೆ ಕೊಡುತ್ತಿಲ್ಲ ಎಂಬುದು ಬಿಕ್ಕಟ್ಟಿಗೆ ಕಾರಣವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೆಡಿಯು ತೊರೆದಿರುವ ಆರ್‌ಸಿಪಿ ಸಿಂಗ್‌ಗೆ ರಾಜ್ಯಸಭಾ ಸ್ಥಾನವನ್ನು ನೀಡಬಾರದೆಂದು ಜೆಡಿಯು ಆಗ್ರಹಿಸಿತು. ಆರ್‌ಸಿಪಿ ಸಿಂಗ್ ಅವರು ಕಳೆದ ವರ್ಷ ನಿತೀಶ್‌ಕುಮಾರ್‌ ಅವರನ್ನು ಸಂಪರ್ಕಿಸದೆ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸ್ಥಾನ ಪಡೆದಿದ್ದರು. ರಾಜ್ಯಸಭೆಯ ವಿಚಾರವಾಗಿ ಜೆಡಿಯುಗೆ ಆರ್‌ಸಿಪಿ ಸಿಂಗ್‌ ವಿದಾಯ ಹೇಳಿದ್ದರು.

“ನಾನು ಕೇಂದ್ರ ಸಚಿವನಾಗಿದ್ದಕ್ಕೆ ನನ್ನ ವಿರುದ್ಧ ಪಿತೂರಿ ನಡೆಯುತ್ತಿದೆ” ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಮಾಜಿ ಭಾರತೀಯ ಆಡಳಿತ ಸೇವಾ ಅಧಿಕಾರಿ ಸಿಂಗ್ ಆರೋಪಿಸಿದ್ದಾರೆ.

“ಅಸೂಯೆಗೆ ಚಿಕಿತ್ಸೆ ಇಲ್ಲ ಎಂದು ಹೇಳುತ್ತೇನೆ. ನಿತೀಶ್ ಕುಮಾರ್ ಅವರು ತಮ್ಮ ಏಳೇಳು ಜನ್ಮದಲ್ಲೂ ಪ್ರಧಾನಿಯಾಗುವುದಿಲ್ಲ, ಜೆಡಿಯು ಮುಳುಗುವ ಹಡಗು” ಎಂದು ಟೀಕಿಸಿದ್ದಾರೆ.

ತಮ್ಮ ಮೇಲೆ ಸಿಂಗ್ ಮಾಡಿರುವ ಆರೋಪಗಳಿಗೆ ಉತ್ತರಿಸಲು ನಿತೀಶ್‌ ಅವರು ಜೆಡಿಯು ಪಕ್ಷದ ಉನ್ನತ ನಾಯಕರನ್ನು ಕಳುಹಿಸಿದ್ದಾರೆ. ರಾಜಕೀಯ ಕದನಕ್ಕೆ ಕುಟುಂಬವನ್ನು ಎಳೆದು ತಂದಿರುವುದು ರಾಜಕೀಯ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ (ಲಾಲನ್) ಸಿಂಗ್ ಅವರು ಆರ್‌ಸಿಪಿ ಸಿಂಗ್ ಅವರ ವಿರುದ್ಧ ಹರಿಹಾಯ್ದಿದ್ದಾರೆ.

“ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಅಗತ್ಯವೇನು? ನಾವು ಕೇಂದ್ರ ಸಚಿವ ಸಂಪುಟದ ಭಾಗವಾಗುವುದಿಲ್ಲ ಎಂದು ಮುಖ್ಯಮಂತ್ರಿಯವರು 2019ರಲ್ಲಿಯೇ ನಿರ್ಧರಿಸಿದ್ದರು” ಎಂದು ರಾಜೀವ್ ರಂಜನ್ ಸುದ್ದಿಗಾರರಿಗೆ ತಿಳಿಸಿದರು. “ಜೆಡಿಯು ಮುಂದಿನ ದಿನಗಳಲ್ಲಿಯೂ ಕೇಂದ್ರ ಸಚಿವ ಸಂಪುಟಕ್ಕೆ ಸೇರುವುದಿಲ್ಲ” ಎಂದು ಹೇಳಿರುವುದು, “ಸರಿಪಡಿಸಲಾಗದ ರಾಜಕೀಯ ಬಿರುಕು” ಎಂದೇ ಊಹಿಸಲಾಗುತ್ತಿದೆ.

ರಾಜೀವ್ ರಂಜನ್ ಅವರಂತಹ ನಿತೀಶ್‌ ಕುಮಾರ್‌ ಅವರ ಆಪ್ತರ ಪ್ರತಿಕ್ರಿಯೆಯು ಹಲವು ರಾಜಕೀಯ ಲೆಕ್ಕಾಚಾರಕ್ಕೆ ಅವಕಾಶ ನೀಡಿದೆ. ಮುಖ್ಯಮಂತ್ರಿಯವರ ಬೇಡಿಕೆಗಳಿಗೆ ಮಣಿಯಲು ಬಿಜೆಪಿಯ ಮೇಲೆ ಒತ್ತಡ ಹೇರುವ ತಂತ್ರವೂ ಇದೆಂದು ವಿಶ್ಲೇಷಿಸಲಾಗುತ್ತಿದೆ.

ಬಿಹಾರ ವಿಧಾನಸಭಾ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರನ್ನು ಪದಚ್ಯುತಗೊಳಿಸಬೇಕೆಂಬ ಒತ್ತಡವೂ ಈ ತಂತ್ರಗಾರಿಕೆಯಲ್ಲಿದೆ. ಸಿನ್ಹಾ ಅವರು ಅಧಿಕಾರದಲ್ಲಿ ಮುಂದುವರಿಯುವುದು ನಿತೀಶ್ ಕುಮಾರ್ ಅವರಿಗೆ ಇಷ್ಟವಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ರಹಸ್ಯವಾಗಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್‌, ಕಳೆದ ವಾರ ನಡೆದ ನೀತಿ ಆಯೋಗ್‌ನ ಸಭೆಗೆ ಹೋಗಲಿಲ್ಲ. ಆರೋಗ್ಯ ಸಮಸ್ಯೆಯ ಕಾರಣಗಳನ್ನು ಹೇಳಿ ದೂರ ಉಳಿದಿದ್ದರು. ಈ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ 23 ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ಗೈರುಹಾಜರಿಯ ಮೂಲಕ ನಿತೀಶ್‌ ತಮ್ಮ ಕೋಪವನ್ನು ಹೊರಹಾಕಿದ್ದರು.

ಇದನ್ನೂ ಓದಿರಿ: ಮಾಲೆಗಾಂವ್ ಸ್ಫೋಟ ಪ್ರಕರಣ: ಶಂಕಿತ ಭಯೋತ್ಪಾದಕಿ, ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್‌‌ ಬೈಕ್‌ನಲ್ಲಿ ಸ್ಫೋಟಕಗಳ…

ಕೇಂದ್ರದಲ್ಲಿ ಸಚಿವ ಸ್ಥಾನ ಪಡೆಯಲು ಮೋದಿ ಸರ್ಕಾರದೊಂದಿಗೆ ನೇರವಾಗಿ ಮಾತುಕತೆ ನಡೆಸಿರುವ ಆರೋಪವನ್ನು ಸಿಂಗ್ ನಿರಾಕರಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿತೀಶ್ ಅವರೊಂದಿಗೆ ಮಾತನಾಡಿದ್ದಾರೆ. ನಿತೀಶ್ ಅವರ ಶರತ್ತಿನ ಮೇಲೆ ನನಗೆ ಅವಕಾಶ ನೀಡಲಾಯಿತು ಎಂದು ಪ್ರತಿಪಾದಿಸಿದ್ದಾರೆ.

ಆಸ್ತಿ ವ್ಯವಹಾರಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ಜೆಡಿಯು ಆರೋಪಗಳನ್ನು ಸಿಂಗ್ ನಿರಾಕರಿಸಿದ್ದಾರೆ. “ಈ ಆಸ್ತಿಗಳು ನನ್ನ ಪತ್ನಿ ಮತ್ತು ಇತರ ಅವಲಂಬಿತರಿಗೆ ಸೇರಿದ್ದು, ಅವರು 2010ರಿಂದಲೂ ತೆರಿಗೆ ಪಾವತಿಸುತ್ತಿದ್ದಾರೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...