Homeದಲಿತ್ ಫೈಲ್ಸ್ಮಧ್ಯಪ್ರದೇಶ: ಹಿಂದೂವೋ ಮುಸ್ಲಿಮನೋ ಎಂದು ತಿಳಿಯಲು ದಲಿತ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ!

ಮಧ್ಯಪ್ರದೇಶ: ಹಿಂದೂವೋ ಮುಸ್ಲಿಮನೋ ಎಂದು ತಿಳಿಯಲು ದಲಿತ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ!

- Advertisement -
- Advertisement -

ಆಗಸ್ಟ್ 6ರಂದು ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಿಂದ ಹಲವಾರು ವಿಡಿಯೊಗಳು ವೈರಲ್ ಆಗಿವೆ. ಕಳ್ಳತನದ ಶಂಕೆಯ ಮೇಲೆ ದಲಿತ ವ್ಯಕ್ತಿಯೊಬ್ಬನ ಮೇಲೆ ಜನರ ಗುಂಪೊಂದು ಹಲ್ಲೆ ನಡೆಸಿದ್ದಾರೆ. ಮುಸ್ಲಿಮನೋ ಹಿಂದೂವೋ ಎಂದು ತಿಳಿಯಲು ದಲಿತ ಯುವಕನ ಬಟ್ಟೆಯನ್ನೂ ಬಿಚ್ಚಿ ಅವಮಾನ ಮಾಡಿರುವ ಆರೋಪ ಕೇಳಿಬಂದಿದೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಆದಿತ್ಯ ರೋಕ್ಡೆ ಎಂದು ಗುರುತಿಸಲಾಗಿದ್ದು, ಆಗಸ್ಟ್ 3 ರಂದು ಖಾರ್ಗೋನ್‌ನ ನಿಮ್ರಾಣಿ ಪ್ರದೇಶದ ಬಳಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಘಟನೆ ಬೆಳಕಿಗೆ ಬಂದ ನಂತರ ಕ್ರಿಮಿನಲ್ ಬೆದರಿಕೆ, ಅಕ್ರಮ ಬಂಧನ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, ಭಾರತೀಯ ದಂಡ ಸಂಹಿತೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಖಾರ್ಗೋನ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಧರ್ಮವೀರ್ ಸಿಂಗ್ ಯಾದವ್, ಘಟನೆಯ ಬಗ್ಗೆ ಪೊಲೀಸರಿಗೆ ಆಗಸ್ಟ್ 6ರಂದು ಮಾಹಿತಿ ಸಿಕ್ಕಿತು. ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

“ನಿಮ್ರಾಣಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ (ಆದಿತ್ಯ ರೊಕ್ಡೆ ಅವರಿಗೆ) ಕೆಲವರು ಥಳಿಸಿದ್ದಾರೆ ಎಂದು ನಮಗೆ ತಿಳಿಯಿತು. ನಾವು ಅವರ ಕುಟುಂಬವನ್ನು ಪತ್ತೆಹಚ್ಚಿದ್ದೇವೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದಿದ್ದಾರೆ.

ರೊಕ್ಡೆ ಅವರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಮಾಹಿತಿ ತಿಳಿದ ನಂತರವೂ ಕಾನೂನು ಕ್ರಮಗಳನ್ನು ಜರುಗಿಸುವಲ್ಲಿ ವಿಳಂಬ ಮಾಡಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ ಎಂದು ಯಾದವ್ ಮಾಹಿತಿ ನೀಡಿದ್ದಾರೆ.

ಮುಸ್ಲಿಮನೇ ಹಿಂದೂವೇ ಎಂದು ತಿಳಿಯಲು ಬಟ್ಟೆ ಬಿಚ್ಚಿ ಹಲ್ಲೆ: ಆರೋಪ

ರೊಕ್ಡೆ ಅವರ ತಾಯಿ ಭಗವತಿ ರೊಕ್ಡೆ ಪ್ರತಿಕ್ರಿಯೆ ನೀಡಿದ್ದು, “ನನ್ನ ಮಗ ಕೆಲಸದ ನಿಮಿತ್ತ ಖಾಲ್‌ಘಾಟ್‌ಗೆ ಹೋಗಿದ್ದನು. ಮನೆಗೆ ಹಿಂದಿರುಗುತ್ತಿದ್ದಾಗ ಆತನ ಮೇಲೆ ಹಲ್ಲೆ ನಡೆಸಲಾಗಿದೆ. ನನ್ನ ಮಗ ಹಿಂದೂವೋ ಅಥವಾ ಮುಸ್ಲಿಮನೋ ಎಂದು ತಿಳಿದುಕೊಳ್ಳಲು ದುಷ್ಕರ್ಮಿಗಳು ನನ್ನ ಮಗನ ಬಟ್ಟೆ ಬಿಚ್ಚಿ ಅವಮಾನ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ದುಷ್ಕರ್ಮಿಗಳು ನನ್ನ ಮಗನನ್ನು ಹೊಡೆದಿದ್ದಾರೆ. ವಿವಸ್ತ್ರಗೊಳಿಸಿದ್ದಾರೆ. ಹಿಂದೂ ಸಮುದಾಯದವನೋ ಅಥವಾ ಮುಸ್ಲಿಂ ಸಮುದಾಯದವನೋ ಎಂದು ಪರಿಶೀಲಿಸಿದ್ದಾರೆ. ಪೊಲೀಸರು ಸ್ಥಳದಲ್ಲಿ ಉಪಸ್ಥಿತರಿದ್ದರೂ ನನ್ನ ಮಗನನ್ನು ಕಾಪಾಡಲು ಯಾವುದೇ ಕ್ರಮ ಜರುಗಿಸಲಿಲ್ಲ” ಎಂದು ನೊಂದ ತಾಯಿ ಸಂಕಷ್ಟ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಕುಟುಂಬದ ಆರೋಪವನ್ನು ಅಲ್ಲಗಳೆದಿದ್ದು, ರೋಕ್ಡೆಯವರನ್ನು ಕಳ್ಳತನದ ಆರೋಪದ ಮೇಲೆ ಥಳಿಸಿದ್ದಾರೆಯೇ ಹೊರತು ಧರ್ಮದ ಆಧಾರದಲ್ಲಿ ಅಲ್ಲ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...